ರಸ್ತೆಬದಿ ಅನಧಿಕೃತ ಜಾಹೀರಾತು ಫಲಕಗಳ ತೆರವು ಆರಂಭ


Team Udayavani, Oct 27, 2018, 6:00 AM IST

27-ad.jpg

ಕಾಸರಗೋಡು: ರಾಜ್ಯದಲ್ಲಿ ರಸ್ತೆ ಬದಿಗಳ ಅನಧಿಕೃತ ಫ್ಲೆಕ್ಸ್‌ ಬೋರ್ಡ್‌ಗಳು, ಜಾಹೀರಾತು ಫಲಕಗಳು ಮತ್ತು  ಬ್ಯಾನರ್‌ ಇತ್ಯಾದಿಗಳನ್ನು  ಅ.30ರೊಳಗಾಗಿ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್‌ ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಿಲ್ಲಾಡಳಿತೆ ನೇತೃತ್ವದಲ್ಲಿ ಜಾಹೀರಾತು ಫಲಕ ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿತು.

ರಸ್ತೆ ಬದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಸಾರಿಗೆ ತಡೆ ಉಂಟಾಗುವ ರೀತಿಯಲ್ಲಿ ಹಾಗೂ ಅನಧಿಕೃತವಾಗಿ ಸ್ಥಾಪಿಸಿರುವ ಜಾಹೀರಾತು ಫಲಕ ಗಳನ್ನು, ಹೋರ್ಡಿಂಗ್‌, ಫ್ಲೆಕ್ಸ್‌ಗಳನ್ನು ಜಿಲ್ಲಾಧಿಕಾರಿ ಡಾ| ಡಿ.ಸಜಿತ್‌ಬಾಬು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಎ.ಶ್ರೀನಿವಾಸ್‌ ನೇತೃತ್ವದಲ್ಲಿ ಹಳೆಯ ಪ್ರಸ್‌ ಕ್ಲಬ್‌ ಜಂಕ್ಷನ್‌ನಲ್ಲಿ ತೆರವುಗೊಳಿಸಲು ಚಾಲನೆ ನೀಡಿದರು. ಜಿಲ್ಲೆಯ ಎಲ್ಲೆಡೆ ಏಕ ಸಮಯದಲ್ಲಿ ಜಾಹೀರಾತು ಫಲಕ ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಪೊಲೀಸರು, ಲೋಕೋಪಯೋಗಿ ಮೊದಲಾದ ಇಲಾಖೆಗಳು ಪ್ರಕ್ರಿಯೆ ಆರಂಭಿಸಿವೆ.
ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಗಳಿಗೆ ಈ ಮೊದಲು ಆದೇಶ ನೀಡಲಾಗಿತ್ತು. ಜಿಲ್ಲಾಯೋಜನಾ ಸಮಿತಿ ಸಭೆ ಹಾಗೂ ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಗಳಲ್ಲೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದರು. ಜಾಹೀರಾತು ಫಲಕಗಳನ್ನು ಸ್ಥಾಪಿಸಿದವರಿಗೆ ಈ ಮೊದಲು ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ವೆಚ್ಚವನ್ನು ಆಯಾಯ ಸಂಸ್ಥೆಗಳಿಂದ ವಸೂಲು ಮಾಡಲಾಗುವುದು. ಆರಾಧನಾಲಯಗಳು ಸ್ಥಾಪಿಸಿರುವ ಫಲಕಗಳನ್ನು 24 ಗಂಟೆಗಳೊಳಗೆ ತೆರವುಗೊಳಿಸಬೇಕು  ಇಲ್ಲದಿದ್ದಲ್ಲಿ ಜಿಲ್ಲಾಡಳಿತ ತೆರವುಗೊಳಿಸಲಿದೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಡಿಎಂ ದೇವಿದಾಸ್‌, ಕಾಂಞಂಗಾಡ್‌ ಸಬ್‌ ಕಲೆಕ್ಟರ್‌ ಅರುಣ್‌ ಕೆ.ವಿಜಯನ್‌, ಡೆಪ್ಯೂಟಿ ಕಲೆಕ್ಟರ್‌ಗಳಾದ ಕೆ.ರವಿ ಕುಮಾರ್‌,ಮಚಂದ್ರನ್‌, ವಿಹಾಗೂ ಅಧಿಕಾರಿಗಳು ಜಾಹೀರಾತು ಫಲಕ ತೆರವುಗೊಳಿಸಲು ನೇತೃತ್ವ ನೀಡಿದ್ದಾರೆ. ಇದೇ ವೇಳೆ ರಸ್ತೆ  ಬದಿಯ ಬೋರ್ಡ್‌ಗಳು ಮತ್ತು ಅನಧಿಕೃತ ಜಾಹೀರಾತು ಫಲಕ ಗಳನ್ನು  ತೆರವುಗೊಳಿಸುವ ಕ್ರಮಕ್ಕೆ ಕೆಲವು ಸ್ಥಳೀಯಾಡಳಿತ ಸಂಸ್ಥೆಗಳು ಈಗಾಗಲೇ ಚಾಲನೆ ನೀಡಿವೆ. ಈ ಕಾರ್ಯಾಚರಣೆಯನ್ನು ಅ.30 ರೊಳಗಾಗಿ ಪೂರ್ತಿಗೊಳಿಸಲಾಗುವುದು ಎಂದು ರಾಜ್ಯ ಸರಕಾರದ ಪರ ಸ್ಟೇಟ್‌ ಅಟರ್ನಿ ಜನರಲ್‌ ಕೆ.ವಿ.ಸೋಹನ್‌ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದಲ್ಲಿ ಏನಿದೆ?
ಆದೇಶವನ್ನು  ಪಾಲಿಸುವಲ್ಲಿ  ವಿಳಂಬ ನೀತಿ ಅನುಸರಿಸಿದಲ್ಲಿ  ಅದರಿಂದ ಸರಕಾರಕ್ಕೆ ಉಂಟಾಗುವ ನಷ್ಟ  ಹಾಗೂ ಅಂತಹ ಜಾಹೀರಾತು ಮತ್ತಿತರ ಬೋರ್ಡ್‌ ಗಳನ್ನು  ತೆರವುಗೊಳಿಸಲು ತಗಲುವ ಸಂಪೂರ್ಣ ವೆಚ್ಚ ವನ್ನು  ಸಂಬಂಧಪಟ್ಟಡಳಿತ ಸಂಸ್ಥೆಗಳ ಕಾರ್ಯದರ್ಶಿಯವರಿಂದ ವಸೂಲು ಮಾಡಬೇಕೆಂದು ಉತ್ಛ ನ್ಯಾಯಾಲಯವು ಆದೇಶದಲ್ಲಿ  ಸ್ಪಷ್ಟವಾಗಿ ತಿಳಿಸಿದೆ.ರಸ್ತೆ  ಬದಿಯ ಬೋರ್ಡ್‌ಗಳು ಮತ್ತು ಜಾಹೀರಾತು ಫಲಕಗಳನ್ನು  ತೆರವುಗೊಳಿಸಬೇಕಾಗಿರುವುದು ಆಯಾ ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಯವರ ಹೊಣೆಗಾರಿಕೆಯಾಗಿದೆ. ಅದನ್ನು ಅವರು ಸಮರ್ಪಕವಾದ ರೀತಿಯಲ್ಲಿ ನಿರ್ವಹಿಸಬೇಕೆಂದು ನ್ಯಾಯಾಲಯವು ಮನದಟ್ಟು ಮಾಡಿದೆ.

 ಅ.30ರೊಳಗೆ ತೆರವು
ಅ.30 ರ ಮುಂಚಿತವಾಗಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವು ಗೊಳಿಸಬೇಕೆಂದು ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಐದು ದಿನಗಳೊಳಗಾಗಿ ಜಿಲ್ಲೆಯ ಎಲ್ಲೆಡೆ ಸ್ಥಾಪಿಸಲಾಗಿರುವ ಜಾಹೀರಾತು ಸಹಿತ ಎಲ್ಲಾ ಫಲಕಗಳನ್ನು ತೆರವುಗೊಳಿಸಲಾಗುವುದು
ಡಾ| ಸಜಿತ್‌ಬಾಬು,ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.