ಕೊಡಗಿನಲ್ಲಿ ಅಬ್ಬರಿಸಿ ಇಳಿದ ಮಳೆ:ತುಂಬಿ ಹರಿದ ಕಾವೇರಿ


Team Udayavani, Jul 9, 2018, 6:40 AM IST

z-omkareshwara-temple.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ದಿಂದ ರವಿವಾರ  ಬೆಳಗ್ಗೆ ತನಕ ನಿರಂತರ ಸುರಿದ ಧಾರಾಕಾರ ಮಳೆ ಬಳಿಕ ಇಳಿಮುಖವಾಯಿತು. 

ಮಳೆಯ ತೀವ್ರತೆಗೆ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಯದಿಂದ ನೀರನ್ನು ಹೊರ ಬಿಡಲಾಗಿದೆ.

ಮೃಗಶಿರ ಮಳೆಯ ಅನಂತರ ಸುರಿದ ಆದ್ರಾì ಮಳೆ ಜಿಲ್ಲೆಯಲ್ಲಿ ಕೊಂಚ ಬಿಡುವನ್ನು ನೀಡಿತ್ತಾದರೂ ಜು. 6ರಿಂದ ಆರಂಭಗೊಂಡ ಪನರ್ವಸು ಮಳೆ ಮತ್ತೆ  ಜನಜೀವನದ ಮೇಲೆ ಪರಿಣಾಮ ಬೀರಿದೆ. 

ಶುಕ್ರವಾರ ಮಧ್ಯಾಹ್ನದಿಂದ ಆರಂಭಗೊಂಡ ಮಳೆಯ ನಿರಂತರವಾಗಿ ಸುರಿದ ಕಾರಣ ಶನಿವಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. 

ಮಡಿಕೇರಿ ತಾಲೂಕಿನಲ್ಲಿ ದಾಖಲೆಯ ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.ಈ ಭಾಗದಲ್ಲಿ ರಸ್ತೆ ಜಲಾವೃತ್ತ‌ಗೊಂಡಿರುವು ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.ಗ್ರಾಮಸ್ಥರು ಹಾಗೂ ಪ್ರವಾಸಿಗರನ್ನು ಕರೆದೊಯ್ಯಲು ಬೋಟ್‌ ವ್ಯವಸ್ಥೆಯನ್ನು ಮಾಡಲಾಗಿದೆ. ತಲಕಾವೇರಿಯಲ್ಲಿ ಮಂಜು ಸಹಿತ ಮಳೆಯಾಗುತ್ತಿದೆ.

ಮಡಿಕೇರಿ ನಗರದಲ್ಲಿ ಮಳೆಯೊಂದಿಗೆ ಮೈಕೊರೆಯುವ ಚಳಿ ಇದೆ. ಮಂಗಳಾದೇವಿ ನಗರದಲ್ಲಿ ಬರೆ ಕುಸಿದಿದ್ದು, ವಿದ್ಯುತ್‌ ಕಂಬಗಳು ನೆಲಕಚ್ಚಿವೆ. ಉಳಿದ ಬಡಾವಣೆಗಳಲ್ಲೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ.  ಓಂಕಾರೇಶ್ವರ ದೇವಾಲಯದ ಕೆರೆ ತುಂಬಿ ಹರಿಯುತ್ತಿದ್ದು, ಆವರಣ ಜಲಾವೃತಗೊಂಡಿದೆ. ಅಬ್ಬಿ ಜಲಪಾತ ತುಂಬಿ ಹರಿಯುತ್ತಿದ್ದು, ನಗರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಕಾರ್ಮಿಕರಿಗೆ ರಜೆ 
ಸುಂಟಿಕೊಪ್ಪ ಹೋಬಳಿಯಲ್ಲಿ ಪನರ್ವಸು ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಜು.6 ರಂದು ಸಂಜೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರಿಗೆ ರಜೆ ನೀಡಲಾಗಿದೆ.

ಹಟ್ಟಿಹೊಳೆಗೆ ಒಂದೇ ದಿನದಲ್ಲಿ 8 ಇಂಚು, ಮಾದಾಪುರಕ್ಕೆ 5 ಇಂಚು,ಐಗೂರಿಗೆ 7 ಇಂಚು, ಹರದೂರಿಗೆ 6 ಇಂಚು, ಸುಂಟಿಕೊಪ್ಪಕ್ಕೆ 5 ಇಂಚು, ಮಳೆಯಾಗಿದೆ. ಹಟ್ಟಿಹೊಳೆ, ಮಾದಾಪು‌, ಐಗೂರು, ಚೋರನಹೊಳೆ, ಹರದೂರು ಹೊಳೆ ತುಂಬಿ ಹರಿಯುತ್ತಿದ್ದು ನಾಲೆ, ತೊರೆಗಳು ತುಂಬಿ ಹರಿಯುತ್ತಿವೆ.   ವಿರಾಜಪೇಟೆ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಕೆರೆ, ತೋಡುಗಳು, ಕಾವೇರಿ ಹೊಳೆಯ ನೀರಿನ ಮಟ್ಟ ಏರಿಕೆಯಾಗಿದೆ. ಕದನೂರು, ಬಿಟ್ಟಂಗಾಲ ಹಾಗೂ ಆರ್ಜಿ ಗ್ರಾಮಗಳಲ್ಲಿ ಗದ್ದೆ ಹಾಗೂ ಬಾಣೆ ಜಾಗಗಳು ಜಲಾವೃತ್ತಗೊಳ್ಳಲು ಆರಂಭಗೊಂಡಿವೆ.  
 
ಆರ್ಜಿ ಗ್ರಾಮದಲ್ಲಿಯೂ ಭಾರೀ ಮಳೆ ಯಾಗುತ್ತಿದ್ದು ಅನ್ವಾರುಲ್‌ಹುದಾ ವಿದ್ಯಾ ಸಂಸ್ಥೆಯ ಮುಂಭಾಗದ ಕೊಡಗು ಕೇರಳ ರಾಜ್ಯ ಹೆದ್ದಾರಿಯ ಸೇತುವೆಯ ಮೇಲೆ ಒಂದಡಿಯಷ್ಟು ನೀರು ಹರಿದಿದ್ದರೂ ಸಂಚಾರಕ್ಕೆ ಅಡಚಣೆ ಯಾಗಿಲ್ಲ. ಬಲಮುರಿಯಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಸೋಮವಾರಪೇಟೆ ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.