ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ಸಾಂಸ್ಕೃತಿಕ ವೈಭವ


Team Udayavani, Jan 21, 2019, 12:50 AM IST

sahitya-sammelana.jpg

ನೀರ್ಚಾಲು: ಅಕ್ಷರಕಾಶಿ ನೀರ್ಚಾಲಿನ ಮಹಾಜನ ವಿದ್ಯಾಸಂಸ್ಥೆಗಳ ಆವರಣದಲ್ಲಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ಬಳಿಕ ವೇದಿಕೆಯಲ್ಲಿ ಮಹಾಜನ ಹೈಯರ್‌ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸೊಗಡು ಕಾರ್ಯಕ್ರಮದಡಿ ವಿವಿಧ ಜಾನಪದ, ನಾಡಗೀತೆಗಳ ಗಾಯನ, ನೃತ್ಯ ಕಾರ್ಯಕ್ರಮಗಳು ನಡೆದವು. ಸಮ್ಮೇಳನದ ಸಮ್ಮಾನ ಸಮಿತಿ ಸದಸ್ಯೆ ಶೈಲಜಾ ಎ. ಕಾರ್ಯಕ್ರಮ ನಿರ್ವಹಿಸಿದರು. ಮೆರವಣಿಗೆ ಸಮಿತಿ ಸದಸ್ಯೆ ವಾಣೀ ಪಿ.ಎಸ್‌.ಸ್ವಾಗತಿಸಿ, ಗಾಯತ್ರೀ ಎ. ವಂದಿಸಿರು. 

ಬಳಿಕ ಗಡಿನಾಡಿನ ಹೆಮ್ಮೆಯ ಸಾಂಸ್ಕೃತಿಕ ಸಂಘಟನೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಿರಿಬಾಗಿಲು ರಾಮಕೃಷ್ಣ ಮಯ್ಯ ಸಾರಥ್ಯದಲ್ಲಿ ರಾಜಾ ಸೌದಾಸ ಯಕ್ಷಗಾನ ಪ್ರದರ್ಶನ ನಡೆಯಿತು. ಹಿಮ್ಮೇಳದಲ್ಲಿ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಚಂದ್ರಶೇಖರ ಭಟ್‌ ಕೊಂಕಣಾಜೆ, ಲವಕುಮಾರ ಐಲ ಹಾಗೂ ಉದಯ ಕಂಬಾರು, ಮುರಾರಿ ಭಟ್‌ ಪಂಜಿಗದ್ದೆ ಸಹಕರಿಸಿದರು.  ಮುಮ್ಮೇಳದಲ್ಲಿ ಸುಬ್ರಾಯ ಹೊಳ್ಳ ಕಾಸರಗೋಡು, ಹರಿನಾರಾಯಣ ಭಟ್‌ ಎಡನೀರು, ಮಹೇಶ್‌ ಕುಮಾರ್‌ ಸಾಣೂರು, ಪೆರುವೊಡಿ ಸುಬ್ರಹ್ಮಣ್ಯ ಭಟ್‌, ಕಿಶನ್‌ ನೆಲ್ಲಿಕಟ್ಟೆ, ಶ್ರೀಗಿರಿ ಅನಂತಪುರ, ಶಶಿಧರ ಕುಲಾಲ್‌ ಕನ್ಯಾನ, ಪ್ರಕಾಶ ನಾಯಕ್‌ ನೀರ್ಚಾಲು, ಮವ್ವಾರು ಬಾಲಕೃಷ್ಣ ಮಣಿಯಾಣಿ, ಶಂಭಯ್ಯ ಭಟ್‌ ಕಂಜರ್ಪಣೆ, ರಾಧಾಕೃಷ್ಣ ನಾವಡ ಮಧೂರು, ಬಾಲಕೃಷ್ಣ ಸೀತಾಂಗೋಳಿ, ಡಾ| ಶ್ರುತಕೀರ್ತಿ ರಾಜ್‌ ಉಜಿರೆ, ಉಪಾಸನಾ ಪಂಜರಿಕೆ ಮೊದಲಾದವರು ಸಹಕರಿಸಿದರು. ರಾಕೇಶ್‌ ಬಳಗ ಮಲ್ಲ ವೇಷಭೂಷಣದಲ್ಲಿ ಸಹಕರಿಸಿದರು. ಗೋವಿಂದ ಭಟ್‌ ಬಳ್ಳಮೂಲೆ ಸ್ವಾಗತಿಸಿ, ನಿರೂಪಿಸಿದರು. ಸುಬ್ರಹ್ಮಣ್ಯ ಬಿ. ವಂದಿಸಿದರು. 

ಕೇರಳ ರಾಜ್ಯ ಕಲೋತ್ಸವ ಸ್ಪರ್ಧೆಯಲ್ಲಿ ಪ್ರದರ್ಶನಗೊಂಡ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಸ್ಕೂಲಿನ ವಿದ್ಯಾರ್ಥಿಗಳ ಏಕೈಕ ಕನ್ನಡ ನಾಟಕ ಸದಾಶಿವ ಮಾಸ್ತರ್‌ ಪೊಯೆÂ ಅವರ ನಿರ್ದೇಶನದ ಕೊಂಬುಮೀಸೆ ಕನ್ನಡ ನಾಟಕ ಪ್ರದರ್ಶನ ನಡೆಯಿತು. 

ವೀರೇಶ್ವರ ಭಟ್‌ ಸ್ವಾಗತಿಸಿ, ಅನ್ನಪೂರ್ಣ ಎಸ್‌. ವಂದಿಸಿದರು. ಶೈಲಜಾ ಬಿ. ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಹೈಯರ್‌ ಸೆಕೆಂಡರಿ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ನಡೆಯಿತು. ಪ್ರಚಾರ ಸಮಿತಿಯ ಸದಸ್ಯೆ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು. ಲಲಿತಾಕುಮಾರಿ ಎನ್‌.ಎಚ್‌. ಸ್ವಾಗತಿಸಿ, ವಿನೋದಿನಿ ಕೆ ವಂದಿಸಿದರು. 

ಕನ್ನಡಿಗರ ಸಮಸ್ಯೆ ಬಗ್ಗೆ ಕಳವಳ 
ಗಡಿನಾಡಿನ ಕನ್ನಡಿಗರ ಸಮಸ್ಯೆಗಳ ಬಗ್ಗೆ ಸರಕಾರವನ್ನು ಬೊಟ್ಟು ಮಾಡುವ ಮೊದಲು ನಾವೆಲ್ಲಿ ಎಡವಿದ್ದೇವೆ ಎಂಬುದನ್ನು ತಿಳಿದುಕೊಳ್ಳಬೇಕು. ನಾವು ಕನ್ನಡತನ, ನಮ್ಮತನವನ್ನು ಗಟ್ಟಿಗೊಳಿಸಬೇಕು. ಶಿಕ್ಷಣ ನೀತಿಗೆ ಖಚಿತ ನಿಲುವುಗಳಿಲ್ಲ. ಎಲ್ಲವೂ ಗೊಂದಲವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೆತ್ತವರ ಇಂಗ್ಲಿಷ್‌ ವ್ಯಾಮೋಹವು ಗೊಂದಲವೇ ಸರಿ. ಪರಿ ಷತ್ತುಗಳು ಸರಕಾರದ ಅಡಿಯಾಳುಗಳಾಗದೇ ಮಾರ್ಗ ದರ್ಶಕರಾಗಬೇಕು. ಆ ಮೂಲಕ ನಾವು ತೆಗೆದುಕೊಳ್ಳುವ ನಿರ್ಣಯಗಳನ್ನು ಗೌರವಿಸಬೇಕು.
-ಡಾ| ನಾ. ಮೊಗಸಾಲೆ ನೀರ್ಚಾಲು, ಸಾಹಿತಿ

ಮಲಯಾಳ ಹೇರಿಕೆ ಖಂಡನೆ
ಕೇರಳ ಸರಕಾರವು ಕನ್ನಡಿಗರ ಮೇಲೆ ಒತ್ತಾಯಪೂರ್ವಕವಾಗಿ ಮಲಯಾಳವನ್ನು ಹೇರುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಈ ವಿಚಾರದಲ್ಲಿ ಕರ್ನಾಟಕ ಸರಕಾರವು ಕೇರಳ ಸರಕಾರದ ಮೇಲೆ ಒತ್ತಡವನ್ನು ಹೇರಬೇಕಾಗಿದೆ. ಕೇರಳದಲ್ಲಿ ಕನ್ನಡ ಶಾಲೆಗಳಲ್ಲಿ ಮಲಯಾಳಿ ಅಧ್ಯಾಪಕರನ್ನು ನೇಮಿಸುತ್ತಿರುವುದು ಸರಿಯಲ್ಲ. ಆದುದರಿಂದ ಬರೆದಂತಹ ಪುಸ್ತ‌¤ಕಗಳನ್ನು ಕೊಂಡು ಓದುವ ಹವ್ಯಾಸವನ್ನು ಇಟ್ಟುಕೊಳ್ಳುವ ಮೂಲಕ ಸಾಹಿತ್ಯವನ್ನು ಉಳಿಸಬೇಕು. ಕರ್ನಾಟಕದಲ್ಲಿ ಈಗಾಗಲೇ ಕನ್ನಡ ಶಾಲೆಗಳು ಮುಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಕನ್ನಡ ಶಾಲೆಗಳಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ.
– ಹರಿಕೃಷ್ಣ ಪುನರೂರು, ಕಸಾಪ ಮಾಜಿ ಅಧ್ಯಕ್ಷ 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.