ಉತ್ತರ ಕೇರಳದ ಬಹುಕಾಲದ ಕನಸು ಕೊನೆಗೂ ನನಸು


Team Udayavani, Dec 10, 2018, 12:24 PM IST

10-december-8.gif

ಕಾಸರಗೋಡು: ಉತ್ತರ ಕೇರಳದ ಬಹುಕಾಲದ ಕನಸಾಗಿದ್ದ ಕಣ್ಣೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ರವಿವಾರ ಲೋಕಾರ್ಪಣೆಗೈಯ್ಯಲಾಯಿತು. ಅದ್ದೂರಿಯ ಹಾಗೂ ವರ್ಣರಂಜಿತ ಸಮಾರಂಭದಲ್ಲಿ ಕೇಂದ್ರ ನಾಗರಿಕ ವ್ಯೋಮಯಾನ ಖಾತೆ ಸಚಿವ ಸುರೇಶ್‌ ಪ್ರಭು ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸಂಯುಕ್ತವಾಗಿ ಫ್ಲಾಗ್‌ಆಫ್‌ ಮಾಡುವ ಮೂಲಕ ಕಣ್ಣೂರು ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೈದರು.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಕಣ್ಣೂರಿನಿಂದ ಅಬುಧಾಬಿಗೆ ಪ್ರಥಮ ಸೇವೆ ನಡೆಸುವ ಮೂಲಕ ಕಣ್ಣೂರು ಹೊಸ ಇತಿಹಾಸದ ಕ್ಷಣಕ್ಕೆ ನಾಂದಿಯಾಯಿತು. ಕಣ್ಣೂರು ವಿಮಾನ ನಿಲ್ದಾಣದಲ್ಲಿ ವಿಮಾನ ಬಂದಿಳಿಯುತ್ತಿದ್ದಂತೆ ಕೇಂದ್ರ ಸಚಿವರು, ಕೇರಳದ ಮುಖ್ಯಮಂತ್ರಿ ಮತ್ತಿತರ ಗಣ್ಯರು ಸ್ವಾಗತಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಸಾವಿರಾರು ಮಂದಿ ಭಾಗವಹಿಸಿ ವಿಮಾನ ಹಾರಾಟದ ಕ್ಷಣಕ್ಕೆ ಸಾಕ್ಷಿಯಾದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸಮಾರಂಭವನ್ನು ಉದ್ಘಾಟಿಸಿದರು. ಕೇಂದ್ರ ಸಚಿವ ಸುರೇಶ್‌ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಉದ್ದಿಮೆ ಖಾತೆ ಸಚಿವ ಇ.ಪಿ.ಜಯರಾಜನ್‌ ಅಧ್ಯಕ್ಷತೆ ವಹಿಸಿದರು. ಹಲವು ಸಚಿವರು ಸೇರಿದಂತೆ ಗಣ್ಯರು ಭಾಗವಹಿಸಿ ಮಾತನಾಡಿದರು. ಈ ನಿಲ್ದಾಣದಿಂದ ಬೆಳಗ್ಗೆ 9.55ಕ್ಕೆ ಪ್ರಥಮ ವಿಮಾನ ಆಗಸಕ್ಕೇರಿ ಪ್ರಯಾಣ ಆರಂಭಿಸಿತು. ಇದೇ ಸಂದರ್ಭದಲ್ಲಿ ಟರ್ಮಿನಲ್‌ ಅನ್ನು ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿ ಉದ್ಘಾಟಿಸಿದರು.

ಕಾಂಗ್ರೆಸ್‌, ಬಿಜೆಪಿ ಬಹಿಷ್ಕಾರ
ಕೇರಳದ ನಾಲ್ಕನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದ ಕಣ್ಣೂರು ಇಂಟರ್‌ ನ್ಯಾಶನಲ್‌ ಏರ್‌ಪೋರ್ಟ್‌ ಉದ್ಘಾಟನಾ ಸಮಾರಂಭವನ್ನು ಕಾಂಗ್ರೆಸ್‌ ಮತ್ತು ಬಿಜೆಪಿ ಬಹಿಷ್ಕರಿಸಿತು. ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡದೇ ಇರುವುದನ್ನು ಪ್ರತಿಭಟಿಸಿ ಕಾರ್ಯಕ್ರಮವನ್ನು ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಬಹಿಷ್ಕರಿಸಿತು. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯಗೊಳಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕ್ರಮವನ್ನು ಬಹಿಷ್ಕರಿಸಿತು.

ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನಗರದಿಂದ 20 ಕಿ.ಮೀ. ದೂರದಲ್ಲಿರುವ ಕಣ್ಣೂರು-ಮಟ್ಟನ್ನೂರು-ಮೈಸೂರು ರಸ್ತೆ ಸಮೀಪದಲ್ಲಿದೆ. ಕರ್ನಾಟಕದ ಕೊಡಗು ಜಿಲ್ಲೆಗೆ ಹತ್ತಿರವಾಗಿರುವ ವಿಮಾನ ನಿಲ್ದಾಣದಿಂದ ಕೊಡಗು ಮತ್ತು ಮೈಸೂರು ಜಿಲ್ಲೆಗಳ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ.

ಮಡಿಕೇರಿಯಿಂದ ನೂತನ ಕಣ್ಣೂರು ವಿಮಾನ ನಿಲ್ದಾಣವು 90 ಕಿ.ಮೀ. ಅಂತರದಲ್ಲಿದ್ದು, ಮೈಸೂರಿನಿಂದ 158 ಕಿ.ಮೀ. ದೂರದಲ್ಲಿದೆ. 11 ವಿದೇಶಿ ವಿಮಾನಗಳು, 6 ದೇಸಿ ನಾಗರಿಕ ವಿಮಾನಗಳು ಕಣ್ಣೂರಿನಿಂದ ಸೇವೆ ಆರಂಭಿಸಲಿವೆ. ಪ್ರಥಮ ಹಂತದಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗೆ 1,892 ಕೋಟಿ ರೂ. ನಿರ್ಮಾಣ ವೆಚ್ಚವಾಗಿದೆ. ಕಿಯಾಲ್‌ ಮೂಲಕ 2014 ಫೆಬ್ರವರಿಯಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿ ಆರಂಭಗೊಂಡಿತ್ತು. ತಿರುವನಂತಪುರ, ಕೊಚ್ಚಿ, ಕಲ್ಲಿಕೋಟೆಯ ನಂತರ ರಾಜ್ಯದ ನಾಲ್ಕನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗರಿ ಕಣ್ಣೂರಿಗಿದೆ.

ರಾಜ್ಯದ ನಾಲ್ಕನೇ ನಿಲ್ದಾಣ
ಕಣ್ಣೂರು ಇಂಟರ್‌ನ್ಯಾಶನಲ್‌ ಏರ್‌ಪೋರ್ಟ್‌ ಲಿಮಿಟೆಡ್‌(ಕಿಯಾಲ್‌) ಮೂಲಕ ಸಾಕಾರ ಕಂಡ ನಿರ್ಮಾಣವು ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದ ಮೂಲಕ ಪೂರ್ಣಗೊಂಡಿದೆ. ಮಟ್ಟನ್ನೂರು ನಗರಸಭಾ ವ್ಯಾಪ್ತಿಯ 2,300 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ವಿಮಾನ ನಿಲ್ದಾಣವು 2,050 ಮೀ. ಉದ್ದದ ರನ್‌ ವೇ ಹೊಂದಿದೆ. ಅದನ್ನು 4 ಸಾವಿರ ಮೀ. ವರೆಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ವಿಮಾನ ನಿಲ್ದಾಣದಿಂದ ಬೋಯಿಂಗ್‌-777 ನಂತಹ ದೊಡ್ಡ ವಿಮಾನಗಳು ಹಾರಾಟ ನಡೆಸಬಹುದಾಗಿದೆ ಎಂದು ಅಧಿಕೃತರು ತಿಳಿಸಿದ್ದಾರೆ.

ಮಾದರಿ ನಿಲ್ದಾಣ 
ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿ ವಿಮಾನ ನಿಲ್ದಾಣವಾಗಿದೆ ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳುವ ಮೂಲಕ ಕೇರಳದಿಂದ ವಿದೇಶಕ್ಕೆ ತೆರಳುವ ಉದ್ಯೋಗಾರ್ಥಿಗಳಿಗೆ ಬಹಳಷ್ಟು ಪ್ರಯೋಜನವಾಗಲಿದೆ ಎಂದ ಅವರು ಈ ನಿಲ್ದಾಣವನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಗೊಳಿಸಲಾಗುವುದು.
 – ಸುರೇಶ್‌ ಪ್ರಭು,
ಕೇಂದ್ರ ವ್ಯೋಮಯಾನ ಖಾತೆ ಸಚಿವ

ನಿರ್ಮಾಣಕ್ಕೆ ವಿಳಂಬ
1996 ರಲ್ಲಿ ವಿಮಾನ ನಿಲ್ದಾಣ ಯೋಜನೆ ಆರಂಭಿಸಿದರೂ ನನಸಾಗಲು ಇಷ್ಟು ಕಾಲ ಅಗತ್ಯವಿರಲಿಲ್ಲ. 2001 ರಿಂದ 2006 ರ ವರೆಗಿನ ಐದು ವರ್ಷಗಳ ಕಾಲ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿ ಯಾವುದೇ ಪ್ರಕ್ರಿಯೆಯೂ ನಡೆಯಲಿಲ್ಲ. ಈ ರೀತಿಯ ನಿಲುವು ಏಕೆ ತೆಗೆದುಕೊಂಡಿದೆ ಎಂದು ಅರಿಯುವುದಿಲ್ಲ2006ರಲ್ಲಿ ಅಚ್ಯುತಾನಂದನ್‌ ಸರಕಾರದ ವಿಮಾನ ನಿಲ್ದಾಣಕ್ಕೆ ಜೀವ ನೀಡಿತ್ತು.
 -ಪಿಣರಾಯಿ ವಿಜಯನ್‌,
  ಕೇರಳ ಮುಖ್ಯಮಂತ್ರಿ 

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.