ಬಾವಿಕೆ‌ರೆ ಅಣೆಕಟ್ಟು : ಕೊನೆಗೂ ಟೆಂಡರ್‌ ಪ್ರಕ್ರಿಯೆ ಪೂರ್ಣ


Team Udayavani, Jul 10, 2018, 6:00 AM IST

08ksde13.jpg

ಮೂರು ಮಂದಿ ಗುತ್ತಿಗೆದಾರರು ಟೆಂಡರ್‌ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಈ   ಪೈಕಿ  ಜಾಸ್ಮಿನ್‌ ಕನ್‌ಸ್ಟ್ರಕ್ಷನ್‌ ಕಂಪೆನಿ  ಅಣೆಕಟ್ಟು ನಿರ್ಮಾಣ ಗುತ್ತಿಗೆಯನ್ನು ವಹಿಸಿಕೊಂಡಿದೆ. ಮುಂದಿನ ಎರಡು ವರ್ಷದೊಳಗೆ ಕಾಮಗಾರಿ ಪೂರ್ತಿಗೊಳಿಸುವುದಾಗಿ ಟೆಂಡರ್‌ ಪ್ರಕ್ರಿಯೆಯಲ್ಲಿ ಒಪ್ಪಂದಕ್ಕೆ ಬರಲಾಗಿದೆ. ರಾಜ್ಯ ಸರಕಾರ ಕಳೆದ ಮುಂಗಡಪತ್ರದಲ್ಲಿ   27.75 ಕೋ. ರೂ.ಕಾದಿರಿಸಿದೆ.

ಕಾಸರಗೋಡು: ಹಲವು ವರ್ಷ ಗಳಿಂದ ನನೆಗುದಿಗೆ ಬಿದ್ದಿದ್ದ ಕಾಸರಗೋಡು ನಗರಸಭೆ ಮತ್ತು ಕೆಲವು ಪಂಚಾಯತ್‌ಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆಯಾದ ಬಾವಿಕೆರೆ ಅಣೆಕಟ್ಟಿಗೆ ಕೊನೆಗೂ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. 

ಅರ್ಧದಲ್ಲೇ ನಿಂತಿರುವ ಅಣೆಕಟ್ಟು ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ   ಮತ್ತೆ ಜನರಲ್ಲಿ ಆಶಾಭಾವನೆ ಮೊಳಕೆಯೊಡೆದಿದೆ.

ಶಾಸಕರ ಯಶಸ್ವೀ ಸಂಧಾನ 
ಆರು ತಿಂಗಳ ಹಿಂದೆ ಟೆಂಡರ್‌ ಪ್ರಕ್ರಿಯೆಗೆ ಮುನ್ನ ಪ್ರಿಕ್ವಾಲಿಫಿಕೇಶನ್‌ ಟೆಂಡರ್‌ ನಡೆದಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆಗೆ ಮುಂದಾದಾಗ ಈ ಹಿಂದಿನ ಗುತ್ತಿಗೆದಾರ ನ್ಯಾಯಾಲಯದ ಮೆಟ್ಟಲೇರಿದ್ದರಿಂದ ಟೆಂಡರ್‌ ಪ್ರಕ್ರಿಯೆ ಪೂರ್ತಿಗೊಳಿಸಲು ಸಾಧ್ಯವಾಗಿರಲಿಲ್ಲ. ಹೀಗಿರುವಂತೆ ಕಾಸರಗೋಡು ಶಾಸಕ ಎನ್‌.ಎ. ನೆಲ್ಲಿಕುನ್ನು ಹಿಂದಿನ ಟೆಂಡರ್‌ದಾರರನ್ನು ಭೇಟಿಯಾಗಿ ಈ ಯೋಜನೆ ಜನ ಕ್ಷೇಮ ಯೋಜನೆಯಾಗಿರುವುದರಿಂದ ಕೇಸಿನಿಂದ ಹಿಂದೆ ಸರಿಯಬೇಕೆಂದು ಕೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೇಸು ಹಿಂದೆಗೆದುಕೊಂಡಿರುವುದರಿಂದ ಟೆಂಡರ್‌ ಪ್ರಕ್ರಿಯೆ ಪೂರ್ತಿಗೊಳಿಸಲು ಸಾಧ್ಯವಾಗಿದೆ. 

ಆರಂಭದಲ್ಲಿ ನಿರ್ಮಿಸಿದ ಅಣೆಕಟ್ಟಿನ ಭಾಗವನ್ನು ನವೀಕರಿಸಿ ಅಣೆಕಟ್ಟು ಪೂರ್ತಿಗೊಳಿಸಲಾಗುವುದು. ಹೊಸದಾಗಿ ನಿರ್ಮಿಸುವ ಭಾಗದಲ್ಲಿ ಮೋಟಾರು ಬಳಸಿ ಕಾರ್ಯಾಚರಿಸುವುದರಿಂದ ಉಕ್ಕಿನ ಶಟರ್‌ಗಳನ್ನು ನಿರ್ಮಿಸಲಾಗುವುದು.

12 ಮೀಟರ್‌  ನೀಳದ ನಾಲ್ಕು ಶಟರ್‌ ಗಳನ್ನು ಆಧುನಿಕ ತಾಂತ್ರಿಕತೆಗೆ ಅನುಗುಣ ವಾಗಿ ಬದಲಾಯಿಸಲಾಗಿದ್ದು, ಇದಕ್ಕಾಗಿ 18 ಮೀಟರ್‌ ಎತ್ತರದಲ್ಲಿ  ಐದು ಕಾಂಕ್ರೀಟ್‌ ಕಂಬಗಳನ್ನು ನಿರ್ಮಿಸಲಾಗುವುದು. ಪ್ರಸ್ತುತ ಇರುವ ಭಾಗಗಳಲ್ಲಿ ಫೈಬರ್‌ ರಿ ಇನ್‌ಫೋರ್ಸ್‌ಮೆಂಟ್‌ ಹಲಗೆಗಳನ್ನು ಉಪಯೋಗಿಸಲಾಗುವುದು. ಇರಿಗೇಶನ್‌ ಡಿಸೈನ್‌ ಆ್ಯಂಡ್‌ ರಿಸರ್ಚ್‌ ಬೋರ್ಡ್‌ ನೀಲ ನಕಾಶೆಯನ್ನು ಸಿದ್ಧಪಡಿಸಿದೆ. ಜಲ ಮಂಡಳಿ ಪಯಸ್ವಿನಿ  ಹೊಳೆಯ ಯೋಜನೆ ಪ್ರದೇಶದಲ್ಲಿ ನೀರು ಸಂಗ್ರಹ ಘಟಕದಲ್ಲಿ  ಬೇಸಗೆಯಲ್ಲಿ ಸಮುದ್ರದ ಉಪ್ಪು ನೀರು ಸೇರುವುದನ್ನು  ತಡೆಯಲು ಆಲೂರು ಮುನಂಬಿಲ್‌ನಲ್ಲಿ ತಡೆಗೋಡೆ (ಅಣೆಕಟ್ಟು) ನಿರ್ಮಾಣ ಕಾಮಗಾರಿ ಆರಂಭಿಸಿತ್ತು. 1980ರಲ್ಲಿ ಪ್ರಥಮವಾಗಿ ಎಸ್ಟಿಮೇಟ್‌ ತಯಾರಿಸಲಾಗಿತ್ತು. ಇದೀಗ ಅಣೆಕಟ್ಟು ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ತಿಗೊಂಡಿರು ವುದರಿಂದ ಇಲ್ಲಿನ ಜನರು ಬಹಳಷ್ಟು ನಿರೀಕ್ಷೆ ಯಲ್ಲಿದ್ದಾರೆ.
 
ಇನ್ನಾದರೂ ಬೇಸಗೆಯಲ್ಲಿ ಉಪ್ಪು ನೀರು ಕುಡಿಯಬೇಕಾದ ಸಮಸ್ಯೆಯಿಂದ ಪಾರಾಗುವ ಅಶಾವಾದ ಜನರದ್ದು.

ಈಗಾಗಲೇ 4 ಕೋಟಿ ರೂ. ಖರ್ಚಾಗಿದೆ
2005ರಲ್ಲಿ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಕೆಲವೇ ತಿಂಗಳಲ್ಲಿ ಕಾಮಗಾರಿ ನಿಲುಗಡೆಗೊಳಿಸಲಾಯಿತು. 2012ರಲ್ಲಿ ಮತ್ತೆ ನಿರ್ಮಾಣ ಕಾಮಗಾರಿ ಆರಂಭಿಸಿ ಹೊಳೆಯ ಅರ್ಧ ಭಾಗದವರೆಗೆ   ಕಾಂಕ್ರೀಟ್‌ ಕಂಬಗಳನ್ನು ನಿರ್ಮಿಸಲಾಗಿತ್ತು. ಆದರೆ ಈ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆ ದಾರ ಒಂದೇ ವರ್ಷದಲ್ಲೇ ಕಾಮಗಾರಿ ಯನ್ನು ಕೈಬಿಟ್ಟಿದ್ದರಿಂದ ಅಣೆಕಟ್ಟು ನಿರ್ಮಾಣ ಕಾಮಗಾರಿ ಅರ್ಧದಲ್ಲೇ ಮೊಟಕು ಗೊಂಡಿತು. ಈಗಾಗಲೇ 4 ಕೋಟಿ ರೂ. ವೆಚ್ಚ ಮಾಡಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.