ಓಲೆ ಬೆಲ್ಲ ಆರೋಗ್ಯಕ್ಕೆ ಉತ್ತಮ


Team Udayavani, Nov 30, 2018, 3:05 AM IST

ole-bella-29-11.jpg

ಇಂದು ನಾವು ಸೇವಿಸುವ ಹೆಚ್ಚಿನ ಆಹಾರಗಳು ರಾಸಾಯನಿಕಯುಕ್ತ‌. ತರಕಾರಿಗಳಿಂದ ಹಿಡಿದು ಹೆಚ್ಚಿನ ಆಹಾರ ಪದಾರ್ಥಗಳು ಕಲಬೆರಕೆಯಿಂದ ಕೂಡಿರುತ್ತವೆ. ಈ ಸಂದರ್ಭದಲ್ಲಿ ಅಲ್ಪವಾದರೂ ದೇಹದ ಆರೋಗ್ಯ ಕಾಪಾಡಿಕೊಳ್ಳಬೇಕು ಎನ್ನುವವರು ಓಲೆ ಬೆಲ್ಲಕ್ಕೆ ಮೊರೆಹೋಗಬಹುದು. ಬೆಲ್ಲ ಹಾಗೂ ಖರ್ಜೂರ ಪಾಮ್‌ ಮರದಿಂದ ತಯಾರಿಸಲ್ಪಡುವ ಈ ಬೆಲ್ಲದ ರುಚಿ ಆರೋಗ್ಯಕ್ಕೆ ಹೆಚ್ಚು ಉಪಕಾರಿ. ನೈಸರ್ಗಿಕವಾಗಿ ತಯಾರಿಸಲ್ಪ ಡುವುದರಿಂದ ಆರೋಗ್ಯಕ್ಕೆ ಹಾನಿಕಾರಕವಲ್ಲ.

ಪೋಷಕಾಂಶಗಳ ಆಗರ
ಓಲೆ ಬೆಲ್ಲದಲ್ಲಿ ಕಬ್ಬಿಣದ ಅಂಶ, ಮ್ಯಾಗ್ನೇಷಿಯಂ, ಕ್ಯಾಲ್ಸಿಯಂ, ಪೋಟಾಷಿಯಂ ಪೋಷಕಾಂಶಗಳು ಹೇರಳವಾಗಿವೆ. ಕಬ್ಬಿಣ ರಕ್ತದಲ್ಲಿರುವ ಹಿಮೋಗ್ಲೋಬಿನ್‌ ಅಂಶವನ್ನು ಹೆಚ್ಚಿಸುತ್ತದೆ ಹಾಗೂ ಸುಸ್ತು ಕಡಿಮೆಗೊಳಿಸುತ್ತದೆ. ಮ್ಯಾಗ್ನೇಷಿಯಂ ನರಮಂಡಲವನ್ನು ಸಕ್ರಿಯವಾಗಿರಿಸುತ್ತದೆ. ಬೆಲ್ಲದಲ್ಲಿರುವ ಕ್ಯಾಲ್ಸಿಯಂ ಬಲಿಷ್ಠ ಮೂಳೆಗಳಿಗೆ ಸಹಾಯಕ. ಪೋಟಾಷಿಯಂ ಹೃದಯದ ಆರೋಗ್ಯಕ್ಕೆ ಪೂರಕವಾಗಿದೆ. ಅಲ್ಲದೆ ರೋಗ ನಿರೋಧಕ ವ್ಯವಸ್ಥೆಯನ್ನು, ರಕ್ತ ಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತದೆ. ಸಕ್ಕರೆಗೆ ಹೋಲಿಸಿದರೆ ಓಲೆ ಬೆಲ್ಲ ಹೆಚ್ಚು ಆರೋಗ್ಯಕರ. ಇದು ದೇಹದ ಒಳಭಾಗವನ್ನು ಶುದ್ಧೀಕರಿಸುತ್ತದೆ. ಉಸಿರಾಟದ ಭಾಗ, ಹೊಟ್ಟೆ, ಶ್ವಾಸಕೋಶ ಹಾಗೂ ದೇಹದ ಉಳಿದ ಭಾಗಗಳಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕಿ ದೇಹದ ಆರೋಗ್ಯ ಕಾಪಾಡುತ್ತದೆ.

ಜೀರ್ಣಕ್ರಿಯೆಗೆ ಪೂರಕ
ಓಲೆ ಬೆಲ್ಲದ ಪ್ರಮುಖ ಉಪಯೋಗವೆಂದರೆ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಶಮನಗೊಳಿಸುವುದು. ಜೀರ್ಣಕಾರಿ ಕಿಣ್ವಗಳನ್ನು ಸಕ್ರಿಯಗೊಳಿಸುವುದು ಮಾತ್ರವಲ್ಲದೆ ಕರುಳಿನ ಚಲನೆಯನ್ನು ನಿಯಂತ್ರಿಸಿ ಮಲಬದ್ಧತೆ, ಅರ್ಜೀಣವನ್ನು ತಡೆಗಟ್ಟುತ್ತದೆ. ಅನಗತ್ಯ ಕಣಗಳನ್ನು ತೆಗೆದುಹಾಕಿ ಶುದ್ಧೀಕರಿಸುತ್ತದೆ. ಯಕೃತ್ತಿನ ಅಸಹ್ಯ ಪದಾರ್ಥಗಳನ್ನು ಹೊರಹಾಕುವ ಮೂಲಕ ನಿರ್ವಿಷವಾಗಿ ಕೆಲಸ ಮಾಡುತ್ತದೆ. ಮಾಧ್ಯಮ ಗಾತ್ರದ ಓಲೆ ಬೆಲ್ಲವನ್ನು ಸೇವಿಸುವುದರಿಂದ ಹೊಟ್ಟೆಯೂ ತಂಪಾಗುತ್ತದೆ.

ಮೈಗ್ರೇನ್‌ಗೆ ರಾಮಬಾಣ
ಓಲೆ ಬೆಲ್ಲದಲ್ಲಿರುವ ಔಷಧೀಯ ಗುಣಗಳು ನೈಸರ್ಗಿಕವಾಗಿ ಮೈಗ್ರೇನ್‌ ಸಮಸ್ಯೆಯನ್ನು ಕಡಿಮೆಗೊಳಿಸುತ್ತದೆ. ತುಪ್ಪದೊಂದಿಗೆ ಇದನ್ನು ಸೇವಿಸುವುದರಿಂದ ಯಾವುದೆ ಔಷಧಿಗಳ ಸಹಾಯವಿಲ್ಲ ರಕ್ತನಾಳಗಳನ್ನು ಹಾಗೂ ನೋವುಗಳನ್ನು ನಿಯಂತ್ರಣಕ್ಕೆ ತರುತ್ತದೆ.

ತ್ವಚೆಯ ರಕ್ಷಣೆ
ಇದರ ಸೇವನೆ ಆರೋಗ್ಯಕರ ಹಾಗೂ ಮೃದು ಚರ್ಮಕ್ಕೆ ಉತ್ತಮವಾದುದು. ಇದು ಮೊಡವೆಗಳನ್ನು ತಡೆದು ನೈಸರ್ಗಿಕವಾಗಿ ಹೊಳೆಯುವ ಕಾಂತಿಯನ್ನು ನೀಡುತ್ತದೆ. ಮಾತ್ರವಲ್ಲದೆ ಕಪ್ಪುವರ್ತುಲಗಳು ಬಾರದಂತೆ ತಡೆಗಟ್ಟಿ ವೃದ್ಧಾಪ್ಯದ ಚಿಹ್ನೆಗಳನ್ನು ನಿಧಾನಗೊಳಿಸುತ್ತದೆ.

ಶಕ್ತಿ ತುಂಬುವ ಬೆಲ್ಲ
ಓಲೆ ಬೆಲ್ಲದಲ್ಲಿ ಕಾರ್ಬೋಹೈಡ್ರೇಟ್‌ಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ತಿಂದ ಆಹಾರ ಬೇಗನೆ ಜೀರ್ಣವಾಗುತ್ತದೆ. ಪ್ರತಿದಿನ ಬೆಲ್ಲ ತಿನ್ನುವುದರಿಂದ ಹೆಚ್ಚು ಸಮಯದವರೆಗೆ ನಿಮಗೆ ಚುರುಕು ಹಾಗೂ ಶಕ್ತಿ ನೀಡುತ್ತದೆ. ಒಂದು ವೇಳೆ ದಿನವನ್ನು ಉತ್ತಮ ರೀತಿಯಲ್ಲಿ ಆರಂಭಿಸಲು ವಿಫ‌ಲರಾದರೆ ನಿಮ್ಮ ಆಹಾರದಲ್ಲಿ ಸೇರಿಸಿಕೊಂಡರೆ ಉತ್ತಮ.

— ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.