ಕೊಡಗಿನಲ್ಲಿ ಸಾಂಕೇತಿಕ ಟಿಪ್ಪು ಜಯಂತಿ ಆಚರಣೆ


Team Udayavani, Nov 11, 2018, 9:48 AM IST

kodagu-1.jpg

ಮಡಿಕೇರಿ: ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ ಹಾಗೂ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೊಡಗಿನ ಮೂರು ತಾಲೂಕುಗಳಲ್ಲಿ ಟಿಪ್ಪು ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್‌ ಗೈರು ಹಾಜರಾಗಿದ್ದರು. 

ಮಡಿಕೇರಿಯ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಆಹ್ವಾನಿತರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದ ವೇಳೆ ಜನಪ್ರತಿನಿಧಿಗಳು ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಅವರನ್ನು ಪೊಲೀಸರು ಬಂಧಿಸಿದರು. 

ಕಾರ್ಯಕ್ರಮ ಆರಂಭವಾಗುವ ಮೊದಲೇ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಎಂ.ಪಿ. ಸುನಿಲ್‌ ಸುಬ್ರಮಣಿ, ಟಿಪ್ಪು ಜಯಂತಿ ಆಚರಣೆ ಕೊಡಗಿಗೆ ಅಪಮಾನ ಎಂದು ಟೀಕಿಸಿದರು. ಈ ನಡುವೆ ಜಿ.ಪಂ. ಕಾಂಗ್ರೆಸ್‌ ಸದಸ್ಯೆ ಚಂದ್ರಕಲಾ ಅವರನ್ನು ವೇದಿಕೆ ಯಿಂದ ಕೆಳಗಿಳಿಸುವಂತೆ ಬಿಜೆಪಿ ಜನಪ್ರತಿನಿಧಿಗಳು ವಾಗ್ಯುದ್ಧ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಬೇಕಿದ್ದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್‌, ಕೊಡಗಿಗೆ ಅನ್ಯಾಯ ಮಾಡಿದ ಟಿಪ್ಪು ಜಯಂತಿಯನ್ನು ಕೊಡಗಿನಲ್ಲಿ ಆಚರಿಸುವ ಅಗತ್ಯ ವಿಲ್ಲ. ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಘೋಷಿಸಿದರು.

ಹತ್ತೇ ನಿಮಿಷಗಳಲ್ಲಿ ಮುಗಿದ ಕಾರ್ಯಕ್ರಮ
ಕಾರ್ಯಕ್ರಮ ಕೇವಲ 10 ನಿಮಿಷಗಳಲ್ಲಿ ಮುಕ್ತಾಯಗೊಂಡಿತು.  ಈ ಕಾರ್ಯಕ್ರಮಕ್ಕೆ ಬಿಜೆಪಿ ಜನಪ್ರತಿನಿಧಿಗಳಿಗೆ ಆಹ್ವಾನ ನೀಡದಿರುವ ಜಿಲ್ಲಾಡಳಿತದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು. ಕಾಂಗ್ರೆಸ್‌ ಜನಪ್ರತಿನಿಧಿಗಳಿಗೆ ಆಹ್ವಾನ ಪತ್ರ ಇಲ್ಲದೆಯೂ ಪ್ರವೇಶ ನೀಡಿದ ಪೊಲೀಸರು, ಬಿಜೆಪಿ ಜನಪ್ರತಿನಿಧಿಗಳಿಗೆ ಆಹ್ವಾನ ಇಲ್ಲ ಎಂಬ ಕಾರಣಕ್ಕೆ ಕೋಟೆಯ ಪ್ರವೇಶ ದ್ವಾರದಲ್ಲೇ ತಡೆದರು.  

174 ಮಂದಿ ಬಂಧನ, ಬಿಡುಗಡೆ 
ಪ್ರತಿಭಟನೆ ನಡೆಸಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌, ವಿಧಾನ ಪರಿಷತ್‌ ಸದಸ್ಯ ಸುನಿಲ್‌ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್‌ ಸಹಿತ ಹಿಂದೂ ಪರ ಸಂಘಟನೆಗಳ ಪ್ರಮುಖರನ್ನು ಪೋಲಿಸರು ಬಂಧಿಸಿದರು. ಒಟ್ಟು 174 ಮಂದಿಯನ್ನು ಪೊಲೀಸರು ಬಂಧಿಸಿ ಅನಂತರ ಬಿಡುಗಡೆ ಮಾಡಿದರು. ಡ್ರೋನ್‌ ಮೂಲಕ ಕಣ್ಗಾವಲು ಇರಿಸಲಾಗಿತ್ತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.