ಚೆಸ್‌ನಲ್ಲಿ ಮಿಂಚಿದ ಗಡಿನಾಡಿನ ಕನ್ನಡ ಹುಡುಗ


Team Udayavani, Dec 19, 2018, 4:10 AM IST

chess-18-12.jpg

ಬದಿಯಡ್ಕ: ಗಡಿನಾಡಿನ ಬಾಲಕನೊಬ್ಬ ತನ್ನ ಬುದ್ಧಿ ಸಾಮರ್ಥ್ಯದಿಂದ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾನೆ. ಆ ಮೂಲಕ ರಾಷ್ಟ್ರ ಮಟ್ಟದಲ್ಲಿ ಗಡಿನಾಡಿನ ಪ್ರತಿಭೆಗಳು ಮಾಡಿದ ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿ ಮೂಡಿಸಿದ ಬಾಲಕನೇ ಗಗನ್‌ ಭಾರದ್ವಾಜ್‌. ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೆ„ಯರ್‌ ಸೆಕೆಂಡರಿ ಶಾಲೆಯ ವಿದ್ಯಾರ್ಥಿ, ಕುಂಬ್ಡಾಜೆ ಕಾನಕಜೆಯ ಗಗನ್‌ ಕೇರಳ ರಾಜ್ಯದ ಸೀನಿಯರ್‌ ವಿಭಾಗದ ಚೆಸ್‌ ತಂಡದಲ್ಲಿ ಸ್ಪರ್ಧಿಸಿ ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಪಡೆದಿದ್ದಾನೆ. ಕೇರಳ ತಂಡ ಚಾಂಪ್ಯಯನ್‌ಶಿಪ್‌ ಪಡೆಯುವಲ್ಲಿ ಈತ ಪ್ರಧಾನ ಪಾತ್ರ ವಹಿಸಿದ್ದು ಜಿಲ್ಲೆ ಹೆಮ್ಮೆ ಪಡುವಂತೆ ಮಾಡಿದ್ದಾನೆ.

ನ್ಪೋರ್ಟ್ಸ್ ಆ್ಯಂಡ್‌ ಗೇಮ್ಸ್‌ ಫೆಡರೇಶನ್‌ ಆಫ್‌ ಇಂಡಿಯದ ಆಶ್ರಯದಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ನಾರಾಯಣಪುರಂನಲ್ಲಿ ಡಿ.9ರಿಂದ ಡಿ.12ರ ತನಕ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಎದುರಾಳಿಗಳಿಗೆ ಪ್ರಬಲವಾದ ಪೈಪೋಟಿ ನೀಡಿ ಕೇರಳ ರಾಜ್ಯ ಚಾಂಪಿಯನ್‌ಶಿಪ್‌ ತನ್ನದಾಗಿಸಿಕೊಂಡಿದೆ. ದೇಶದ ಎಲ್ಲ ರಾಜ್ಯಗಳಿಂದ ಆಯ್ಕೆಯಾದ 5 ಮಂದಿಯ ತಂಡಗಳು ಸ್ಪರ್ಧಾಕಣದಲ್ಲಿದ್ದವು. ಹಲವು ಬಾರಿ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ತನ್ನ ಚದುರಂಗದ ನಿಪುಣತೆಯನ್ನು ಮೆರೆದಿರುವ ಗಗನ್‌ ಭಾರದ್ವಾಜ್‌ ಎ.ಎಲ್‌.ಪಿ. ಶಾಲೆ ಪನೆಯಾಲ ಇಲ್ಲಿನ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್‌ ಮತ್ತು ನಯನ ದಂಪತಿಯ ಪುತ್ರ. ಪ್ರಸ್ತುತ ಅಗಲ್ಪಾಡಿ ಶಾಲೆಯ ಪ್ಲಸ್‌ ಟು ವಿದ್ಯಾರ್ಥಿ. ಚದುರಂಗದ ಚೌಕದೊಳಗೆ ಕಪ್ಪು ಬಿಳುಪು ಕಾಯಿಗಳ ಚಲನವಲನಗಳಲ್ಲಿನ ಸೂಕ್ಷ್ಮತೆಯನ್ನು ಸರಿಯಾಗಿ ಗಮನಿಸಿ ಜಾಣತನದಿಂದ, ಬುದ್ಧಿವಂತಿಕೆಯಿಂದ ಗೆಲುವನ್ನು ತನ್ನದಾಗಿಸುವ  ಈ ಕಿರಿವಯಸ್ಸಿನ ದೊಡ್ಡ ಸಾಧನೆ ಶ್ಲಾಘನೀಯ.

ಮಂಗಳೂರಿನ ಡೆರಿಕ್‌ ಚೆಸ್‌ ಶಾಲೆಯ ಬೇಸಗೆ ಶಿಬಿರಗಳಲ್ಲಿ ಭಾಗವಹಿಸಿ ತರಬೇತಿ ಪಡೆದಿರುವ ಗಗನ್‌ ಈ ಹಿಂದೆ ಕಾಂಞಂಗಾಡ್‌ ರಾಮನ್‌ ನಂಬೂದಿರಿ ತರಬೇತುದಾರರಾಗಿದ್ದು ಈಗ ಸುಬ್ರಹ್ಮಣ್ಯ ಕಾಂಞಂಗಾಡ್‌ ಹೆಚ್ಚಿನ ತರಭೇತಿ ನೀಡುತ್ತಿದ್ದಾರೆ. ಕಾಸರಗೋಡು ಚೆಸ್‌ ಅಸೋಸಿಯೇಷನ್‌ನ ರಾಜೇಶ್‌ ಮಾಸ್ಟರ್‌ ಬೆಂಬಲ ಹಾಗೂ ಮಾರ್ಗದರ್ಶನ ನೀಡುತ್ತಿದ್ದಾರೆ.

ಶಾಲೆ, ಉಪಜಿಲ್ಲೆ ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದುವಲಯ ಮಟ್ಟಕ್ಕೆ ಆಯ್ಕೆಯಾದ ಗಗನ್‌ ಅಲ್ಲಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ರಾಷ್ಟ್ರಮಟ್ಟದ ಸ್ಪರ್ಧಾ ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾನೆ. ಚೆಸ್‌ ಅಸೋಸಿಯೇಶನ್‌ ಸೀನಿಯರ್‌ ರ್ಯಾಪಿಡ್‌ ಟೂರ್ನಿ, ಕೇರಳೋತ್ಸವ ಚೆಸ್‌ ಸ್ಪರ್ಧೆ, ಕೇರಳ ರಾಜ್ಯ ಮುಕ್ತ ಚೆಸ್‌ ಸ್ಪರ್ಧೆಗಳಲ್ಲಿ ತನ್ನ ಕೈಚಳಕ ತೋರಿದ್ದಾನೆ. ಕನ್ನಡ ಹುಡುಗನ ಈ ಗೆಲುವಿನ ಜೈತ್ರಯಾತ್ರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದುಮಾಡುವಂತಾಗಲಿ ಎಂಬ ಹಾರೈಕೆ ಕಾಸರಗೋಡಿನ ಕನ್ನಡಿಗರದ್ದು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.