ಸಾಂಪ್ರದಾಯಿಕ ಶ್ರದ್ಧಾ ಭಕ್ತಿಯೊಂದಿಗೆ ಗಡಿನಾಡ ಅರಿಬೈಲು ಕಂಬಳ ಸಂಪನ್ನ


Team Udayavani, Dec 7, 2018, 12:01 PM IST

7-december-5.gif

ಮಂಜೇಶ್ವರ: ಗಡಿನಾಡಿನ ಏಕೈಕ ದೇವರ ಕಂಬಳವೆಂದೇ ಪ್ರಸಿದ್ಧಿ ಪಡೆದಿರುವ ಅರಿಬೈಲು ಶ್ರೀ ನಾಗಬ್ರಹ್ಮ ಕಂಬಳ ಸಾಂಪ್ರದಾಯಿಕ ಶ್ರದ್ಧಾ ಭಕ್ತಿಗಳೊಂದಿಗೆ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾದಿಗಳು ಶ್ರೀ ನಾಗಬ್ರಹ್ಮನಿಗೆ ಸಲ್ಲಿಕೆಯಾಯಿತು. ಒಂದು ಜೊತೆ ಉಪವಾಸದ ಕೋಣಗಳು ಕಂಬಳದಗದ್ದೆಗೆ ಇಳಿಯುವ ಮೂಲಕ ಕಂಬಳ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಈ ಸಂದರ್ಭ ಪಾವೂರು ಮೋನು ಬ್ಯಾರಿ ಅವರ ಜೊತೆ ಕೋಣಗಳು ಮೊದಲು ಉಪವಾಸದ ಕೋಣಗಳಾಗಿ ಗದ್ದೆಗಿಳಿದವು.

ಬಳಿಕ ನಡೆದ ಸಾಂಪ್ರದಾಯಿಕ ಕಂಬಳದಲ್ಲಿ ಕೌಡೂರು ಬೀಡು ಮಾರಪ್ಪ ಭಂಡಾರಿಯವರ ಎರಡು ಜೊತೆ ಕೋಣಗಳು, ತಲಪಾಡಿ ಪಂಜಾಳದ ರಕ್ಷಿತ್‌ ರವೀಂದ್ರ ಪಕಳರ ಎರಡು ಜೊತೆಕೋಣಗಳು, ಪಟ್ಟತ್ತಮೊಗರು ಹೊಸಮನೆಯ ಕೃಷ್ಣ ಶೆಟ್ಟಿ, ಕುಂಜತ್ತೂರು ಹೊಸಮನೆಯ ಶಾಂತಪ್ಪ ಶೆಟ್ಟಿ, ಕೂಟತ್ತಜೆ ನಿಡಾಬಿರಿಯ ಗೋಪಾಲ ಮಡಿವಾಳ, ಪಜಿಂಗಾರು ಬೆಟ್ಟುಮನೆಯ ಆನಂದ ಪಜಿಂಗಾರು, ಕಡಂಬಾರು ಸಂಜೀವ ಮಡಿವಾಳ, ಕಲ್ಲಾಜೆ ಜಗನ್ನಾಥ ಶೆಟ್ಟಿ, ಐತ್ತಪ್ಪ ಅರಿಬೈಲು ಇವರುಗಳ ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸಿದವು. ಈ ಪೈಕಿ ಕೌಡೂರು ಬೀಡು ಮಾರಪ್ಪ ಭಂಡಾರಿಯವರ ಬಿ ತಂಡದ ಜೋಡಿ ಪ್ರಥಮ ಬಹುಮಾನ ಪಡೆಯಿತು.

ಅರಿಬೈಲು ನೆತ್ಯದ ಗೋಪಾಲ ಶೆಟ್ಟಿ ಅರಿಬೈಲು ಅವರು ಕಂಬಳ ನಿರ್ವಹಣೆ ಮಾಡಿದರು. ಅರಿಬೈಲು ಕಟ್ಟೆಮನೆ ಪಕೀರ ಮೂಲ್ಯ, ರಮೇಶ, ನಾರಾಯಣ, ಕಟ್ಟೆಮನೆ ಗೋಪಾಲ ಮೂಲ್ಯ ಮೊದಲಾದವರು ಸಹಕರಿಸಿದರು.

ಸೂರ್ಯಾಸ್ತಮಾನದ ಹೊತ್ತಿಗೆ ಉಪವಾಸದ ಕೋಣಗಳು ಗದ್ದೆಯ ಮೇಲೇರಿ ಅದು ಗದ್ದೆಗೆ ಮೂರು ಸುತ್ತುಬಂದು ಕರಿನೀರು ಹಾಕುವುದರೊಂದಿಗೆ ಕಂಬಳ ಸಮಾರೋಪಗೊಂಡಿತು. ಬಳಿಕ ಪೂಕರೆ (ಕಂಗು ಹೂಗಳ ವಿಶೇಷ ಶೃಂಗಾರ) ಹಾಕಿ ರಾತ್ರಿ ಪೂಜೆ, ಶ್ರೀ ನಾಗಬ್ರಹ್ಮ ಉತ್ಸವಗಳೊಂದಿಗೆ ಕಂಬಳ ಸಂಪನ್ನಗೊಂಡಿತು.

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಿಂದ ವಿಶೇಷ ಆಸಕ್ತಿಯಿರುವ ನಾಗಬ್ರಹ್ಮ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇಲ್ಲಿಯ ವಿಶೇಷತೆಯಾಗಿದೆ. ಆಧುನಿಕ ಬದುಕು, ಜೀವನಪದ್ಧತಿಗಳ ಮಧ್ಯೆಯೂ ತುಳುನಾಡಿನ ಸಾಂಪ್ರದಾಯಿಕ ಕೃಷಿ ಜೀವನದ ಅಂಗವಾಗಿ ಮೂಡಿಬಂದಿರುವ ಕಂಬಳಗಳು ಇಂದು ವಿರಳವಾಗುತ್ತಿರುವಾಗ ಅರಿಬೈಲು ಕಂಬಳ ಸಂಸ್ಕೃತಿ-ಜಾನಪದಾಚರಣೆಯ ಮೂಲಕ ಇನ್ನೂ ಜೀವಂತವಾಗಿರುವುದು ಈ ತಲೆಮಾರಿನ ಸೌಭಾಗ್ಯವೆಂದೇ ಬಿಂಬಿತವಾಗಿದೆ.

ಈ ಸಂದರ್ಭ ಸ್ಥಳೀಯ ಅರಿಬೈಲು ಶ್ರೀ ನಾಗಬ್ರಹ್ಮ ಯುವಕ ಮಂಡಲದ 36 ನೇ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಅರಿಬೈಲು ಕಂಬಳಗದ್ದೆ ಸಮೀಪ ನಡೆಯಿತು. ರಾತ್ರಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದು ಪರಿಷತ್‌ ಮಾತೃ ಶಕ್ತಿ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷೆ ಮೀರಾ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ಅರವಿಂದ್‌ ಬೋಳಾರ, ಸುದೇಶ್‌ ಕುಮಾರ್‌ ರೈ ಬಿ, ಪುರುಷೋತ್ತಮ್‌ ಕೆ.ಭಂಡಾರಿ, ಅಶ್ವತ್ಥ್ಪೂ ಜಾರಿ ಲಾಲ್‌ಬಾಗ್‌, ವಿಕ್ರಮದತ್ತ ಭಾಗವಹಿಸಿದರು. ಕೃಷ್ಣ ಶೆಟ್ಟಿ ಅರಿಬೈಲು, ವಿಶ್ವನಾಥ ಶೆಟ್ಟಿ ಅರಿಬೈಲು ಹೊಸಮನೆ ಉಪಸ್ಥಿತರಿದ್ದರು.

ಹಿರಿಯ ಕೃಷಿ ಕಾರ್ಮಿಕರಾದ ಕಲ್ಯಾಣಿ ಅರಿಬೈಲು, ಮುಂಡಿ ಅರಿಬೈಲು ಅವರನ್ನು ಸಮ್ಮಾನಿಸಲಾಯಿತು. ಮ್ಯೂಸಿಕಲ್‌ ನೈಟ್‌, ವಿಭಿನ್ನ ನೃತ್ಯ ಕಾರ್ಯಕ್ರಮ, ಯಕ್ಷ-ಗಾನ-ವೈಭವ ನಡೆಯಿತು. ನಾಗಬ್ರಹ್ಮ ದೇವರ ಮಹಾಪೂಜೆ, ಪ್ರಸಾದ ವಿತರಣೆ ನೆರವೇರಿತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.