“ಸ್ಕೌಟಿಂಗ್‌ ಚಳವಳಿಯ ಅನುಭವ ಸಮಾಜಕ್ಕೆ ದಾರಿದೀಪವಾಗಲಿ’​​​​​​​


Team Udayavani, Oct 6, 2018, 6:55 AM IST

05ksde10a.jpg

ಕಾಸರಗೋಡು: ಕಾಸರಗೋಡು ಸಾವಿರಾರು ಮಕ್ಕಳಿಗೆ ಸ್ಕೌಟಿಂಗ್‌ ಎಂಬ ಪಾವನವಾದ ಚಳವಳಿಯ ಅನುಭವವನ್ನು ನೀಡಿ ಸಮಾಜಕ್ಕೆ ದಾರಿದೀಪವಾಗಲಿ ಎಂದು ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್‌ ಹೇಳಿದರು.

ಅವರು ಪೇರಾಲು ಸರಕಾರಿ ಕಿರಿಯ ಬುನಾದಿ ಶಾಲೆಯಲ್ಲಿ ನಡೆಯುತ್ತಿರುವ ಏಳು ದಿನಗಳ ಸ್ಕೌಟ್‌ ಅಧ್ಯಾಪಕರ ಮೂಲ ತರಬೇತಿ ಶಿಬಿರಕ್ಕೆ ಭೇಟಿ ನೀಡಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ತರಬೇತಿಯಲ್ಲಿ ಪಾಲ್ಗೊಳ್ಳುತ್ತಿರುವ ಅಧ್ಯಾಪಕರ ತ್ಯಾಗವನ್ನು ಎಷ್ಟು ಕೊಂಡಾಡಿದರೂ ಸಾಲದು. ಯಾವು ದೇ ಪ್ರತಿಫಲ ಸಿಗದ ಚಳವಳಿ ಎಂದು ಸ್ಪಷ್ಟ ಗೊತ್ತಿದ್ದರೂ ಮುಂದಿನ ಪ್ರಜೆಗಳಾಗಲಿರುವ ಮಕ್ಕಳಿಗೆ ಜೀವನ ಪಾಠವನ್ನು ನೈಜ ಚಟುವಟಿಕೆಗಳ ಮೂಲಕ ನೀಡುವುದರ ಬಗ್ಗೆ ಹೊಸ ಅರಿವನ್ನು ಪಡೆಯಲು ಬಂದಿರುವುದು ಹೆಮ್ಮೆಯಾಗಿದೆ. ಡೇರೆಯಲ್ಲಿ ಮಲಗಿ ಮುಂಜಾವದಿಂದ ತಡರಾತ್ರಿಯ ವರೆಗೆ ನಿರಂತರ ಚಟುವಟಿಕೆಗಳಲ್ಲಿ ನಿರತರಾಗಿ ನೀಡಲಾಗುವ ತರಬೇತಿ ವಿಚಾರಗಳನ್ನು ಸ್ವತ: ಅನುಭವಸಿ ಕಲಿಯುವ ವೈಶಿಷ್ಟÂಪೂರ್ಣವಾದ ತರಬೇತಿಯಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯ ಎಂದರು.

ಶಿಬಿರವನ್ನು ಶಾಲಾ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಮುಹಮ್ಮದ್‌ ಬಿ.ಎ. ಪೇರಾಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ ಉದ್ಘಾಟಿಸಿದರು. 

ಪಟಾಲಂ ಎಂದು ಕರೆಯಲಾಗುವ ಆರರಿಂದ ಎಂಟು ಮಂದಿಯ ಗುಂಪುಗಳಲ್ಲಿ ಡೇರೆಯಲ್ಲಿ ವಾಸ ಮಾಡಿಕೊಂಡು ಸ್ಕೌಟು ಅಧ್ಯಾಪಕರ ಪ್ರಾಥಮಿಕ ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಗಂಟುಗಳು, ಪ್ರಥಮ ಚಿಕಿತ್ಸೆ, ಬ್ಯಾಂಡೇಜು ಕಟ್ಟುವುದು, ತೆರವಾದ ಸ್ಥಳದಲ್ಲಿ ಬೆಂಕಿ ಮಾಡುವುದು ಮತ್ತು ಅಗ್ನಿ ಬಾಧೆಯ ಶಮನ, ದಿಕ್ಚಕ್ರದ  ಉಪಯೋಗ, ಅಂದಾಜು ಮಾಡುವುದು, ಸಿಗ್ನಲಿಂಗ್‌, ಟ್ರೂಪ್‌ ಮೀಟಿಂಗ್‌ , ಪಥಸಂಚಲನ, ಬಿಪಿಯವರ ಆರು ವ್ಯಾಯಾಮಗಳು ಮೊದಲಾದ ವಿಷಯಗಳನ್ನು ಸ್ವತ: ಮಾಡಿ ಕಲಿಯುತ್ತಿದ್ದಾರೆ.

ಶಿಬಿರದ ಅಂಗವಾಗಿ ಸ್ವತ: ತೆರವಾದ ಸ್ಥಳದಲ್ಲಿ ಅಡುಗೆ ಮಾಡಿ ಆಹಾರ ಸೇವನೆ, ಶಿಬಿರಾಗ್ನಿ ಇತ್ಯಾದಿ ಕಾರ್ಯಕ್ರಮಗಳಿರುತ್ತವೆ.
ಕುಂಬಳೆ ಗ್ರಾಮ ಪಂಚಾಯತ್‌ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಕೆ.ಆರಿಫ್‌, ಹಮೀದಾಲಿ, ಕುಂಬಳೆ ಗ್ರಾಮ ಪಂಚಾಯತ್‌ ಸದಸ್ಯ  ವಿ.ಪಿ. ಅಬ್ದುಲ್‌ ಖಾದರ್‌ ಹಾಜಿ, ಕಾಸರಗೋಡು ಉಪಜಿಲ್ಲಾ ವಿದ್ಯಾಧಿ ಕಾರಿ ಅಗಸ್ಟಿನ್‌ ಬರ್ನಾಡ್‌, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ ಕೆ. ಮೊದಲಾದವರು ಶಿಬಿರಕ್ಕೆ ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಶುಭಹಾರೈಸಿರುವರು. ಸರ್ವ ಧರ್ಮ ಪ್ರಾರ್ಥನೆ ಹಾಗೂ ಧ್ವಜಾವರೋಹಣದೊಂದಿಗೆ ಶಿಬಿರ ಸಮಾರೋಪಗೊಂಡಿತು.

ಶಿಬಿರದಲ್ಲಿ 32 ಅಧ್ಯಾಪಕ-ಅಧ್ಯಾಪಕಿಯರು
ಕಾಸರಗೋಡು ಮತ್ತು ಕಾಂಞಂಗಾಡು ಶಿಕ್ಷಣ ಜಿಲ್ಲೆಗಳ ವಿವಿಧ ಶಾಲೆಗಳಿಂದ ಆಗಮಿಸಿದ 32 ಮಂದಿ ಅಧ್ಯಾಪಕರು ಮತ್ತು ಅಧ್ಯಾಪಕಿಯರು ಉತ್ಸಾಹದಿಂದ ಶಿಬಿರದಲ್ಲಿ ಭಾಗವಹಿಸಿ ವೈವಿಧ್ಯಮಯ ವಿಚಾರಗಳನ್ನು ಮನನ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲಾ ಸ್ಕೌಟು ವಿಭಾಗದ ಆಯುಕ್ತ ಗುರುಮೂರ್ತಿ ನಾಯ್ಕಪು ಅವರ ನೇತೃತ್ವದಲ್ಲಿ ನಡೆಯುತ್ತಿರುವ ಏಳು  ದಿನಗಳ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯುವುದಕ್ಕಾಗಿ ಕೂಡ್ಲು ಗೋಪಾಲಕೃಷ್ಣ ಪ್ರೌಢಶಾಲಾ ಸ್ಕೌಟು ಅಧ್ಯಾಪಕ ಕಿರಣ್‌ ಪ್ರಸಾದ್‌ ಪಿ.ಜಿ., ಮಧೂರು ಸರಕಾರಿ ಶಾಲಾ ಮುಖ್ಯ ಶಿಕ್ಷಕ ವಿನೋದ್‌ ಕುಮಾರ್‌, ಕಾಟುಕುಕ್ಕೆ ಶಾಲಾ ಅಧ್ಯಾಪಕ ವಿಜಯಕುಮಾರ್‌, ಕುಂಟಿಕಾನ ಶಾಲಾ ಅಧ್ಯಾಪಕ ಪ್ರಶಾಂತ್‌ ಕುಮಾರ್‌ ಕಾಲಿಚ್ಚಾನಡ್ಕ ಶಾಲಾ ಅಧ್ಯಾಪಕ ವಿ.ಕೆ ಭಾಸ್ಕರನ್‌ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.