ಒಂದುತಿಂಗಳ ವೇತನ, ಚಿನ್ನದಸರ ನೆರೆ ಸಂತ್ರಸ್ತರಿಗೆ ನೀಡಿದ ಶಮೀಮಾ ಟೀಚರ್


Team Udayavani, Aug 29, 2018, 1:55 AM IST

shami-teacher-28-8.jpg

ಕಾಸರಗೋಡು: ಕೇರಳದಲ್ಲಿ ಹಿಂದೆಂದೂ ಕಾಣದ ನೆರೆಯಿಂದ ತತ್ತರಿಸುವ ಸಂತ್ರಸ್ತರಿಗೆ ದೇಶದ ವಿವಿಧ ಭಾಗಗಳಿಂದ ನೆರವು ಹರಿದು ಬರುತ್ತಿದ್ದು, ಟೀಚರೊಬ್ಬರು ತನ್ನ ಒಂದು ತಿಂಗಳ ವೇತನ ಮತ್ತು ಚಿನ್ನದ ಸರವನ್ನು ನೀಡಿ ಮಾದರಿಯಾಗಿದ್ದಾರೆ. ಕಣ್ಣೂರು ತಲಶ್ಯೇರಿ ಇರುವಂಗಾಡ್‌ ಸರಕಾರಿ ಹೆಣ್ಮಕ್ಕಳ ಹೈಯರ್‌ ಸೆಕೆಂಡರಿ ಶಾಲೆಯ ಅಧ್ಯಾಪಿಕೆ ಶಮೀಮಾ ಟೀಚರ್‌ ತನ್ನ ಒಂದು ತಿಂಗಳ ವೇತನದ ಜತೆಗೆ ತನ್ನ ಕತ್ತಿನಲ್ಲಿದ್ದ 16.280 ಗ್ರಾಂ. ಚಿನ್ನದ ಸರವನ್ನು ದೇಣಿಗೆಯಾಗಿ ನೀಡಿದ್ದಾರೆ.

ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿರುವ ‘ಒನ್‌ ಮಂತ್‌ ಫಾರ್‌ ಕೇರಳ’ ಅಭಿಯಾನದ ಅಂಗವಾಗಿ ಈ ಟೀಚರ್‌ ಒಂದು ತಿಂಗಳ ವೇತನ ಮತ್ತು ಚಿನ್ನದ ಸರವನ್ನು ಸಂತ್ರಸ್ತರ ನಿಧಿಗೆ ಹಸ್ತಾಂತರಿಸಿದರು. ಮಾಹೆ ಪಳ್ಳೂರು ನಿವಾಸಿಯಾದ ಶಮೀಮಾ ಟೀಚರ್‌ ಈ ಮೂಲಕ ಮಾದರಿಯನ್ನು ಸೃಷ್ಟಿಸಿದ್ದಾರೆ. ತನ್ನ ಕೈಯಲ್ಲಿ ಹಣವಾಗಿ ನೀಡಲು ತತ್ಕಾಲ ಇಲ್ಲದಿರುವುದರಿಂದ ಚಿನ್ನದ ಸರವನ್ನು ನೀಡಿದೆ ಎಂದು ವಿದ್ಯಾರ್ಥಿಗಳ ಪ್ರೀತಿಯ ಸುವೋಲಜಿ ಅಧ್ಯಾಪಿಕೆಯಾದ ಶಮೀಮಾ ಹೇಳಿದ್ದಾರೆ.


ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ ಶಮೀಮಾ ಟೀಚರ್‌ ಡೆಪ್ಯೂಟಿ ಕಲೆಕ್ಟರ್‌ ಸಿ.ಎಂ.ಗೋಪಿನಾಥ್‌ ಅವರಿಗೆ ತನ್ನ ಕತ್ತಿನಲ್ಲಿದ್ದ ಚಿನ್ನದ ಸರವನ್ನು ತೆಗೆದು ಹಸ್ತಾಂತರಿಸಿದರು. ಹಲವು ವರ್ಷಗಳಿಂದ ಕತ್ತಿನಲ್ಲಿದ್ದ ಈ ಚಿನ್ನದ ಸರ ತೆಗೆದು ನೀಡಿದ ಬಗ್ಗೆ ಜಿಲ್ಲಾಧಿಕಾರಿ ಶ್ಲಾಘಿಸಿದ್ದಾರೆ. ಕೇರಳ  ಈ ಹಿಂದೆ ಎಂದೂ ಕಾಣದ ನೆರೆಯಿಂದ ಕೇರಳದ ಸ್ಥಿತಿ ದಯನೀಯವಾಗಿದೆ. ನೆರೆಯಿಂದ ತತ್ತರಿಸಿರುವ ಸಂತ್ರಸ್ತರಿಗೆ ಹರಿದು ಬರುತ್ತಿರುವ ನೆರವು ಈ ಹಿಂದೆ ಎಂದೆಂದೂ ಕಂಡಿರಲಿಲ್ಲ. ನೆರವಿನ ಮಹಾಪೂರವೇ ಹರಿದು ಬರುತ್ತಿದೆ ಎಂದು ಸಿ.ಎಂ.ಗೋಪಿನಾಥ್‌ ಅವರು ಹೇಳಿದರು. ಈ ಸಂದರ್ಭದಲ್ಲಿ ಫಿನಾನ್ಸ್‌ ಆಫೀಸರ್‌ ಕೆ.ಪಿ.ಮನೋಜ್‌ ಅವರು ಉಪಸ್ಥಿತರಿದ್ದರು.

ಕೇರಳದ ನೆರೆಯ ಅವಸ್ಥೆಯನ್ನು ಕಂಡಾಗ ಈ ಕೊಡುಗೆ ದೊಡ್ಡ ಸಾಧನೆಯಲ್ಲ. ತನ್ನಿಂದ ಸಾಧ್ಯವಾದ ನೆರವನ್ನು ಮಾತ್ರವೇ ನೀಡಿದ್ದೇನೆ. ಕೇರಳದ ಲಕ್ಷಾಂತರ ಮಂದಿ ನೆರೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಹೋದರ ಸಹೋದರಿಯರಿಗೆ, ಮಕ್ಕಳಿಗೆ ಈ ಕೊಡುಗೆ ಏನೇನು ಸಾಲದು. ಆದರೂ ತನ್ನಿಂದ ಸಣ್ಣ ನೆರವು ನೀಡಲು ಸಾಧ್ಯವಾಗಿದೆ.
– ಶಮೀಮಾ ಟೀಚರ್‌

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವುಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.