ಗದ್ದಿಕ ಮಹೋತ್ಸವ-2018: ಪರಂಪರಾಗತ ವನಭೋಜನ ಸವಿ ಸಿದ್ಧ


Team Udayavani, Dec 25, 2018, 3:41 PM IST

25-december-12.gif

ಕಾಸರಗೋಡು : ಕಾಡಿನೊಳಗೂ ಹಸಿವರಳಿಸುವ ರುಚಿಕರ ಭಂಡಾಗಾರ ಅಡಗಿಕೊಂಡಿದೆ. ಆರೋಗ್ಯಕರ ಆಹಾರ ಪ್ರಿಯರಿಗಾಗಿಯೇ ಮಿತದರದಲ್ಲಿ ಅವನ್ನು ಸವಿಯಲು ವೇದಿಕೆಯೊಂದು ಸಿದ್ಧವಾಗಿದೆ. ಕುಟುಂಬ ಸಮೇತರಾಗಿ ಇವನ್ನು ಸೇವಿಸುವ ಮನಸ್ಸಿದೆಯೇ….ಬನ್ನಿ ಗದ್ದಿಕ ಮಹೋತ್ಸವಕ್ಕೆ…

ಕಾಲಿಕಡವು ಮೈದಾನದಲ್ಲಿ ನಡೆಯುತ್ತಿರುವ ಗದ್ದಿಕ – 2018 ಸಾಂಸ್ಕೃತಿಕೋತ್ಸವಕ್ಕೆ ಹೆಚ್ಚುವರಿ ಆಕರ್ಷಿಸುವ ನಿಟ್ಟಿನಲ್ಲಿ ಇಲ್ಲಿನ ಪರಂಪರಾಗತ ವಿಶಿಷ್ಟ ವಿಶೇಷ ಆಹಾರ ಮಳಿಗೆ ಜನತೆಯನ್ನು ತನ್ನತ್ತ ಸೆಳೆಯುತ್ತಿದೆ. ಇಂದಿನ ಯಾಂತ್ರಿಕ ಯುಗದಲ್ಲಿ ನಾವು ಕೇಳಿಯೂ ಅರಿಯದ ಪೌಷ್ಠಿಕ ಆಹಾರ ವೈವಿಧ್ಯವನ್ನು ಉಣಮಡಿಸುವ ವಿಶಾಲ ಸ್ಟಾಲೊಂದು ಇಲ್ಲಿ ತೆರೆದುಕೊಂಡಿದೆ. ಪೂರ್ಣ ಅರಣ್ಯಜನ್ಯವಾದ ಸಾಮಾಗ್ರಿಗಳಿಂದ ತಯಾರಿಸಿದ ಖಾದ್ಯಗಳು, ಪೇಯಗಳು ಇಲ್ಲಿ ಲಭ್ಯವಿದೆ. ಜೊತೆಗೆ ಜನಪ್ರಿಯ ಖಾದ್ಯಗಳೂ ಕೊಂಚ ವಿಭಿನ್ನ ಶೈಲಿಯಲ್ಲಿ ತಯಾರಿಸಿ ಬಡಿಸಲಾಗುತ್ತಿದೆ.

ಬೇಡಿಕೆಯ ಖಾದ್ಯಗಳು: ಪರಿಶಿಷ್ಟರಲ್ಲಿ ಸೇರಿದ ಕುರುಮ ಜನಾಂಗದವರ ವಿಶೇಷ ಖಾದ್ಯ ಕಲ್ಲಿಪುಟ್ಸ್‌ ಇಲ್ಲಿ ಬಲು ಬೇಡಿಕೆಯ ತಿನಿಸಾಗಿದೆ. ಗಂಧಸಾಲೆ ಅಕ್ಕಿ ಅರೆದು, ನಂತರ ಅರಣ್ಯದಲ್ಲಿ ಲಭಿಸುವ ವಿಶೇಷ ಸಾಮಾಗ್ರಿಗಳನ್ನು ಮೆರೆಸಿ ಸಿದ್ಧಗೊಳಿಸುವ ಖಾದ್ಯವಿದು. ಬಿದಿರಕ್ಕಿ ಪಾಯಸ, ಸುವರ್ಣಗೆಡ್ಡೆ ಪಾಯಸ ಇತ್ಯಾದಿಗಳು ಮೇಳದ ಸವಿ ಹೆಚ್ಚಿಸುತ್ತಿವೆ. ತುಳುನಾಡಿನ ಜನಪ್ರಿಯ ಕಜ್ಜಾಯವನ್ನು ಹೋಲುವ ಕಾರಿಕುಂಡ್‌ ಅಪ್ಪಂ, ರಾಗಿ ಬಾಳೆಹಣ್ಣಿನ ಪೋಡಿ, ರಾಗಿ ವಡೆ, ರಾಗಿ ರೊಟ್ಟಿ ಇತಾದಿಗಳೂ ಇಲ್ಲಿ ಆಕರ್ಷಕವಾಗಿವೆ.

ಸುಮಾರು ಇಪ್ಪತ್ತು ಬಗೆ ಔಷಧ ಸತ್ವಗಳನ್ನು ಬೆರೆಸಿ ತಯಾರಿಸಿದ ಬಿಸಿ ಬಿಸಿ ಔಷಧ ಕಾಫಿಗೆ ಇಲ್ಲಿ ಬೇಡಿಕೆ.. ಕೆಮ್ಮು, ಕಫದ ಉಪಟಳ, ಉಸಿರಾಟದ ಸಮಸ್ಯೆ ಇದ್ದವರಿಗೆ ಇದು ರಾಮಬಾಣ ಎಂದು ಸ್ಟಾಲ್‌ ಪ್ರತಿನಿಧಿಗಳು ಹೇಳುತ್ತಾರೆ. ತಿನಿಸು ತಿನ್ನುವುದು ಒಂದು ಅನುಭವವಾದರೆ, ಇವುಗಳನ್ನು ಒಮ್ಮೆ ನೋಡುವುದೂ ಅನುಭವ. ಈ ಬಗ್ಗೆ ಸಂಗ್ರಹಿಸುವ ಮಾಹಿತಿಯೇ ಅದ್ಭುತ ತಿಳಿವಳಿಕೆ. ಇದಕ್ಕೆ ವೇದಿಕೆಒದಗಿಸಿರುವುದು ಗದ್ದಿಕ ಮೇಳ. ಅಪರಾಹ್ನ 3 ರಿಂದ ರಾತ್ರಿ 9 ಗಂಟೆಯವರೆಗೆ ತೆರೆದುಕೊಂಡಿರುವ ಈ ಮೇಳಕ್ಕೆ ಕುಟುಂಬ ಸಮೇತ ಕುಳಿತು ಉಣ್ಣಬಹುದಾದ ವ್ಯವಸ್ಥೆಯನ್ನು ಒದಗಿಸಲಾಗಿದೆ. 

ಪಲ್ಯವೂ ಉಂಟು
ಅರಣ್ಯದಲ್ಲಿ ಸಿಗುವ ಕಾರಪ್ಪ್ ಎನ್ನುವ ಮರದ ಎಲೆಯೊಂದಿಗೆ ಸಿಗಡಿ ಮೀನು ಸೇರಿಸಿ ಕಲ್ಲಿನಲ್ಲಿ ಅರೆದು ತಯಾರಿಸುವ ಕಾರಪ್ಪ್ ತೋರನ್‌(ಪಲ್ಯ) ಜನಜನಿತವಾಗಿದೆ. ಇದರಲ್ಲಿ ಅನೇಕ ಪೋಷಕಾಂಶಗಳು ಅಡಗಿಕೊಂಡಿವೆ ಎನ್ನುತ್ತಾರು ಇಲ್ಲಿನ ಪರಿಣತರು.

ಇಲ್ಲಿದೆ ದೊಡ್ಡ ಜಾತಿಯ ಇರುವೆ ಚಣ್ಣಿ 
ಮಾಂಸಾಹಾರಿ ವಿಭಾಗದ ಜನತೆಗೆ ವಿಶೇಷ ಆಕರ್ಷಣೆ ನೀಡುವ ಇರುವೆಯಿಂದ ತಯಾರಿಸಿದ ಚಣ್ಣಿ  ಈ ಮೇಳದಲ್ಲಿ ಬಹುಬೇಡಿಕೆಯನ್ನು ಹೊಂದಿದೆ. ಇದು ಪರಿಶಿಷ್ಟ ಜನಾಂಗದಲ್ಲಿ ಸೇರಿರುವ ಮಾವಿಲರ ವಿಶೇಷ ಆಹಾರ ಪದಾರ್ಥವಾಗಿದ್ದು ಪ್ರಕೃತಿದತ್ತ ಔಷಧವೂ ಆಗಿದೆ ಎಂದು ಮಳಿಗೆಯ ಪ್ರತಿನಿಧಿಗಳು ತಿಳಿಸುತ್ತಾರೆ. ಕಾಡಿನಿಂದ ಸಂಗ್ರಹಿಸುವ ದೊಡ್ಡ ಜಾತಿಯ ಕೆಂಪು ಇರುವೆಗಳನ್ನು ಸಂಗ್ರಹಿಸಿ, ತೊಳೆದು ಶುಚಿಗೊಳಿಸಿ, ಹಳೆ ಕ್ರಮದ ಅರೆಯುವ ಕಲ್ಲಿನಲ್ಲಿ ಅರೆಯಲಾಗುತ್ತದೆ. ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಹುಳಿ, ಖಾರ ಬೆರೆಸಿ ಮತ್ತು ಅರೆದು ಚಣ್ಣಿ ತಯಾರಿಸಲಾಗುತ್ತದೆ. ಬೇಯಿಸಿದ ಯಾ ಸುಟ್ಟ ಗೆಣಸು, ಮರಗೆಣಸುಗಳೊಂದಿಗೆ ಯಾ ಇನ್ನಿತರ ತಿನಿಸುಗಳೊಂದಿಗೆ ಇದನ್ನು ಉಣಬಡಿಸಲಾಗುತ್ತದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.