ತಲಪಾಡಿ – ಕಾಸರಗೋಡು ಹೆದ್ದಾರಿಯಲ್ಲಿ ಪ್ರಯಾಣ ಸಂಕಟ


Team Udayavani, Aug 24, 2018, 1:10 AM IST

road-23-8.jpg

ಕುಂಬಳೆ: ತಲಪಾಡಿ – ಕಾಸರಗೋಡು ಹೆದ್ದಾರಿ ಕೆಟ್ಟು ಹಳ್ಳಕೊಳ್ಳವಾಗಿದೆ. ವಾಹನಗಳು ತೆಪ್ಪದಂತೆ ಸಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕುಂಬಳೆ ದೇವಾಲಯದ ಮುಂದೆ, ಆರಿಕ್ಕಾಡಿ, ಮೊಗ್ರಾಲ್‌, ಕೊಪ್ಪಳ, ಮೊಗ್ರಾಲ್‌ ಪುತ್ತೂರು, ಚೌಕಿ, ಅಡ್ಕತ್ತಬೈಲು, ಕರಂದಕ್ಕಾಡು ಮೊದಲಾದೆಡೆ ರಸ್ತೆಯಲ್ಲಿ ಹೊಂಡಗಳೇ ತುಂಬಿದ್ದು, ವಾಹನಗಳ ಸಾಲು ಗಂಟೆಗಟ್ಟಲೆ ಕಂಡುಬರುತ್ತಿದೆ. ಪರಿಣಾಮ ಕೆಲವು ಬಾರಿ ವಾದ ವಿವಾದ ನಡೆಯುವುದೂ ಇದೆ. ಹೊಂಡದಲ್ಲಿ ಸಿಲುಕುವ ಸಣ್ಣ ವಾಹನಗಳನ್ನು ಮೇಲೆತ್ತಲು ಸಾರ್ವಜನಿಕರ ಸಹಾಯ ಅನಿವಾರ್ಯವಾಗುತ್ತದೆ.

ದುರಸ್ತಿ ನಾಟಕ
ದುರಸ್ತಿ ನೆಪದಲ್ಲಿ ಕೆಲವೆಡೆ ರಸ್ತೆ ಪಕ್ಕದಲ್ಲಿ ಜಲ್ಲಿ ರಾಶಿ ಹಾಕಲಾಗಿದೆ. ಕೆಲವೆಡೆ ಹೊಂಡವಾದ ರಸ್ತೆಯನ್ನು ಜಿ.ಸಿ.ಬಿ. ಮೂಲಕ ಅಗೆಯಲಾಗುತ್ತಿದೆ. ಆದರೆ ಒಂದು ಕಡೆ ಸರಿಪಡಿಸಿದಾಗ ಇನ್ನೊಂದೆಡೆ  ಹೊಸ ಹೊಂಡಗಳು ಸೃಷ್ಟಿಯಾಗುತ್ತವೆ.


ಪ್ರಯಾಣಿಕರಿಗೆ ಸಂಕಷ್ಟ

ಈ ರಸ್ತೆಯಲ್ಲಿ ಸಂಚರಿಸುವುದು ಹರಸಾಹಸವಾಗಿದೆ. ಬಸ್ಸಿನ ಹಿಂದಿನ ಸೀಟಿನಲ್ಲಿ ಕೂತವರು ಪ್ರಯಾಣದ ಮಧ್ಯೆ ತುಂಬಾ ಸಮಸ್ಯೆ ಅನುಭವಿಸುತ್ತಾರೆ. ವಾಹನ ಹೊಂಡಕ್ಕೆ ಬಿದ್ದು ಏಳುವಾಗ ಅವರಿಗೆ ಪೆಟ್ಟು ಬೀಳುವುದೂ ಇದೆ. ಸಮಯ ಪಾಲನೆಯೂ ಬಸ್ಸಿನವರಿಗೆ ಸಾಧ್ಯವಾಗದ ಸ್ಥಿತಿಯಿದೆ. ಹೆಚ್ಚಿನವರು ರಸ್ತೆ ಮಾರ್ಗವನ್ನು ತೊರೆದು ರೈಲು ಪ್ರಯಾಣವನ್ನು ಅವಲಂಬಿಸುತ್ತಿದ್ದಾರೆ. ಆದರೆ ಇದು ಸೀಮಿತ ಸಮಯಕ್ಕೆ ಮಾತ್ರ ಸಾಧ್ಯವಾಗುತ್ತದಷ್ಟೆ.
 
ಚತುಷ್ಪಥ ಇನ್ನಷ್ಟು ವಿಳಂಬ
ಹಿಂದಿನ ಮತ್ತು ಇಂದಿನ  ಸರಕಾರಗಳು ಚತುಷ್ಪಥ ರಸ್ತೆಗೆ ಸಕಾಲದಲ್ಲಿ ಸ್ಥಳ ಸ್ವಾಧೀನ ಪಡಿಸದೆ ಟೆಂಡರ್‌ ರದ್ದಾಗಿ ಈ ತನಕ ರಸ್ತೆ ಅಗಲಗೊಳಿಸುವ ಕಾಮಗಾರಿ ಆರಂಭವಾಗಿಲ್ಲ. ಖಾಸಗಿ ವ್ಯಕ್ತಿಗಳ ಸ್ಥಳ ಸ್ವಾಧೀನ ಪಡಿಸಲು ಕಂದಾಯ ಅಧಿಕಾರಿಗಳು ನಾಟಿದ ಕಲ್ಲುಗಳು ಹೆಚ್ಚಿನ ಕಡೆಗಳಲ್ಲಿ ಮಾಯವಾಗಿವೆ. ಆದರೂ ಡಿಸೆಂಬರ್‌ನಲ್ಲಿ ಕಾಮಗಾರಿ ನಡೆಯಲಿದೆ ಎಂದು ಸರಕಾರ ಹೇಳಿದೆ.

ಆದರೆ ಈ ರಸ್ತೆ ಹೊಂಡಗಳಿಗೆ ಮೋಕ್ಷವಾಗದಿದ್ದಲ್ಲಿ ಇನ್ನಷ್ಟು ರಸ್ತೆ ಅಪಘಾತವಲ್ಲದೆ ಮುಂದಿನ ಕೆಲದಿನಗಳಲ್ಲಿ ಹೆಚ್ಚಿನ ವಾಹನಗಳ ಸಂಚಾರವೇ ಸ್ಥಗಿತಗೊಳ್ಳುವ ಭಯ ಸಾರ್ವಜನಿಕರನ್ನು ಕಾಡುತ್ತಿದೆ. ಆದುದರಿಂದ ಮಳೆಯ ನೆಪದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಜವಾಬ್ದಾರಿಯುತ ಜನಪ್ರತಿನಿಧಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇನ್ನಾದರೂ ಎಚ್ಚರಗೊಂಡು ರಸ್ತೆ ಸಮಸ್ಯೆಗೆ ಪರಿಹಾರ ಮಾರ್ಗ ಕೈಗೊಳ್ಳಲು ಮುಂದಾಗಬೇಕಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.