“ಎಲ್ಲ ಪ್ರದೇಶಗಳಿಗೂ ಅನ್ವಯವಾಗುವ ಚಿತ್ರ’


Team Udayavani, Aug 25, 2018, 12:58 PM IST

kasargodu.jpg

ಕಾಸರಗೋಡಿನಲ್ಲಿ ಕನ್ನಡ ಸಿನೆಮಾ ಚಿತ್ರೀಕರಣ ಆಗುವುದು ಇದು ಮೊದಲಲ್ಲ. ಕಾಸರಗೋಡಿನವರು ಕನ್ನಡ ಸಿನೆಮಾ ಪ್ರವೇಶಿಸಿದ್ದೂ ಇತ್ತೀಚೆಗಲ್ಲ. ಆದರೆ ಕಾಸರಗೋಡಿನ ಸಮಸ್ಯೆಯನ್ನೇ ವಸ್ತುವಾಗಿಟ್ಟುಕೊಂಡು, ಕಾಸರಗೋಡಿನ ಯುವ ತಲೆಮಾರಿನವರಿಗೆ ಪ್ರಾಧಾನ್ಯ ನೀಡಿ, ಕಾಸರಗೋಡಿನ ಮಣ್ಣಿನಲ್ಲೇ ಸಿನೆಮಾವೊಂದು ಮೂಡಿಬರುತ್ತಿರುವುದು ಇದು ಮೊದಲ ಬಾರಿ. ಇಲ್ಲಿ ನಟಿಸಿರುವ ಸ್ಥಳೀಯ ಪ್ರತಿಭೆಗಳಲ್ಲಿ ಹಲವರು ಮೊದಲ ಬಾರಿ ಅಭಿನಯಕ್ಕೆ ಕಾಲಿಟ್ಟವರೂ ಇದ್ದಾರೆ. ಇದು ನೈಜ ಕತೆಯಲ್ಲ. ಆದರೂ ವಾಸ್ತವಕ್ಕೆ ಹತ್ತಿರ. ಮಾತ್ರವಲ್ಲ, ಭಾಷೆಯೂ ಕಾಸರಗೋಡಿನದ್ದೇ. ಇಲ್ಲಿನ ಸಂಸ್ಕೃತಿ ಆಚಾರ ವಿಚಾರಗಳಿಗೂ ಮಹತ್ವ ನೀಡಲಾಗಿದೆ. ಹಾಗಾಗಿಯೇ ಇದು ನಮ್ಮದೇ ಕತೆ ಅಂತ ನಮಗನಿಸುತ್ತದೆ. ಆದರೆ ಗಡಿನಾಡಿನ ಕನ್ನಡ ಶಾಲೆಯ ಮಕ್ಕಳ ಕತೆಯನ್ನು ಹೇಳುವುದರೊಂದಿಗೇ ಒಟ್ಟು ಕನ್ನಡ ಶಾಲೆಯ ಕತೆಯನ್ನೂ ಹೇಳುವುದರಿಂದಾಗಿ ಸಿನೆಮಾ ಒಂದು ಪ್ರದೇಶಕ್ಕಷ್ಟೇ ಸೀಮಿತವಾಗಿ ಉಳಿಯದೆ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ.

ಸೃಜನಶೀಲತೆಯುಳ್ಳ ವ್ಯಕ್ತಿಯೊಬ್ಬನಿಗೆ ಮಾತ್ರ ಹೊಸ ಸಮಸ್ಯೆಗಳನ್ನ ಕಂಡಾಗ ಅದರ ಆಳದ ಅರಿವಾಗಲು ಸಾಧ್ಯ.  ಗಡಿನಾಡಿನ ಬಗೆಗೆ ಸಿನೆಮಾ ಮಾಡಬೇಕೆಂಬುದು ರಿಷಬ್‌ ಶೆಟ್ಟಿ ಅವರ ಬಹುಕಾಲದ ಕನಸಾಗಿತ್ತು. ಇಲ್ಲಿನ ಸಮಸ್ಯೆ ಬಗೆಗೆ ತಿಳಿದದ್ದೇ ಅದು ಕೇವಲ ನಿರ್ಲಕ್ಷಿಸುವ ವಿಷಯವಲ್ಲ ಎಂಬುದನ್ನು ಗ್ರಹಿಸಿಕೊಂಡದ್ದೇ ಕಥೆ ಬರೆಯಲು ಶುರು ಮಾಡಿದರು. ಬಿ.ಪುರುಷೋತ್ತಮ, ಡಾ| ರತ್ನಾಕರ ಮಲ್ಲಮೂಲೆ ಮುಂತಾದವರನ್ನು ಭೇಟಿ ಮಾಡಿ ಸಂಪೂರ್ಣ ಚಿತ್ರಣವನ್ನು ಮೂಡಿಸಿಕೊಂಡರು.

ನಿರ್ದೇಶಕ ರಿಷಾಬ್‌ ಶೆಟ್ಟಿ ಸಂದರ್ಶನವೊಂದರಲ್ಲಿ ಹೇಳಿರುವಂತೆ “ಸಿನೆಮಾದಲ್ಲಿ ಬರುವ ಎರಡು ಮುಖ್ಯ ಪಾತ್ರಗಳು ನನ್ನ ಅಣ್ಣ ಮತ್ತು ನನ್ನ ಬದುಕಿನಿಂದ ಪ್ರಭಾವಿತವಾದವುಗಳು. ಪ್ರವೀಣ ಪಾತ್ರ ನನ್ನ ಅಣ್ಣನದು. ಮಮ್ಮುಟ್ಟಿ ಪಾತ್ರ ನನ್ನದು. ನಾನು ಹೇಗೆ ಅಣ್ಣಾವ್ರ ಅಭಿಮಾನಿಯೋ ಹಾಗೆ ಮಮ್ಮುಟ್ಟಿ ಮೋಹನ್‌ಲಾಲ್‌ ಅಭಿಮಾನಿ’.

ಆದರೆ ಮಲಯಾಳಿ ಸಂಸ್ಕೃತಿಯ ಅನುಕರಣೆ ಮಾಡುವ ಕನ್ನಡಿಗ ಇದರಲ್ಲಿಲ್ಲ. ಹುಲಿ ವೇಷ, ಯಕ್ಷಗಾನ ಮುಂತಾದ ಕಲೆಗಳನ್ನು ಚಿತ್ರೀಕರಣದ ಸಂದರ್ಭದಲ್ಲಿ ಬಳಸಿಕೊಳ್ಳಲಾಗಿದೆ. ಇದರಲ್ಲಿ ನಟಿಸಿದವರನೇಕರು ಮೊದಲ ಬಾರಿ ಸಿನೆಮಾ ರಂಗವನ್ನು ಪ್ರವೇಶಿಸಿದವ ರಾದರೂ ಹಾಗೆಂದು ಯಾರೂ ಕೂಡ ಹೇಳಲಾರರು.
ಕಾಸರಗೋಡಿನ ಹೋರಾಟ ಪರಂ ಪರೆಯ ಪರಿಚಯವಿರುವವರು ಈ ಸಿನೆಮಾದ ಹಲವು ಪಾತ್ರಗಳನ್ನು ನಮ್ಮ ನಡುವೆಯೇ ಗುರುತಿಸಬಲ್ಲರು. ಎರಡು ವರ್ಷಗಳಿಗಿಂತಲೂ ಹೆಚ್ಚಿನ ಶ್ರಮ ಈ ಸಿನೆಮಾ ಕತೆಯ ರೂಪೀಕರಣದ ಹಿಂದಿದೆ. ಬಿ.ಪುರುಷೋತ್ತಮ, ಡಾ.ರತ್ನಾಕರ ಮಲ್ಲಮೂಲೆ ಮುಂತಾದವರ ಜತೆ ಚರ್ಚಿಸಿ ಕತೆಗೆ ಅಂತಿಮ ರೂಪ ನೀಡಲಾಗಿದೆ. 50 ಕ್ಕೂ ಹೆಚ್ಚು ಶಾಲೆಗಳನ್ನು ಹೊಕ್ಕು ಹೊರಟು ಕೊನೆಗೆ ಕೈರಂಗಳ ಶಾಲೆ ಮತ್ತು ಪರಿಸರವನ್ನು ಚಿತ್ರೀಕರಣಕ್ಕೆ ಬಳಸಿಕೊಳ್ಳಲಾಗಿದೆ.

ರಿಷಬ್‌ ಶೆಟ್ಟಿ ಫಿಲ್ಮ್ಸ್ ಈ ಚಿತ್ರ ನಿರ್ಮಾಣ ಮಾಡಿದೆ. ವೆಂಕಟೇಶ್‌ ಅಂಗುರಾಜ್‌  ಛಾಯಾಗ್ರಹಣ ಮಾಡಿದ್ದಾರೆ. ಒಟ್ಟು 9 ಹಾಡುಗಳಿವೆ. ಅನಂತನಾಗ್‌, ರಂಜನ್‌, ಸಂಪತ್ತ್, ಪ್ರಮೋದ್‌ ಶೆಟ್ಟಿ, ಸಪ್ತಾ ಪಾವೂರು, ಪ್ರಕಾಶ್‌ ತೂಮಿನಾಡ್‌ ಮುಂತಾದವರು ಇದರಲ್ಲಿದ್ದಾರೆ.

ಸಮಕಾಲೀನ ಸಂದರ್ಭದ ಕನ್ನಡ ಶಾಲೆಗೆ ಕನ್ನಡ ಬಾರದ ಗಣಿತ ಅಧ್ಯಾಪಕನ ನೇಮಕಾತಿ ಸಿನೆಮಾದೊಳಗೂ ಇದೆ. ಹೀಗಾಗಿ ನ್ಯಾಯಾಧೀಶರ ಮುಂದೆ ಈ ಸಿನೆಮಾವನ್ನು ಪ್ರದರ್ಶಿಸುವ ಬಗೆಗೆ ಯೋಚಿಸಲಾಗುತ್ತಿದೆ. ಮಾತೃಭಾಷೆಯಲ್ಲಿ ಶಿಕ್ಷಣ ದೊರಕಬೇಕಾದ ಅಗತ್ಯವನ್ನು ಸಮರ್ಥವಾಗಿ ಜನರಿಗೆ ತಲಪಿಸುವಲ್ಲಿ ಸಿನೆಮಾ ಯಶಸ್ವಿಯಾಗುತ್ತದೆ. ಹೀಗಾಗಿ ಈ ಸಿನೆಮಾ ಕಾಸರಗೋಡಿನಲ್ಲೊಂದು ಸಂಚಲನ ಮೂಡಿಸಲಿದೆ.
ಕಾಸರಗೋಡಿನಲ್ಲಿ ಕನ್ನಡ ಸಿನೆಮಾ ಪ್ರದರ್ಶನಗೊಳ್ಳುವುದು ಅತೀ ಕಡಿಮೆ. ಇದೀಗ ನಮ್ಮದೇ ಸಿನೆಮಾ ಒಂದು ನಮ್ಮೂರಲ್ಲಿ ತೆರೆ ಕಾಣುತ್ತಿರುವಾಗ ಅದನ್ನು ನೋಡಿ ಪ್ರೋತ್ಸಾಹಿಸಬೇಕಾದ ಅಗತ್ಯ ಖಂಡಿತವಾಗಿಯೂ ಇದೆ. ಪ್ರತಿಯೊಬ್ಬ ಕನ್ನಡಿಗನನ್ನೂ, ಕನ್ನಡ ಶಾಲೆಯನ್ನೂ ಈ ಸಿನೆಮಾ ತಲಪಬೇಕು. ಮೂವಿ ಮಾಕ್ಸ್‌ ಮತ್ತು ಕಾರಿ°ವಲ್‌ ಮೆಹಬೂಬ್‌ ಚಿತ್ರಮಂದಿರಗಳಲ್ಲಿ ಪ್ರದರ್ಶನ ಆರಂಭಗೊಂಡಿದೆ.

– ಸೌಮ್ಯಾ ಪ್ರಸಾದ್‌

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.