ಕೊಡಗು – ಸಕಲೇಶಪುರ ಸಂತ್ರಸ್ತರಿಗೆ ಧರ್ಮಸ್ಥಳದಿಂದ 10 ಕೋ.ರೂ. ನೆರವು


Team Udayavani, Sep 8, 2018, 4:05 AM IST

veerendra-heggade-600.jpg

ಬೆಳ್ತಂಗಡಿ: ಅತಿವೃಷ್ಟಿಯಿಂದ ವ್ಯಾಪಕ ಹಾನಿಗೊಳಗಾಗಿರುವ ಕೊಡಗು ಹಾಗೂ ಸಕಲೇಶಪುರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಒಟ್ಟು 10 ಕೋ.ರೂ. ನೀಡುವುದಾಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಘೋಷಿಸಿದ್ದಾರೆ. ಶುಕ್ರವಾರ ಶ್ರೀ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹಾನಿಯ ಕುರಿತು ಕೊಡಗು ಜಿಲ್ಲೆಯಲ್ಲಿ ನಡೆಸಿದ ಸಮೀಕ್ಷಾ ವರದಿಯನ್ನು ನಿರ್ದೇಶಕ ಯೋಗೀಶ್‌ ನೀಡಿದರು. ಜಿಲ್ಲೆಯಲ್ಲಿ ಸುಮಾರು 1,715 ಗ್ರಾಮಾಭಿವೃದ್ಧಿ ಯೋಜನೆಯ ಕುಟುಂಬಗಳಿಗೆ ಹಾನಿಯಾಗಿದೆ. ಇದರಲ್ಲಿ 1 ಸಾವಿರ ಕುಟುಂಬಗಳ ಮನೆ ಬಹುತೇಕ ಹಾನಿಯಾಗಿದೆ. 2.50 ಕೋ.ರೂ.ಗಳ ಸೊತ್ತುಗಳು, 1 ಕೋ.ರೂ.ಗಳಿಗೂ ಮಿಕ್ಕಿದ ವ್ಯವಹಾರದ ವಸ್ತುಗಳಿಗೆ ಹಾನಿಯಾಗಿದೆ. 1,500 ಎಕರೆ ಕೃಷಿ ನಾಶವಾಗಿದ್ದು, ಅವರಿಗೆ ನೀಡಬೇಕಾದ ಸಹಕಾರದ ಕುರಿತು ಚರ್ಚೆ ನಡೆಸಲಾಯಿತು.

ಜಿಲ್ಲೆಯಲ್ಲಿ ಮನೆ ಕಳೆದುಕೊಂಡ 1,044 ಕುಟುಂಬಗಳಿಗೆ ಗೃಹ ನಿರ್ಮಾಣಕ್ಕೆ ತಲಾ 25 ಸಾವಿರ ರೂ.ಗಳಂತೆ 2.61 ಕೋ.ರೂ. ಮಂಜೂರು ಮಾಡಲಾಯಿತು. ನಿತ್ಯೋಪಯೋಗಿ ವಸ್ತು ಖರೀದಿಗೆ 1,335 ಮನೆಗಳಿಗೆ ತಲಾ 15 ಸಾವಿರ ರೂ.ನಂತೆ 2 ಕೋ.ರೂ. ಘೋಷಿಸಿದರು. 1,117 ಕುಟುಂಬಗಳ 1,450 ಎಕರೆ ಕೃಷಿ ನಾಶವಾಗಿದ್ದು, ಇವರಿಗೆ ಕೃಷಿ ಮರುನಿರ್ಮಾಣಕ್ಕೆ ತಲಾ 25 ಸಾವಿರ ರೂ.ಗಳಂತೆ 2.80 ಕೋ.ರೂ. ನೀಡಲು ನಿರ್ಧರಿಸಲಾಯಿತು.

ಸಕಲೇಶಪುರ ಹಾಗೂ ಅರಕಲಗೂಡು ಮೊದಲಾದ ಪ್ರದೇಶಗಳಲ್ಲಿ ಹಾನಿಯಾದ ಕುಟುಂಬಗಳಿಗೆ ತಲಾ 10 ಸಾವಿರ ರೂ.ನಂತೆ 60 ಲಕ್ಷ ರೂ. ಘೋಷಿಸಿದರು. ಒಟ್ಟು 8 ಕೋ.ರೂ.ಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸುವಂತೆ ಧರ್ಮಾಧಿಕಾರಿಯವರು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಕಾರ್ಯಕರ್ತರಿಗೆ ಸೂಚಿಸಿದರು. ಸೂಕ್ತ ಕ್ರಿಯಾಯೋಜನೆ ಸಿದ್ಧಪಡಿಸಿ ನೀಡುವಂತೆ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್. ಎಚ್‌. ಮಂಜುನಾಥ್‌ ಅವರಿಗೆ ಸೂಚಿಸಿದರು.

ಸಿಎಂ ಪರಿಹಾರ ನಿಧಿಗೆ 
ಕ್ಷೇತ್ರದ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ 6,750 ಖಾಯಂ ಸಿಬಂದಿ ತಮ್ಮ 3 ದಿನದ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದು, ಅಷ್ಟೇ ಮೊತ್ತವನ್ನು ಯೋಜನೆಯಿಂದ ಸೇರಿಸಿ ಒಟ್ಟು 2 ಕೋ.ರೂ.ಗಳನ್ನು ಮುಖ್ಯಮಂತ್ರಿ ಕೊಡಗು ಪರಿಹಾರ ನಿಧಿಗೆ ಸಮರ್ಪಿಸಲು ತೀರ್ಮಾನಿಸಲಾಯಿತು. ಈ ಕುರಿತು ಯೋಜನೆಯ ಕಾರ್ಯಕರ್ತರ ನಿಯೋಗ ಬೆಂಗಳೂರಿಗೆ ತೆರಳಿ ಕೊಡಗು ಜಿಲ್ಲೆಯ ಹಾನಿಯ ವರದಿಯನ್ನು ನೀಡಿ 2 ಕೋ.ರೂ.ಗಳ ಚೆಕ್‌ ಹಸ್ತಾಂತರಿಸಲು ತೀರ್ಮಾನಿಸಲಾಯಿತು.

ಕಂತುಗಳ ಪಾವತಿಯಲ್ಲಿ ವಿರಾಮ
ಸ್ವಸಹಾಯ ಸಂಘಗಳ 1 ಸಾವಿರ ಸದಸ್ಯರಿಗೆ ಸಾಲದ ಕಂತುಗಳ ಮರುಪಾವತಿ ಕಷ್ಟವಾಗಿದ್ದು, ಮರುಪಾವತಿ ಕಂತುಗಳನ್ನು 12 ವಾರಗಳವರೆಗೆ ಮುಂದೂಡುವಂತೆ ಅಧ್ಯಕ್ಷರು ಆದೇಶಿಸಿದರು. ಈ ಅವಧಿಯಲ್ಲಿ ಅವರ ಬ್ಯಾಂಕ್‌ ಬಡ್ಡಿಯನ್ನು ಯೋಜನೆಯೇ ಭರಿಸುವಂತೆ ಸೂಚಿಸಿದರು. ಜತೆಗೆ ತಮ್ಮ ವ್ಯವಹಾರದಲ್ಲಿ ಅಡಚಣೆಯುಂಟಾಗಿ, ಕಂತಿನ ಕಡಿಮೆ ಮೊತ್ತ ಕಟ್ಟ ಬಯಸುವವರು ಸಂಘದಲ್ಲಿ ಮುಕ್ತವಾಗಿ ಚರ್ಚಿಸಿ, ಅನುಮತಿ ಪಡೆದುಕೊಳ್ಳಬಹುದೆಂದು ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದರು. ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌, ಕರಾವಳಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಮೈಸೂರು ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ಕೊಡಗು ಜಿಲ್ಲೆಯ ನಿರ್ದೇಶಕ ಯೋಗೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.