ತಗ್ಗಿದ ಮಳೆಯಬ್ಬರ: ನೀರಿನ ಮಟ್ಟ ಇಳಿಕೆ


Team Udayavani, Aug 20, 2018, 6:00 AM IST

19ksde15b.jpg

ಕಾಸರಗೋಡು: ಹಿಂದೆಂದೂ ಕಂಡರಿಯದ ಜಲ ಪ್ರಳಯದಿಂದ ತತ್ತರಿಸಿರುವ ಕೇರಳದ ದಕ್ಷಿಣದ ಜಿಲ್ಲೆಗಳಲ್ಲಿ ನಿಧಾನವಾಗಿ ವರುಣನ ಆರ್ಭಟ ಶಮನಗೊಳ್ಳುತ್ತಿರುವಂತೆ ರಕ್ಷಣಾಕಾರ್ಯ ಭರದಿಂದ ಸಾಗುತ್ತಿದೆ. ವರುಣನ ಕರುಣೆಯಿಂದಾಗಿ ಪ್ರಳಯ ಪೀಡಿತ ಪ್ರದೇಶಗಳಲ್ಲಿ ನೀರಿನ ಮಟ್ಟ ಕೆಳಕ್ಕಿಳಿಯುತ್ತಿದೆ. ಇದೇ ಸಂದರ್ಭದಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿಗೂ ಕಾರಣವಾಗಿದೆ.

ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಇಳಿಯತೊಡಗಿದ್ದು, ಅದರಿಂದಾಗಿ ಇಡುಕ್ಕಿ ಜಿಲ್ಲೆಯ ಚೆರುತ್ತೋಣಿ ಅಣೆಕಟ್ಟಿನ ಎರಡು ಶಟರ್‌ಗಳನ್ನು ಆದಿತ್ಯವಾರ ಮತ್ತೆ ಮುಚ್ಚಲಾಗಿದೆ. ಮಹಾಪ್ರಳಯದಿಂದ ಶನಿವಾರ ವಿವಿಧ ಜಿಲ್ಲೆಗಳಲ್ಲಾಗಿ 39 ಮಂದಿ ಸಾವಿಗೀಡಾಗಿದ್ದಾರೆ. ಆದಿತ್ಯವಾರ ಬೆಳಗ್ಗೆ ಎರಡು ಮೃತ ದೇಹಗಳು ಪತ್ತೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ 193 ಮಂದಿ ಪ್ರವಾಹಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 359ಕ್ಕೇರಿದೆ. ಚೆಂಗನ್ನೂರು ಸಮೀಪದ ಪಾಂಡಕ್ಕಾಡಿನಲ್ಲಿ ರಕ್ಷಾ ಕಾರ್ಯಾಚರಣೆಗಳಿದ ಬೋಟ್‌ ದಿಢೀರ್‌ ನಾಪತ್ತೆಯಾಗಿದ್ದು, ಅದರಲ್ಲಿ ಆರು ಮಂದಿ ಇದ್ದರು. ಅವರ ಪತ್ತೆಗಾಗಿ ಹೆಲಿಕಾಪ್ಟರ್‌ನಲ್ಲಿ ಶೋಧ ನಡೆಯುತ್ತಿದೆ. ಸೇನೆ, ವ್ಯೋಮ, ನೌಕಾಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಗಳು ರಕ್ಷಾ ಕಾರ್ಯಾಚರಣೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮೃತ ದೇಹಗಳು ನೀರಿನಲ್ಲಿ ತೇಲಿ ಬರುತ್ತಿರುವುದರಿಂದ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಸಂತ್ರಸ್ತ ಶಿಬಿರಗಳಲ್ಲಿ 6.5 ಲಕ್ಷ ಮಂದಿ ಕಳೆಯುತ್ತಿ ದ್ದಾರೆ. 58,506 ಕುಟುಂಬಗಳು ನಿರಾಶ್ರಿತಗೊಂಡಿದೆ. ಸಂತ್ರಸ್ತ ಶಿಬಿರಗಳಲ್ಲಿ ಕಳೆಯುತ್ತಿರುವ ಜನರು ಆಹಾರ ಮತ್ತು ನೀರಿಗಾಗಿ ಪರದಾಡಬೇಕಾದ ಸ್ಥಿತಿ ಉಂಟಾಗಿದೆ. ಆಸ್ಪತ್ರೆಗಳಲ್ಲೂ ಭಾರೀ ನೀರಿನ ಸಮಸ್ಯೆ ತಲೆದೋರಿದೆ. ಸರಕಾರದ ಲೆಕ್ಕಾಚಾರಕ್ಕೆ ಸಿಗದಷ್ಟು ಸಾವು ನೋವು ಸಂಭವಿಸಿದೆ. ಮಳೆ ನಿಧಾನವಾಗಿ ಹಿಂದೆ ಸರಿಯುತ್ತಿರುವುದರಿಂದ ರಾಜ್ಯದ ಎಲ್ಲ ಜಿಲ್ಲೆಗಳನ್ನೂ ರೆಡ್‌ ಅಲರ್ಟ್‌ ನಿಂದ ಹೊರತುಪಡಿಸಲಾಗಿದೆ. ಮಳೆ ಶಮನಗೊಂಡರೂ ಎರ್ನಾಕುಳಂ, ಕೊಚ್ಚಿ, ಇಡುಕ್ಕಿ, ಕಣ್ಣೂರು, ತೃಶೂರು ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಪದೇ ಪದೇ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದೂ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಪ್ರಳಯದಿಂದ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಕೆಲಸಕ್ಕೂ ಭರದಿಂದ ಚಾಲನೆ ನೀಡಲಾಗಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

6,61,887 ಮಂದಿ ನಿರಾಶ್ರಿತರು
ಜಲ ಪ್ರಳಯದಲ್ಲಿ ಸಿಲುಕಿ ನಿರ್ಗತಿಕರಾಗಿರುವವರ ಸಂರಕ್ಷಣೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 3446 ಸಂತ್ರಸ್ತ ಶಿಬಿರಗಳನ್ನು ತೆರೆಯಲಾಗಿದೆ. ಇದರಲ್ಲಿ 1,69,935 ಕುಟುಂಬಗಳ 6,61,887 ಮಂದಿ ನಿರಾಶ್ರಿತರಿದ್ದಾರೆ.

ನೀರಿನಲ್ಲಿ ತೇಲಿ ಬರುತ್ತಿರುವ ಮೃತದೇಹಗಳು
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ  ಕಾರ್ಯಾಚರಣೆ ನಡೆದು ಬರುತ್ತಿರುವಂತೆಯೇ ಹಲವು ಜಿಲ್ಲೆಗಳಲ್ಲಿ ನೀರಿನಲ್ಲಿ ಮೃತದೇಹಗಳು ತೇಲಿ ಬರುತ್ತಿವೆ. ಈ ಕಾರಣದಿಂದ ಪ್ರಾಕೃತಿಕ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ನಿಖರ ಅಂಕಿಅಂಶ ಲಭಿಸದಂತಾಗಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.