ಸಾಹಿತಿ, ಕಲಾವಿದರ ಸುಖ ದುಃಖ ತೆರೆದುಕೊಂಡ ‘ಸಾಹಿತ್ಯ ಸಂತೆ’


Team Udayavani, Dec 24, 2018, 12:51 PM IST

24-december-9.gif

ಕಾಸರಗೋಡು: ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಕರಂದಕ್ಕಾಡಿನ ‘ಪದ್ಮಗಿರಿ ಕಲಾಕುಟೀರ’ದಲ್ಲಿ ‘ಸಾಹಿತ್ಯ ಸಂತೆ’ ಬದುಕಿನ ಸಣ್ಣ ಸುಖಗಳು…. ಎನ್ನುವ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಹಿತಿ, ಕಲಾವಿದರು ತಮ್ಮ ಸುಖ, ದು:ಖವನ್ನು ತೆರೆದುಕೊಂಡು ಕಾರ್ಯಕ್ರಮಕ್ಕೆ ಹೊಸ ರಂಗು ನೀಡಿದರು.

ಡಾ|ವಿವೇಕ ರೈ, ಡಾ|ನಾ.ದಾಮೋದರ ಶೆಟ್ಟಿ, ಖ್ಯಾತ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಪಿ.ಎಸ್‌.ಪುಣಿಂಚಿತ್ತಾಯ, ಖ್ಯಾತ ವೈದ್ಯ ಡಾ|ಶ್ರೀಪಾದ್‌ ರಾವ್‌, ಪತ್ರಕರ್ತ ಯು.ಕೆ.ಕುಮಾರನಾಥ್‌ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಯಾವುದೇ ಕಾರ್ಯದಲ್ಲೂ ಸಾಕಷ್ಟು ಚಿಂತಿಸಿದ ಬಳಿಕವೇ ಮುನ್ನಡಿ ಇಡಬೇಕು. ಇಲ್ಲದಿದ್ದರೆ ಬದುಕಿನಲ್ಲಿ ಸಮಸ್ಯೆಗಳ ಸರಮಾಲೆ ಎದುರಿಸಬೇಕಾಗುತ್ತದೆ ಎಂದು ಡಾ|ವಿವೇಕ ರೈ ಅವರು ಹೇಳಿದರು. ಈ ಮಾತುಗಳಿಗೆ ಜರ್ಮನಿಯಲ್ಲಿ ಕಳೆದ ದಿನಗಳಲ್ಲಿ ಎದುರಿಸಿದ ಸಮಸ್ಯೆಗಳನ್ನು ಉದಾಹರಣೆಯನ್ನಿತ್ತರು. ಮನುಷ್ಯ ರಿಲ್ಯಾಕ್ಸ್‌ ಆದಾಗ ಸಾಧನೆಗೆ ಸುಗಮವಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಕಾಲದ ಹರಿವಿನಲ್ಲಿ ಕೊಚ್ಚಿಹೋದ, ಹತ್ತಿರವಿದ್ದರೂ ದೂರವಾದ, ತೆರೆಯಲೆತ್ನಿಸಿದರೂ ಮುಚ್ಚಿಹೋದ, ನಗಲೆತ್ನಿಸಿದರೂ ಅಳುವಾದ, ಅಳಲೆತ್ನಿಸಿದರೆ ಜೀವನವೇ ಆದ, ಎಷ್ಟೆಷ್ಟೋ ಪರಸ್ಪರ ಹಂಚ ಬೇಕಾಗಿದ್ದ ಸಿಹಿ ಕಹಿ ನೆನಪುಗಳು, ಕಾಲಗರ್ಭದೊಳಗಿಂದ ಹೊರ ಜಿಗಿಯಲು ಇದೊಂದು ವಿಶಿಷ್ಟ, ವಿಭಿನ್ನ ಅವಕಾಶವನ್ನೊದಗಿಸಿತು.

ಕಾರ್ಯಕ್ರಮದಲ್ಲಿ ರವೀಂದ್ರ ಜೋಷಿ, ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಡಾ|ವಸಂತ ಕುಮಾರ್‌ ಪೆರ್ಲ, ಶಶಿರಾಜ ಕಾವೂರು, ಬಿ.ಎನ್‌. ಸುಬ್ರಹ್ಮಣ್ಯ, ಸ್ನೇಹಲತಾ ದಿವಾಕರ್‌, ಕವಿತಾ ಕೂಡ್ಲು, ಗೀತಾ ಕೋಟೆ ಸುಳ್ಯ, ಸೀತಾಲಕ್ಷ್ಮೀ ಕರ್ಕಿಕೋಡಿ, ಚೇತನ ಕುಂಬಳೆ, ಯಶವಂತ ಬೋಳೂರು, ಮಲಾರ್‌ ಜಯರಾಮ ರೈ, ಯೋಗೀಶ್‌ ರಾವ್‌ ಚಿಗುರುಪಾದೆ, ಪ್ರವೀಣ ಪುಣಿಂಚಿತ್ತಾಯ, ಮುಹಮ್ಮದ್‌ ಅನ್ಸಾರಿ, ಜ್ಯೋತಿಪ್ರಭಾ ಎಸ್‌.ರಾವ್‌, ಬಿ.ನರಸಿಂಗ ರಾವ್‌, ಹರೀಶ್‌ ಒಡ್ಡಂಬೆಟ್ಟು, ಗಣೇಶ್‌ ಪೈ ಬದಿಯಡ್ಕ, ಗೋವಿಂದ ಭಟ್‌ ಬಳ್ಳಮೂಲೆ, ಡಾ|ಸುದೇಶ್‌ ರಾವ್‌, ಟಿ.ಶಂಕರನಾರಾಯಣ ಭಟ್‌, ಕಿಶೋರ್‌ ಪೆರ್ಲ, ಸಾಯಿಭದ್ರಾ ರೈ, ಸತೀಶ್ಚಂದ್ರ ಭಂಡಾರಿ ಕೋಳಾರು, ಜಯಾನಂದ ಹೊಸದುರ್ಗ, ಬಿ.ರಾಮಮೂರ್ತಿ, ಸುಬ್ಬಣ್ಣ ಶೆಟ್ಟಿ, ಉದಯ ಕುಮಾರ್‌ ಮನ್ನಿಪ್ಪಾಡಿ, ರಘು ಮೀಪುಗುರಿ ಮೊದಲಾದವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ರಂಗಚಿನ್ನಾರಿ ಸಂಚಾಲಕ ಕಾಸರಗೋಡು ಚಿನ್ನಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಭಯ ನಿವಾರಣೆಯಾಗಬೇಕು
ಮಕ್ಕಳಲ್ಲಿ ಭಯ ಹುಟ್ಟಿಸುವುದರಿಂದ ಜೀವನ ಪರ್ಯಂತ ಭಯ ಕಾಡುತ್ತಿರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಭಯವನ್ನು ಹುಟ್ಟಿಸದೆ ವಾಸ್ತವವನ್ನು ಮನನ ಮಾಡಬೇಕು ಎಂದು ಡಾ|ನಾ.ದಾಮೋದರ ಶೆಟ್ಟಿ ಅವರು ಹೇಳಿದರು.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.