ಕೊಡಗು – ಸಕಲೇಶಪುರ ಸಂತ್ರಸ್ತರಿಗೆ ಧರ್ಮಸ್ಥಳದಿಂದ 10 ಕೋ.ರೂ. ನೆರವು


Team Udayavani, Sep 8, 2018, 4:05 AM IST

veerendra-heggade-600.jpg

ಬೆಳ್ತಂಗಡಿ: ಅತಿವೃಷ್ಟಿಯಿಂದ ವ್ಯಾಪಕ ಹಾನಿಗೊಳಗಾಗಿರುವ ಕೊಡಗು ಹಾಗೂ ಸಕಲೇಶಪುರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಒಟ್ಟು 10 ಕೋ.ರೂ. ನೀಡುವುದಾಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಘೋಷಿಸಿದ್ದಾರೆ. ಶುಕ್ರವಾರ ಶ್ರೀ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹಾನಿಯ ಕುರಿತು ಕೊಡಗು ಜಿಲ್ಲೆಯಲ್ಲಿ ನಡೆಸಿದ ಸಮೀಕ್ಷಾ ವರದಿಯನ್ನು ನಿರ್ದೇಶಕ ಯೋಗೀಶ್‌ ನೀಡಿದರು. ಜಿಲ್ಲೆಯಲ್ಲಿ ಸುಮಾರು 1,715 ಗ್ರಾಮಾಭಿವೃದ್ಧಿ ಯೋಜನೆಯ ಕುಟುಂಬಗಳಿಗೆ ಹಾನಿಯಾಗಿದೆ. ಇದರಲ್ಲಿ 1 ಸಾವಿರ ಕುಟುಂಬಗಳ ಮನೆ ಬಹುತೇಕ ಹಾನಿಯಾಗಿದೆ. 2.50 ಕೋ.ರೂ.ಗಳ ಸೊತ್ತುಗಳು, 1 ಕೋ.ರೂ.ಗಳಿಗೂ ಮಿಕ್ಕಿದ ವ್ಯವಹಾರದ ವಸ್ತುಗಳಿಗೆ ಹಾನಿಯಾಗಿದೆ. 1,500 ಎಕರೆ ಕೃಷಿ ನಾಶವಾಗಿದ್ದು, ಅವರಿಗೆ ನೀಡಬೇಕಾದ ಸಹಕಾರದ ಕುರಿತು ಚರ್ಚೆ ನಡೆಸಲಾಯಿತು.

ಜಿಲ್ಲೆಯಲ್ಲಿ ಮನೆ ಕಳೆದುಕೊಂಡ 1,044 ಕುಟುಂಬಗಳಿಗೆ ಗೃಹ ನಿರ್ಮಾಣಕ್ಕೆ ತಲಾ 25 ಸಾವಿರ ರೂ.ಗಳಂತೆ 2.61 ಕೋ.ರೂ. ಮಂಜೂರು ಮಾಡಲಾಯಿತು. ನಿತ್ಯೋಪಯೋಗಿ ವಸ್ತು ಖರೀದಿಗೆ 1,335 ಮನೆಗಳಿಗೆ ತಲಾ 15 ಸಾವಿರ ರೂ.ನಂತೆ 2 ಕೋ.ರೂ. ಘೋಷಿಸಿದರು. 1,117 ಕುಟುಂಬಗಳ 1,450 ಎಕರೆ ಕೃಷಿ ನಾಶವಾಗಿದ್ದು, ಇವರಿಗೆ ಕೃಷಿ ಮರುನಿರ್ಮಾಣಕ್ಕೆ ತಲಾ 25 ಸಾವಿರ ರೂ.ಗಳಂತೆ 2.80 ಕೋ.ರೂ. ನೀಡಲು ನಿರ್ಧರಿಸಲಾಯಿತು.

ಸಕಲೇಶಪುರ ಹಾಗೂ ಅರಕಲಗೂಡು ಮೊದಲಾದ ಪ್ರದೇಶಗಳಲ್ಲಿ ಹಾನಿಯಾದ ಕುಟುಂಬಗಳಿಗೆ ತಲಾ 10 ಸಾವಿರ ರೂ.ನಂತೆ 60 ಲಕ್ಷ ರೂ. ಘೋಷಿಸಿದರು. ಒಟ್ಟು 8 ಕೋ.ರೂ.ಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸುವಂತೆ ಧರ್ಮಾಧಿಕಾರಿಯವರು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಕಾರ್ಯಕರ್ತರಿಗೆ ಸೂಚಿಸಿದರು. ಸೂಕ್ತ ಕ್ರಿಯಾಯೋಜನೆ ಸಿದ್ಧಪಡಿಸಿ ನೀಡುವಂತೆ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್. ಎಚ್‌. ಮಂಜುನಾಥ್‌ ಅವರಿಗೆ ಸೂಚಿಸಿದರು.

ಸಿಎಂ ಪರಿಹಾರ ನಿಧಿಗೆ 
ಕ್ಷೇತ್ರದ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ 6,750 ಖಾಯಂ ಸಿಬಂದಿ ತಮ್ಮ 3 ದಿನದ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದು, ಅಷ್ಟೇ ಮೊತ್ತವನ್ನು ಯೋಜನೆಯಿಂದ ಸೇರಿಸಿ ಒಟ್ಟು 2 ಕೋ.ರೂ.ಗಳನ್ನು ಮುಖ್ಯಮಂತ್ರಿ ಕೊಡಗು ಪರಿಹಾರ ನಿಧಿಗೆ ಸಮರ್ಪಿಸಲು ತೀರ್ಮಾನಿಸಲಾಯಿತು. ಈ ಕುರಿತು ಯೋಜನೆಯ ಕಾರ್ಯಕರ್ತರ ನಿಯೋಗ ಬೆಂಗಳೂರಿಗೆ ತೆರಳಿ ಕೊಡಗು ಜಿಲ್ಲೆಯ ಹಾನಿಯ ವರದಿಯನ್ನು ನೀಡಿ 2 ಕೋ.ರೂ.ಗಳ ಚೆಕ್‌ ಹಸ್ತಾಂತರಿಸಲು ತೀರ್ಮಾನಿಸಲಾಯಿತು.

ಕಂತುಗಳ ಪಾವತಿಯಲ್ಲಿ ವಿರಾಮ
ಸ್ವಸಹಾಯ ಸಂಘಗಳ 1 ಸಾವಿರ ಸದಸ್ಯರಿಗೆ ಸಾಲದ ಕಂತುಗಳ ಮರುಪಾವತಿ ಕಷ್ಟವಾಗಿದ್ದು, ಮರುಪಾವತಿ ಕಂತುಗಳನ್ನು 12 ವಾರಗಳವರೆಗೆ ಮುಂದೂಡುವಂತೆ ಅಧ್ಯಕ್ಷರು ಆದೇಶಿಸಿದರು. ಈ ಅವಧಿಯಲ್ಲಿ ಅವರ ಬ್ಯಾಂಕ್‌ ಬಡ್ಡಿಯನ್ನು ಯೋಜನೆಯೇ ಭರಿಸುವಂತೆ ಸೂಚಿಸಿದರು. ಜತೆಗೆ ತಮ್ಮ ವ್ಯವಹಾರದಲ್ಲಿ ಅಡಚಣೆಯುಂಟಾಗಿ, ಕಂತಿನ ಕಡಿಮೆ ಮೊತ್ತ ಕಟ್ಟ ಬಯಸುವವರು ಸಂಘದಲ್ಲಿ ಮುಕ್ತವಾಗಿ ಚರ್ಚಿಸಿ, ಅನುಮತಿ ಪಡೆದುಕೊಳ್ಳಬಹುದೆಂದು ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದರು. ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌, ಕರಾವಳಿ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಮೈಸೂರು ಪ್ರಾದೇಶಿಕ ನಿರ್ದೇಶಕ ಶ್ರೀಹರಿ, ಕೊಡಗು ಜಿಲ್ಲೆಯ ನಿರ್ದೇಶಕ ಯೋಗೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.