ಶಬರಿಮಲೆ: ಅಲ್ಲಲ್ಲಿ ರಾ. ಹೆದ್ದಾರಿ ತಡೆ ಚಳವಳಿ


Team Udayavani, Oct 11, 2018, 6:00 AM IST

10ksde10.jpg

ಕಾಸರಗೋಡು: ಶಬರಿಮಲೆ ದೇಗುಲಕ್ಕೆ ಎಲ್ಲ ವಯೋಮಿತಿಯ ಮಹಿಳೆಯರಿಗೆ ಪ್ರವೇಶ ನೀಡಲು ಸರಕಾರ ನಡೆಸುತ್ತಿರುವ ಪ್ರಯತ್ನವನ್ನು ಪ್ರತಿಭಟಿಸಿ ವಿವಿಧ ಹಿಂದೂ ಸಂಘಟನೆಗಳು ಹಾಗೂ ಅಯ್ಯಪ್ಪ ಸೇವಾ ಸಮಾಜ ಹೋರಾಟ ವನ್ನು ತೀವ್ರಗೊಳಿಸಿದೆ. 

ಇದರಂಗವಾಗಿ ಬುಧವಾರ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಯಿತು.ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿಯನ್ನು ಬಾಲಕೃಷ್ಣನ್‌ ನಂಬ್ಯಾರ್‌ ಉದ್ಘಾಟಿಸಿದರು. ಉಪ್ಪಳ ರಾಷ್ಟ್ರೀಯ ಹೆದ್ದಾರಿ ಯಲ್ಲಿ ನಡೆದ ರಸ್ತೆ ತಡೆಯನ್ನು ವೀರಪ್ಪ ಅಂಬಾರು ಉದ್ಘಾಟಿಸಿದರು. 

ಪೊಯಿನಾಚಿಯಲ್ಲಿ ಸ್ವಾಮಿ ಪ್ರೇಮಾನಂದ, ಕಾಂಞಂಗಾಡ್‌ನ‌ಲ್ಲಿ ಕ್ಷೇತ್ರ ಸಂರಕ್ಷಣ ಸಮಿತಿಯ ರಾಜ್ಯ ಸಮಿತಿ ಸದಸ್ಯ ನಾರಾಯಣನ್‌ ಮತ್ತು ವೆಳ್ಳರಿಕುಂಡುನಲ್ಲಿ ಗೋವಿಂದನ್‌ ಮಾಸ್ಟರ್‌ ಉದ್ಘಾಟಿಸಿದರು.
 
ಬೆಳಗ್ಗೆ 10ರಿಂದ  ಮಧ್ಯಾಹ್ನ 12ರ ಮಧ್ಯೆ ರಾಜ್ಯಾದ್ಯಂತ  ರಸ್ತೆ ತಡೆ ಚಳವಳಿ  ನಡೆಯಿತು.  ಮಹಿಳೆಯರ ಸಹಿತ ನೂರಾರು ಮಂದಿ ರಸ್ತೆ ತಡೆ ಚಳವಳಿಯಲ್ಲಿ ಭಾಗವಹಿಸಿದರು.

ದೇಗುಲಕ್ಕೆ ಎಲ್ಲ ವಯೋಮಿತಿಯ ಮಹಿಳೆಯರಿಗೆ ಪ್ರವೇಶಾವಕಾಶ ನೀಡಿದ ಸುಪ್ರೀಂ ಕೋರ್ಟ್‌  ತೀರ್ಪನ್ನು ಜಾರಿಗೊಳಿಸಲು ಯತ್ನಿಸುತ್ತಿರುವ ರಾಜ್ಯ ಸರಕಾರದ ನೀತಿಯನ್ನು ಪ್ರತಿಭಟಿಸಿ   ಕಾಸರಗೋಡು ಜಿಲ್ಲೆ ಸಹಿತ ರಾಜ್ಯದ ಇನ್ನೂರು ಕೇಂದ್ರಗಳಲ್ಲಿ ವಿವಿಧ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ರಸ್ತೆ ತಡೆ ಚಳವಳಿ ನಡೆಯಿತು.

ಬಿಜೆಪಿ ನೇತೃತ್ವದ   ಎನ್‌ಡಿಎ ಆಶ್ರಯದಲ್ಲಿ ಪಂದಳಂ ನಿಂದ ತಿರುವನಂತಪುರದ ಸೆಕ್ರೆಟರಿಯೇಟ್‌ ತನಕ ಲಾಂಗ್‌ ಮಾರ್ಚ್‌ ಆರಂಭಗೊಂಡಿತು. ಎಸ್‌ಎನ್‌ಡಿಪಿ ಯೋಗಂ ಪ್ರಧಾನ ಕಾರ್ಯದರ್ಶಿ ವೆಳ್ಳಾಪಳ್ಳಿ ನಟೇಶನ್‌ ನಿಲುವಿಗೆ ವಿರುದ್ಧವಾಗಿ ಬಿಡಿಜೆಎಸ್‌ ಅಧ್ಯಕ್ಷ ತುಷಾರ್‌ ವೆಳ್ಳಾಪಳ್ಳಿ ಎನ್‌ಡಿಎಯ ಲಾಂಗ್‌ ಮಾರ್ಚ್‌ನಲ್ಲಿ ಭಾಗವಹಿಸಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.