ಜಲಚರ,ಅರಣ್ಯ ಸಂಪತ್ತಿನ ಮಾರಣ ಹೋಮ!


Team Udayavani, Aug 28, 2018, 6:00 AM IST

2608slkp15.jpg

ಜೋಡುಪಾಲ: ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ಸಂಪಾಜೆ, ಊರುಬೈಲು ಬಳಿ ನದಿ, ತೋಡುಗಳಲ್ಲಿ ಜಲಚರಗಳು ಸತ್ತು ಬಿದ್ದಿವೆ ಹಾಗೂ ಕಡಮಕಲ್ಲು ಅರಣ್ಯ ಭಾಗದಲ್ಲಿ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.

ಪ್ರಕೃತಿ ಮುನಿಸು ಮಾನವನ ವಾಸ ಸ್ಥಾನದ ಜತೆಗೆ ನದಿ, ತೋಡಿನ ಜಲಚರಗಳ ಮೇಲೂ ವಕ್ಕರಿಸಿದೆ. ಅದಕ್ಕೆ ಅಲ್ಲಲ್ಲಿ ಸತ್ತು ಬಿದ್ದಿರುವ ಮೀನು, ನದಿ ನೀರಲ್ಲಿ ಕೊಚ್ಚಿಕೊಂಡು ಬಂದಿರುವ ಅಪಾರ ಪ್ರಮಾಣದ ಮರಮುಟ್ಟುಗಳು ಉದಾಹರಣೆ. ಹಾವು, ಹಕ್ಕಿ, ಇತರೆ ಕಾಡು ಪ್ರಾಣಿಗಳ ಆವಾಸಗಳಿಗೂ ಕಂಟಕ ಒದಗಿತ್ತು.

ಆಮ್ಲಜನಕದ ಕೊರತೆ
ಕೆಸರು ಮಿಶ್ರಿತ ಮಣ್ಣು ನೀರಿನೊಂದಿಗೆ ಸೇರಿದ ಕಾರಣ ಮೀನು, ಆಮೆ ಮೊದಲಾದ ಜಲಚರಗಳಿಗೆ ಆಮ್ಲಜನಕದ ಕೊರತೆ ಉಂಟಾಗಿ ಅವು ಅಸುನೀಗಿರಬಹುದು. ಮೀನುಗಳ ಸಂತಾನೋತ್ಪತ್ತಿ ಕಾಲಘಟ್ಟ ಇದಾಗಿರುವ ಕಾರಣ ಅಪಾಯ ಹೆಚ್ಚು. ಅವುಗಳ ನಾಶಗೊಂಡು ಸಂಖ್ಯೆ ಇಳಿಮುಖಗೊಳ್ಳುವ ಸಾಧ್ಯತೆ ಇದೆ.

ಊರುಬೈಲು, ಸಂಪಾಜೆ, ಕಲ್ಲುಗುಂಡಿ ಪರಿಸರದಲ್ಲಿ ಹರಿಯುವ ತೋಡು, ನದಿಗಳು ಕೆಸರು ನೀರನ್ನು ಹೊತ್ತುಕೊಂಡು ಹರಿಯುತ್ತಿವೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಪ್ರಮಾಣ ಕೊಂಚ ತಗ್ಗಿದೆ.ನೀರು ಪೂರ್ತಿ ತಿಳಿಯಾದಲ್ಲಿ ಮಾತ್ರ ಜಲಚರ ಸಾವು ನಿಯಂತ್ರಣಕ್ಕೆ ಬರಬಹುದು.

ಅರಣ್ಯ ಸಂಪತ್ತು ನಾಶ
ಕಡಮಕಲ್ಲು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾಗಿ ಬೆಳೆಬಾಳುವ ಮರಗಳು ನದಿ ನೀರಲ್ಲಿ ಕೊಚ್ಚಿಕೊಂಡು ಬಂದಿವೆ. ಅವುಗಳ ಮೌಲ್ಯವೇ ಕೋಟ್ಯಂತರ ರೂ. ದಾಟಬಹುದು.

ಅರಣ್ಯ ಇಲಾಖೆಗೆ ಇದನ್ನು ಅಂದಾಜಿಸಲು ಸಾಧ್ಯವಾಗಿಲ್ಲ. ಸೇತುವೆ, ಕಿಂಡಿ ಅಣೆಕಟ್ಟಿನ ಪಿಲ್ಲರ್‌ಗಳ ಬಳಿ ಬೃಹತ್‌ ಗಾತ್ರದ ಮರಗಳು ತುಂಬಿದ್ದು, ನಾಶದ ಪ್ರಮಾಣಕ್ಕೆ ಸಾಕ್ಷಿಯಂತಿವೆ.ಪಾಲಿ ಜಾತಿಗೆ ಸೇರಿದ ಮರ ಹಾಗೂ ವಿರಳವಾಗಿ ಕಾಣಸಿಗುವ ಅರಣ್ಯ ಜಾತಿಯ ಗಿಡ, ಮರಗಳು ಕೂಡ ಧರಾಶಾಯಿ ಆಗಿವೆ. ಆನೆ ಸೀಳಿದಂತೆ ಇರುವ ಮರಗಳು ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿವೆ. ಜೋಡುಪಾಲ, ಕಲ್ಮಕಾರು, ಕೊಯನಾಡು, ಕಲ್ಲುಗುಂಡಿ ಬಳಿಯ ನದಿ, ತೋಡುಗಳಲ್ಲಿ ಈಗಲೂ ಮರದ ರಾಶಿಗಳು ತುಂಬಿವೆ. 

ನಾಲ್ಕೈದು ದಿವಸಗಳ ಹಿಂದಿನವರೆಗೂ ನೀರಿನ ಜತೆ ಮರದ ದಿಮ್ಮಿಗಳು ಕೊಚ್ಚಿಕೊಂಡು ಬರುತ್ತಿದ್ದವು ಅನ್ನುತ್ತಾರೆ ಕೊಯನಾಡು ಬಳಿ ಸಿಕ್ಕ ಅಪ್ಪಯ್ಯ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.