ಮಳೆ ಹಾನಿ ಪರಿಶೀಲಿಸದ ಅಧಿಕಾರಿಗಳ ವಿರುದ್ಧ ಗರಂ


Team Udayavani, Sep 6, 2018, 6:25 AM IST

4ss1zpm-sarojamma-matu.jpg

ಶನಿವಾರಸಂತೆ: ದುಂಡಳ್ಳಿ ಗ್ರಾ.ಪಂ.ಯ 2018-19ನೇ ಸಾಲಿನ ಗ್ರಾಮಸಭೆ ಸುಳುಗಳಲೆ ಕಾಲೋನಿಯ ಸಾರ್ವಜನಿಕ ಸಮೂದಾಯ ಭವನದಲ್ಲಿ ಗ್ರಾ.ಪಂ.ಅಧ್ಯಕ್ಷ ಸಿ.ಜೆ.ಗಿರೀಶ್‌ ಅಧ್ಯಕ್ಷತೆಯಲ್ಲಿ ನಡೆಯಿತು.

ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆ ಮಳೆಗಿಂತ ಮೂರುಪಟ್ಟು ಹೆಚ್ಚಿನ ಮಳೆಯಾಗಿರುವುದ್ದರಿಂದ ಈ ಭಾಗದಲ್ಲಿ ಕಾಫಿ, ಭತ್ತ, ಕಾಳುಮೆಣಸು ಸೇರಿದಂತೆ ಶುಂಠಿ, ಬಾಳೆ ಮುಂತಾದ ಕೃಷಿ ಬೆಳೆಗಳಿಗೆ ಹಾನಿಯಾಗಿದ್ದು ರೈತರು ಅತೀವ ನಷ್ಟಕೊಳ್ಳಗಾಗಿದ್ದರೂ, ಇಲ್ಲಿಯ ತನಕ ಈ ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟ ಕೃಷಿ, ಕಂದಾಯ ಮತ್ತು ತೋಟಗಾರಿಗೆ ಇಲಾಖೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿಲ್ಲ, ಪರಿಶೀಲನೆ ನಡೆಸದೆ ಅಧಿಕಾರಿಗಳು ರೈತರಿಗೆ ಹೇಗೆ ಪರಿಹಾರ ನೀಡುತ್ತಾರೆ ಎಂದು ಮಾಜಿ ಗ್ರಾ.ಪಂ.ಅಧ್ಯಕ್ಷ ಡಿ.ಬಿ.ಬೋಜಪ್ಪ ಗ್ರಾಮಸ್ಥರ ಪರವಾಗಿ ಸಭೆಯಲ್ಲಿ ಪ್ರಶ್ನಿಸಿದರು.

ಉತ್ತರಿಸಿದ ನೋಡಲ್‌ ಅಧಿಕಾರಿ ಮುಕುಂದ  ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರ ಎಲ್ಲಾರೀತಿಯ ಪರಿಹಾರ ಪ್ರಕ್ರಿಯೆ ಕಾರ್ಯವನ್ನು ನಡೆಸುತ್ತಿದೆ, ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಯಲ್ಲಿ ಮಳೆಹಾನಿಯಿಂದ ಕೃಷಿ ಬೆಳೆಗಳು ಹಾಳಾಗಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಪರಿಶೀಲನೆ ನಡೆಸುವ ಉದ್ದೇಶದಿಂದ ಈಗಾಗಲೆ ತೋಟಗಾರಿಕೆ, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳನ್ನು ಬೇರೆ ಜಿಲ್ಲೆಗಳಿಂದ ಕರೆಸಿಕೊಳ್ಳಲಾಗಿದೆ, ಅದರಂತೆ ಹಂತಹಂತವಾಗಿ ಗ್ರಾ.ಪಂ.ವ್ಯಾಪ್ತಿಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು. ಈ ಬಗ್ಗೆ ಗ್ರಾಮಸ್ಥರಿಂದ ಸುದೀರ್ಘ‌ ಚರ್ಚೆ ನಡೆಯಿತು. 

ಅತೀವೃಷ್ಟಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಗ್ರಾ.ಪಂ.ಗಳನ್ನು ಅತೀವೃಷ್ಟಿಯಿಂದ ನಷ್ಟಗೊಳಗಾಗಿದೆ ಎಂದು ಪರಿಗಣಿಸಿ ರೈತರಿಗೆ ಪರಿಹಾರ ನೀಡುವುದರ ಜೊತೆಯಲ್ಲಿ ರೈತರ ಕೃಷಿ ಸಾಲವನ್ನು ಮನ್ನಾ ಮಾಡುವಂತೆ ಜಿಲ್ಲಾಧಿಕಾರಿ, ಮುಖ್ಯಮಂತ್ರಿ ಮತ್ತು ಸರಕಾರಕ್ಕೆ ಮನವಿ ನೀಡುವಂತೆ ತೀರ್ಮಾನಿಸಲಾಯಿತು.ಕಾಡಾನೆ ಹಾವಳಿ ಎಚ್ಚಾಗುತ್ತಿರುವ ಬಗ್ಗೆ ಮತ್ತು ಕಾಡಾನೆ ದಾಳಿಯಿಂದ ಗಾಯಗೊಂಡವksಡಿಚಿ  ಎರಡೂವರೆ ಲಕ್ಷ ರು ಪರಿಹಾರ ನೀಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಯಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ, ಅರಣ್ಯ, ತೋಟಗಾರಿಕೆ ಇಲಖೆಯಿಂದ ಗ್ರಾಮಸ್ಥರಿಗೆ ಆಗುವ ಉಪಯೋಗದ ಕುರಿತು ಚರ್ಚಿಸಲಾಯಿತು.

ಜಿ.ಪಂ.ಸದಸ್ಯೆ ಸರೋಜಮ್ಮ ಮಾತನಾಡಿ-ಜಿ.ಪಂ. ಯಿಂದ ಬಂದಿರುವ ಅನುದಾನವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡಿದ್ದೇನೆ, ಜಿ.ಪಂ.ಗೆ ಅನುದಾನದ ಕೊರತೆಯಿಂದ ಗ್ರಾಮಗಳನ್ನು ಅಭಿವೃದ್ದಿ ಪಡಿಸಲು ತೊಡಕ್ಕಾಗುತ್ತಿದೆಯಷ್ಟೆ ಎಂದರು. 

ಮಳೆ ಪರಿಹಾರ ಯೋಜನೆಯಿಂದ ಜಿ.ಪಂ.ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ದಿ ಪಡಿಸಲು ಕ್ರೀಯಯೋಜನೆ ರೂಪಿಸಲಾಗಿದೆ, ಈ ಕುರಿತು ಶಾಸಕರಿಗೆ ಮತ್ತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಗ್ರಾ.ಪಂ.ಅಧ್ಯಕ್ಷ ಸಿ.ಜೆ.ಗಿರೀಶ್‌ ಮಾತನಾಡಿ ಬಂದಿರುವ ಅನುದಾನದಂತೆ ಅಭಿವೃದ್ದಿ ಪಡಿಸಲಾಗುತ್ತಿದೆ, ‌ ಇಚ್ಚಾಶಕ್ತಿ ಇದ್ದರೂ ಅನುದಾನದ ಕೊರತೆಯಿಂದ ಸಮಸ್ಯೆಯಾಗುತ್ತದೆ ಎಂದರು. ಗ್ರಾ.ಪಂ.ಉಪಾಧ್ಯಕ್ಷೆ ರೂಪಾಇ ಗ್ರಾ.ಪಂ.ಪಿಡಿಒ ವೇಣುಗೋಪಾಲ್‌ ಗ್ರಾ.ಪಂ.ಸದಸ್ಯರು ಹಾಜರಿದ್ದರು.

ಅಧಿಕಾರಿಗಳ ಹಾಜರಾತಿ
ಹಿರಿಯ ಅಧಿಕಾರಿ ಇದ್ದಲ್ಲಿ ಸರಕಾರ ಮಟ್ಟದಲ್ಲಿ ಗಮನ ಸೆಳೆಯಲು ಸಾಧ್ಯವಾಗುತ್ತದೆ ಎಂದು ಗ್ರಾಮಸ್ಥರು ಸಲಹೆ ನೀಡಿದರುಮುಂದಿನ ಗ್ರಾಮಸಭೆಯಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮಸಭೆಯಲ್ಲಿ ಭಾಗವಹಸುವಂತೆ ನಿರ್ಣಯ ತೆಗೆದುಕೊಳ್ಳಲಾಯಿತು

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.