ಮೂಟೆಗಟ್ಟಲೆ ಕೋಳಿ ತ್ಯಾಜ್ಯ ಎಸೆದ ದುಷ್ಕರ್ಮಿಗಳು


Team Udayavani, Jul 4, 2018, 3:30 AM IST

koli-thyajya-3-7.jpg

ಮುಳ್ಳೇರಿಯ: ಬೆಳ್ಳೂರು ಪಂಚಾಯತ್‌ 1ನೇ ವಾರ್ಡ್‌ ಈಂದುಮೂಲೆಯ ಚಿಪ್ಲುಕೋಟೆಯಲ್ಲಿ ರಾತ್ರಿ ಮರೆಯಲ್ಲಿ ದುಷ್ಕರ್ಮಿಗಳು ಮೂಟೆಗಟ್ಟಲೆ ಕೋಳಿ ತ್ಯಾಜ್ಯ ಎಸೆದು ಅಟ್ಟಹಾಸ ಮೆರೆದಿದ್ದಾರೆ. ಚಿಪ್ಲುಕೋಟೆ ಬಳಿಯಿರುವ ರಾಜೀವ ಗಾಂಧಿ ಕುಡಿಯುವ ನೀರು ಯೋಜನೆ ಟ್ಯಾಂಕ್‌ ಹಾಗೂ ಪಂಪ್‌ ಹೌಸ್‌ ಸಮೀಪ ಮೂಟೆಗಳಲ್ಲಿ ಭಾರೀ ಪ್ರಮಾಣದ ತ್ಯಾಜ್ಯ ಕಂಡು ಬಂದಿದೆ. ಸ್ಥಳೀಯರು ಆದೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದು ಠಾಣಾಧಿಕಾರಿ ರಾಜೀವ್‌ ಕುಮಾರ್‌ ಹಾಗೂ ಪೊಲೀಸ್‌ ಸಿಬಂದಿ ಪಂಚಾಯತ್‌ ಅಧ್ಯಕ್ಷೆ ಹಾಗೂ ಸದಸ್ಯರ ಸಮ್ಮುಖದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ ತ್ಯಾಜ್ಯವು ಹಲವು ದಿನಗಳ ಮೊದಲಿನದ್ದಾಗಿದ್ದು ಆ ಕುರಿತು, ರಸ್ತೆ ಮೂಲಕ ಸಂಚರಿಸಿದ ವಾಹನಗಳ ವಿವರ ಸಂಗ್ರಹಿಸಿ, ಸಮೀಪ ಪ್ರದೇಶಗಳ ಸಿಸಿಟಿವಿ ಪರಿಶೋಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಂಜೆ ಪಂಚಾಯತ್‌ ಅಧ್ಯಕ್ಷೆ ಲತಾ ಯುವರಾಜ್‌, ಉಪಾಧ್ಯಕ್ಷ ಪುರುಷೋತ್ತಮನ್‌ ಸಿ.ವಿ., ಅಭಿವೃದ್ಧಿ ಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಮಾಲತಿ ಜೆ. ರೈ, ಆರೋಗ್ಯ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಗೀತಾ ಕೆ., ವಾರ್ಡ್‌ ಸದಸ್ಯೆ ವಿಶಾಲಾಕ್ಷಿ ಬಿ. ನೇತೃತ್ವದಲ್ಲಿ ಜೆಸಿಬಿ ಬಳಸಿ ತ್ಯಾಜ್ಯ ವಿಲೇವಾರಿ ನಡೆಸಲಾಯಿತು.

ಈ ಮೊದಲು ಮಾಹಿತಿ ಲಭಿಸಿದ ಬೆಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಜೂ. ಆರೋಗ್ಯಾ ಧಿಕಾರಿ ಹೆ„ದರ್‌ ಶರೀಫ್‌, ತಿರುಮಲೇಶ್ವರ ನಾಯ್ಕ ಸ್ಥಳ ಸಂದರ್ಶಿಸಿದ್ದಾರೆ. ಅಲ್ಲಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬರುತ್ತಿದ್ದು ಇದರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ. ಸಮಾಜ ಘಾತುಕರ ಕೋಳಿ  ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವ ಕೃತ್ಯ ಇದೇ ಮೊದಲಾಗಿರದೆ ಕಳೆದ ಮೇ ತಿಂಗಳಲ್ಲಿ ಪೆರ್ಲ ಗಾಳಿಗೋಪುರ ಏತಡ್ಕ ರಸ್ತೆಯ ಪೆರಿಯಾಲ್‌ ಎಂಬಲ್ಲಿ  ಮುಂಜಾವಿನ ವೇಳೆ ಕತ್ತಲೆ ಮರೆಯಲ್ಲಿ ಭಾರೀ ಪ್ರಮಾಣದಲ್ಲಿ ಕೋಳಿ ತ್ಯಾಜ್ಯವನ್ನು ರಸ್ತೆಗೆ ಎಸೆದಿದ್ದರು. ವಾಹನಗಳು ಅವುಗಳ ಮೇಲೆ ಸಾಗಿದ್ದು ಚೆಲ್ಲಾಪಿಲ್ಲಿಯಾಗಿ  ಹರಡಿದ್ದವು. ಘಟನೆ ಬಗ್ಗೆ ನಾಗರಿಕರು ದೂರು ನೀಡಿದುದರ ಅನ್ವಯ ಬದಿಯಡ್ಕ ಠಾಣಾ ಫ್ಲೈಯಿಂಗ್‌ ಸ್ಕ್ವಾಡ್‌  ಪೊಲೀಸ್‌ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಲ್ಲಿ ಮಾಹಿತಿ ಪಡೆದುಕೊಂಡಿತ್ತು. ಬಳಿಕ ಪಂಚಾಯತ್‌ ಅಧ್ಯಕ್ಷರ ನೇತೃತ್ವದಲ್ಲಿ ಜೆಸಿಬಿ ಬಳಸಿ ತ್ಯಾಜ್ಯ ವಿಲೇವಾರಿ ನಡೆಸಲಾಗಿತ್ತು.


ದೇಶಾದ್ಯಂತ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಂಡು ಸಾರ್ವಜನಿಕರು ಅದನ್ನು ಪಾಲಿಸುತ್ತಾ ಬರುವಾಗ ಅದೇ ರೀತಿ  ಜಿಲ್ಲೆ, ಬ್ಲಾಕ್‌ ಹಾಗೂ ಗ್ರಾಮ ಪಂಚಾಯತ್‌ ಮಟ್ಟದಲ್ಲಿ  ಆರೋಗ್ಯ ಜಾಗೃತಿ ಸೆಮಿನಾರ್‌ ಸಾಕ್ಷ್ಯಚಿತ್ರ, ಬೀದಿ ನಾಟಕಗಳ ಮೂಲಕ ಜನ ಜಾಗೃತಿ ಮೂಡಿಸುತ್ತಿದ್ದು ಹಾಗೂ ಮಳೆಗಾಲ ಪೂರ್ವ ಶುಚಿತ್ವ ಕಾರ್ಯಕ್ರಮಗಳು ನಡೆಯುತ್ತಿರುವ ಈ ವೇಳೆ ಸಮಾಜಘಾತುಕರು ಎಲ್ಲೆಂದರಲ್ಲಿ ಕೋಳಿ ತ್ಯಾಜ್ಯ ಎಸೆಯುತ್ತಿರುವುದು ನಾಗರಿಕರಲ್ಲಿ ವ್ಯಾಪಕ ಆಕ್ರೋಶಕ್ಕೆ ಎಡೆ ಮಾಡಿದೆ.

ಬಿಜಂತಡ್ಕ, ನಾರಂಪಾಡಿ, ಉಕ್ಕಿನಡ್ಕ, ಸ್ವರ್ಗ ಸಮೀಪದ ಗೋಳಿಕಟ್ಟೆ,  ವಾಣೀನಗರ, ಪಾಣಾಜೆ-ಕಾಟುಕುಕ್ಕೆ ರಸ್ತೆ, ಧರ್ಮತ್ತಡ್ಕ  ಮೊದಲಾಗಿ ಹಲವೆಡೆ ಎಸೆಯುತ್ತಿದ್ದು ದುರ್ನಾತ ಬೀರುತ್ತಿರುವುದಲ್ಲದೆ ಸಾಂಕ್ರಾಮಿಕ ರೋಗಗಳು ಹರಡುವುದಕ್ಕೂ ಕಾರಣವಾಗುತ್ತಿವೆ. ಸಮೀಪ ಪ್ರದೇಶಗಳ ನಾನಾ ಭಾಗಗಳಿಂದ ಕೋಳಿ ಮಾಂಸ ಮಾರಾಟ ಕೇಂದ್ರಗಳಿಂದ ಕೋಳಿ ತ್ಯಾಜ್ಯ ಸಂಗ್ರಹಿಸಿ ಎಲ್ಲೆಂದರಲ್ಲಿ ಎಸೆಯುವ ಬೃಹತ್‌ ಜಾಲವೇ ಇದರ ಹಿಂದಿದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.