ತಲಪಾಡಿ-ಕಾಸರಗೋಡು ಹೆದ್ದಾರಿ ಗುಂಡಿ: ಸಂಚಾರ ಸಮಸ್ಯೆ


Team Udayavani, Jul 23, 2018, 6:00 AM IST

21-kbl-1.jpg

ಕುಂಬಳೆ: ಮಳೆಗೆ ಹೆದ್ದಾರಿಯಲ್ಲಿ ಹೊಂಡಗಳಾಗಿ ವಾಹನಗಳಿಗೆ ಸಂಚರಿಸಲು ಅಸಾಧ್ಯವಾಗಿದೆ. ಆದರೆ ಇದು ತಮಗೆ ಸಂಬಂಧ ಪಟ್ಟದಲ್ಲವೆಂದು  ಇಲಾಖೆ ಅಧಿಕಾರಿಗಳು ಬೆಚ್ಚಗೆ  ಹೊದ್ದು ಮಲಗಿದ್ದಾರೆ.

ಮಂಗಳೂರು ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ತಲಪ್ಪಾಡಿಯಿಂದ ಕಾಸರಗೋಡು ತನಕ ರಸ್ತೆಯುದ್ದಕ್ಕೂ ಇಂಗು ಗುಂಡಿಗಳಾಗಿವೆ.ಕೆಲ ಕಡೆಗಳಲ್ಲಿ ರಸ್ತೆ ಮಧ್ಯೆ ದೊಡ್ಡ ಹಳ್ಳ ಸೃಷ್ಟಿಯಾಗಿದೆ.ತಲಪ್ಪಾಡಿ,ಮಂಜೇಶ್ವರ,ಉಪ್ಪಳ,ಕುಂಬಳೆ,ಪೆರ್ವಾಡು,
ಮೊಗ್ರಾಲ್‌,ಚೌಕಿ,ಕೊಪ್ಪರಬಜಾರ್‌,ಅಡ್ಕತ್ತಬೈಲು,ತಾಳಿಪ್ಪಡು,ಕರಂದಕ್ಕಾಡು ಮೊದಲಾದೆಡೆಗಳಲ್ಲಿ ರಸ್ತೆ ಮಧ್ಯೆ ದೊಡ್ಡ ಹೊಂಡಗಳು ಸೃಷ್ಟಿಯಾಗಿ ವಾಹನಗಳಿಗೆ ಸಂಚರಿಸಲು ತೊಡಕಾಗಿದೆ.ಇದರಿಂದ  ರಸ್ತೆಯಲ್ಲಿ ವಾಹನಗಳು ಜೋಕಾಲಿಯಾಡುತ್ತಿದೆ.ಬಸ್‌ನಲ್ಲಿ ಪ್ರಯಾಣಿಕರು ಭಯದಿಂದ ಪ್ರಯಾಣಿಸಬೇಕಾಗಿದೆ.

ಭಾರೀ ಹೊಂಡ ಸೃಷ್ಟಿ
ಕಣಿಪುರ ಗೋಪಾಲಕೃಷ್ಣ ಕ್ಷೇತ್ರದ ಮುಂದೆ ಭಾರೀ ಹೊಂಡ ಸೃಷ್ಟಿಯಾಗಿ ತಿಂಗಳೇ ಸಂದಿದೆ.ಇಲ್ಲಿ ಅಪಾಯದ ಸೂಚನೆ ಫಲಕ ನಾಟಲಾಗಿದೆ.ರಸ್ತೆ ಹೊಂಡಗಳಿಂದಲಾಗಿ ಈ ಪ್ರದೇಶದಲ್ಲಿ ವಾಹನಗಳಿಗೆ ನಿತ್ಯ ಸಂಚಾರಕ್ಕೆ ತಡೆಯಾಗುತ್ತಿದೆ. ಕುಂಬಳೆ ಸೇತುವೆ ಬಳಿಯಿಂದ ವಾಹನಗಳ ಸರತಿ ಸಾಲು ಅರಿಕ್ಕಾಡಿ ಹನುಮಾನ್‌ ಕೇÒತ್ರದ ತನಕ ಹನುಮಂತನ ಬಾಲದಂತೆ ಉದ್ದಕ್ಕೆ ಬೆಳೆದಿರುತ್ತದೆ.ರಸ್ತೆಯ ವಿರುದ್ಧ ಭಾಗದಲ್ಲಿ ಕುಂಬಳೆ ಪೇಟೆಯ ತನಕ ವಾಹನಳು ರಸ್ತೆಯಲ್ಲೇ ಉಳಿಯಬೇಕಾಗುತ್ತದೆ.ಹೆಚ್ಚಿನ ಖಾಸಗಿ ಬಸ್ಸುಗಳು ಸಮಯಕ್ಕೆ ಸರಿಯಾಗಿ ತಲಪಲು ಅಸಾಧ್ಯವಾಗಿ ಕೆಲವು ಟ್ರಿಪ್‌ಗ್ಳನ್ನು ಮೊಟಕುಗೊಳಿಸುವುದು ಅನಿವಾರ್ಯ. ರಾತ್ರಿ ಸಂಚರಸುವ ವಾಹನಗಳು ಕೆಸರು ನೀರು ತುಂಬಿದ ಹೊಂಡಗಳಿಗೆ ಬಿದ್ದು ಎದ್ದು ಹೋಗಬೇಕಾಗಿದೆ.ಅನೇಕ ಸಣ್ಣ ವಾಹನಗಳು ಅಪಘಾತಕ್ಕೆ ಈಡಾಗಿವೆ.

ಇಲಾಖೆಯ ಕುಂಟು ನೆಪ 
ರಸ್ತೆ ಹೊಡ ಮುಚ್ಚಲು ಪ್ಯಾಚ್‌ ವರ್ಕ್‌ ಗೆ 70 ಲಕ್ಷ ಮಂಜೂರಾಗಿದೆ.ಆದರೆ ಕಾಮಗಾರಿ ನಡೆಸಲು ಗುತ್ತಿಗೆದಾರರು ಹಿಂದೇಟು ಹಾಕುವರಂತೆ.2.10 ಕೋಟಿ ನಿಧಿಗೆ ಪ್ರಸ್ತಾವನೆ ಸಲ್ಲಿಸಿದರೂ ಕೇವಲ 70 ಲಕ್ಷ ಮಂಜೂರುಗೊಂಡಿದೆ ಇ ದರಲ್ಲಿ ಎಲ್ಲಾ ಹೋಂಡಗಳನು  ಹೇಗೆ ಮುಚ್ಚಲಿ ಎಂಬ ಚಿಂತೆಯಲ್ಲಿ ಇಲಾಖೆ ತಲೆಬಿಸಿಯಲ್ಲಿದೆ.ಧಾರಾಕಾರ ಮಳೆ ಸುರಿಯುವುದರಿಂದ ಹೆದ್ದಾರಿ ಹೊಂಡಗಳನ್ನು ಮುಚ್ಚಲು ಅಸಾಧ್ಯವೆಂಬ ಸಬೂಬು ಕೇಳಿ ಬರುತ್ತಿದೆ.ಆದರೆ ಭಾರೀ ಹೊಂಡಗಳಿಗೆ ಕನಿಷ್ಟ ಜಲ್ಲಿಯನ್ನಾದರೂ ತುಂಬಿಸಿ ರಸ್ತೆ ಹೊಂಡಗಳಿಗೆ  ಮೋಕ್ಷ ಮಾಡಬಹುದಿತ್ತು.ಆದುದರಿಂದ ರಸ್ತೆ ಹೊಂಡಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದಲ್ಲದೆ ಹೊಂಡಗಳ ಗಾತ್ರವೂ ದೊಡ್ಡದಾಗುತ್ತಿದೆ.

ಸಾಕಾರಗೊಳ್ಳದ ಚತುಷ್ಪಥ
ಕರ್ನಾಟಕದ ತಲಪಾಡಿ ತನಕ ರಸ್ತೆ 60 ಮೀಟರ್‌ ಅಗಲಗೊಂಡಿದೆ.ಆದರೆ ಇದು ಮುಂದೆ ಸಾಗಲೇ ಇಲ್ಲ.ಕೇರಳದಲ್ಲಿ 40 ಮೀಟರ್‌ ಅಗಲದ ಹೆದ್ದಾರಿಗೆ ಇನ್ನೂ ಕಾಲಕೂಡಿ ಬಂದಿಲ್ಲ. ಹಿಂದಿನ ಮತ್ತು ಇಂದಿನ ರಾಜ್ಯ ಸರಕಾರಗಳ ಅನಾಸ್ಥೆಯಿಂದ ಮತ್ತು ಸಂಸದರ ಮತ್ತು ಶಾಸಕರ ಇಚ್ಛಾಶಕ್ತಿಯ ಕೊರತೆಯಿಂದ  ರಸ್ತೆ ಅಗಲಗೊಳ್ಳದೆ ಉಳಿದಿದೆ.ರಸ್ತೆ ಅಗಲಕ್ಕೆ ಬೇಕಾದ ಸ್ಥಳವನ್ನು ವಶಪಡಿಸಲು ರಾಜ್ಯ ಸರಕಾರದ‌ ನಿಧಾನವೇ ಪ್ರಧಾನ ನೀತಿ ತೊಡಕಾಗಿದೆ. 

ಸಣ್ಣರಾಜ್ಯವೆಂದು 60 ಮೀಟರ್‌ ರಸ್ತೆ ಅಗಲದಿಂದ 40 ಮೀಟರ್‌ಗೆ ಸೀಮಿತವಾಗಿರುವ ರಸ್ತೆ ಕಾಮಗಾರಿ ನಡೆದಲ್ಲಿ ವಾಹನ ದಟ್ಟಣೆಗೆ ಮೋಕ್ಷವಾಗಲಿದೆ.ಆದರೆ ಇದಕ್ಕೆ ರಾಜ್ಯ ಸರಕಾರ ಮುಂದಾಗಬೇಕಿದೆ. ವರ್ಷದಿಂದ ವರ್ಷಕ್ಕೆ ವಾಹನ ತೆರಿಗೆ, ಬಿಡಿ ಭಾಗಗಗಳ ಬೆಲೆ ಏರಿಕೆ ಯಾಗುತ್ತಿದ್ದರೂ ವಾಹನಗಳಿಗೆ ಸಂಚಾರಕ್ಕೆ ರಸ್ತೆ ಸರಿಪಡಿಸ ಬೇಕಾದ  ಜವಾದ್ದಾರಿ ಸರಕಾರಕ್ಕೆ ಇಲ್ಲವೇ ಎಂಬ ಪ್ರಶ್ನೆ ವಾಹನ ಮಾಲಕರದು. 

ವಾಹನಗಳ ಸಂಖ್ಯೆ ಏರಿಕೆ,ಕಳಪೆ ಕಾಮಗಾರಿ 
ದಿನದಿಂದ ದಿನಕ್ಕೆ ರಸ್ತೆಯಲ್ಲಿ ವಾಹನಗಳ ಸಂಚಾರ ಸಂಖ್ಯೆ ಏರುತ್ತಿದೆ. ವಾಹನಗಳ ದಟ್ಟಣೆ ಅಧಿಕವಾಗುತ್ತಿದೆ.ರಸ್ತೆ ಗುತ್ತಿಗೆದಾರರ ಕಳಪೆ ಕಾಮಗಾರಿಯ ಕಳ್ಳತನಕ್ಕೆ ಚುನಾಯಿತ ಜನಪ್ರತಿನಿಧಿಗಳು ಮತ್ತು ಲೋಕೋಪಯೋಗಿ ಇಲಾಖೆಯ ಕೆಲವು ಅಧಿಕಾರಿಗಳು ಬೆಳಕು ತೋರಿಸಿದ ಪರಿಣಾಮದಿಂದ ರಸ್ತೆ ಬೇಗನೆ ಕೆಡುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬರುತ್ತಿದೆ. 

ಶಿಥಿಲ ಸೇತುವೆಗಳು 
ಭಾರೀಮಳೆ ಪರಿಣಾಮದಿಂದ  ರೈಲ್ವೆ ಸೇತುವೆಗಳತ್ತ ನಿಗಾ ಇರಿಸಬೇಕೆಂಬುದಾಗಿ ರೈಲ್ವೆ ಮಂತ್ರಾಲಯ ಎಚ್ಚರಿಸಿದೆ.ಅಂತೆಯೇ ಹೆದ್ದಾರಿಯ ಕೆಲವು ಹಳೆಯ ಸೇತುವೆಗಳು ಅಪಾಯವನ್ನು ಆಹ್ವಾನಿಸುತ್ತಿವೆ.ಮಂಜೇಶ್ವರ,ಮಂಗಲ್ಪಾಡಿ ಕುಕ್ಕಾರು,ಕುಂಬಳೆ ಮೊಗ್ರಾಲ್‌ ಸೇತುವೆಗಳು ಶಿಥಿಲವಾಗಿದ್ದು ಇದಕ್ಕೆ ಹಲವು ಬಾರಿ ತೇಪೆ ಹಾಕಲಾಗಿದೆ.ಆಗಲಕಿರಿದಾದ ಈ ಸೇತುವೆಗಳಿಗೆ ಭದ್ರತೆಯ ಅಪಾಯ ಎದುರಾಗಿದೆ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.