ಸೋಮವಾರಪೇಟೆ ತಾ. ಪಂ.ಸಾಮಾನ್ಯ ಸಭೆ 


Team Udayavani, Sep 6, 2018, 6:15 AM IST

4spt7.jpg

ಸೋಮವಾರಪೇಟೆ: ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಹಾಗೂ ಮನೆ,ಆಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾದವರಿಗೆ ಜಿಲ್ಲಾಡಳಿತ ತಕ್ಷಣವೇ ಪರಿಹಾರ ಧನ ನೀಡಬೇಕೆಂದು ಇಲ್ಲಿನ ತಾಲೂಕು ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ತಾಲೂಕು ಪಂಚಾಯತ್‌ ಸಾಮಾನ್ಯ ಸಭೆ ಮಂಗಳವಾರ ಅಧ್ಯಕ್ಷೆ ಪುಷ್ಪ ರಾಜೇಶ್‌ ಅಧ್ಯಕ್ಷತೆಯಲ್ಲಿ ನಡೆಯಿತು. 

ಕೋಟೆಬೆಟ್ಟ ತಪ್ಪಲು ಪ್ರದೇಶ ಸೇರಿದಂತೆ ಬಿಳಿಗೇರಿ ಸೇರಿದಂತೆ ಹಲವು ಭಾಗಗಳಲ್ಲಿ ಪ್ರಭಾವಿ ಕಾಫಿ ಸಂಸ್ಥೆಯ ಮಾಲಕರು, ಉಧ್ಯಮಿಗಳು ರೆಸಾರ್ಟ್‌ ಗಳನ್ನು ನಡೆಸುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರೆಸಾರ್ಟ್‌ ಪರವಾನಗಿ ನವೀಕರಣ ಸಂದರ್ಭ ಅನುಮತಿ ನೀಡುವಾಗ ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳು ಪುನರ್‌ ಪರಿಶೀಲಿಸಬೇಕು . ಯಾವುದೇ ರೆಸಾರ್ಟ್‌ಗಳಲ್ಲಿ ಸದ್ಯಕ್ಕೆ ಕಾಮಗಾರಿಗಳು ನಡೆಸಲು ಅವಕಾಶ ನೀಡಬಾರದು ಎಂದು ತಾಲೂಕು  ಪಂಚಾಯತ್‌ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್‌ ಅವರು ಹೇಳಿದರು. ಪ್ರಕೃತಿ ವಿಕೋಪಕ್ಕೆ ತುತ್ತಾದ ಸ್ಥಳಗಳಲ್ಲಿ ಮನೆ ಮತ್ತು ತೋಟಗಳನ್ನು ತೊರೆದು ನಿರಾಶ್ರಿತರ ಕೇಂದ್ರಗಳಲ್ಲಿ ನೆಲೆಸಿರು ವವರಿಗೆ ತತ್‌ಕ್ಷಣವೇ  3,800ರೂ ಪರಿಹಾರ ಧನದ ಚೆಕ್‌ ನೀಡ ಬೇಕು. ಮಾದಾಪುರ, ಪಂಚಾಯತ್‌ ವ್ಯಾಪ್ತಿಯಲ್ಲಿ ಹೆಚ್ಚಿನ ನಿರಾಶ್ರಿತರು ಇದ್ದಾರೆ. ಅವರನ್ನು ನಿರ್ಲಕ್ಷಿಸಿರುವುದು ದುರಂತ ಎಂದು ಅಭಿಮನ್ಯು ಕುಮಾರ್‌, ಬಿ.ಬಿ.ಸತೀಶ್‌ ಹೇಳಿದರು. 

ನಿರಾಶ್ರಿತರ ಹೆಸರಿನಲ್ಲಿ ಅಕ್ರಮವಾಗಿ ಬಾಂಗ್ಲ ವಲಸಿಗರಿಗೆ ವ್ಯವಸ್ಥೆ ಕಲ್ಪಿಸುವ ಹುನ್ನಾರ ನಡೆಯುತ್ತಿದೆ. ಇದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಸದಸ್ಯ ಬಲ್ಲಾರಂಡ ಮಣಿ ಮುತ್ತಪ್ಪ ಅವರು ಆಗ್ರಹಿಸಿದರು. 

ಪರಿಹಾರ  ಕೇಂದ್ರಗಳಲ್ಲಿ ನಿರಾಶ್ರಿತ ರಲ್ಲದವರು ವಾಸ ಮಾಡುತ್ತಿದ್ದಾರೆ. ಪರಿಹಾರ ಸಾಮಗ್ರಿಗಳು ಸಮರ್ಪಕವಾಗಿ ನಿರಾಶ್ರಿತರಿಗೆ ದೊರಕುತ್ತಿಲ್ಲ.
 
ಕಂದಾಯ ಇಲಾಖೆಯವರು ಇದರ ಬಗ್ಗೆ ಸರಿಯಾದ ಮಾಹಿತಿ ಪಡೆದುಕೊಂಡು ಗ್ರಾಮೀಣ ಭಾಗದಲ್ಲಿ ಸಂಕಷ್ಟ ಪಡುತ್ತಿರುವ ನಿರಾಶ್ರಿತರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಬೇಕಾಗಿದೆ ಎಂದು ಅಭಿಮನ್ಯುಕುಮಾರ್‌ ಹೇಳಿದರು. 

ಗರ್ವಾಲೆ ವಿಭಾಗದಲ್ಲಿ ಎ.ಪಿ.ಎಲ್‌ ಮತ್ತು ಬಿಪಿಎಲ್‌ ಪಡಿತರ ಚೀಟಿಯನ್ನು 476 ಜನರು ಪಡೆದಿದ್ದಾರೆ. ಆದರೆ ಅನ್ನಭಾಗ್ಯ ಯೋಜನೆಯಡಿ 173 ಆಹಾ‌ರದ ಕಿಟ್‌ಗಳನ್ನು ನೀಡಲಾಗಿದೆ. ನಿರಾಶ್ರಿತರು ಹೆಚ್ಚಿನ ಸಂಖೆಯಲ್ಲಿ ಇಲ್ಲದ ಮತ್ತು ಅನರ್ಹರಿಗೆ ಕಿಟ್‌ಗಳನ್ನು ನೀಡಲಾಗಿದೆ. 

ಕ್ಯಾನ್‌ಗಳನ್ನು ಕೊಟ್ಟಿದ್ದಾರೆ. ಆದರೆ ಸೀಮೆಎಣ್ಣೆಯನ್ನು ಇನ್ನೂ ವಿತರಣೆ  ಮಾಡದೇ ಇರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಕ್ರಮವನ್ನು ಅಭಿಮನ್ಯು ಕುಮಾರ್‌ ಖ‌ಂಡಿಸಿದರು.ಗಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರನ್ನಾಗಿ ತಾ. ಪಂ. ಸದಸ್ಯೆ ತಂಗಮ್ಮ ಅವರನ್ನು ಆಯ್ಕೆ ಮಾಡಲಾಯಿತು. ಮಾಜಿ ಪ್ರಧಾನಿ ವಾಜಪೇಯಿ ಮತ್ತು ಪ್ರಾಕೃತಿಕ ವಿಕೋಪ ದಲ್ಲಿ  ಮಡಿದವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. 

ಗರ್ವಾಲೆ ಗ್ರಾಮ ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಯಾವುದೇ ಕೆಲಸ ಕಾರ್ಯ ಗಳಿಗೆ ಸ್ಪಂದಿಸುತ್ತಿಲ್ಲ. ಅವರನ್ನು ತತ್‌ಕ್ಷಣವೇ ವರ್ಗಾವಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಉಪಾಧ್ಯಕ್ಷ ಅಭಿಮನ್ಯುಕುಮಾರ್‌ ಅವರು ಹೇಳಿದರು. 

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವುಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.