ಕೂಡ್ಲು ಗ್ರಾಮ ಕಚೇರಿಯಲ್ಲಿ ನೌಕರರ ಕೊರತೆ; ಜನರಿಗೆ ಸಂಕಷ್ಟ


Team Udayavani, Sep 28, 2018, 6:00 AM IST

27ksde4.jpg

ಕನಿಷ್ಠ 9 ಮಂದಿ ಅಧಿಕಾರಿಗಳು ಇರಬೇಕಾಗಿದ್ದ ಇಲ್ಲಿ ಈಗ ಇರುವುದು ಕೇವಲ ಮೂರು ಮಂದಿ ಮಾತ್ರ. ರೆವೆನ್ಯೂ ರಿಕವರಿ ನೋಟಿಸ್‌, ಕಟ್ಟಡ ತೆರಿಗೆ, ಆಡಂಬರ ತೆರಿಗೆ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ , ರೀ ಸರ್ವೇ, ಆರ್‌ಡಿಒ ಕಚೇರಿ ೆಗಳಿಂದ ಅಸಂಖ್ಯಾಕ ನೋಟಿಸುಗಳು ಈ ಗ್ರಾಮ ಕಚೇರಿಗೆ ಬರುತ್ತಿರುತ್ತವೆ. ಆದರೆ ಇದರ ವಿಳಾಸ ಪತ್ತೆಹಚ್ಚಿ  ಸಂಬಂಧಪಟ್ಟವರಿಗೆ ನೋಟೀಸು ರೂಪದಲ್ಲಿ ನೀಡಲು ಕೂಡ ಈಗ ಇಲ್ಲಿ  ಅಗತ್ಯದ ಸಿಬಂದಿಯಿಲ್ಲ.

ಕಾಸರಗೋಡು: ಕಾಸರಗೋಡು ನಗರ ಸಮೀಪದ ಎರಿಯಾಲ್‌ನಲ್ಲಿರುವ ಕೂಡ್ಲು ಗ್ರೂಪ್‌ ವಿಲ್ಲೇಜ್‌ ಆಫೀಸ್‌ (ಗ್ರಾಮ ಕಚೇರಿ) ವಿಭಜಿಸಬೇಕೆಂದು ಇಲ್ಲಿನ ಜನರು ಕಳೆದ ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಜತೆಗೆ ಈ ಗ್ರಾಮ ಕಚೇರಿಯಲ್ಲಿ  ನೌಕರರ ಸಂಖ್ಯೆಯೂ ತೀರಾ ಕಡಿಮೆಯಿದೆ. ಅವಶ್ಯಕತೆಗೆ ಬೇಕಾದಷ್ಟು ನೌಕರರನ್ನು  ನೇಮಕಾತಿ ಮಾಡದಿರುವುದರಿಂದ ವಿವಿಧ ಅಗತ್ಯಗಳಿಗೆ ಇಲ್ಲಿಗೆ ಆಗಮಿಸುವ ಜನರು ತೀವ್ರ ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಇದು ವ್ಯಾಪಕ ಪ್ರತಿಭಟನೆಗೂ ಕಾರಣವಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಅತೀ ಹೆಚ್ಚು ಮನೆಗಳು ಮತ್ತು  ಕಟ್ಟಡಗಳು ಇರುವ ವಿಲ್ಲೇಜ್‌ ಎಂದು ಕೇರಳ ರಾಜ್ಯ ಆಡಳಿತ ಪರಿಷ್ಕರಣೆ ಸಮಿತಿಯು ಪತ್ತೆಹಚ್ಚಿದ ಕೂಡ್ಲು  ಗ್ರಾಮವನ್ನು  ಜಿಲ್ಲಾ  ಆಡಳಿತ ವರ್ಗವು ನಿರಂತರವಾಗಿ ಕಡೆಗಣಿಸುತ್ತಿದೆ. ಮೊಗ್ರಾಲ್‌ ಪುತ್ತೂರು ಪಂಚಾಯತ್‌ನ ಎಲ್ಲ  ಮತ್ತು  ಮಧೂರು ಪಂಚಾಯತ್‌ನ ಬಹುತೇಕ ಪ್ರದೇಶಗಳು ಒಳಗೊಂಡ ಈ ಗ್ರಾಮ ಕಚೇರಿಯಲ್ಲಿ ನೋಟೀಸು ಕೂಡ ನೀಡಲು ಗ್ರಾಮಾಕಾರಿಗಳೇ ಹೋಗಬೇಕಾಗುತ್ತಿರುವುದು ವಿಪರ್ಯಾಸ.

ಕಳೆದ ಒಂದು ವರ್ಷದಿಂದ ಇಲ್ಲಿನ ವಿಲೇಜ್‌ ಫೀಲ್ಡ್‌  ಅಸಿಸ್ಟೆಂಟ್‌ ಹುದ್ದೆ  ಖಾಲಿಯಾಗಿ ಉಳಿದಿದೆ. ಓರ್ವರು 2017 ಆಗಸ್ಟ್‌ನಿಂದಲೂ ಇನ್ನೋರ್ವರು 2018ರಿಂದಲೂ ಇತರ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ. ಆದರೆ ಇದಕ್ಕೆ ಬದಲಾಗಿ ಇತರ ನೌಕರರನ್ನು ನೇಮಕಾತಿ ಮಾಡಿಲ್ಲ.  ಕಾಸರಗೋಡು ಶಾಸಕರು ಹಾಗೂ ಬಿಜೆಪಿ ಸಹಿತ ವಿವಿಧ ರಾಜಕೀಯ ಪಕ್ಷಗಳ ನೇತಾರರು ಮತ್ತಿತರರು ಕಂದಾಯ ಖಾತೆ ಸಚಿವ ಇ.ಚಂದ್ರಶೇಖರನ್‌ ಸಹಿತ ಹಲವಾರು ಮಂದಿ ಸಚಿವರು, ಅಧಿಕಾರಿಗಳಿಗೆ ಕೂಡ್ಲು  ಗ್ರಾಮ ಕಚೇರಿಯನ್ನು ವಿಭಜಿಸಬೇಕು ಅಥವಾ ಹೆಚ್ಚಿನ ನೌಕರರನ್ನು  ನೇಮಕಾತಿ ಮಾಡಬೇಕು ಎಂದು ನಿರಂತರವಾಗಿ ಒತ್ತಾಯಿಸುವ ಮಧ್ಯೆ ಈಗ ಇರುವ ಹುದ್ದೆಗಳನ್ನು  ಕೂಡ ಭರ್ತಿಗೊಳಿಸಲು ಸಂಬಂಧಪಟ್ಟ  ಅಧಿಕಾರಿಗಳು ಮುಂದಾಗುತ್ತಿಲ್ಲವೆಂಬ ಆರೋಪ ಕೇಳಿಬಂದಿದೆ.

ವಿವಿಧ ಅರ್ಜಿಗಳಿಗಾಗಿ ಇಲ್ಲಿಗೆ ತಲುಪುವ ಜನರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಸ್ಥಿತಿಯುಂಟಾಗಿದೆ. ಮೊಗ್ರಾಲ್‌ ಪುತ್ತೂರು ಮತ್ತು ಶಿರಿಬಾಗಿಲುಗಳಲ್ಲಿ  ರೀಸರ್ವೇ ಕುರಿತಾದ ದೂರುಗಳನ್ನು  ಇಲ್ಲಿನ ವಿಲ್ಲೇಜ್‌ ಆಫೀಸರ್‌ಗೆ ವಹಿಸಿಕೊಟ್ಟ  ಬಳಿಕ ಇಲ್ಲಿರುವ ನೌಕರರ ಸಂಕಷ್ಟ  ಇಮ್ಮಡಿಯಾಗಿದೆ.
 
ಈಗ ಇರುವ 3 ಮಂದಿ ನೌಕರರು ರಾತ್ರಿ ಹಗಲು ಕಷ್ಟಪಟ್ಟು  ಸರಕಾರಿ ವಿಷಯಗಳಿಗೆ ಮತ್ತು  ಜನರ ಸಮಸ್ಯೆಗಳಿಗೆ ಒಂದು ಹಂತದವರೆಗೆ ಪರಿಹಾರ ಕಲ್ಪಿಸುತ್ತಿದ್ದಾರೆ.

ಇಷ್ಟೆಲ್ಲಾ ಸಂಕಷ್ಟಗಳ ಮಧ್ಯೆಯೂ 2018ನೇ ಜನವರಿಯಿಂದ ತೊಡಗಿ ಇದುವರೆಗೆ 12,000ದಷ್ಟು  ಸರ್ಟಿಫಿಕೇಟ್‌ಗಳನ್ನು ವಿತರಿಸಲಾಗಿದೆ. ಇಲ್ಲಿಗೆ ತಲುಪುವ ಜನರ ಸಮಸ್ಯೆಗಳಿಗೆ ಸಂಬಂಧಪಟ್ಟವರು ತುರ್ತು ಪರಿಹಾರ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ವಿವಿಧ ಜನಪರ ಸಂಘಟನೆಗಳು ಮುನ್ನೆಚ್ಚರಿಕೆ ನೀಡಿವೆ.

ಅಪಾರ ವಿಸ್ತೀರ್ಣದ ಭೂಪ್ರದೇಶ : ವಿದ್ಯಾನಗರದಲ್ಲಿರುವ ನಗರಸಭಾ ಕ್ರೀಡಾಂಗಣದಿಂದ ತೊಡಗಿ ಸೀತಾಂಗೋಳಿಯ ಕಿನ್‌ಫ್ರಾ ಪಾರ್ಕ್‌ ತನಕವೂ ರಾಷ್ಟ್ರೀಯ ಹೆದ್ದಾರಿಯಲ್ಲಿ  ಅಡ್ಕತ್ತಬೈಲಿನಿಂದ ತೊಡಗಿ ಮೊಗ್ರಾಲ್‌ ಸೇತುವೆ ವರೆಗೂ ಇರುವ ಪ್ರದೇಶಗಳು ಈ ಗ್ರಾಮ ಕಚೇರಿಗೆ ಒಳಪಟ್ಟಿವೆ. ಕಾಸರಗೋಡು ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ  22 ಮತಗಟ್ಟೆಗಳು ಈ ಗ್ರಾಮ ಕಚೇರಿಯ ವ್ಯಾಪ್ತಿಯಲ್ಲಿ  ಸೇರಿವೆ. ಈ ಮೂಲಕ ಕೂಡ್ಲು  ಗ್ರಾಮ ಕಚೇರಿಗೆ ಅಪಾರ ಭೂಪ್ರದೇಶವು ಒಳಪಟ್ಟಿದ್ದು, ಇಲ್ಲಿನ ಅಧಿಕಾರಿಗಳು ಮತ್ತು ನೌಕರರು ಹೊರಲಾರದಷ್ಟು  ಕೆಲಸದ ಹೊರೆಯನ್ನು  ಹೊರಬೇಕಾಗುತ್ತಿದೆ. ಇದರಿಂದಾಗಿ ಯಾವುದೇ ಕೆಲಸಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಬಗ್ಗೆ  ಕಂದಾಯ ಸಚಿವರೇ ನೇರವಾಗಿ ಗಮನಿಸಿ ಸರಿಯಾದ ವ್ಯವಸ್ಥೆ  ಕಲ್ಪಿಸಬೇಕಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.