ವಿದ್ಯಾರ್ಥಿಗಳು, ರಕ್ಷಕರು ಬೀದಿಗಿಳಿದು ಪ್ರತಿಭಟನೆ


Team Udayavani, Aug 10, 2018, 1:08 PM IST

10-agust-13.jpg

ಕುಂಬಳೆ : ಮಂಗಲ್ಪಾಡಿ ಸರಕಾರಿ ಹೈಸ್ಕೂಲಿನ ಕನ್ನಡ ತರಗತಿಗೆ ಮಲಯಾಳಿ ಅಧ್ಯಾಪಕ ನೇಮಕಾತಿಯ ವಿರುದ್ಧದ ಕಾವು ಇನ್ನಷ್ಟು ಏರಿದ್ದು ಇದೀಗ ವಿದ್ಯಾರ್ಥಿಗಳು ಮತ್ತು ರಕ್ಷಕರು ವಿದ್ಯಾಲಯದ ಮುಂದೆ ರಸ್ತೆಪಕ್ಕದಲ್ಲಿ ಚಪ್ಪರದಡಿ ನಿರಾಹಾರ ಸತ್ಯಾಗ್ರಹ ನಡೆಸಿದ್ದಾರೆ.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಕಾಸರಗೋಡು ಜಿಲ್ಲಾ ಪಂಚಾಯತ್‌ ಲೋಕೋಪಯೋಗಿ ಸ್ಥಾಯೀ ಸಮಿತಿ ಅಧ್ಯಕ್ಷೆ ಫರೀದಾ ಝಕೀರ್‌ ಮಾತನಾಡಿ ಕನ್ನಡದ ಪರಿಜ್ಞಾನವಿಲ್ಲದ ಅಧ್ಯಾಪಕನನ್ನು ಶಾಲೆಯ ಕನ್ನಡ
ತರಗತಿಗೆ ನೇಮಕಗೊಳಿಸಿ ಕನ್ನಡ ಮಕ್ಕಳನ್ನು ಬಲಿಕೊಡುವ ಕೃತ್ಯ ಅಕ್ಷಮ್ಯ ಅಪರಾಧವಾಗಿದೆ. ಇದನ್ನು ಯಾವುದೇ
ರೀತಿಯಲ್ಲೂ ಸಹಿಸಲು ಅಸಾಧ್ಯ.ಆದುದರಿಂದ ಗೆಲುವಿನ ತನಕ ಹೋರಾಟ ನಡೆಸುವುದಾಗಿ ಹೇಳಿದರು.

ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್‌ ರಜಾಕ್‌ ಭಾಗವಹಿಸಿ ಸತ್ಯಾಗ್ರಹ ನಡೆಸುವ ವಿದ್ಯಾರ್ಥಿಗಳ ಬೇಡಿಕೆ ನ್ಯಾಯೋಚಿತವಾಗಿದ್ದು ಕನ್ನಡ ತರಗತಿಗೆ ಕನ್ನಡ ಅಧ್ಯಾಪಕರನ್ನೇ ನೇಮಕಗೊಳಿಸಬೇಕು. ಇದಕ್ಕೆ ತನ್ನ ಬೆಂಬಲವಿರುವುದಾಗಿ ಸಾರಿದರು. ಜಿ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್‌, ಮಂಗಲ್ಪಾಡಿ ಗ್ರಾ. ಪಂ.ಅಧ್ಯಕ್ಷ ಶಾಹುಲ್‌ ಹಮೀದ್‌, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಸ್‌.ವಿ.ಭಟ್‌, ಕಾಸರಗೋಡು ಜಿಲ್ಲಾ ಕನ್ನಡ ಹೋರಾಟ ಸಮಿತಿ ಉಪಾಧ್ಯಕ್ಷ ಎಂ.ವಿ.ಮಹಾಲಿಂಗೇಶ್ವರ ಭಟ್‌, ಪ್ರಧಾನ ಕಾರ್ಯದರ್ಶಿ ಕೆ. ಭಾಸ್ಕರ್‌, ವಿವಿಧ ಪಕ್ಷಗಳ ನಾಯಕರಾದ ಅಬ್ದುಲ್‌ ರಝಾಕ್‌ ಚಿಪ್ಪಾರ್‌, ಶುಕೂರ್‌ ಹಾಜಿ, ಅರಿಬೈಲು ಗೋಪಾಲ ಶೆಟ್ಟಿ, ಮಂಜುನಾಥ ಪ್ರಸಾದ್‌ ಆಳ್ವ, ಎಂ. ವಿಜಯ ಕುಮಾರ್‌ರೈ, ಅನೀಸ್‌ ಉಪ್ಪಳ, ದಿನೇಶ್‌ ಚೆರುಗೋಳಿ, ಪಿ.ಟಿ.ಎ. ಅಧ್ಯಕ್ಷ ಬಾಲಕೃಷ್ಣ ಅಂಬಾರ್‌,ಸದಸ್ಯರಾದ ರವಿ ಹೇರೂರು, ಸತ್ಯವತಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರೇಖಾ ಸ್ವಾಗತಿಸಿದರು.

ಅಧ್ಯಾಪಕನ ಕನ್ನಡ ಗಿಳಿ ಬಾಯಿಪಾಠ: ಕನ್ನಡದ ಗಂಧಗಾಳಿ ತಿಳಿಯದ ಕಪಟ ಕನ್ನಡ ಅಧ್ಯಾಪಕನನ್ನು ಡಿ.ಡಿ.ಇ.ಅವರು ಮುಖ್ಯ ಶಿಕ್ಷಕಿಯ ಕಚೇರಿಗೆ ಕರೆಸಿ ಮಾತುಕತೆ ನಡೆಸಿದರು. ತಾನು ಎಲ್ಲ ಅರ್ಹತೆಯೊಂದಿಗೆ ಈ ಹುದ್ದೆಗೆ ಸೇರಿರುವುದಾಗಿ ಅಧ್ಯಾಪಕ ಸಮರ್ಥಿಸಿದಾಗ ಕನ್ನಡದಲ್ಲಿ ಮಾತನಾಡಲು ಹೇಳಿದಾಗ ಗಿಳಿ ಬಾಯಿಪಾಠ ಮಾಡಿದ್ದ ಶಾಲೆಯ ಹೆಸರನ್ನು ಮತ್ತು ತಾನು ಈ ಶಾಲೆಯ ಉಪಾಧ್ಯಾಯನಾಗಿರುವುದಾಗಿ ಅರೆಬರೆ ಕನ್ನಡ ಕಷ್ಟಪಟ್ಟು ಮಾತನಾಡಿ ತೆಪ್ಪಗಾದರು. ಶಿಕ್ಷಣ ಅಧಿಕಾರಿಗಳು ಈತನಿಗೆ ಪ್ರತಿಭಟನೆಯ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಗಂಭೀರತೆಯನ್ನು ತಿಳಿಸಿ ರಜೆ ತೆಗೆಯಲು ಸೂಚಿಸಿದರು. ಸೋಮವಾರದ ವರೆಗೆ ತನಗೆ ಸಮಯಾವಕಾಶ ನೀಡಬೇಕೆಂಬ ಬೇಡಿಕೆಯನ್ನು ಅಧಿಕಾರಿಗಳು ಮನ್ನಿಸಿದರು. ನಿರಾಹಾರ ಸತ್ಯಾಗ್ರಹ ನಡೆಸಿದ ವಿದ್ಯಾರ್ಥಿಗಳ ಬವಣೆಯನ್ನರಿತು ನೊಂದ ಶಾಲೆಯ ಅಧ್ಯಾಪಕರೂ ಅಹಾರ ಸೇವಿಸದೆ ವಿದ್ಯಾರ್ಥಿಗಳನ್ನು ಬೆಂಬಲಿಸಿದರು.

ಸಮಸ್ಯೆ ಪರಿಹಾರವಾಗದಿದ್ದಲ್ಲಿ ಅಧ್ಯಾಪಕನಿಗೆ ತಡೆ: ಸಮಸ್ಯೆ ಪರಿಹಾರವಾಗದಿದ್ದಲ್ಲಿ ಮುಂದೆ ಪ್ರತಿಭಟನೆಯನ್ನು ಇನ್ನಷ್ಟು ಉಗ್ರಗೊಳಿಸಲಾಗುವುದು. ಬದಲಿ ಕನ್ನಡ ಅಧ್ಯಾಪಕರನ್ನು ನೇಮಕಗೊಳಿಸದಿದ್ದಲ್ಲಿ ಕನ್ನಡ ತಿಳಿಯದ ಅಧ್ಯಾಪಕನನ್ನು ಸೋಮವಾರದಿಂದ ಶಾಲೆಗೆ ಆಗಮಿಸದಂತೆ ತಡೆಯುವುದಾಗಿ ವಿದ್ಯಾರ್ಥಿಗಳು ಮತ್ತು ರಕ್ಷಕರು ಎಚ್ಚರಿಸಿರುವರು. ಪತ್ರಕರ್ತರ ಬೆಂಬಲ : ಪ್ರತಿಭಟನೆಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘ ಮತ್ತು ಮಂಜೇಶ್ವರ ಪ್ರಸ್‌ ಕ್ಲಬ್‌ ಬೆಂಬಲ ವ್ಯಕ್ತಪಡಿಸಿವೆ.

ಡಿ.ಡಿ.ಇ.ಗೆ ದಿಗ್ಬಂಧನ
ಪ್ರತಿಭಟನೆಯನ್ನು ಈ ತನಕ ಕಡೆಗಣಿಸಿದ್ದ ಜಿಲ್ಲಾ ಸಹಾಯಕ ಶಿಕ್ಷಣ ಅಧಿಕಾರಿಯವರು ಇಂದಿನ ನಿರಾಹಾರ ಸತ್ಯಾಗ್ರಹದ ಗಂಭೀರತೆಯನ್ನು ಪರಿಗಣಿಸಿ ಸ್ಥಳಕ್ಕೆ ಅಗಮಿಸಿದರು.ಇವರನ್ನು ಪ್ರತಿಭಟನಕಾರ ವಿದ್ಯಾರ್ಥಿಗಳು ದಿಗ್ಬಂಧನಗೊಳಿಸಿದರು. ಬಳಿಕ ಸತ್ಯಾಗ್ರಹಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯ ಪರಿಹಾರಕ್ಕೆ ಶ್ರಮಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.