ಮಡಿಕೇರಿ -ಮಂಗಳೂರು ರಸ್ತೆಯಲ್ಲಿ ಬೃಹತ್ ಗುಂಡಿ
Team Udayavani, Jul 30, 2018, 11:07 AM IST
ಮಡಿಕೇರಿ: ಒಂದು ತಿಂಗಳ ಭಾರೀ ಮಳೆಯಿಂದಾಗಿ ಕೆಲವೆಡೆ ಬಿರುಕು, ಕೆಲವೆಡೆ ಕುಸಿತ ಕಂಡಿದ್ದ ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಮಡಿಕೇರಿ ಸಮೀಪ ಕಾಟಕೇರಿಯಲ್ಲಿ ಬೃಹತ್ ಗುಂಡಿ ಕಾಣಿಸಿಕೊಂಡಿದ್ದು, ವಾಹನ ಗಳ ಸಂಚಾರಕ್ಕೆ ಅಡಚಣೆ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಯ ಮಧ್ಯ ಭಾಗದಲ್ಲಿಯೇ ಸುಮಾರು ಮೂರು ಅಡಿ ಯಷ್ಟು ಆಳಕ್ಕೆ ವೃತ್ತಾಕಾರವಾಗಿ ರಸ್ತೆ ಕುಸಿದಿದೆ. ರವಿವಾರ ತಡರಾತ್ರಿ ಗುಂಡಿ ಬಿದ್ದಿರಬಹುದೆಂದು ಅಧಿಕಾರಿಗಳು ತಿಳಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ರಸ್ತೆ ನಡುವೆಯೇ ಬೃಹತ್ ಗುಂಡಿ ಆಗಿರುವುದರಿಂದ ಭಾರೀ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.
ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುರಸ್ತಿಯ ಕುರಿತು ಭರವಸೆ ನೀಡಿದ್ದಾರೆ. ಒಂದು ವಾರದಿಂದ ಮಳೆ ಬಿಡುವು ನೀಡಿದ್ದರೂ ಒಂದು ತಿಂಗಳ ಅವಧಿಯಲ್ಲಿ ಸುರಿದ ಭಾರೀ ಮಳೆಯಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಅಲ್ಲಲ್ಲಿ ಬರೆ, ಮನೆ, ರಸ್ತೆಗಳು ಕುಸಿಯುತ್ತಿರುವ ಘಟನೆಗಳು ಮುಂದುವರಿಯುತ್ತಲೇ ಇವೆ. ಮಡಿಕೇರಿ- ಮಂಗಳೂರು ಹೆದ್ದಾರಿಯ ಒಂದು ಭಾಗ ಕಳೆದ ವಾರವಷ್ಟೇ ಕುಸಿತ ಕಂಡಿತ್ತು. ಈಗ ಮಧ್ಯ ಭಾಗದಲ್ಲೇ ಕುಸಿತ ಉಂಟಾಗಿ ಅಪಾಯದ ಮನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ