ಕಲಾವಿದನಿಗೆ ಹುಟ್ಟೂರ ಗೌರವ ಅಮೂಲ್ಯ: ವಿಷ್ಣು ಆಸ್ರ


Team Udayavani, Oct 23, 2018, 6:50 AM IST

22ksde1.jpg

ಕಾಸರಗೋಡು: ಓರ್ವ ಕಲಾವಿದನಿಗೆ ಗಣ್ಯರ, ಕಲಾಭಿಮಾನಿಗಳ ಮುಂದೆ ಸಿಗುವ ಗೌರವಾರ್ಪಣೆ ಶ್ರೇಷ್ಠವಾದದ್ದು. ಅದರಲ್ಲೂ ತನ್ನ ಜನ್ಮನಾಡಿನಲ್ಲಿ ಹುಟ್ಟೂರ ಕಲಾಭಿಮಾನಿಗಳ ಮುಂದೆ ಸಿಗುವ ಗೌರರ್ವಾಪಣೆ ತನ್ನ ಕಲಾ ಜೀವನದಲ್ಲಿ ಅಮೂಲ್ಯವಾದದ್ದು ಎಂದು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಹೇಳಿದರು.

ಯಕ್ಷಮಿತ್ರರು ಮಧೂರು ಇವರ 12ನೇ ಕಲಾಕಾಣಿಕೆಯ ಅಂಗವಾಗಿ ಮಧೂರು ಪರಕ್ಕಿಲ ದೇವಸ್ಥಾನದ ಸಭಾಭವನದಲ್ಲಿ ಮಧೂರು ಯಕ್ಷಸಂಭ್ರಮದಲ್ಲಿ ನೆರೆದ ಗಣ್ಯರ ಉಪಸ್ಥಿತಿಯಲ್ಲಿ ಕಲಾಭಿಮಾನಿಗಳ ಸಮಕ್ಷಮ ಕೂಡ್ಲು ಸದಾನಂದ ರಾಯರಿಗೆ ಸಲ್ಲಿಸಿದ ಹುಟ್ಟೂರ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಚೆಂಡೆ, ಮದ್ದಳೆಗಳಂತಹ ಚರ್ಮವಾದ್ಯ ಗಳಿಗೆ ಮುಚ್ಚಿಗೆ ಹಾಕಿ ಅದರಿಂದ ನಾದದ ಝೇಂಕಾರ ಹೊಮ್ಮಿಸುವಂತೆ ಮಾಡುವುದು ಅತ್ಯಂತ ಪರಿಶ್ರಮದ ಕಲೆಗಾರಿಕೆ. ಈ ಕಲೆಯನ್ನು ರೂಢಿಸಿಕೊಳ್ಳಬೇಕಾದರೆ ಸಂಗೀತದಲ್ಲಿ ಆಳವಾದ ಸ್ವರಜ್ಞಾನಗಳು ಅಗತ್ಯ. ಶ್ರುತಿಯ ಸುಭಗತೆಯ ಪರಿಜ್ಞಾನ ಅನಿವಾರ್ಯ. ಅಂತಹ ಅಪೂರ್ವ ವ್ಯಕಿ ಸದಾನಂದ ರಾವ್‌. ಕಾಸರಗೋಡು ಪರಿಸರದ ಹಲವಾರು ದೇವಾಲಯಗಳಲ್ಲಿ ಕ್ಷೇತ್ರ ವಾದ್ಯಗಳನ್ನು ನುಡಿಸುವ ಮೂಲಕ ಉತ್ಸವಗಳಿಗೆ ನೇತೃತ್ವ ನೀಡಿದ ಶ್ರೇಷ್ಠ ಕುಟುಂಬ ಶ್ರೀಯುತರದ್ದು. ಅಂತಹ ಕುಟುಂಬದಲ್ಲಿ ಹುಟ್ಟಿ ಕುಲಕಸುಬನ್ನೇ ಉದ್ಯೋಗವನ್ನಾಗಿಸಿ ಆ ಮೂಲಕ ಆತ್ಮ ಸಂತೃಪ್ತಿ ಪಡೆದ ರಾಯರದ್ದು. ತನ್ನ ಉಸಿರಿನ ಕೊನೆಯ ತನಕ ಈ ಕೆಲಸವನ್ನು ಮಾಡಬೇಕು ಎಂಬ ಹಂಬಲ. ಇಂತಹ ವ್ಯಕ್ತಿಗೆ ಮಾಡಿದ ಸಮ್ಮಾನ ಅದು ನಿಜವಾಗಿಯೂ ಕಲಾಮಾತೆಗೆ ಸಲ್ಲುವ ಗೌರವವಾಗಿದೆ ಎಂದು ಹೇಳಿದರು.

ಹಿರಿಯ ಧಾರ್ಮಿಕ ಮುಂದಾಳು ವಾಸುದೇವ ಹೊಳ್ಳ ಅಧ್ಯಕ್ಷರಾಗಿದ್ದರು. ಅಭಿನಂದನಾ ಭಾಷಣ ಮಾಡಿದ ಹಿರಿಯ ಕಲಾವಿದ ವಾಸುದೇವ ರಂಗಾಭಟ್‌ ಓರ್ವ ಕಲಾವಿದನ ಜೀವನದಲ್ಲಿ ಶ್ರೇಷ್ಠವಾದದ್ದು ಆತನ ಕಲಾಜೀವನ. 76ರ ಹರೆಯದ ಸದಾನಂದ ರಾವ್‌ ತನ್ನನ್ನು ಕಲಾಸೇವೆಯಲ್ಲಿ ತೊಡಗಿಸಿಕೊಂಡು ಏಳು ದಶಕಗಳು ಸಂದಿವೆ. 6ನೇ ವಯಸ್ಸಿನಲ್ಲಿ ಮದ್ದಳೆ ವಾದಕನಾಗಿ ಕಲಾಸೇವೆಯನ್ನು ಆರಂಭಿಸಿ, ಚರ್ಮವಾದ್ಯಗಳೆಲ್ಲದರ ಮರ್ಮವನ್ನರಿತ ಕುಶಲಕರ್ಮಿಯಾದ ಸದಾನಂದ ರಾಯರಿಗೆ ಈಗ ತನ್ನ ಕಲಾಜೀವನದಲ್ಲಿ ಸಪ್ತತಿಯ ಸಮಯ. ಇದನ್ನು ಗುರುತಿಸಿ ಯಕ್ಷಮಿತ್ರರು ಸಂಸ್ಥೆಯು ಅವರಿಗೆ ಸಪ್ತತಿ ಸಮ್ಮಾನ ನೀಡಿ ಗೌರವಿಸುತ್ತಿದೆ. ಇದು ಕಲಾವಿದನ ಜೀವನದ ಅಮೂಲ್ಯ ಕ್ಷಣ. 

ಸಂಗೀತೋಪಕರಣಗಳನ್ನು ನುಡಿ ಸುವ ಕಲಾವಿದರು ಅದೆಷ್ಟೋ ಮಂದಿ ಇದ್ದರೂ ಉಪಕರಣಗಳ ತಯಾರಿ, ರಿಪೇರಿ ಮತ್ತು ಮುಚ್ಚಿಗೆ ಹಾಕಿ ಕೊಡುವವರು ತೀರಾ ವಿರಳ. ಈ ಕಾಯಕದಲ್ಲಿ ತನ್ನನ್ನು ತೊಡಗಿಸಿಕೊಂಡು ತೆಂಕುತಿಟ್ಟು ಯಕ್ಷಗಾನದ ಹಿರಿಯರಿಂದ ಕಿರಿಯರ ತನಕ ಬಹುತೇಕ ಹಿಮ್ಮೇಳ ವಾದಕರಿಗೆ ಅನಿವಾರ್ಯ ವ್ಯಕ್ತಿ ಎಂಬಂತೆ ರೂಪುಗೊಂಡ ರಾಯರಿಗೆ ಕುಲಕಸುಬೇ ಸರ್ವಸ್ವ. ಇದರಿಂದ ಅವರು ಆರ್ಥಿಕವಾಗಿ ಗಳಿಸಿದ್ದೇನು ಎಂಬುದಕ್ಕಿಂತಲೂ ಸಮಾಜದಲ್ಲಿ ಗಳಿಸಿದ್ದೇನು ಎಂಬುದಕ್ಕೆ ಹೆಚ್ಚಿನ ಪ್ರಾಶಸ್ತÂ. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪ್ರಸಿದ್ಧ ವೈದ್ಯರಾದ ಡಾ| ಹರಿಕಿರಣ್‌ ಬಂಗೇರ ಅವರು ಸದಾನಂದ ರಾಯರದ್ದು ಅನನ್ಯ ಪ್ರತಿಭೆ, ಅದ್ಭುತ ಸಾಧನೆ. ಕುಲಕಸುಬಿನ ಮೂಲಕ ಜೀವನದ ಯಶಸ್ಸನ್ನು ಕಂಡ ಅವರ  ಸಾಧನೆಯನ್ನು ಗುರುತಿಸಿ ಗೌರವಿಸಿರುವುದು ನಿಜಕ್ಕೂ ಕಲಾಮಾತೆಗೆ ಸಂದ ಗೌರವ. ಒಂದು ಕಲಾಪ್ರದರ್ಶನ ಯಶಸ್ವಿಯಾಗಬೇಕಿದ್ದರೆ ವೇದಿಕೆಯ ಹಿಂದೆ ಇವರಂತಹ ಹಲವಾರು ವ್ಯಕ್ತಿಗಳ ಪರಿಶ್ರಮವೂ, ಸಮರ್ಪಣಾಭಾವದ ಸೇವೆಯೂ ಅಗತ್ಯ. ಇಂತಹ ಕಾಣದ ಕೈಗಳನ್ನು ಗುರುತಿಸಿ ಗೌರವಿಸುವುದರ ಮೂಲಕ ಮಧೂರು ಯಕ್ಷಮಿತ್ರರು ಇತರರಿಗೆ ಉತ್ತಮ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

ಗೌರವಾರ್ಪಣೆ ಸ್ವೀಕರಿಸಿ ಮಾತ ನಾಡಿದ ಸದಾನಂದ ರಾಯರು ಅಜ್ಜ ಲಕ್ಷ್ಮಣ ರಾಯರು ಹಾಗೂ ತಂದೆ ರಾಮಚಂದ್ರರಾಯರ ಮೂಲಕವಾಗಿ ಬಂದ ಕುಲವೃತ್ತಿಯನ್ನೇ ಅನುಸರಿಸಿ ಬೆಳೆದವನು ನಾನು. ವಂಶವಾಹಿನಿಯಾಗಿ ಬಂದು ಸಿದ್ಧಿಸಿದ ಈ ಕಲೆಗೆ ತಂದೆಯೇ ಮೊದಲ ಗುರು, ಮನೆಯೇ ಮೊದಲ ಪಾಠಶಾಲೆ. ಗುಂಡಿಹಿತ್ತಿಲು ಕೃಷ್ಣಯ್ಯ, ಕುದ್ರೆಕೋಡ್ಲು ರಾಮ ಭಟ್ಟರಿಂದ ಹಿಮ್ಮೇಳ ವಾದನದ ಹೆಚ್ಚಿನ ಶಿಕ್ಷಣ ಪಡೆದು, ತಲೆಂಗಳ ಗೋಪಾಲಕೃಷ್ಣ ಭಟ್ಟರು ಹಾಗೂ ವಿದ್ವಾನ್‌ ಬಾಬು ರೈ ಗಳಿಂದ ಮದ್ದಳೆಯ ನುಡಿತ ಬಡಿತಗಳ ಮರ್ಮವನ್ನು ಕಲಿತೆ. ಈ ಕುಲಕಸುಬಿನ ಮೂಲಕ ನಾನು ಪಡೆದ ಆತ್ಮ ಸಂತೃಪ್ತಿ ಇನ್ಯಾವುದರಲ್ಲೂ ಸಿಗದು. ನನ್ನ ಉಸಿರಿನ ಕೊನೆಯ ತನಕ ಈ ಕೆಲಸವನ್ನು ಬಿಟ್ಟು ಇನ್ಯಾವ ಕೆಲಸಗಳ ಬಗ್ಗೆಯೂ ಯೋಚಿಸುವವನಲ್ಲ ಎಂದು ಹೇಳಿದರು. 
ಪ್ರವೀಣ ರೈ ಸ್ವಾಗತಿಸಿದರು. ಮಹೇಶ ಮಧೂರು ವಂದಿಸಿದರು. ಕೃಷ್ಣ ಪ್ರಸಾದ ಅಡಿಗ ಸಮ್ಮಾನ  ಪತ್ರ   ವಾಚಿಸಿ, ಗುರುರಾಜ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು. ಉದಯ ನಾವಡ, ಶರತ್‌, ರಾಮಕೃಷ್ಣ ಶೆಟ್ಟಿ, ಮುರಳಿ ನಾವಡ, ಸಂದೀಪ್‌, ವಿಠಲ ಗಟ್ಟಿ, ಸುನಿಲ್‌, ಗಣೇಶ ತುಂಗ ಸಹಕರಿಸಿದರು. ನಂತರ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತುಂಬಿದ ಪ್ರೇಕ್ಷಕರ ಮುಂದೆ “ತುಳಸೀ ಜಲಂಧರ – ತಾಮ್ರಧ್ವಜ ಕಾಳಗ’ವೆಂಬ ಅಪೂರ್ವ ಆಖ್ಯಾನಗಳ ಯಕ್ಷಗಾನ ಪ್ರದರ್ಶನ ಜರಗಿತು.

ಸದಾನಂದ ರಾಯರದ್ದು ಪರಿಶುದ್ಧತೆಯ ಕೆಲಸ. ಇವರ ಚೆಂಡೆ ಮದ್ದಳೆಗಳಿಗೆ ಅತ್ಯಂತ ಬೇಡಿಕೆ. ಧರ್ಮಸ್ಥಳ, ಎಡನೀರು, ಹನುಮಗಿರಿ ಮೊದಲಾದ ಮೇಳಗಳಿಂದ ಅಲ್ಲದೇ ದೇಶ ವಿದೇಶಗಳ ಹಲವೆಡೆಗಳಿಂದ, ಹಲವಾರು ದೇವಾಲಯಗಳಿಂದ, ವಿವಿಧ ಕಲಾಕ್ಷೇತ್ರಗಳಿಂದಲೂ ಇವರನ್ನು ಹುಡುಕಿಕೊಂಡು ಕಲಾವಿದರು ಬರುತ್ತಾರೆ. ಅದು ಅವರ ಆರಾಧನಾ ಭಾವದಲ್ಲಿ ಮಾಡುವ ಚರ್ಮ ವಾದ್ಯಗಳ ದುರಸ್ತಿ ಹಾಗೂ ತನ್ಮಯತೆಯ ಕಾಯಕಕ್ಕೆ ಸಂದ ಗೌರವ ಎಂದು ಹೇಳಿದರು.
– ವಾಸುದೇವ ಹೊಳ್ಳ

ಹೊಸ ತಲೆಮಾರಿನಲ್ಲಿ ಈ ಕಸುಬಿನ ಬಗ್ಗೆ ಗೌರವ ಇಲ್ಲದಾಗಿದೆ. ಹೆಚ್ಚಿನ ಸಂಪಾದನೆಗಾಗಿ ಇತರ ಆಕರ್ಷಣೀಯ ಕ್ಷೇತ್ರಕ್ಕೆ ತೆರಳುವ ಕಾರಣ ಚರ್ಮವಾದ್ಯಗಳ ದುರಸ್ತಿ ಕೆಲಸದಲ್ಲಿ ನಿರತರಾಗಲು ಹೊಸ ಪೀಳಿಗೆಯವರು ಯಾರು ಬರುತ್ತಿಲ್ಲದಿರುವುದು ಬೇಸರದ ಸಂಗತಿ. 
– ಕೂಡ್ಲು  ಸದಾನಂದ 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.