ಬೆಂಗಳೂರಿನಲ್ಲಿ ಚಿನ್ನ-ಚಿತ್ತಾರ ಸಮಾರಂಭ, ಸಮ್ಮಾನ


Team Udayavani, Sep 22, 2018, 6:20 AM IST

20ksde5.jpg

ಕಾಸರಗೊಡು: ಗಡಿನಾಡಿನ ಪ್ರತಿಭೆ, ಕೇರಳ ಹಾಗೂ ಕರ್ನಾಟಕ ರಾಜ್ಯದ ಸಾಂಸ್ಕೃತಿಕ ಕೊಂಡಿ, ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕಾಸರಗೋಡು ಚಿನ್ನಾ ಅವರಿಗೆ ಅರುವತ್ತು ತುಂಬಿದ ಸಂದರ್ಭದಲ್ಲಿ ಬೆಂಗಳೂರಿನ ಭಾಗವತರು (ರಿ) ಹಾಗೂ ಚಿನ್ನಾ ಗೆಳೆಯರು ನೇತೃತ್ವದಲ್ಲಿ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಅದ್ದೂರಿ ಸಮಾರಂಭವನ್ನು ಏರ್ಪಡಿಸಲಾಯಿತು.

“ಚಿನ್ನ ಚಿತ್ತಾರ’ ಕಾರ್ಯಕ್ರಮದಲ್ಲಿ ಏರ್ಪಡಿಸಿದ ಕಾಸರಗೋಡು ಚಿನ್ನಾ ಅವರ ಕುರಿತಾದ ವಿಚಾರಗೋಷ್ಠಿಯನ್ನು ಖ್ಯಾತ ರಂಗಕರ್ಮಿ ಕೆ.ವಿ. ನಾಗರಾಜಮೂರ್ತಿ ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿ ಮಾತನಾಡುತ್ತಾ ಏಕ ಕಾಲಕ್ಕೆ ಕರ್ನಾಟಕ ಹಾಗೂ ಕೇರಳ ಎರಡೂ ರಾಜ್ಯಗಳಲ್ಲಿ ಅಕಾಡೆಮಿ ಸದಸ್ಯನಾಗಿ ದುಡಿದ ಚಿನ್ನಾ ಅವರು ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜನೆಗೆ ಎಂದೂ ಬಜೆಟ್ಟಿನ ಪರಿಮಿತಿ ಹಾಕಿಕೊಂಡವರಲ್ಲ. ಕಾರ್ಯಕ್ರಮವನ್ನು ಅದ್ದೂರಿಯಾಗಿ ಏರ್ಪಡಿಸುವುದರಲ್ಲಿ  ಎತ್ತಿದ ಕೈ ಎಂದರು.

“ಚಿನ್ನಾ ಮತ್ತು ಸಂಘಟನೆ’ ಕುರಿತಂತೆ ಖ್ಯಾತ ರಂಗಕರ್ಮಿ, ಚಲನಚಿತ್ರ ನಟ ಮಂಡ್ಯ ರಮೇಶ್‌ ಮಾತನಾಡಿ ಇಡೀ ರಂಗಭೂಮಿಗೆ ಈಗ ಬೇಕಿರುವುದು ನಟ, ನಿರ್ದೇಶಕರಲ್ಲ. ಬದಲಾಗಿ ಅಚ್ಚುಕಟ್ಟಾಗಿ ಆಯೋಜಿಸುವ ಸಂಘಟಕರು. ಏಕೆಂದರೆ ಇಂದು ನೂರಾರು ಕಲಾವಿದರು ಹುಟ್ಟಿಕೊಳ್ಳುತ್ತಿದ್ದಾರೆ. ಸೃಜನಶೀಲ ನಿರ್ದೇಶಕರಿದ್ದಾರೆ. ಆದರೆ ಚಪ್ಪಾಳೆ ತಟ್ಟಿದರೆ ಜನ ಸೇರಿಸಬಲ್ಲ ಸಂಘಟಕರಿಲ್ಲ. ಅದರಲ್ಲಿ ಚಿನ್ನಾ ಸಿದ್ಧಹಸ್ತರು. ಉಡುಪಿಯ ನಾಟಕ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ನನಗೆ ಅವರು ನೀಡಿದ “ದ್ರವ್ಯ ಕಾಣಿಕೆ’ ನಾನೆಂದೂ ಮರೆಯುವುದಿಲ್ಲ ಎಂದರು.

ಸಾಹಿತಿ ಶಾ.ಮಂ. ಕೃಷ್ಣರಾಯ, ಡಾ| ನಾ. ದಾಮೋದರ ಶೆಟ್ಟಿ ಮಾತನಾಡಿದರು.ಸಂಜೆ ನಡೆದ ಅದ್ದೂರಿ ಸಮ್ಮಾನ ಸಮಾರಂಭವನ್ನು ಖ್ಯಾತ ಸಾಹಿತಿ ಡಾ| ಡಿ.ಕೆ. ಚೌಟ ಅವರು ಉದ್ಘಾಟಿಸಿದರು. ಚಿನ್ನಾ ಅವರ ಎಲ್ಲಾ ಹುಚ್ಚಾಟಗಳಿಗೆ ಸಾಕ್ಷಿ ನಾನು. ಏಕೆಂದರೆ ಅವನೆಲ್ಲಾ ಅಭಿಯಾನಗಳು ಪ್ರಾರಂಭಗೊಳ್ಳುವುದು ನನ್ನೂರಿನಿಂದ. “ಲಾರಿ ನಾಟಕ’ ಕ್ಕೆ ಚಾಗಟೆ ಬಾರಿಸಿ ಚಾಲನೆಯನ್ನು ನಾನು ನೀಡಿದ್ದೆ. ಆದರೆ ಎಂದೂ ನನ್ನ ಬಳಿ ಆರ್ಥಿಕ ಸಹಾಯಕ್ಕಾಗಿ ಕೈ ಒಡ್ಡಿದವರಲ್ಲ. ಮಹಾನ್‌ ಸ್ವಾಭಿಮಾನಿ ಎಂದರು.

ಮುಖ್ಯ ಅತಿಥಿಯಾಗಿ ಮಾಜಿ ಸಂಸ್ಕೃತಿ ಸಚಿವೆ ಉಮಾಶ್ರೀ, ನಟ, ಭರತನಾಟ್ಯ ಕಲಾವಿದ ಶ್ರೀಧರ್‌ ಮಾತನಾಡಿದರು. ನಟ ರಾಮಕೃಷ್ಣ ಶುಭಾಶಂಸನೆಗೈದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ಮೈಸೂರಿನ ಅಂಕಣಕಾರ, ಪತ್ರಕರ್ತ ರವೀಂದ್ರ ಜೋಷಿ ಚಿನ್ನಾ ಅವರ ಬಹು ಮುಖ ವ್ಯಕ್ತಿತ್ವವನ್ನು ತಿಳಿಸಿ ಕರ್ನಾಟಕದ ರಾಜಧಾನಿಯಲ್ಲಿ ಅವರನ್ನು ಗೌರವಿಸುವ ಮುಖಾಂತರ ನಮಗೆ ನಾವೇ ಸಮ್ಮಾನಿಸಿಕೊಳ್ಳುತ್ತಿದ್ದೇವೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಖ್ಯಾತ ಚಲನಚಿತ್ರ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ದತ್ತಣ್ಣ ಅವರು “ದುಡ್ಡು ದೊಡ್ಡದ್ದಲ್ಲ, ದುಡಿಮೆ ದೊಡ್ಡದು. ಜೀವ ದೊಡ್ಡದ್ದಲ್ಲ ಜೀವನ ದೊಡ್ಡದು’. ಅದಕ್ಕೆ ತಕ್ಕಂತೆ ಚಿನ್ನಾ ಜೀವನ ಮಾಡಿದ್ದಾರೆ ಎಂದರು.
ವಿಚಾರಗೋಷ್ಠಿಯ ಅಧ್ಯಕ್ಷತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ| ಎಸ್‌.ಜಿ. ಸಿದ್ಧರಾಮಯ್ಯ ವಹಿಸಿ ಮಾತನಾಡಿದರು. 

ಕಾಸರಗೋಡು ಚಿನ್ನಾ ಹಾಗೂ ಅವರ ಪತ್ನಿ ಅನಿತಾ ಅವರಿಗೆ ಸಮಸ್ತ ಬೆಂಗಳೂರಿನ ಕಲಾವಿದರ ಪರವಾಗಿ “ರಂಗ ಗೌರವ’ ವನ್ನು ನೀಡಲಾಯಿತು. 

ಕಾರ್ಯಕ್ರಮದ ಪ್ರಾರಂಭದಲ್ಲಿ ಖ್ಯಾತ ಸುಗಮ ಸಂಗೀತ ಗಾಯಕಿ ಸೀಮಾ ರಾಯ್ಕರ್‌ ಹಾಗೂ ಬಿ.ಪಿ.ಗೋಪಾಲಕೃಷ್ಣ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರಗಿತು. ಭಾಗವತರು ಸಂಸ್ಥೆಯ ರೂವಾರಿ ರೇವಣ್ಣ ಸ್ವಾಗತಿಸಿದರು. ಶಿವಲಿಂಗಯ್ಯ ಕಾರ್ಯಕ್ರಮ ನಿರೂಪಿಸಿದರು. ರಂಗಭೂಮಿ, ಸಾಹಿತ್ಯ, ಚಲನಚಿತ್ರ ಕ್ಷೇತ್ರದ ಹಲವಾರು ಜನರು ಭಾಗವಹಿಸಿದ್ದರು. 

ಸಾರ್ಥಕ ಜೀವನ ನಡೆಸಿಕೊಂಡು ಬಂದಿದ್ದೇನೆ. ಸಮ್ಮಾನದ ಹಿಂದೆ ಓಡಿ ಹೋಗಿಲ್ಲ. ನಾನು ಸಂಘ ಜೀವಿ. ಹಾಗೇ ಭಾವಜೀವಿ ಕೂಡ. ಆದರೆ “ಬುದ್ಧಿ ಜೀವಿ’ ಅಲ್ಲ. ಕಾವೇರಿಗಾಗಿ ಧ್ವನಿ ಎತ್ತುವ ಕರ್ನಾಟಕದ ಜನ ಕಾಸರಗೋಡಿಗಾಗಿ ಧ್ವನಿ ಎತ್ತಿದರೆ ಅಲ್ಲಿನ ಕನ್ನಡಿಗರಲ್ಲಿ ಭಾಷಾ ಅಲ್ಪಸಂಖ್ಯಾಕರು ಎಂಬ ಅನಾಥ ಪ್ರಜ್ಞೆ  ದೂರವಾಗಲಿದೆ. 
– ಕಾಸರಗೊಡು ಚಿನ್ನಾ

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.