ತಲಪಾಡಿ – ಕಾಸರಗೋಡು ಹೆದ್ದಾರಿಯಲ್ಲಿ ಪ್ರಯಾಣ ಸಂಕಟ


Team Udayavani, Aug 24, 2018, 1:10 AM IST

road-23-8.jpg

ಕುಂಬಳೆ: ತಲಪಾಡಿ – ಕಾಸರಗೋಡು ಹೆದ್ದಾರಿ ಕೆಟ್ಟು ಹಳ್ಳಕೊಳ್ಳವಾಗಿದೆ. ವಾಹನಗಳು ತೆಪ್ಪದಂತೆ ಸಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕುಂಬಳೆ ದೇವಾಲಯದ ಮುಂದೆ, ಆರಿಕ್ಕಾಡಿ, ಮೊಗ್ರಾಲ್‌, ಕೊಪ್ಪಳ, ಮೊಗ್ರಾಲ್‌ ಪುತ್ತೂರು, ಚೌಕಿ, ಅಡ್ಕತ್ತಬೈಲು, ಕರಂದಕ್ಕಾಡು ಮೊದಲಾದೆಡೆ ರಸ್ತೆಯಲ್ಲಿ ಹೊಂಡಗಳೇ ತುಂಬಿದ್ದು, ವಾಹನಗಳ ಸಾಲು ಗಂಟೆಗಟ್ಟಲೆ ಕಂಡುಬರುತ್ತಿದೆ. ಪರಿಣಾಮ ಕೆಲವು ಬಾರಿ ವಾದ ವಿವಾದ ನಡೆಯುವುದೂ ಇದೆ. ಹೊಂಡದಲ್ಲಿ ಸಿಲುಕುವ ಸಣ್ಣ ವಾಹನಗಳನ್ನು ಮೇಲೆತ್ತಲು ಸಾರ್ವಜನಿಕರ ಸಹಾಯ ಅನಿವಾರ್ಯವಾಗುತ್ತದೆ.

ದುರಸ್ತಿ ನಾಟಕ
ದುರಸ್ತಿ ನೆಪದಲ್ಲಿ ಕೆಲವೆಡೆ ರಸ್ತೆ ಪಕ್ಕದಲ್ಲಿ ಜಲ್ಲಿ ರಾಶಿ ಹಾಕಲಾಗಿದೆ. ಕೆಲವೆಡೆ ಹೊಂಡವಾದ ರಸ್ತೆಯನ್ನು ಜಿ.ಸಿ.ಬಿ. ಮೂಲಕ ಅಗೆಯಲಾಗುತ್ತಿದೆ. ಆದರೆ ಒಂದು ಕಡೆ ಸರಿಪಡಿಸಿದಾಗ ಇನ್ನೊಂದೆಡೆ  ಹೊಸ ಹೊಂಡಗಳು ಸೃಷ್ಟಿಯಾಗುತ್ತವೆ.


ಪ್ರಯಾಣಿಕರಿಗೆ ಸಂಕಷ್ಟ

ಈ ರಸ್ತೆಯಲ್ಲಿ ಸಂಚರಿಸುವುದು ಹರಸಾಹಸವಾಗಿದೆ. ಬಸ್ಸಿನ ಹಿಂದಿನ ಸೀಟಿನಲ್ಲಿ ಕೂತವರು ಪ್ರಯಾಣದ ಮಧ್ಯೆ ತುಂಬಾ ಸಮಸ್ಯೆ ಅನುಭವಿಸುತ್ತಾರೆ. ವಾಹನ ಹೊಂಡಕ್ಕೆ ಬಿದ್ದು ಏಳುವಾಗ ಅವರಿಗೆ ಪೆಟ್ಟು ಬೀಳುವುದೂ ಇದೆ. ಸಮಯ ಪಾಲನೆಯೂ ಬಸ್ಸಿನವರಿಗೆ ಸಾಧ್ಯವಾಗದ ಸ್ಥಿತಿಯಿದೆ. ಹೆಚ್ಚಿನವರು ರಸ್ತೆ ಮಾರ್ಗವನ್ನು ತೊರೆದು ರೈಲು ಪ್ರಯಾಣವನ್ನು ಅವಲಂಬಿಸುತ್ತಿದ್ದಾರೆ. ಆದರೆ ಇದು ಸೀಮಿತ ಸಮಯಕ್ಕೆ ಮಾತ್ರ ಸಾಧ್ಯವಾಗುತ್ತದಷ್ಟೆ.
 
ಚತುಷ್ಪಥ ಇನ್ನಷ್ಟು ವಿಳಂಬ
ಹಿಂದಿನ ಮತ್ತು ಇಂದಿನ  ಸರಕಾರಗಳು ಚತುಷ್ಪಥ ರಸ್ತೆಗೆ ಸಕಾಲದಲ್ಲಿ ಸ್ಥಳ ಸ್ವಾಧೀನ ಪಡಿಸದೆ ಟೆಂಡರ್‌ ರದ್ದಾಗಿ ಈ ತನಕ ರಸ್ತೆ ಅಗಲಗೊಳಿಸುವ ಕಾಮಗಾರಿ ಆರಂಭವಾಗಿಲ್ಲ. ಖಾಸಗಿ ವ್ಯಕ್ತಿಗಳ ಸ್ಥಳ ಸ್ವಾಧೀನ ಪಡಿಸಲು ಕಂದಾಯ ಅಧಿಕಾರಿಗಳು ನಾಟಿದ ಕಲ್ಲುಗಳು ಹೆಚ್ಚಿನ ಕಡೆಗಳಲ್ಲಿ ಮಾಯವಾಗಿವೆ. ಆದರೂ ಡಿಸೆಂಬರ್‌ನಲ್ಲಿ ಕಾಮಗಾರಿ ನಡೆಯಲಿದೆ ಎಂದು ಸರಕಾರ ಹೇಳಿದೆ.

ಆದರೆ ಈ ರಸ್ತೆ ಹೊಂಡಗಳಿಗೆ ಮೋಕ್ಷವಾಗದಿದ್ದಲ್ಲಿ ಇನ್ನಷ್ಟು ರಸ್ತೆ ಅಪಘಾತವಲ್ಲದೆ ಮುಂದಿನ ಕೆಲದಿನಗಳಲ್ಲಿ ಹೆಚ್ಚಿನ ವಾಹನಗಳ ಸಂಚಾರವೇ ಸ್ಥಗಿತಗೊಳ್ಳುವ ಭಯ ಸಾರ್ವಜನಿಕರನ್ನು ಕಾಡುತ್ತಿದೆ. ಆದುದರಿಂದ ಮಳೆಯ ನೆಪದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಜವಾಬ್ದಾರಿಯುತ ಜನಪ್ರತಿನಿಧಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇನ್ನಾದರೂ ಎಚ್ಚರಗೊಂಡು ರಸ್ತೆ ಸಮಸ್ಯೆಗೆ ಪರಿಹಾರ ಮಾರ್ಗ ಕೈಗೊಳ್ಳಲು ಮುಂದಾಗಬೇಕಾಗಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.