ಸವಲತ್ತುಗಳನ್ನು ಕಸಿಯುವ ಯತ್ನಗಳಿಂದಾಗಿ ತೊಡಕು​​​​​​​


Team Udayavani, Jan 21, 2019, 12:30 AM IST

20ksdm1.jpg

ಬದಿಯಡ್ಕ: ಗಡಿನಾಡಿನ ಸಾಹಿತ್ಯ ಸಮ್ಮೇಳನವು ಇತರೆಡೆಗಳ ಸಮ್ಮೇಳನಗಳಿಗಿಂತ ಮಹತ್ವ ಪಡೆದಿದೆ. ಗಡಿನಾಡು ಕಾಸರಗೋಡಿನ ಭಾಷಾ ಅಲ್ಪಸಂಖ್ಯಾಕರಿಗೆ ಕೊಡಮಾಡಿರುವ ಸವಲತ್ತುಗಳಿಗೆ ಕೊರತೆಯಿಲ್ಲ. ಆದರೆ ಅವುಗಳನ್ನು ಕಸಿಯುವ ಯತ್ನಗಳಿಂದಾಗಿ ತೊಡಕುಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಾಗೃತಿ-ಒಗ್ಗಟ್ಟಿನ ಶಕ್ತಿಯಾಗಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ ಎಂದು ನಿವೃತ್ತ ಪ್ರಾಧ್ಯಾಪಕ 12ನೇ ಗಡಿನಾಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ| ಪಿ. ಶ್ರೀಕೃಷ್ಣ ಭಟ್‌ ಹೇಳಿದರು.

ನೀರ್ಚಾಲು ಮಹಾಜನ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಗಡಿನಾಡ ಜಿಲ್ಲಾ 12ನೇ ಸಾಹಿತ್ಯ ಸಮ್ಮೇಳನದ ಸಮಾ ರೋಪ ಸಮಾರಂಭದಲ್ಲಿ ಅವರು  ಮಾತನಾಡಿದರು.

ಕನ್ನಡಿಗರು ಒಗ್ಗಟ್ಟಾಗಬೇಕು
ಜಿಲ್ಲೆಯ ಕನ್ನಡಿಗರ ಹಕ್ಕುಗಳನ್ನು ಕಸಿದುಕೊಳ್ಳುವ ಯತ್ನಗಳು ರಾಜ್ಯದ ದಕ್ಷಿಣದ ಜಿಲ್ಲೆಗಳಿಂದ ಅಧಿಕಾರಿಗಳಾಗಿ ಬರುವವರಿಂದ ವ್ಯಾಪಕವಾಗಿ ನಡೆ ಯುತ್ತಿದೆ. ಇದನ್ನು ಹತೋಟಿಗೆ ತರಲು ಕನ್ನಡಿಗರು ಒಗ್ಗಟ್ಟಾಗಬೇಕು ಎಂದರು. ಸಮ್ಮೇಳನದಲ್ಲಿ ಶಿಕ್ಷಕರು ಸಾಕಷ್ಟು ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲವೆಂಬ ದೂರುಗಳಿವೆ. ಆದರೆ ಇಲ್ಲಿಯ ಕೃಷಿಕರು, ವ್ಯಾಪಾರಿಗಳು, ಜನ ಸಾಮಾನ್ಯರಿಗೂ ಕನ್ನಡ ಭಾಷೆಯ ಅಗತ್ಯ ಇದೆ ಎಂಬ ಗಂಭೀರತೆಯನ್ನು ಅರಿತು ಜಾಗೃತರಾದಲ್ಲಿ ಯಶಸ್ಸು ಸಾಧ್ಯ ಎಂದರು.

ಬೇಳ ಶೋಕಮಾತಾ ದೇವಾ ಲಯದ ಧರ್ಮಗುರು ವಂ| ಜೋನ್‌ ವಾಸ್‌, ಕೇರಳ ಪಾರ್ತಿಸುಬ್ಬ ಯಕ್ಷಗಾನ ಕಲಾಕ್ಷೇತ್ರದ ಅಧ್ಯಕ್ಷ ಜಯರಾಮ ಮಂಜತ್ತಾಯ ಎಡನೀರು, ಮಹಾಜನ ವಿದ್ಯಾ ಸಂಸ್ಥೆಗಳ ಪ್ರಬಂಧಕ, ಸಮ್ಮೇಳನ ಕಾರ್ಯಾಧ್ಯಕ್ಷ ಜಯದೇವ ಖಂಡಿಗೆ, ಜಿ.ಪಂ. ಸದಸ್ಯ ನ್ಯಾಯವಾದಿ ಕೆ. ಶ್ರೀಕಾಂತ್‌, ಬ್ಲಾಕ್‌ ಪಂ. ಸದಸ್ಯ ಅವಿನಾಶ ರೈ, ಗ್ರಾ.ಪಂ. ಸದಸ್ಯ ಶಂಕರ ಡಿ., ಕಸಾಪ ಗಡಿನಾಡ ಘಟಕಾಧ್ಯಕ್ಷ ಎಸ್‌.ವಿ. ಭಟ್‌ ಉಪಸ್ಥಿತರಿದ್ದರು.ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ನರಹರಿ ಪಿ. ಕಳತ್ತೂರು ಸ್ವಾಗತಿಸಿ, ಸುಂದರ ಬಾರಡ್ಕ ವಂದಿಸಿ ದರು. ಯತೀಶ್‌ ಕುಮಾರ್‌ ರೈ ವಂದಿಸಿದರು.

ಸಾಧಕರಿಗೆ ಸಮ್ಮಾನ
ವಿವಿಧ ಕ್ಷೇತ್ರಗಳ ಸಾಧಕರಾದ ಎಂ. ಶಂಕರ ನಂಬಿಯಾರ್‌ (ಶಿಕ್ಷಣ), ಐ.ವಿ. ಭಟ್‌ (ಕನ್ನಡ ಹೋರಾಟ), ಕೃಷ್ಣ ಭಟ್‌ ಜೇನುಮೂಲೆ (ಸಂಗೀತ), ಶೇಡಿಗುಮ್ಮೆ ವಾಸುದೇವ ಭಟ್‌ (ಯಕ್ಷಗಾನ), ಪ್ರೇಮಾ ಭಟ್‌ ತೊಟ್ಟೆತ್ತೋಡಿ (ಸಮಾಜ ಸೇವೆ), ರಾಧಾಕೃಷ್ಣ ಕೆ.ಉಳಿಯತ್ತಡ್ಕ (ಸಾಹಿತ್ಯ) ಅವರನ್ನು ಸಮ್ಮೇಳನದ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮ್ಮೇಳನದ ನಿರ್ಣಯಗಳು
ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳುಕ್ಕುರಾಯ ಅವರು 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಠರಾವು ಮಂಡಿಸಿದರು. ಮುಖ್ಯಾಂಶಗಳು ಇಂತಿವೆ:
– ಮಹಾಜನ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು
– ಕನ್ನಡ ಭಾಷಾ ಅಲ್ಪಸಂಖ್ಯಾಕರ ಹಕ್ಕುಗಳಿಗೆ ಕೇರಳ ಸರಕಾರ ಬದ್ಧತೆ ತೋರಬೇಕು
– ಕನ್ನಡ ವಿದ್ಯಾರ್ಥಿಗಳಿಗೆ ಕಡ್ಡಾಯ ಮಲೆಯಾಳ ಕಾನೂನನ್ನು ಹಿಂಪಡೆಯಬೇಕು
– ಕಾನೂನು/ ನಿಯಮಗಳನ್ನು ರೂಪಿಸುವಾಗ ಭಾಷಾ ಅಲ್ಪಸಂಖ್ಯಾಕರಿಗೆ ಕೊಡಮಾಡಿದ ಸವಲತ್ತುಗಳಿಗೆ ಚ್ಯುತಿ ಬಾರದಂತೆ ನಿಗಾ ವಹಿಸಬೇಕು
– ಕಾಸರಗೋಡು ಮತ್ತು ಮಂಜೇಶ್ವರ ವಿಧಾನಸಭಾ ಕ್ಷೇತ್ರಗಳನ್ನು ಕನ್ನಡ ಭಾಷಾ ಅಲ್ಪ ಸಂಖ್ಯಾಕರಿಗೇ ಮೀಸಲಿಡ ಬೇಕು/ ಆದೇಶ, ಸುತ್ತೋಲೆ ಕನ್ನಡ ದಲ್ಲಿ ಇರಬೇಕು/ ಸರಕಾರಿ ಕಚೇರಿಗಳಲ್ಲಿ ಕನ್ನಡ ಬಲ್ಲ ಅಧಿಕಾರಿಗಳನ್ನು ನೇಮಿಸಬೇಕು, ಸ್ಥಳ ನಾಮಗಳು ಕನ್ನಡದಲ್ಲೇ ಇರಲು ಅಗತ್ಯ ಕ್ರಮ ಜಾರಿಗೊಳಿಸಬೇಕು

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.