ಅನುದಾನ ಬಿಡುಗಡೆಗೆ ಶಾಸಕ ಅಪ್ಪಚ್ಚುರಂಜನ್ ಆಗ್ರಹ
Team Udayavani, Jul 24, 2018, 7:45 AM IST
ಜಮ್ಮಾ ಹಕ್ಕು ಯೋಜನೆ ಜಾರಿಗೆ ತರುವ ಮೂಲಕ ಕಂದಾಯ ಭೂಮಿಯನ್ನಾಗಿ ಪರಿವರ್ತಿಸಬೇಕು ಎಂದು ತಿಳಿಸಿದರು. ಜಿಲ್ಲೆಗೆ ರಾಜ್ಯ, ರಾಷ್ಟ್ರ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದು ಜಿಲ್ಲೆಯ ಪ್ರವಾಸಿ ಕೇಂದ್ರವನ್ನು ಅಭಿವೃದ್ಧಿ ಪಡಿಸಿ ಮೂಲ ಸೌಲಭ್ಯ ಕಲ್ಪಿ ಸುವ ದೃಷ್ಠಿಯಿಂದ ಜಿಲ್ಲೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಮಡಿಕೇರಿ: ಹೊಳೆನರಸಿಪುರ-ಅರಕಲಗೋಡು-ಸೋಮವಾರಪೇಟೆ-ವಿರಾಜಪೇಟೆ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಕೆಷಿಫ್ನಿಂದ ಡಿ.ಪಿ.ಆರ್ ಆಗಿದ್ದು, ಈ ರಸ್ತೆ ಸೋಮವಾರಪೇಟೆ-ಮಡಿಕೇರಿ- ವಿರಾಜಪೇಟೆ ತಾಲ್ಲೂಕು ಮೂಲಕ ಹಾದು ಹೋಗುತ್ತದೆ. ಈ ವ್ಯಾಪ್ತಿಯ ಜನರ ಅನುಕೂಲಕ್ಕಾಗಿ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಗಲೀಕರಣಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರು ಕೋರಿದ್ದಾರೆ.
ಹೆಚ್ಚಿನ ರಸ್ತೆಗಳು ಮತ್ತು ಸೇತುವೆಗಳು ಇತ್ತೀಚೆಗೆ ಬಿದ್ದ ಮಳೆಯಿಂದ ಹಾನಿಯಾಗಿರುವುದರಿಂದ ವಿಶೇಷವಾಗಿ ರಸ್ತೆ ಹಾಗೂ ಸೇತುವೆ ದುರಸ್ತಿಗೆ ಒಂದು ಸಾವಿರ ಕೋಟಿ ಅನುದಾನ ನೀಡುವಂತೆ ಶಾಸಕರು ಮನವಿ ಮಾಡಿದ್ದಾರೆ. ಕೊಡಗಿನ ರೈತರು ಈಗಾಗಲೇ ಕಾಫಿ ಮತ್ತು ಕರಿಮೆಣಸಿನ ಬೆಲೆಯು ಕಡಿಮೆಯಾಗಿದ್ದ ಪರಿಣಾಮ ಕಂಗಾಲಾಗಿದ್ದು ಚೇತರಿಸಿಕೊಳ್ಳಲು ಶ್ರಮಿಸುತ್ತಿರುವ ಬೆನ್ನಲೇ ಈಗ ಬಿದ್ದ ಮಳೆಯಿಂದ ಕಾಫಿ ಮತ್ತು ಕರಿಮೆಣಸು ಸಂಪೂರ್ಣ ನಾಶ ಹೊಂದುತ್ತಿದ್ದು, ರೈತರು ಜೀವನ ನಡೆಸುವುದೇ ದುಸ್ತರವಾಗಿದೆ. ಆದ್ದರಿಂದ ಮಳೆಯಿಂದ ಹಾನಿಗೊಳಗಾದ ಬೆಳೆಗೆ ಪರಿಹಾರ ನೀಡಬೇಕು ಎಂದು ತಿಳಿಸಿದರು.
ಕೂಡಿಗೆಯಲ್ಲಿ ಈ ಹಿಂದೆ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯಿಂದ ಮಿನಿವಿಮಾನ ನಿಲ್ದಾಣಕ್ಕೆ ಜಾಗವನ್ನು ಗುರುತಿಸಿರುವುದರಿಂದ ಈ ಜಾಗದಲ್ಲಿ ಮಿನಿ ವಿಮಾನ ನಿಲ್ದಾಣ ಮಂಜೂರು ಮಾಡಬೇಕಾಗಿ ಕೋರಿದರು.
ಕಾಡಾನೆ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರ ವ್ಯವಸಾಯದ ಜಮೀನಿ ನಲ್ಲಿ ಬೆಳೆದ ಬೆಳೆ ನಷ್ಟವಾಗುವುದೇ ಅಲ್ಲದೆ ರೈತರ ಮೇಲೆ ಆಗಿಂದಾಗ್ಗೆ ದಾಳಿ ನಡೆಸುತ್ತಿರುವುದರಿಂದ ಕಾಡಾನೆ ತಡೆಗೆ ಕಂದಕ ನಿರ್ಮಾಣ, ಇಲ್ಲವೇ ಸೋಲಾರ್ ನಿರ್ಮಾಣ ಮಾಡಲು ಕ್ರಮವಹಿಸಬೇಕು ಎಂದರು.
ಸಮಾಜ ಕಲ್ಯಾಣ ಬಿ.ಸಿ.ಎಂ ಇಲಾಖೆಯಲ್ಲಿ ಅಡುಗೆಯ ವರು ಮತ್ತು ಅಡುಗೆ ಸಹಾಯಕರು ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚಿಗೆ ಈ ಹುದ್ದೆಗಳಿಗೆ ಸರ್ಕಾರದಿಂದ ಹೊಸದಾಗಿ ಸಿಬಂದಿ ನೇಮಿಸಿದ್ದರಿಂದ, ಹಾಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬಂದಿ ು ೆ ನಿರುದ್ಯೋಗಿಗಳಾಗಿದ್ದಾರೆ. ಆದ್ದರಿಂದ ಇಂತವರನ್ನು ತಾತ್ಕಾಲಿಕ ಸಿಬಂದಿಗಳಾಗಿ ನೇಮಕ ಮಾಡಲು ಕ್ರಮವಹಿಸಬೇಕೆಂದು ಅಪ್ಪಚ್ಚುರಂಜನ್ ಅವರು ಮನವಿ ಪತ್ರದಲ್ಲಿ ಕೋರಿದ್ದಾರೆ. ೊಡಗು ಜಿಲ್ಲೆಯಲ್ಲಿ ನಡೆಯುವ ದಸರಾ ಉತ್ಸವಕ್ಕೆ ಮೈಸೂರಿಗೆ ನೀಡುವಂತೆ ವಿಶೇಷ ಅನುದಾನವನ್ನು ಮೀಸಲಿಡಬೇಕು ಎಂದು ತಿಳಿಸಿದರು. ಸರ್ಕಾರಿ ಆಸ್ಪತ್ರೆಗಳ ವೈದ್ಯರ ಕೊರತೆ ಸೇರಿದಂತೆ ಜಿಲ್ಲೆಯ ಸರ್ಕಾರಿ ಇಲಾಖೆಗಳಲ್ಲಿ ಶೇ.50 ಕ್ಕಿಂತಲೂ ಹೆಚ್ಚು ಸಿಬ್ಬಂದಿಗಳ ಕೊರತೆ ಇರುವುದರಿಂದ ಸರ್ಕಾರಿ ಕೆಲಸಗಳು ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಆಗದೆ ತೊಂದರೆಯಾಗಿರುವುದರಿಂದ ಸರ್ಕಾರಿ ಕಚೇರಿಯಲ್ಲಿನ ಸಿಬ್ಬಂದಿಗಳ ನೇಮಕಾತಿ ಮಾಡಬೇಕು ಎಂದರು.
ಮಡಿಕೇರಿಯ ರಾಜರ ಕೋಟೆ ಈ ಹಿಂದೆ ಸರ್ಕಾರಿ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಇತರೆ ಕಚೇರಿಗಳು ಇಲ್ಲಿಂದ ಜಿಲ್ಲಾ—ಕಾರಿಗಳ ಹೊಸ ಸಂಕೀರ್ಣಕ್ಕೆ ಸ್ಥಳಾಂತರಗೊಂಡಿದ್ದು, ಇನ್ನು ಕೆಲವೇ ಕಚೇರಿಗಳು ಮಾತ್ರ ಕೋಟೆಯಲ್ಲಿದ್ದು, ಇಲ್ಲಿನ ಕೋಟೆಯು ಮಳೆಯಿಂದ ಶಿಥಿಲಗೊಳ್ಳುತ್ತಿದ್ದು, ದುರಸ್ತಿಪಡಿಸಿದ್ದಲ್ಲಿ ಪುರಾತನ ಕೋಟೆಯು ಉಳಿಯಲಿದೆ ಎಂದು ಶಾಸಕರು ತಿಳಿ ಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ