ವಾಹನ ಸವಾರರ ದೂರು: ಚೆರ್ಕಳ ವೃತ್ತ ತೆರವು
Team Udayavani, Dec 19, 2018, 3:55 AM IST
ವಿದ್ಯಾನಗರ: ನಾಡಿನ ಜನಸಂಖ್ಯೆ ಹೆಚ್ಚಾದಂತೆ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯುತ್ತವೆಯಾದರೂ ಕೆಲವೊಮ್ಮೆ ಅರ್ಧದಾರಿಯಲ್ಲೇ ಉಳಿದು ಕೈಗೆ ಬಂದದ್ದು ಬಾಯಿಗಿಲ್ಲದ ಪರಿಸ್ಥಿತಿ ಉಂಟಾಗುತ್ತದೆ. ಆಸಕ್ತಿಯಿಂದ ಕೈಗೊಂಡ ಅಭಿವೃದ್ಧಿ ಯೋಜನೆಗಳು ಕಡತಗಳಲ್ಲೇ ಉಳಿದು ಜನರಿಗೆ ಅನ್ಯಾಯವಾಗುವುದು ಕಂಡುಬರುತ್ತದೆ. ವ್ಯವಸ್ಥಿತವಲ್ಲದ ಯೋಜನೆಗಳಿಂದ ಉಂಟಾಗುವ ಸಮಸ್ಯೆಗಳು ಇನ್ನೊಂದೆಡೆ. ಇದಕ್ಕೊಂದು ಸ್ಪಷ್ಟ ಉದಾಹರಣೆ ಚೆರ್ಕಳ ವೃತ್ತ.
ಅವ್ಯವಸ್ಥಿತ ನಗರವಾಗಿದ್ದ ಚೆರ್ಕಳ ಪೇಟೆ ಸಮಸ್ಯೆಗಳ ಆಗರವಾಗಿದ್ದ ಸಂದರ್ಭದಲ್ಲಿ ಜನರ ಸತತ ಬೇಡಿಕೆಗೆ ಪ್ರತಿಫಲವೆಂಬಂತೆ ಸುಸಜ್ಜಿತ ಬಸ್ಸು ತಂಗುದಾಣ ನಿರ್ಮಿಸಲಾಯಿತು. ಮಾತ್ರವಲ್ಲದೆ ಪೇಟೆಯ ಹೃದಯಭಾಗದಲ್ಲಿ ಟ್ರಾಫಿಕ್ ವೃತ್ತ ಹಾಗೂ ತಮ್ಮ ವೈಯಕ್ತಿಕ ಅಗತ್ಯಗಳಿಗಾಗಿ ವಾಹನ ನಿಲುಗಡೆಗೊಳಿಸಲು ಅನುವಾಗುವಂತೆ ಹಿರಿದಾದ ವೃತ್ತವೊಂದನ್ನು ನಿರ್ಮಿಸಲಾಯಿತು. ಆದರೆ ಅನುಕೂಲಕ್ಕಾಗಿ ನಿರ್ಮಿಸಿದ ವೃತ್ತ ನಿರ್ಮಾಣ ಹಂತದಲ್ಲಿಯೇ ವಾಹನ ಚಾಲಕರ ಹಾಗೂ ಪ್ರಯಾಣಿಕರ ವಿರೋಧಕ್ಕೆ ಕಾರಣವಾಗಿತ್ತು.
ಪುನರ್ನಿರ್ಮಾಣ
ಇತ್ತೀಚೆಗೆ ಕಾಸರಗೋಡಿಗೆ ಆಗಮಿಸಿದ ಸಚಿವ ಜಿ.ಸುಧಾಕರನ್ ವೃತ್ತದ ಕಾಮಗಾರಿ ಪುನರಾರಂಭಿಸುವಂತೆ ಸೂಚಿಸಿದ್ದಾರೆ. ಇದಕ್ಕಾಗಿ 75 ಲಕ್ಷ ರೂ. ಮೊತ್ತವನ್ನು ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ. ಮೊತ್ತ ಬಿಡುಗಡೆಯಾದಲ್ಲಿ ಈ ಆರ್ಥಿಕ ವರ್ಷದಲ್ಲಿಯೇ ವೃತ್ತದ ಪುನರ್ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.
-ಎನ್.ಎ. ನೆಲ್ಲಿಕುನ್ನು, ಕಾಸರಗೋಡು ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!