ಪರಿಹಾರ ಕೇಂದ್ರಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಯೋಗಾಭ್ಯಾಸ


Team Udayavani, Aug 24, 2018, 1:15 AM IST

yoga-kodagu-23-8.jpg

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲು ಸರ್ಕಾರ ಸ್ಥಾಪಿಸಿರುವ ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರ ಮನೋಬಲ ವೃದ್ಧಿಗಾಗಿ ಮಾನಸಿಕ ತಜ್ಞರು ಹಾಗೂ ಉನ್ನತ ಅಧಿಕಾರಿಗಳ ಸಲಹೆ ಮೇರೆಗೆ ಯೋಗಾಭ್ಯಾಸ ಮತ್ತು ಗ್ರಾಮೀಣ ಸೊಗಡಿನ ಪಾರಂಪರಿಕ ನೃತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಈ ಮೂಲಕ ನೊಂದ ಮನಸ್ಸುಗಳಿಗೆ ಸಮಾಧಾನ ನೀಡುವ ಕಾರ್ಯ ಜಿಲ್ಲಾಡಳಿತ ಪ್ರಾರಂಭಿಸಿದೆ.

ಯೋಗಾಭ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಆಸ್ತಿ-ಪಾಸ್ತಿ ನಷ್ಟ, ಜೀವ ಹಾನಿ ಅನುಭವಿಸಿರುವ ಕುಟುಂಬಗಳಲ್ಲಿ ಸದ್ಯ ಮುಂದೇನು ಎಂಬ ಆತಂಕ ಆವರಿಸಿದೆ. ಹೀಗಾಗಿ ಸಂತ್ರಸ್ತರಲ್ಲಿ ಮಾನಸಿಕ ಸ್ಥೈರ್ಯ ತುಂಬುವ ಮೂಲಕ ಬದುಕಿನಲ್ಲಿ ಭರವಸೆ ಮೂಡಿಸಲು ಮಾನಸಿಕ ತಜ್ಞರಿಂದ ಸಮಾಲೋಚನೆ ಮಾಡಿಸುವ ಕಾರ್ಯ ಈಗಾಗಲೆ ಕೊಡಗು ಜಿಲ್ಲೆಯ ಪರಿಹಾರ ಕೇಂದ್ರಗಳಲ್ಲಿ ಆರಂಭವಾಗಿದೆ. ಸದ್ಯ ಜಿಲ್ಲೆಯಲ್ಲಿ 51 ಪರಿಹಾರ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 6,900 ಸಂತ್ರಸ್ತರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಈ ಪೈಕಿ ಪುರುಷರು ಸುಮಾರು 3,000ದಷ್ಟಿದ್ದರೆ, ಮಹಿಳೆಯರ ಸಂಖ್ಯೆ ಸುಮಾರು 3,400 ಹಾಗೂ ಮಕ್ಕಳ ಸಂಖ್ಯೆ ಸುಮಾರು 500. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಮಾನಸಿಕ ತಜ್ಞ ವೈದ್ಯರಾದ ಡಾ| ರೂಪೇಶ್‌ ಗೋಪಾಲ್‌ ಅವರು ಜತೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಿಷನ್‌ ಡೈರೆಕ್ಟರ್‌ ಆಗಿರುವ ಡಾ. ರತನ್‌ ಕೇಲ್ಕರ್‌ ಹಾಗೂ ಹಾಗೂ ಉನ್ನತ ಅಧಿಕಾರಿಗಳ ಸಲಹೆಯಂತೆ ಆಸ್ತಿ-ಪಾಸ್ತಿ ಕಳೆದುಕೊಂಡು ನಿರಾಶ್ರಿತರಾಗಿರುವ ಸಂತ್ರಸ್ತರ ಮನೋಬಲವೃದ್ಧಿಗಾಗಿ ಹಾಗೂ ನೊಂದ ಮನಸುಗಳನ್ನು ಶಾಂತಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಪರಿಹಾರ ಕೇಂದ್ರಗಳಲ್ಲಿ ಯೋಗಾಭ್ಯಾಸ ಪ್ರಾರಂಭಿಸಲಾಗಿದೆ. ಇದರ ಜೊತೆಗೆ ಪರಿಹಾರ ಕೇಂದ್ರಗಳಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಗ್ರಾಮೀಣ ಸೊಗಡಿನ ಪಾರಂಪರಿಕ ನೃತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. 

ಪರಿಹಾರ ಕೇಂದ್ರಗಳಲ್ಲಿ ಪ್ರೊಜೆಕ್ಟರ್‌ಗಳ ಮೂಲಕ ಚಲನಚಿತ್ರ ಪ್ರದರ್ಶನ ಕೈಗೊಳ್ಳಲಾಗುತ್ತಿದೆ. ಮಕ್ಕಳಿಗೆ ಆಟಿಕೆ ವಸ್ತುಗಳ ಪೂರೈಕೆ ಮಾಡಲಾಗುತ್ತಿದ್ದು, ನೊಂದ ಪಾಲಕರಿಗೆ ಮಕ್ಕಳಿಂದ ಇನ್ನಷ್ಟು ತೊಂದರೆಯಾಗದಿರಲಿ ಎಂಬುದು ಹಾಗೂ ಮಕ್ಕಳು ಖುಷಿಯಿಂದ ಕಾಲ ಕಳೆಯುವುದನ್ನು ಕಂಡು ಪಾಲಕರ ಮನಸ್ಸು ಕೂಡ ಉಲ್ಲಸಿತಗೊಳ್ಳಲಿದೆ ಎಂಬುದು ಜಿಲ್ಲಾಡಳಿತದ ಸದಾಶಯ.


ಯೋಗಾಭ್ಯಾಸ ನಡೆಸಲು ಯೋಗ ಶಿಕ್ಷಕರ ಬಳಕೆ

ವಿಚಲಿತಗೊಂಡಿರುವ ಮನಸ್ಸನ್ನು ಶಾಂತಗೊಳಿಸಲು, ಸಮಾಧಾನಗೊಳಿಸಲು ಯೋಗ ಒಳ್ಳೆಯ ಮಾರ್ಗವಾಗಿದೆ. ಸಂತ್ರಸ್ತರ ಪರಿಹಾರ ಕೇಂದ್ರಗಳಲ್ಲಿ, ಸಂತ್ರಸ್ತರ ಮನಸ್ಸನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ 30 ಜನರ ತಂಡ ಕೊಡಗು ಜಿಲ್ಲೆಗೆ ಆಗಮಿಸಿದ್ದು, ಇವರು ಪರಿಹಾರ ಕೇಂದ್ರಗಳಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರಿಗೂ ಯೋಗಾಭ್ಯಾಸ ಪ್ರಾರಂಭಿಸಿದ್ದು, ಸಂತ್ರಸ್ತರು ಯೋಗಾಭ್ಯಾಸಕ್ಕೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಆಸಕ್ತಿಯಿಂದ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಪರಿಹಾರ ಕೇಂದ್ರಗಳಲ್ಲಿ ಕಂಡುಬರುತ್ತಿದೆ.

ಯೋಗಾಭ್ಯಾಸ ಚಟುವಟಿಕೆ ಹಾಗೂ ನೃತ್ಯ, ಸಂಗೀತದಂತಹ ಸೃಜನಶೀಲ ಚಟುವಟಿಕೆಯುಳ್ಳ ಕಾರ್ಯಕ್ರಮಗಳು ಸಂತ್ರಸ್ತರ ಮನಸ್ಸುಗಳನ್ನು ಶಾಂತಗೊಳಿಸಿ, ಬದುಕಿನ ಬಗ್ಗೆ ಭರವಸೆಯ ಹೊಂಗಿರಣ ಮೂಡಿಸಲು ಎನ್ನುವುದು ನಮ್ಮ ಉದ್ದೇಶವಾಗಿದೆ ಎನ್ನುತ್ತಾರೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಿಷನ್‌ ಡೈರೆಕ್ಟರ್‌ ಆಗಿರುವ ಡಾ| ರತನ್‌ ಕೇಲ್ಕರ್‌.

ಬದುಕಿಗೆ ಭರವಸೆ ಮೂಡಿಸುವ ಯತ್ನ
ಪ್ರೀತಿ ಪಾತ್ರರನ್ನು ಅಥವಾ ಮನೆಗಳನ್ನು ಕಳೆದುಕೊಂಡು, ಮುಂದೇನು ಎನ್ನುವ ಆತಂಕದಲ್ಲಿರುವ ನಿರಾಶ್ರಿತರು ಹಾಗೂ ಸಂತ್ರಸ್ತರಲ್ಲಿ ಬದುಕು ಕಟ್ಟಿಕೊಳ್ಳುವ ಭರವಸೆಯನ್ನು ನೊಂದ ಮನಸುಗಳಿಗೆ ನೀಡಬೇಕಿದೆ. ಇಂತಹವರಿಗೆ ಸಮಾಲೋಚನೆ ನಡೆಸುವ ಮೂಲಕ, ಸರ್ಕಾರ ನಿಮ್ಮೊಂದಿಗೆ ಸದಾ ಇದೆ. ಪರಿಹಾರ ಕಾರ್ಯಗಳನ್ನು ಮಾಡುತ್ತಿದೆ. ಸದ್ಯ ಸರ್ಕಾರ ಜನರ ಪ್ರಾಣ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತಿದ್ದು, ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಪಡೆದು, ಶೀಘ್ರದಲ್ಲೇ ಪುನರ್ವಸತಿ ಕಾರ್ಯ, ಮನೆ ಕಳೆದುಕೊಂಡವರಿಗೆ ಮನೆ, ಜೀವ ಹಾನಿ ಅನುಭವಿಸಿರುವವರಿಗೆ ಹಣಕಾಸಿನ ನೆರವು ಪರಿಹಾರ ದೊರಕಿಸುವ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಅಲ್ಲದೆ ವಯಕ್ತಿಕ ಶ್ಮಚಿತ್ವ ಕಾಪಾಡಿಕೊಳ್ಳುವುದು, ಆರೋಗ್ಯ ರಕ್ಷಣೆಗಾಗಿ ಪರಿಹಾರ ಕೇಂದ್ರಗಳಲ್ಲಿ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆಯನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.