ಪೊಸಡಿಗುಂಪೆ ಪವಿತ್ರ ಗುಹಾ ಪ್ರವೇಶ: ವಿಭೂತಿ ಸಂಗ್ರಹ


Team Udayavani, Sep 10, 2018, 1:10 AM IST

vibhuti-9-9.jpg

ಉಪ್ಪಳ: ತೀರ್ಥ ಅಮಾವಾಸ್ಯೆಯ ದಿನವಾದ ರವಿವಾರ ಬಾಯಾರುಪದವು ಸಮೀಪದ ಪುರಾಣ ಪ್ರಸಿದ್ಧ ಪೊಸಡಿ ಗುಂಪೆ ಪವಿತ್ರ ಗುಹಾ ಪ್ರವೇಶ ನಡೆಯಿತು. ಬೆಳಗ್ಗೆ 6 ಗಂಟೆ ಸುಮಾರಿಗೆ ಆರಂಭವಾದ ಗುಹಾ ಪ್ರವೇಶಕ್ಕೆ ಹೆಚ್ಚಿನ ಸಂಖ್ಯೆಯ ಧಾರ್ಮಿಕ ಶ್ರದ್ಧಾಳುಗಳು ಭಾಗವಹಿಸಿ ವಿಭೂತಿ ಸಂಗ್ರಹಿಸಿ ಪುನೀತರಾದರು. ಪೊಸಡಿ ಗುಂಪೆ ಕಾನ ತರವಾಡಿನ ಶ್ರೀಕೃಷ್ಣ ಭಟ್‌ ಮತ್ತು ರಮೇಶ್‌ ಭಟ್‌ ಗುಂಪೆ ನೆಲ್ಲಿ ತೀರ್ಥಕ್ಕೆ ಪುಷ್ಪಗಳನ್ನು ಅರ್ಪಿಸಿ ತೀರ್ಥ ಸ್ನಾನ ಮಾಡುವ ಮೂಲಕ ವಿಭೂತಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಬಾರಿಯ ಗುಂಪೆ ವಿಭೂತಿ ಸಂಗ್ರಹಕ್ಕೆ ನೂರರಷ್ಟು ಭಕ್ತರು ಆಗಮಿಸಿದ್ದರು. ಕಾಟುಕುಕ್ಕೆ ಆಗಲ್ಪಾಡಿಯಿಂದ ಬಂದ ಆಸ್ತಿಕರು ಗುಹಾ ಪ್ರವೇಶ ಮಾಡಿದರು. ಭಕ್ತರು ಗುಂಪೆಯ ನೆಲ್ಲಿತೀರ್ಥದಲ್ಲಿ ಮಿಂದು ಶುಚಿಭೂìತರಾಗಿ ಗೋವಿಂದನ ಸ್ಮರಣೆಯೊಂದಿಗೆ ಕಣಿವೆ ಮಾರ್ಗವಾಗಿ ಸಂಚರಿಸಿ ಸುಮಾರು 200 ಮೀ. ದೂರದ ವಿಭೂತಿ ಗುಹೆ ಪ್ರವೇಶಿಸಿದರು. ತೀರ ಬೆಳಕಿನ ಅಭಾವವಿರುವ ಕತ್ತಲ ಗುಹೆಗೆ ದೀಪ ನಿಷಿದ್ಧವಾದ ಕಾರಣ ಒಬ್ಬರ ಹಿಂದೆ ಒಬ್ಬರಂತೆ ಕೈ ಹಿಡಿದು ಗುಹಾ ಸುರಂಗ ಸಂಚರಿಸಿ ವಿಭೂತಿ ಸಂಗ್ರಹಿಸುವ ಮೂಲಕ ಪುನೀತರಾದರು.

ಮನುಷ್ಯನ ಪ್ರಕೃತಿ ಸಾಮೀಪ್ಯವನ್ನು ಸೂಚಿಸುವ ತೀರ್ಥ ಅಮಾವಾಸ್ಯೆ ಆಚರಣೆಯು ಮಳೆಗಾಲದ ಅನಂತರ ಸ್ವಾಭಾವಿಕವಾಗಿ ಪುಟಿದೇಳುವ ನೈಸರ್ಗಿಕ ಜಲ ಮೂಲಕ್ಕೆ ನಮಿಸಿ ಗೌರವ ಸಲ್ಲಿಸುವುದು ಇಲ್ಲಿನ ಪ್ರಧಾನ ಅಂಶವಾಗಿದೆ. ಪೊಸಡಿ ಗುಂಪೆ ಗುಹಾಲಯ ಪ್ರವೇಶಿಸಿ ವಿಭೂತಿ ಶೇಖರಿಸುವ ಕಾರ್ಯ ಪ್ರಕೃತಿಯೊಂದಿಗೆ ಸಂಸ್ಕೃತಿಯನ್ನು ಬೆಸೆಯುವ ಕಾರ್ಯವಾಗಿದ್ದು, ಹೆಚ್ಚಿನ ಪ್ರಧಾನ್ಯವನ್ನು ಪಡೆದಿದೆ. ಪ್ರತೀ ವರ್ಷ ತೀರ್ಥ ಅಮಾವಾಸ್ಯೆ ದಿನದ ಬೆಳಗಿನ ಜಾವ ಗಾಢಾಂಧಕಾರದ ಗುಹೆಯನ್ನು ಪ್ರವೇಶಿಸಿ ಪವಿತ್ರ ವಿಭೂತಿ ಸಂಗ್ರಹಿಸುವುದು ಇಲ್ಲಿನ ವಾಡಿಕೆಯಾಗಿದೆ. ಶೈವ, ನಾಥ, ಶಾಕ್ತ ಪಂಥದ ಅನುಯಾಯಿಗಳು ಪೊಸಡಿಗುಂಪೆಗೆ ಸಮೀಪಿಸಿ ತೀರ್ಥ ಗುಂಪೆಯಲ್ಲಿ ಮಿಂದು ಶುಚಿರ್ಭೂತರಾಗಿ, ಸುಮಾರು 70 ಮೀ. ಉದ್ದದ ಇಳಿಜಾರು ಕಣಿವೆಯ ಮೂಲಕ ಸಾಗಿ, ಗುಂಪೆ ಗುಹಾ ಪ್ರವೇಶ ಮಾಡುವುದು ಶತಮಾನಗಳಿಂದ ರೂಢಿಯಲ್ಲಿದೆ. ಪೊಸಡಿ ಗುಂಪೆ ತೀರ್ಥ ಮತ್ತು ವಿಭೂತಿ ಸಂಗ್ರಹಕ್ಕೆ ಹಲವು ಐತಿಹ್ಯಗಳೊಂದಿಗೆ ಪೌರಾಣಿಕ ಕಥೆಗಳು ಇವೆ. ಪಾಂಡವರು 12 ವರ್ಷಗಳ ಕಾಲ ವನವಾಸದ ಸಂದರ್ಭ ಈ ಪ್ರದೇಶಕ್ಕೆ ಆಗಮಿಸಿ ಮಹಾಯಾಗವನ್ನು ಕೈಗೊಂಡಿದ್ದರು ಮತ್ತು ಯಾಗದಿಂದ ಸಂಗ್ರಹಗೊಂಡ ಬೂದಿಯನ್ನು ಇಲ್ಲಿನ ಗುಹೆಯೊಂದರಲ್ಲಿ ಶೇಖರಿಸಿಟ್ಟರು ಎಂಬ ನಂಬಿಕೆಯಿದೆ. ಬೆಟ್ಟ ಪ್ರದೇಶದಲ್ಲಿ ಹಲವು ಗುಹೆಗಳನ್ನು ಕಾಣಬಹುದಾಗಿದ್ದು ದೂರದ ಕಣ್ಹೇರಿ, ಅಜಂತಾ ಗುಹೆಗಳನ್ನು ನೆನಪಿಸುತ್ತವೆ. ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳ ಸಂಶೋಧನ ಸಂಪುಟದಲ್ಲಿ ಪೊಸಡಿ ಗುಂಪೆ ಗುಡ್ಡದ ಬಗೆಗಿನ ನಿದರ್ಶನವನ್ನು ನೀಡಲಾಗಿದ್ದು ನಾಥ ಪಂಥದ ಆಗಮನದ ಬಗ್ಗೆ ಉಲ್ಲೇಖೀಸಲಾಗಿದೆ. ಕ್ರಿ.ಶ. 9ನೇ ಶತಮಾನದಲ್ಲಿ ನಾಥ ಪಂಥವು ದಕ್ಷಿಣ ಕರಾವಳಿಯಲ್ಲಿ ಬೇರೂರಿತು. ಕದಿರೆ, ವಿಟ್ಲದಲ್ಲೂ ನಾಥಪಂಥದ  ಜೋಗಿ ಮಠವಿದೆ.

ಕಾಸರಗೋಡು ತಾಲೂಕಿನ ಮಂಗಲ್ಪಾಡಿಯಿಂದ ಸುಮಾರು 8-9 ಮೈಲು ಮೂಡಲಾಗಿ ಪೊಸಡಿಗುಂಪೆ ಎಂಬ ಗುಡ್ಡವಿದೆ. ಅಲ್ಲಿಯ ಗುಹೆಗಳಲ್ಲಿ ನಾಥ ಪಂಥದವರ ವಾಸ್ತವ್ಯವಿತ್ತು. ಅಲ್ಲಿ ವಿಭೂತಿ ದೊರೆಯುತ್ತದೆ. ಜೋಗಿಗಳು ಅಲ್ಲಿ ಇದ್ದಿರಬೇಕೆಂಬುದಕ್ಕೆ ಇದು ಚಿಕ್ಕ ನಿದರ್ಶನ ಎಂಬುದಾಗಿ ಉಲ್ಲೇಖೀಸಲಾಗಿದೆ. ಹೀಗೆ ಐತಿಹಾಸಿಕವಾಗಿ ಪೌರಾಣಿಕವಾಗಿ ಮಹತ್ವ ಪಡೆದಿರುವ ಪೊಸಡಿಗುಂಪೆ ಪ್ರದೇಶದಲ್ಲಿ ಬಾಂಜಾರ ಗುಹೆಗಳು ಎಂದು ಕರೆಯಲ್ಪಡುವ ಕೆಲ ಬೃಹತ್‌ ಗುಹೆಗಳಿವೆ. ಕೆಲ ಗುಹೆಗಳ ಒಳಾಂಗಣ ಹೆಚ್ಚು ವಿಸ್ತಾರವಾಗಿದ್ದು, ಸುಮಾರು ಐವತ್ತು ಮಂದಿ ನಿಲ್ಲಬಹುದಾಗಿದೆ. ಉಳಿದಂತೆ ಹಲವು ದ್ವಿಮುಖ ಬಾವಿಗಳು, ಸುರಂಗಮಾರ್ಗಗಳು ಪೊಸಡಿಗುಂಪೆಯ ಮುಡಿಯಲ್ಲಿವೆ. ಗೊಂಪಾ ಎಂದರೆ ಮಣ್ಣಿನ ದಿಬ್ಬ ಅಥವಾ ದೂರದಲ್ಲಿರುವ ಎತ್ತರದ ಪ್ರದೇಶ ಎಂದರ್ಥ.

ಪೊಸಡಿ ಎಂಬುದು ಕನ್ನಡ ಭಾಷೆಯ ತದ್ಭವವಾಗಿದ್ದು ಹೊಸದು ಎಂಬುದನ್ನು ಸೂಚಿಸುತ್ತದೆ. ಹೊಸ ಬೆಟ್ಟ ಎಂಬಂತಿರುವ ಶಬಾœರ್ಥವು ಹಳೆ ಆಚರಣೆಯೊಂದಿಗೆ, ಆಧುನಿಕ ಕಾಲಘಟ್ಟದಲ್ಲೂ ಪ್ರಕೃತಿ ಸಾಮೀಪ್ಯದ ನವಚೈತನ್ಯ ಶಕ್ತಿಯ ದ್ಯೋತಕವೆಂಬಂತೆ ಭಾಸವಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಪೊಸಡಿ ಗುಂಪೆ ಬೆಟ್ಟ ಪ್ರದೇಶ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ವಾರಾಂತ್ಯದ ಚಾರಣಧಾಮವಾಗಿ ಹೆಸರುವಾಸಿಯಾಗಿದೆ.

ವಿಭೂತಿ ಸಂಗ್ರಹದ ಮಹತ್ವ
ಪುರಾತನ ಕಾಲದಿಂದ ನಡೆದು ಬರುತ್ತಿರುವ ಪರಂಪರೆಯಂತೆ ಶ್ರಾವಣ ಮಾಸದ ತೀರ್ಥ ಅಮಾವಾಸ್ಯೆಯಂದು ಪೊಸಡಿಗುಂಪೆಯ ಗುಹೆ ಪ್ರವೇಶಿಸಿ ವಿಭೂತಿ ಸಂಗ್ರಹಿಸುವುದು ವಾಡಿಕೆಯಾಗಿದೆ. ಶಾಕ್ತ ಮತ್ತು ಶೈವ ಸಂಪ್ರದಾಯದಂತೆ ವಿಭೂತಿ ಧಾರಣೆ ಮಾಡುವ ಪ್ರತಿಯೊಬ್ಬ ವ್ಯಕ್ತಿಗೂ ಪೊಸಡಿಗುಂಪೆ ಗುಹಾ ಪ್ರವೇಶ ವಿಶೇಷವಾಗಿದೆ.

ಚಾರಣಧಾಮ
ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ಬಾಯಾರು ಸಮೀಪದ ಪೊಸಡಿಗುಂಪೆ ಪ್ರಕೃತಿ ಮನೋಹರವಾದ ಚಾರಣಧಾಮ. ಐತಿಹಾಸಿಕವಾಗಿಯೂ ಪ್ರಸಿದ್ಧಿ ಪಡೆದಿರುವ ಈ ಸ್ಥಳ ಪೌರಾಣಿಕವಾಗಿಯೂ ಜನಸಾಮಾನ್ಯರ ಮನಸ್ಸಿನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ. ತೀರ್ಥ ಅಮಾವಾಸ್ಯೆಯ ಪುಣ್ಯ ದಿನದಂದು ಇಲ್ಲಿನ ಗುಹೆಯೊಂದರಲ್ಲಿ ಸಂಚರಿಸಿ ವಿಭೂತಿ ಶೇಖರಿಸಿ, ಭಕ್ತಿ ಶ್ರದ್ಧೆಯೊಂದಿಗೆ ಪುನೀತಭಾವ ಪಡೆಯುವುದು ಇಲ್ಲಿನ ಸ್ಥಳೀಯರ ವಾಡಿಕೆಯಾಗಿದೆ. ತನ್ನೊಳಗೆ ಹಲವು ಐತಿಹ್ಯಗಳನ್ನು ಒಳಗೊಂಡಿರುವ ಪೊಸಡಿಗುಂಪೆ ತೀರ್ಥ ಕೋಡಿಪ್ಪಾಡಿ ತೀರ್ಥ, ನರಹರಿಪರ್ವತ ತೀರ್ಥ ಸಹಿತ ಬೆಂದ್ರ್ ತೀರ್ಥದಷ್ಟೇ ವಿಶೇಷವಾದುದಾಗಿದೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.