ಉಪ್ಪಳದಲ್ಲಿ ಕೆ.ಎಸ್‌.ಟಿ.ಎ. ಮಂಜೇಶ್ವರ ವಲಯ ಸಮಾವೇಶ


Team Udayavani, Dec 12, 2018, 1:25 AM IST

aone-meeting-11-12.jpg

ಕುಂಬಳೆ: ಕಾಸರಗೋಡು ಜಿಲ್ಲೆಯಲ್ಲಿ ತೆರವಾಗಿರುವ ನೂರಕ್ಕೂ ಅಧಿಕ ಕನ್ನಡ ಮಾಧ್ಯಮ ಶಿಕ್ಷಕರ ತ್ವರಿತ ನೇಮಕಾತಿಗೆ ರಾಜ್ಯ ಎಡರಂಗ ಸರಕಾರವನ್ನು ಉಪ್ಪಳದಲ್ಲಿ ಜರಗಿದ ಅಧ್ಯಾಪಕ ಸಂಘಟನೆಯಾದ ಕೆ.ಎಸ್‌.ಟಿ.ಎ.ಮಂಜೇಶ್ವರ ವಲಯ ಸಮಾವೇಶ ಅಭಿನಂದಿಸಿದೆ. ಜಿಲ್ಲೆಯ ಮಂಜೇಶ್ವರ, ಕಾಸರಗೋಡು.ಮತ್ತು ಹೊಸದುರ್ಗ ತಾಲೂಕಿನ ಸುಮಾರು 200ರಷ್ಟು ವಿದ್ಯಾಲಯಗಳಲ್ಲಿ ಹೆಚ್ಚಿನ ಸರಕಾರಿ ಕಿರಿಯ ಹಿರಿಯ ಪ್ರಾಥಮಿಕ ಮತ್ತು ಹೈಸ್ಕೂಲುಗಳಲ್ಲಿ ಕಳೆದ ಕೆಲವು ವರ್ಷಗಳಿಂದ ಕನ್ನಡ ಮಾಧ್ಯಮ ಶಿಕ್ಷಕರ ನೇಮಕಾತಿ ನನೆಗುದಿಗೆ ಬಿದ್ದು ಸುಗಮ ಶಿಕ್ಷಣ ವ್ಯವಸ್ಥೆಗೆ ಅಡ್ಡಿಯಾಗಿತ್ತು. ಪ್ರಸ್ತುತ ಎಡರಂಗ ಸರಕಾರದ ಶಿಕ್ಷಣ ಸಂರಕ್ಷಣೆ ಯಜ್ಞದ ಧೋರಣೆಯ ಫಲವಾಗಿ ತ್ವರಿತ ನೇಮಕಾತಿಗೆ ಚಾಲನೆ ದೊರೆತಿದೆ.

ನೆರೆಯ ಕರ್ನಾಟಕದಲ್ಲಿ ನೂರಾರು ಶಾಲೆಗಳನ್ನು ಮುಚ್ಚಿ ಶಿಕ್ಷಕ ಹುದ್ದೆಗಳನ್ನು ಕಡಿತಗೊಳಿಸುವಾಗ ಕೇರಳದಲ್ಲಿ ಒಂದು ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕನಿಷ್ಠ 8ಕ್ಕಿಂತ ಕಡಿಮೆ ಇದ್ದರೂ ಹುದ್ದೆ ಕಡಿತವಾಗದಂತೆ ಸರಕಾರ ನಿಗಾ ವಹಿಸಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ  ವಿದ್ಯಾರ್ಥಿಗಳಿರುವ ಕಿರಿಯ ಹಿರಿಯ ವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಶಿಕ್ಷಕ ನಿಷ್ಪತ್ತಿಯನ್ನು 1:30ರಿಂದ 1:35ಕ್ಕೆ ಇಳಿಸಿ ನೂತನ ಹುದ್ದೆಯನ್ನು ಸೃಷ್ಟಿಸಿದೆ.ಆದುದರಿಂದ ಶೀಘ್ರದಲ್ಲಿ ನೂರರಷ್ಟು ಕನ್ನಡ ಶಿಕ್ಷಕ ಉದ್ಯೋಗಾರ್ಥಿಗಳು ನೇಮಕಾತಿ ಪಡೆಯಲಿರುವರು. ಎಡರಂಗ ಸರಕಾರದ ಶಿಕ್ಷಣಪರ ಧೋರಣೆಯನ್ನು ಕೆ.ಎಸ್‌.ಟಿ.ಎ. ಸಮಾ ವೇಶದಲ್ಲಿ ವಿಶೇಷ ಠರಾವಿನ ಮೂಲಕ ಪ್ರಶಂಸಿಸಲಾಯಿತು.

ಉಪ್ಪಳ ಸರಕಾರಿ ವಿದ್ಯಾಲಯದಲ್ಲಿ ಜರಗಿದ 28ನೇ ಕೆ.ಎಸ್‌.ಟಿ.ಎ.ಉಪಜಿಲ್ಲಾ ವಾರ್ಷಿಕ ಸಮ್ಮೇಳನವನ್ನು ಸಂಘಟನೆಯ ಪ್ರಾಂತ ಸಮಿತಿ ಸದಸ್ಯ ದಿಲೀಪ್‌ ಕುಮಾರ್‌ ಉದ್ಘಾಟಿಸಿದರು. ವಿಜಯಕುಮಾರ್‌ ಪಾವಳ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ.ವಿ. ರಾಜೇಶ್‌ ಸಂಘಟನಾ ವರದಿ ಮಂಡಿಸಿದರು. ಸಂಘಟನೆಯ ರಾಜ್ಯ ಸಮಿತಿ ಸದಸ್ಯೆ ಶಾಂತ ಕುಮಾರಿ, ಜಿಲ್ಲಾ ಉಪಾಧ್ಯಕ್ಷ ಮೋಹನ್‌ ಬಿ., ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ವಿಷ್ಣುಪಾಲ್‌, ಬಿ.ಶ್ಯಾಮ ಭಟ್‌, ದಿನೇಶ್‌ ವಿ., ಜಿಲ್ಲಾ ಸಮಿತಿ ಸದಸ್ಯ ಪ್ರೇಮರಾಜನ್‌ ಶುಭ ಹಾರೈಸಿದರು.ಉಪಜಿಲ್ಲಾ ಕಾರ್ಯದರ್ಶಿ ಅಹಮ್ಮದ್‌ ಹುಸೈನ್‌ ಪಿ.ಕೆ. ವರದಿ ಮಂಡಿಸಿ ಸ್ವಾಗತಿಸಿದರು. ರತೀಶ್‌ಬಾಬು ಹುತಾತ್ಮ ಮತ್ತು ಕೃಷ್ಣವೇಣಿ ಶ್ರದ್ಧಾಂಜಲಿ ಠರಾವು ಮಂಡಿಸಿದರು. ವಿಜಯಾ ಸಿ.ಎಚ್‌.ವಂದಿಸಿದರು. ನವೋತ್ಥಾನ ಮೌಲ್ಯಗಳನ್ನು ಸಂರಕ್ಷಿಸಲು ಮತ್ತು ಸಹಸ್ರಾರು ಅಧ್ಯಾಪಕ ಸರಕಾರಿ ನೌಕರ ವರ್ಗವನ್ನು ಭಾಧಿಸುತ್ತಿರುವ ಸಹಭಾಗಿತ್ವ ಪಿಂಚಣಿ ಪರಿಶೀಲನೆಗೆ ಸಮಿತಿ ರಚನೆ ಮುಂದಾಗಿರುವ ಸರಕಾರಕ್ಕೆ ಅಭಿನಂದನೆ ಎಂಬ ಠರಾವುಗಳನ್ನು ಸಭೆಯಲ್ಲಿ ಮಂಡಿಸಲಾಯಿತು.

ಅನುದಾನಕ್ಕೆ ಅಭಿನಂದನೆ
ಮೊಗ್ರಾಲ್‌ ಪುತ್ತೂರು ಸರಕಾರಿ ಹೈಸ್ಕೂಲಿಗೆ 5 ಕೋಟಿ ರೂ., ಪೈವಳಿಕೆ ನಗರ ಮತ್ತು ಅಂಗಡಿಮೊಗರು ಸರಕಾರಿ ಹೈಸ್ಕೂಲುಗಳಿಗೆ ತಲಾ 3 ಕೋಟಿ ರೂ. ನಿಧಿ ಅನುದಾನ ಮಂಜೂರು ಮಾಡಿದ ರಾಜ್ಯ ಸರಕಾರವನ್ನು ಸಮಾವೇಶದಲ್ಲಿ ಅಭಿನಂದಿಸಲಾಯಿತು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.