ಯುವಕ ಆತ್ಮಹತ್ಯೆ: ಪೊಲೀಸ್ ದೌರ್ಜನ್ಯ ಆರೋಪ
Team Udayavani, Jan 1, 2019, 5:20 AM IST
ಮಡಿಕೇರಿ: ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದ ಜಯಕುಮಾರ್ (24) ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಘಟನೆ ನಗರದ ಮಂಗಳಾದೇವಿ ನಗರ ಬಡಾವಣೆಯಲ್ಲಿ ಸಂಭವಿಸಿದೆ.
ಈತನ ಸಾವಿಗೆ ಪಿರಿಯಾಪಟ್ಟಣ ಪೊಲೀಸರು ನೀಡಿದ ಕಿರುಕುಳವೇ ಕಾರಣವೆಂದು ಆರೋಪಿಸಿದ ಸಂಬಂ ಧಿಕರು ಮತ್ತು ದಲಿತ ಸಂಘಟನೆಗಳ ಪ್ರಮುಖರು, ಜಿಲ್ಲಾಸ್ಪತ್ರೆಯ ಶವಾ ಗಾರದ ಎದುರು ಪ್ರತಿಭಟನೆ ನಡೆಸಿದರು. ಪೊಲೀಸರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸದೆ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲವೆಂದು ಪಟ್ಟು ಹಿಡಿದರು.
ಪ್ರಕರಣದ ವಿವರ
ಡಿ.9ರಂದು ಕುಶಾಲನಗರದ ಕೊಪ್ಪ ಸಮೀಪ ವೈದ್ಯ ದಿಲೀಪ್ ಅವರನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ಮಂಗಳಾದೇವಿನಗರ ನಿವಾಸಿ, ಆಟೋ ಚಾಲಕ ಕೃಷ್ಣನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದರು. ಡಿ. 25ರಂದು ಕೃಷ್ಣನ ಮಕ್ಕಳಾದ ಜಯ ಕುಮಾರ ಮತ್ತು ಚಂದ್ರಕಾಂತ್ ಅವರನ್ನು ಕೂಡ ಪಿರಿಯಾಪಟ್ಟಣ ಪೊಲೀಸರು ವಿಚಾರಣೆಗಾಗಿ ಕೊಪ್ಪ ಸಮೀಪದ ಹೋಂಸ್ಟೇಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದರು.
ಬಳಿಕ 6 ಮಂದಿ ಪೊಲೀಸರ ತಂಡ ಕೃಷ್ಣನ ಮನೆಗೆ ಬಂದು ಮನೆ ಮಂದಿಯ ಮೊಬೈಲ್ ಸಂಖ್ಯೆಗಳನ್ನು ಪಡೆದು ಬೆದರಿಕೆ ಹಾಕಿತ್ತು ಎಂದು ಆರೋಪಿಸಲಾಗಿದೆ. ಇದರಿಂದ ನೊಂದು ಜಯಕುಮಾರ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶವಾಗಾರದ ಮುಂಭಾಗ ಪ್ರತಿಭಟನೆ ನಡೆಸಿದರು. ಸ್ಥಳಕ್ಕಾಗಮಿಸಿದ ಪೊಲೀಸ್ ಅಧೀಕ್ಷಕ ಸುಂದರ್ ರಾಜ್, ಮೃತನ ಸಂಬಂಧಿಕರು ಮತ್ತು ದಲಿತ ಸಂಘಟನೆಗಳ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು. ಪಿರಿಯಾಪಟ್ಟಣ ಪೊಲೀಸರು ಯುವಕರಿಗೆ ವಿಚಾರಣೆ ಹೆಸರಲ್ಲಿ ದೈಹಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾರೆ. ಪೊಲೀಸರ ದೌರ್ಜನ್ಯ ಮತ್ತು ಬೆದರಿಕೆಗೆ ಹೆದರಿ ಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಚರ್ಚಿಸಿ ಕ್ರಮ: ಭರವಸೆ
ದೈಹಿಕ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಪ್ರತಿಭಟನೆ ಕೈಬಿಟ್ಟು ಮರಣೋತ್ತರ ಪರೀಕ್ಷೆಗೆ ಸಹಕರಿಸುವಂತೆ ಅಧೀಕ್ಷಕ ಸುಂದರ್ ರಾಜ್ ಮನವಿ ಮಾಡಿದರು. ಮೇಲಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಬಳಿಕ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡ ಲಾ ಯಿ ತು.
ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿ ಷಣ್ಮುಗ, ಗ್ರಾಮಾಂತರ ಠಾಣಾಧಿಕಾರಿ ಚೇತನ್, ದಲಿತ ಸಂಘಟನೆಯ ಮೋಹನ್ ಮೌರ್ಯ, ಎಚ್.ಪಿ. ಹರೀಶ್ ಮತ್ತಿತ್ತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ