ಆರಂಭ‌ವಾಗದ ರಬ್ಬರ್‌ ಟ್ಯಾಪಿಂಗ್‌: ಲಕ್ಷಾಂತರ ರೂ. ನಷ್ಟ


Team Udayavani, Oct 3, 2018, 1:35 AM IST

rubber-tapping-3-10.jpg

ಕಾಸರಗೋಡು: ಕೇರಳ ಪ್ಲಾಂಟೇಶನ್‌ ಕಾರ್ಪೊರೇಷನ್‌ನ ಬೋವಿಕ್ಕಾನ ಎಸ್ಟೇಟ್‌ನಲ್ಲಿರುವ ರಬ್ಬರ್‌ ಮರಗಳಿಂದ ಟ್ಯಾಪಿಂಗ್‌ ಆರಂಭಗೊಳ್ಳದೆ ಕೇರಳ ತೋಟಗಾರಿಕಾ ನಿಗಮಕ್ಕೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಮಾತ್ರವಲ್ಲದೆ ಸುಮಾರು 10 ವರ್ಷ ಕಳೆದರೂ ಈ ತನಕ ಟ್ಯಾಪಿಂಗ್‌ ನಡೆಯದ ರಬ್ಬರ್‌ ತೋಟಗಳೂ ತೋಟಗಾರಿಕಾ ನಿಗಮದ ವ್ಯಾಪ್ತಿಯಲ್ಲಿವೆ. ಇದರಿಂದ ಸುಮಾರು 100ಕ್ಕಿಂತಲೂ ಹೆಚ್ಚು ಮಂದಿ ಕಾರ್ಮಿಕರಿಗೆ ಲಭಿಸಬೇಕಾದ ಕೆಲಸವೂ ನಷ್ಟವಾಗಿದೆ. ಎಸ್ಟೇಟ್‌ನಲ್ಲಿದ್ದ ಗೇರು ಮರಗಳನ್ನು ಕಡಿದು ಸುಮಾರು 500 ಹೆಕ್ಟೇರ್‌ ಜಾಗದಲ್ಲಿ ಪ್ಲಾಂಟೇಶನ್‌ ಕಾರ್ಪೊರೇಷನ್‌ ರಬ್ಬರ್‌ ಗಿಡಗಳನ್ನು ನೆಟ್ಟು ಬೆಳೆಸುತ್ತಿದೆ.

10 ವರ್ಷ ಕಳೆದರೂ ಟ್ಯಾಪಿಂಗ್‌ ಆರಂಭಗೊಂಡಿಲ್ಲ
2008ರಿಂದ 2012ರ ಅವಧಿಯಲ್ಲಿ ರಬ್ಬರ್‌ ಗಿಡಗಳನ್ನು ನೆಟ್ಟು ಬೆಳೆಸಲಾಗಿದೆ. ಕಾಸರಗೋಡು ಪ್ಲಾಂಟೇಶನ್‌ ಡಿವಿಜನ್‌ನ ಚಾಕೂಮೂಲೆ ಬ್ಲಾಕ್‌ನಲ್ಲಿ 2008ರಲ್ಲಿ  ರಬ್ಬರ್‌ ಕೃಷಿ ಆರಂಭಿಸಲಾಗಿದೆ. 33,577 ಸಸಿಗಳನ್ನು ಇಲ್ಲಿ ನೆಟ್ಟು ಪೋಷಿಸಲಾಗಿದೆ. ಇದೀಗ 10 ವರ್ಷ ಕಳೆದರೂ ಇಲ್ಲಿ ಟ್ಯಾಪಿಂಗ್‌ ಆರಂಭಗೊಂಡಿಲ್ಲ. ಆರು ವರ್ಷದಿಂದ ಏಳು ವರ್ಷಕ್ಕೆ ಆರಂಭಿಸಬೇಕಾದ ಟ್ಯಾಪಿಂಗ್‌ ನಡೆಸದೆ ಇರುವುದರಿಂದ ಕಾರ್ಪೊರೇಷ‌ನ್‌ಗೆ ಭಾರೀ ನಷ್ಟ ಸಂಭವಿಸಿದೆ.

ಇದೇ ರೀತಿಯಲ್ಲಿ 2009ರಿಂದ 2012ರವರೆಗೆ ಪೆರ್ಲ ಬ್ಲಾಕ್‌ನ ಸರ್ಪಮಲೆ, ಸಾಯ, ಪೆರಡಾಲ, ಪೆರಿಯಲ್ತಡ್ಕ, ಪುತ್ರಕಳ ಡಿವಿಜನ್‌ಗಳಲ್ಲಿ 60 ಸಾವಿರ ಮರಗಳು, ಕಾಸರಗೋಡು ಬ್ಲಾಕ್‌ ವ್ಯಾಪ್ತಿಯಲ್ಲಿ 15 ಸಾವಿರ ಗಿಡಗಳು, ಆಲೂರು ಬ್ಲಾಕ್‌ನಲ್ಲಿ 24 ಸಾವಿರ ಗಿಡಗಳನ್ನು ನೆಟ್ಟು ಬೆಳೆಸಲಾಗಿದೆ. ಇವುಗಳ ಪೈಕಿ ಆಲೂರು ಬ್ಲಾಕ್‌ ಹೊರತುಪಡಿಸಿ ಉಳಿದೆಲ್ಲ  ಕಡೆಗಳಲ್ಲಿ ರಬ್ಬರ್‌ ಗಿಡಗಳು ಟ್ಯಾಪಿಂಗ್‌ ನಡೆಸಲು ಸಿದ್ಧವಾಗಿದ್ದರೂ ಆರಂಭಗೊಂಡಿಲ್ಲ. ಏಳು ವರ್ಷ ಪೂರ್ತಿಯಾದ ರಬ್ಬರ್‌ ಮರಗಳನ್ನು  ಟ್ಯಾಪಿಂಗ್‌ ನಡೆಸಬಹುದು ಎಂಬುದು ರಬ್ಬರ್‌ ಮಂಡಳಿಯ ವ್ಯವಸ್ಥೆಯಾಗಿದೆ. ಆದರೆ ಪೆರ್ಲ ಡಿವಿಜನ್‌ನ ಚೋಕುಮೂಲೆ ಬ್ಲಾಕ್‌ನಲ್ಲಿ ಟ್ಯಾಪಿಂಗ್‌ಗಾಗಿ 2017ರಲ್ಲಿ  ಮರಗಳಿಗೆ ಮಾರ್ಕ್‌ ಹಾಕಲಾಗಿತ್ತಾದರೂ ಟ್ಯಾಪಿಂಗ್‌ ನಡೆಯಲಿಲ್ಲ.

ಎಲ್ಲ ಕಡೆಗಳಲ್ಲಿ ಟ್ಯಾಪಿಂಗ್‌ ಆರಂಭಿಸಿದರೆ ಸುಮಾರು 100 ಮಂದಿ ಕಾರ್ಮಿಕರಿಗೆ ಕೆಲಸ ನೀಡಬಹುದು. ಟ್ಯಾಪಿಂಗ್‌ ಆರಂಭಿಸಲು ಕಾರ್ಮಿಕರ ನೇಮಕ, ರಬ್ಬರ್‌ ಶೀಟ್‌ ಯಂತ್ರ ಸಹಿತ ಇತರ ಸೌಕರ್ಯಗಳನ್ನು ಮೊದಲು ಕಲ್ಪಿಸಬೇಕಾಗಿದೆ. ಇದಿಲ್ಲದಿದ್ದರೆ ಟ್ಯಾಪಿಂಗ್‌ ಕೈಗೊಳ್ಳಲು ಸಾಧ್ಯವಾಗದು. ಟ್ಯಾಪಿಂಗ್‌ ಪ್ರಾಯ ಕಳೆದ ರಬ್ಬರ್‌ ಮರಗಳನ್ನು ಸರಿಯಾಗಿ ನೋಡಿಕೊಳ್ಳದೆ ತೋಟ ಸಹ ಉತ್ತಮವಾಗಿಲ್ಲ. ಕೀಟನಾಶಕ ಸಿಂಪಡಣೆ ಸಹಿತ ಸರಿಯಾದ ಪೋಷಣೆ ಇಲ್ಲದೆ ರಬ್ಬರ್‌ ತೋಟಗಳನ್ನು ಪ್ರಯೋಜನವಿಲ್ಲದ ರೀತಿಯಲ್ಲಿ ನಾಶದಂಚಿಗೆ ತಳ್ಳುವುದರಲ್ಲಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎನ್ನಲಾಗುತ್ತಿದೆ.

ಜಿಲ್ಲೆಯಲ್ಲಿ ರಬ್ಬರ್‌ ಇಳುವರಿ ಕಡಿಮೆ 
ಕಾಸರಗೋಡು ಜಿಲ್ಲೆಯಲ್ಲಿ ರಬ್ಬರ್‌ ಇಳುವರಿ ಕಡಿಮೆಯಾಗಿದೆ. ಕೇರಳದ ಇತರ ಜಿಲ್ಲೆಗಳಲ್ಲಿ ರಬ್ಬರ್‌ ಹೇರಳ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈ ಮಧ್ಯೆ ತೋಟಗಾರಿಕಾ ನಿಗಮಕ್ಕೆ ಸೇರಿದ ರಬ್ಬರ್‌ ತೋಟಗಳು ಜಿಲ್ಲೆಯಲ್ಲಿ ವಿನಾಶದಂಚಿಗೆ ಸಾಗುತ್ತಿವೆ. ಅವುಗಳ ಪಾಲನೆ ಕೂಡ ಸರಿಯಾದ ರೀತಿಯಲ್ಲಿ ನಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.