ಗರ್ಭಿಣಿ ಸಹಿತ ಎರಡು ಹೆಣ್ಣಾನೆ ಸಾವು


Team Udayavani, Nov 27, 2018, 9:53 AM IST

z-elephent.jpg

ತರೀಕೆರೆ/ಮಡಿಕೇರಿ: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಮತ್ತು ತರೀಕೆರೆ ತಾಲೂಕಿನ ಲಕ್ಕವಳ್ಳಿ
ಸಮೀಪ ಎರಡು ಕಾಡಾನೆಗಳು ಮೃತಪಟ್ಟಿವೆ.

ಮಾವಿನಹಳ್ಳದ ಭದ್ರಾ ಹಿನ್ನೀರಿನಲ್ಲಿ ಗರ್ಭ ಧರಿಸಿದ್ದ ಆನೆಯೊಂದರ ಮೃತದೇಹ ರವಿವಾರ ಪತ್ತೆಯಾಗಿದೆ. ಸೋಮವಾರ ಆನೆಯ ಶವ ಪರೀಕ್ಷೆ ನಡೆಸಿ ಅನಂತರ ಹೂಳಲಾಗಿದೆ. ರವಿವಾರ ಅರಣ್ಯ ಇಲಾಖೆ ಸಿಬಂದಿ ಗಸ್ತು ತಿರುಗುತ್ತಿದ್ದಾಗ ಭದ್ರಾ ಹಿನ್ನೀರಿನಲ್ಲಿ ಆನೆಯ ಶವ ತೇಲುತ್ತಿರುವುದು ಗೋಚರಿಸಿತ್ತು. ತತ್‌ಕ್ಷಣ ಮೇಲಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಸಿಬಂದಿ ಸ್ಥಳಕ್ಕೆ ತೆರಳಿ ಆನೆಯ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಅನಂತರ ಶವ ಪರೀಕ್ಷೆ ನಡೆಸಿದರು. ಈ ವೇಳೆ ಮೃತ ಆನೆ ಗರ್ಭಿಣಿಯಾಗಿದ್ದು, ಹೊಟ್ಟೆಯೊಳಗೆ 16ರಿಂದ 18 ತಿಂಗಳಿನ ಮರಿ ಇರುವುದು ಕಂಡುಬಂದಿದೆ. ಆನೆ ಸೋಂಕಿಗೆ ಒಳಗಾಗಿ ಮೃತಪಟ್ಟಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. 

ವೀರಾಜಪೇಟೆ: ಕಾಡಾನೆ ಸಾವು
ಮಡಿಕೇರಿ: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾ. ಪಂ. ವ್ಯಾಪ್ತಿಯ ಬಾರಿಕಾಡಿನ ತೋಟದ ಬಳಿ ಹೆಣ್ಣಾನೆ ಸಾವನ್ನಪ್ಪಿದೆ. ಸೋಮವಾರ ಬೆಳಗ್ಗೆ 8.30ರ ಸಮಯದಲ್ಲಿ ಗ್ರಾಮಸ್ಥರು ಕೆಲಸಕ್ಕೆ ತೆರಳುವ ಸಂದರ್ಭ ಅದೇ ಗ್ರಾಮದ ತಾ.ಪಂ. ಸದಸ್ಯ ಮಾಳೇಟಿರ ಪ್ರಶಾಂತ್‌ ಉತ್ತಪ್ಪ ಅವರ ತೋಟದ ಬದಿಯಲ್ಲಿ ಆನೆಯೊಂದು ನರಳುತ್ತಿರುವುದನ್ನು ಕಂಡು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಮೃತ ಕಾಡಾನೆಗೆ ಸುಮಾರು 60 ವರ್ಷವಾಗಿರಬಹುದೆಂದು ಅಂದಾಜಿಸಲಾಗಿದೆ. ಆಹಾರ ಜೀರ್ಣವಾಗದೆ ಹೊಟ್ಟೆ ಊದಿಕೊಂಡಿದ್ದು, ಅಪರಾಹ್ನ ಒಂದುಗಂಟೆ ಸುಮಾರಿಗೆ ಆನೆ ಮೃತಪಟ್ಟಿದೆ. ವಲಯ ಅರಣ್ಯಧಿಕಾರಿ ಕೆ.ಪಿ. ಗೋಪಾಲ್‌, ವೃತ್ತ ನಿರೀಕ್ಷಕ ಎನ್‌. ಕುಮಾರ್‌ ಆರಾಧ್ಯ, ಠಾಣಾಧಿಕಾರಿ ಸುರೇಶ್‌ ಬೋಪಣ್ಣ ಹಾಗೂ ಇತರರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.