“ಹಿಂದೂಗಳ ಧಾರ್ಮಿಕ ಆಚರಣೆ, ಭಾವನೆಗೆ ಅಪಚಾರ’


Team Udayavani, Oct 12, 2018, 6:15 AM IST

11-kbl-2.jpg

ಕುಂಬಳೆ: ಕೇರಳ ಎಡರಂಗ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ಶಬರಿಮಲೆರಕ್ಷಣೆ, ಧಾರ್ಮಿಕ ಆಚಾರಗಳ ಸಂರಕ್ಷಣೆ ಎಂಬ ಘೋಷವಾಕ್ಯದಡಿ ಉಪ್ಪಳ ಬಸ್ಸು ನಿಲ್ದಾಣದ ಬಳಿ, ರಾಷ್ಟ್ರೀಯ ಹೆದ್ದಾರಿ ತಡೆ ಬೃಹತ್‌ ಆಂದೋಲನವು ಅಯ್ಯಪ್ಪ ಕರ್ಮ ಸಮಿತಿ, ಸಂಘ ಪರಿವಾರದ ಕಾರ್ಯಕರ್ತರಿಂದ ನಡೆಯಿತು. 

ಉಪ್ಪಳ ಅಯ್ಯಪ್ಪ ಭಜನಾ ಮಂದಿರದ ಗುರುಸ್ವಾಮಿ ಕುಟ್ಟಿಕೃಷ್ಣನ್‌ ರಸ್ತೆತಡೆ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದರು. 
ಶಬರಿಮಲೆಯಲ್ಲಿ ಎಲ್ಲ ವಯೋಮಾನದ ಸ್ತ್ರೀಯರಿಗೆ ಪ್ರವೇಶಿಸಬಹುದು ಎಂಬ ಅಧಿನಿಯಮ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ. ಸಹಸ್ರಾರು ವರ್ಷಗಳಿಂದ ನಡೆದು ಬಂದ ಆಚಾರ ಅನುಷ್ಠಾನಗಳನ್ನು ಏಕಾಏಕಿ ಇಲ್ಲವಾಗಿಸುವ ಸರಕಾರದ ನೀತಿ ಅಸಂಖ್ಯ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದರು. 

ದಕ್ಷಿಣ ಭಾರತದ ಹಲವು ರಾಜ್ಯಗಳಿಂದ ಬರುವ ಭಕ್ತಾದಿಗಳು ಶಬರಿಮಲೆಯ ಶತಮಾನದ ಆಚರಣೆಗಳನ್ನು ಚಾಚೂ ತಪ್ಪದೆ ಅನುಸರಿಸುತ್ತಾರೆ. ಇಂತಹ ಉನ್ನತ ಧಾರ್ಮಿಕ ಆಚರಣೆಗಳ ಮಧ್ಯೆ ಸ್ತ್ರೀ ಪ್ರವೇಶ ಮತ್ತು ಸ್ತ್ರೀ ಸ್ವಾತಂತ್ರ್ಯವೆಂಬ ಕೂಗು ಅಪ್ರಸ್ತುತವೆಂದರು.

ವಿಶ್ವ ಹಿಂದೂ ಪರಿಷದ್‌ ಜಿಲ್ಲಾಧ್ಯಕ್ಷ ಅಂಗಾರ ಶ್ರೀಪಾದ ಮಾತನಾಡಿ ನಾಸ್ತಿಕ ರಾಜ್ಯ ಸರಕಾರವು ಹಿಂದೂ ಧರ್ಮದ ಆಚರಣೆಗಳ ಮೇಲೆ ಅಪಚಾರ ಎಸಗಲು ಮುಂದಾಗಿದ್ದು, ಇದೊಂದು ಷಡ್ಯಂತ್ರವಾಗಿದೆ ಎಂದರು.

ಧಾರ್ಮಿಕ ಭಾವನೆಗಳ ಮೇಲಿನ ಪ್ರಹಾರಕ್ಕೆ ಮುಂದಾದ ಸರಕಾರದ ಕ್ರಮ ಸರಿಯಲ್ಲ, ಇದು ಸರಕಾರಕ್ಕೆ ಜನಾಂದೋಲನದ ಮೂಲಕ ಪ್ರತಿಭಟಿಸುವ ಕಾರ್ಯಕ್ರಮ ಎಂದರು. ರಾ.ಸ್ವ.ಸಂ. ಹಿರಿಯ ಕಾರ್ಯಕರ್ತ ವೀರಪ್ಪ ಅಂಬಾರ್‌ ಮಾತನಾಡಿ ರಾಜ್ಯ ಸರಕಾರ ಹಿಂದೂಧಾರ್ಮಿಕ ಭಾವನೆಗಳನ್ನು ಕೆರಳಿಸಿ ಅವಹೇಳನಕಾರಿ ರೀತಿಯಲ್ಲಿ ಪ್ರತಿಬಿಂಬಿಸುವುದು ಸಮಂಜಸವಲ್ಲವೆಂದರು. 

ರಾಜಕೀಯ ಪ್ರೇರಿತ ಎಡರಂಗ ಧರ್ಮದ ಅವಹೇಳನ ದಮನಕಾರಿಯಾಗಿದೆ ಎಂದರು. ಹಿಂದೂ ಧರ್ಮದ ಆಚಾರ ವಿಚಾರ ನಿರ್ಧರಿಸುವವರು ತಂತಿವರ್ಯರು,ಪುರೋಹಿತರು ಮತ್ತು ಭಕ್ತರೆ ವಿನಾ ನಾಸ್ತಿಕ ಸರಕಾರಗಳಲ್ಲ ಎಂದರು. ಯುವಮೋರ್ಚಾ ರಾಜ್ಯ ನಾಯಕ ಎಂ.ವಿಜಯಕುಮಾರ್‌ರೈ, ವಿ.ಎಚ್‌.ಪಿ ಪೈವಳಿಕೆ ಪ್ರಖಂಡ ಅಧ್ಯಕ್ಷ ಉಳುವಾನ ಶಂಕರ ಭಟ್‌, ಮಾತೃಮಂಡಳಿ ಜಿಲ್ಲಾಧ್ಯಕ್ಷೆ ಮೀರಾಆಳ್ವ, ಮಂಗಲ್ಪಾಡಿ ಗ್ರಾ.ಪಂ.ಸದಸ್ಯೆ ಸುಜಾತಾ ಶೆಟ್ಟಿ, ಸಂಘ ಪರಿವಾರದ ನಾಯಕರಾದ ಎ.ಕೆ. ಕಯ್ನಾರ್‌, ಜಯಂತಿ ಟಿ. ಶೆಟ್ಟಿ ಮಾತನಾಡಿದರು. 

ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು  ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆಯಾಯಿತು.

ಸುಪ್ರಿಂಕೋರ್ಟ್‌ ನೀಡಿದ ತೀರ್ಪನ್ನು ಮರು ಪರಿಶೀಲನೆಗೆ ಒಳಪಡಿಸಬೇಕು, ಹಿಂದೂ ಧರ್ಮಾಚರಣೆಯಲ್ಲಿ ಲಿಂಗ ಬೇಧದ ವಿಚಾರವಿಲ್ಲ, ಆದರೆ ಶಬರಿಮಲೆಯಲ್ಲಿ ಶತಮಾನಗಳಿಂದ ಶ್ರದ್ಧೆ ಮತ್ತು ಭಕ್ತಿಯ ಭಾಗವಾದ ಅನುಷ್ಠಾನಗಳನ್ನು ಏಕಾಏಕಿ ದಮನಿಸುವ ಕ್ರಮ ತರವಲ್ಲ ವೆಂದರು. ಕೇರಳ ರಾಜ್ಯದಾದ್ಯಂತ ರಾ.ಹೆದ್ದಾರಿ ತಡೆದು ಶಬರಿಮಲೆ ರಕ್ಷಣೆಯ ಒಕ್ಕೊರಲ ದನಿಯು ಹಿಂದೂ ಕ್ಷೇತ್ರರಕ್ಷಣೆಯ ಜಾಗƒತಿಯನ್ನು ಮೂಡಿಸಿದೆ.
ಅಂಗಾರ ಶ್ರೀಪಾದ
ವಿಶ್ವ ಹಿಂದೂ ಪರಿಷದ್‌ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.