ಕಾಂಞಂಗಾಡಿನಲ್ಲಿ  ಟ್ರೋಮಾ ಕೇರ್‌ ಸೆಂಟರ್‌ ಸ್ಥಾಪಿಸಲು ಆಗ್ರಹ


Team Udayavani, Aug 28, 2018, 6:35 AM IST

27ksde6.jpg

ಕಾಸರಗೋಡು: ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಮೂಲಭೂತ ಸೌಕರ್ಯಗಳ ಮೂಲಕ ಜಿಲ್ಲೆಯಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕೊಡಮಾಡಬೇಕು ಎಂದು ಕೇಂದ್ರ ಆರೋಗ್ಯ ಸಚಿವರಲ್ಲಿ ವಿನಂತಿಸಲಾಯಿತು.

ಕಾಂಞಂಗಾಡು ಕೇಂದ್ರೀಕೃತವಾಗಿ ಟ್ರೋಮಾ ಕೇರ್‌ ಸೆಂಟರ್‌ ಅನ್ನು ಸ್ಥಾಪಿಸ ಬೇಕೆಂದು  ಆರೋಗ್ಯ  ಸಚಿವ  ಅಶ್ವಿ‌ನಿ ಕುಮಾರ್‌ ಚೌಬೆ ಮತ್ತು ಕೇಂದ್ರ ಆಯುಷ್‌ ಇಲಾಖೆ   ಸಚಿವ   ಶ್ರೀಪಾದ  ನಾಯಕ್‌ ಅವರಿಗೆ ನೀಡಿದ ಮನವಿಯಲ್ಲಿ ಕೇಳಿಕೊಳ್ಳಲಾಗಿದೆ.  ಕಾಂಞಂಗಾಡು ಅಭಿವೃದ್ಧಿ ಫೋರಂ- ಟ್ರೋಮಾ ಕೇರ್‌ ನಿರ್ಮಾಣದ ಮನವಿಯನ್ನು ಸಚಿವದ್ವಯರಿಗೆ ನೀಡಿದೆ. 

ಮಂಗಳೂರಿಗೇ ಓಡಬೇಕು
ಪ್ರಸ್ತುತ ಅಪಘಾತ ಸಂಭವಿಸಿದಾಗ ಸೂಕ್ತ ಚಿಕಿತ್ಸೆ ನೀಡುವ ಸೌಲಭ್ಯಗಳು ಜಿಲ್ಲೆಯ ಆಸ್ಪತ್ರೆಗಳಲ್ಲಿ ಇಲ್ಲದಾಗಿವೆೆ. ಗಂಭೀರ ರಸ್ತೆ ಅಪಘಾತಗಳು ಸಂಭವಿಸಿದ ಸಂದರ್ಭಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ದೂರದ ಮಂಗಳೂರಿಗೆ ತೆರಳಲು ಸುಮಾರು ಎರಡು ಗಂಟೆ ವ್ಯಯವಾಗುತ್ತದೆ.

ಸೌಲಭ್ಯವಿದ್ದಲ್ಲಿ ಸುರಕ್ಷೆ
ದಿನವೊಂದಕ್ಕೆ ನೂರಕ್ಕೂ ಹೆಚ್ಚು ಮಂದಿ ವಿವಿಧ ರೋಗಿಗಳು ಆ್ಯಂಬುಲೆನ್ಸ್‌ ಮೂಲಕ ಮಂಗಳೂರಿಗೆ ತೆರಳುವ ಸನ್ನಿವೇಶ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ವೈದ್ಯಕೀಯ ಸೇವಾ ಸೌಲಭ್ಯಗಳು ಲಭ್ಯವಾದಲ್ಲಿ ಹೆಚ್ಚಿನ ಅಪಾಯಗಳನ್ನು ತಪ್ಪಿಸಿ, ಆರೋಗ್ಯ ರಕ್ಷಣೆ ಸಾಧ್ಯವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಾಂಞಂಗಾಡು ಡೆವಲಪ್‌ಮೆಂಟ್‌ ಫೋರಂ ಸದಸ್ಯರಾದ ಎಂ.ಕೆ. ವಿನೋದ್‌ಕುಮಾರ್‌, ಪಿ.ಎಂ. ನಾಸರ್‌, ಎನ್‌. ನಾಸರ್‌, ಎನ್‌. ಸುರೇಶ್‌, ರಾಹುಲ್‌ಚಿತ್ತಾರಿ ಮೊದಲಾದವರು ಸಚಿವರನ್ನು ಭೇಟಿ ಮಾಡಿದ ತಂಡದಲ್ಲಿದ್ದರು.

ಜಿಲ್ಲೆಗೆ ಆಧುನಿಕ ವೈದ್ಯಕೀಯ ಸೌಲಭ್ಯ
ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಜಿಲ್ಲೆಯ ವೈದ್ಯಕೀಯ ರಂಗದ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯುವಲ್ಲಿ ಕೇಂದ್ರ ಮುತುವರ್ಜಿ ವಹಿಸಲಿದೆ .
– ಅಶ್ವಿ‌ನಿ ಕುಮಾರ್‌ ಚೌಬೆ 
ಕೇಂದ್ರ ಆರೋಗ್ಯ ಸಚಿವರು

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.