ಯಕ್ಷಗಾನ ಜಗತ್ತಿನೆಲ್ಲೆಡೆ ಜನಪ್ರಿಯತೆಗಳಿಸಿದೆ: ಮಯ್ಯ


Team Udayavani, Oct 12, 2018, 6:05 AM IST

11ksde11.jpg

ಬದಿಯಡ್ಕ: ಹಿರಿಯರ ತ್ಯಾಗದ ಸಂಕೇತವಾಗಿ ಶ್ರೀಮಂತ ಕಲಾ ಪ್ರಕಾರವಾದ ಯಕ್ಷಗಾನ ಇಂದು ಜಗದಗಲ ವ್ಯಾಪಿಸಿ ಜನಪ್ರಿಯತೆ ಗಳಿಸಿದೆ. ಯಕ್ಷಗಾನ ಕೇವಲ ಮನೋರಂಜನೆ ಮಾತ್ರವಲ್ಲದೆ ಅದನ್ನು ಆರಾಧನೆಯಾಗಿ ತಪಸ್ಸಿನಂತೆ ಸೇವಿಸುವುದರ ಪರಿಣಾಮ ಪರಂಪರೆ, ಶಾಸ್ತ್ರೀಯತೆಯ ಚೌಕಟ್ಟಿನಡಿ ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ಖ್ಯಾತ ಯುವ ಭಾಗವತ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಲ್ಲಂಗಾನದ ಶ್ರೀ ನಿಲಯ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಆರಂಭಗೊಂಡ ನವರಾತ್ರಿ ಮಹೋತ್ಸವದ ಅಂಗವಾಗಿ ಸ್ಥಳೀಯ ಶ್ರೀ ಸುಬ್ರಹ್ಮಣ್ಯ ಕಲಾಸಂಘದ 30ನೇ ವಾರ್ಷಿಕೋತ್ಸವದ ಭಾಗವಾಗಿ ಹಮ್ಮಿಕೊಂಡ ಯಕ್ಷ ದಶ ವೈಭವ ಕಾರ್ಯಕ್ರಮಕ್ಕೆ ಬುಧವಾರ ರಾತ್ರಿ ದೀಪ ಬೆಳಗಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಕೊಲ್ಲಂಗಾನದ ಶ್ರೀ ಚಕ್ರ ಆರಾಧನೆ ಮತ್ತು ಯಕ್ಷಾರಾಧನೆ ಸಮಾಜವನ್ನು ಸತ್ಪಥದತ್ತ ಮುನ್ನಡೆಸುವಲ್ಲಿ ಕ್ರಿಯಾತ್ಮಕ ಪರಿಣಾಮ ಬೀರಿದೆ. ಯಕ್ಷಗಾನವನ್ನು ಮುನ್ನಡೆಸುತ್ತಿರುವ ಶ್ರೀ ಕ್ಷೇತ್ರದ ಕೊಡುಗೆಗಳು ಯಕ್ಷಗಾನಕ್ಕೆ ಮನ್ನಣೆಯನ್ನು ತಂದುಕೊಡುತ್ತಿದೆ ಎಂದು ಅವರು ಈ ಸಂದರ್ಭ ತಿಳಿಸಿದರು.

ಉಪಸ್ಥಿತರಿದ್ದು ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಕ್ಷೇತ್ರ ಕೊಲ್ಲಂಗಾನದ ಬ್ರಹ್ಮಶ್ರೀ ಗಣಾಧಿರಾಜ ಉಪಾಧ್ಯಾಯ ಅವರು, ಕಲೆ, ಕಲಾವಿದರನ್ನು ಪೋಷಿಸುವ ಸಮಾಜ ಗಟ್ಟಿಯ ನೆಲೆಗಟ್ಟನ್ನು ಹೊಂದಿರುತ್ತದೆ. ಇಂದು ಸವಾಲುಗಳ ಮಧ್ಯೆ ತೊಳಲುವ ನಮಗೆ ಪರಂಪರೆ ಸಾಗಿಬಂದ ಇತಿಹಾಸದ ಮೆಲುಕುಗಳು ಬೆರಗು ಮೂಡಿಸುತ್ತದೆ. ಆದರೆ ಅಂತಹ ಭವ್ಯ ಪರಂಪರೆಯನ್ನು ಮತ್ತೆ ಸಾಕ್ಷಾತ್ಕರಿಸುವ ನಿಟ್ಟಿನ ಯತ್ನಗಳು ಕೈಗೂಡುವುದಿಲ್ಲ. ಅಧ್ಯಾತ್ಮ ಮತ್ತು ನಂಬಿಕೆ ಗಳನ್ನು ಮೈಗೂಡಿಸದ ಹೊರತು ಅದು ಸಾಧ್ಯವಾಗದು. ಈ ನಿಟ್ಟಿನಲ್ಲಿ ಸಾಧ್ಯತೆ ಗಳಿಗೆ ಯಕ್ಷಗಾನ ಕಲೆಗೆ ಸಾಧ್ಯ ವಿದೆ ಎಂದು ತಿಳಿಸಿ ದರು. ತಮ್ಮ ಹಿರಿಯರ ಒತ್ತಾಸೆಯಿಂದ ನಡೆದುಬಂದ ಯಕ್ಷಾ ರ್ಚನೆಯನ್ನು ಸಹೃದಯರ ನೆರವಿ ನೊಂದಿಗೆ ಮುನ್ನಡೆ ಸಲು ಸಾಧ್ಯವಾಗಿರುವುದು ಭರವಸೆ ಮೂಡಿಸಿದೆ ಎಂದು ಅವರು ಈ ಸಂದರ್ಭ ತಿಳಿಸಿದರು.

ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಅವರು ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ಬಾಗಲ ಕೋಟೆಯ ಶ್ರೀ ವರದಹಸ್ತ  ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ರಾಘವೇಂದ್ರ ಫತ್ತೇಪೂರ್‌ ಅವರು ಈ ಸಂದರ್ಭ ಮಾತನಾಡಿ, ರಾಷ್ಟ್ರಾದ್ಯಂತ ವಿವಿಧ ಆಯಾಮಗಳಲ್ಲಿ ಆಚರಿಸಲ್ಪಡುವ ನವರಾತ್ರಿ ಹಬ್ಬವು ಋಣಾತ್ಮಕತೆಯ ಮೇಲೆ ಧನಾತ್ಮಕತೆಯ ವಿಜಯದ ಸಂಕೇತವಾಗಿದೆ. ಮನುಷ್ಯನ  ರಾಕ್ಷಸತ್ವವನ್ನು ನಾಶಗೊಳಿಸಿ,ಪ್ರೀತಿಯ ಅಂತಃಕರಣದೊಳಗೆ ಭಕ್ತಿಯ  ಸೇವೆಯ ಮೂಲಕ ಬದುಕಿನ ಸಾರ್ಥಕತೆ ಕಾಣು ವುದು ನಮ್ಮ ಸಂಸ್ಕೃತಿಯ ಶ್ರೀ ಮಂತಿಕೆಯ ಸಂಕೇತವಾಗಿದೆ. ಕರಾವಳಿಯಾದ್ಯಂತ ಜನಜನಿತ ವಾಗಿ, ಜನರೊಂದಿಗೆ ಹಾಸು ಹೊಕ್ಕಾಗಿರುವ ಯಕ್ಷಗಾನ ಕಲೆ ಯನ್ನು ಆರಾಧನೋಪಾದಿಯಲ್ಲಿ ಮುನ್ನಡೆಸು ತ್ತಿರುವ ಶ್ರೀ ಕ್ಷೇತ್ರದ ಅನನ್ಯ ಕಲಾಸೇವೆ ಸ್ತುತ್ಯರ್ಹ ಎಂದು ಶ್ಲಾಘಿಸಿದರು.

ಬದಿಯಡ್ಕ ಗ್ರಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮ್‌ ಪ್ರಸಾದ್‌ ಮಾನ್ಯ, ಮಾಜೀ ಸದಸ್ಯ ಮಂಜುನಾಥ ಡಿ. ಮಾನ್ಯ ಉಪಸ್ಥಿತರಿದ್ದು ಶುಭಹಾರೈಸಿದರು. ಕಲಾಸಂಘದ ಗೌರವಾಧ್ಯಕ್ಷ ಕುಮಾರಸ್ವಾಮಿ ಪಟ್ಟಾಜೆ ಉಪಸ್ಥಿತರಿದ್ದರು. ನಾರಾಯಣ ಮೂಲಡ್ಕ ಸ್ವಾಗತಿಸಿ, ಶ್ರೀದೀಕ್ಷಾ ವಂದಿಸಿದರು. ಭಾಗವತ ಸತೀಶ ಪುಣಿಂಚಿತ್ತಾಯ ಪೆರ್ಲ ಕಾರ್ಯಕ್ರಮ ನಿರೂಪಿಸಿದರು. ಬಾಲಕಲಾವಿದ ಸಮೃದ್ಧ ಪುಣಿಂಚತ್ತಾಯ ಯಕ್ಷಗಾನ ಭಾಗವತಿಕೆಯ ಪ್ರಾರ್ಥನಾ ಗೀತೆ ಹಾಡಿದರು.

ಬಳಿಕ ಮುಳ್ಳೇರಿಯ ಕೋಳಿಯಡ್ಕದ ಶ್ರೀ ಚಾಕಟೆ ಚಾಮುಂಡಿ ಯಕ್ಷಗಾನ ಕಲಾಸಂಘದವರಿಂದ ನರಕಾಸುರ ವಧೆ ಯಕ್ಷಗಾನ ಬಯಲಾಟ ಪ್ರದರ್ಶನ ಗೊಂಡಿತು. 

ರಾತ್ರಿ ಶ್ರೀ ನಿಲಯ ದಲ್ಲಿ ನವರಾತ್ರಿಯ ಪೂಜೆ, ಮಹಾ ಮಂಗಳಾ ರತಿ, ಪ್ರಸಾದ ವಿತರಣೆ ನಡೆಯಿತು. ಗುರು ವಾರ ಸಂಜೆ ಕುಂಟಾಲು ಮೂಲೆ ಚಿರಂಜೀವಿ ಕಲಾಸಂಘದವರಿಂದ ಭಸ್ಮಾಸುರ ಮೋಹಿನಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. 

ಶುಕ್ರವಾರ ಸಂಜೆ 6ರಿಂದ ಕುಂಟಾರು ಶ್ರೀ ಮಹಾವಿಷ್ಣುಮೂರ್ತಿ ಯಕ್ಷಗಾನ ಕಲಾಸಂಘದವರಿಂದ ಗುರು ದಕ್ಷಿಣೆ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

ಶ್ರೀ ಕ್ಷೇತ್ರ ಕೊಲ್ಲಂಗಾನದ ಶ್ರೀ ಚಕ್ರ ಆರಾಧನೆ ಮತ್ತು ಯಕ್ಷಾರಾಧನೆ ಸಮಾಜವನ್ನು ಸತ್ಪಥದತ್ತ ಮುನ್ನಡೆಸುವಲ್ಲಿ ಕ್ರಿಯಾತ್ಮಕ ಪರಿಣಾಮ ಬೀರಿದೆ. ಯಕ್ಷಗಾನವನ್ನು ಮುನ್ನಡೆಸುತ್ತಿರುವ ಶ್ರೀ ಕ್ಷೇತ್ರದ ಕೊಡುಗೆಗಳು ಯಕ್ಷಗಾನಕ್ಕೆ ಮನ್ನಣೆಯನ್ನು ತಂದುಕೊಡುತ್ತಿದೆ ಎಂದು ಮಯ್ಯ ಅವರು ತಿಳಿಸಿದರು.

ಯುವ ಭಾಗವತ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.