ಮುಂದಿನ ವರ್ಷ ಜಿಲ್ಲೆಯಲ್ಲಿ ರಾಜ್ಯ ಶಾಲಾ ಕಲೋತ್ಸವ: ಡಾ| ಗಿರೀಶ್
Team Udayavani, Dec 14, 2018, 2:25 AM IST
ಕಾಸರಗೋಡು: 60ನೇ ರಾಜ್ಯಮಟ್ಟದ ಶಾಲಾ ಕಲೋತ್ಸವ ಮುಂದಿನ ವರ್ಷ ಜಿಲ್ಲೆಯಲ್ಲಿ ವೈಭವಯುತವಾಗಿ ನಡೆಯಲಿದೆ ಎಂದು ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಡಾ| ಗಿರೀಶ್ ಚೋಲಯಿಲ್ ಹೇಳಿದರು. ಮುಂದಿನ ವರ್ಷ ಕಲೋತ್ಸವ ನಡೆಸುವ ಜಿಲ್ಲೆಗೆ ಧ್ವಜ ಹಸ್ತಾಂತರಿಸುವ ಕಾರ್ಯಕ್ರಮ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದು, ಅವರು ಜಿ. ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್ ಅವರಿಗೆ ಧ್ವಜ ಹಸ್ತಾಂತರಿಸಿದರು.
ಈ ವರ್ಷ ಸಂಭವಿಸಿದ ಜಲದುರಂತ ಹಿನ್ನೆಲೆಯಲ್ಲಿ ಸರಕಾರ ವೆಚ್ಚ ಕಡಿತ ನೀತಿ ಜಾರಿಗೊಳಿಸಿದ್ದ ಕಾರಣ ಹೆಚ್ಚುವರಿ ಗೌಜಿಗದ್ದಲಗಳಿಲ್ಲದೆ ರಾಜ್ಯ ಮಟ್ಟದ ಶಾಲಾ ಕಲೋತ್ಸವ ನಡೆಸಬೇಕಾಗಿ ಬಂದಿತ್ತು. 27 ವರ್ಷಗಳ ಬಳಿಕ ಕಲೋತ್ಸವವನ್ನು ವರ್ಣ ರಂಜಿತವಾಗಿ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಸಂಘಟಕ ಸಮಿತಿ ಸಭೆಯನ್ನೂ ನಡೆಸಲಾಗುವುದು ಎಂದವರು ಹೇಳಿದರು. ಜಿಲ್ಲಾಧಿಕಾರಿ ಡಾ| ಡಿ.ಸಜಿತ್ ಬಾಬು ಅವರ ಸಮಕ್ಷದಲ್ಲಿ ಈ ಸಮಾರಂಭ ನಡೆಯಿತು. ಜಿಲ್ಲಾ ಮಾಹಿತಿ ಅಧಿಕಾರಿ ರಶೀದ್ಬಾಬು, ಸಹಾಯಕ ಮಾಹಿತಿ ಅಧಿಕಾರಿ ಸಿ.ಟಿ.ಜೋನ್, ವಿವಿಧ ಇಲಾಖೆಗಳ ಪ್ರತಿನಿಧಿಗಳು, ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ