ಗಡಿನಾಡ ಜನತೆಯ ಸಮಸ್ಯೆಗಳಿಗೆ ಕೈಗನ್ನಡಿಯಾದ ಸಭೆ


Team Udayavani, Jan 24, 2019, 12:50 AM IST

gadinada-janate.jpg

ಕಾಸರಗೋಡು: ಗಡಿನಾಡ ಜನತೆಯ ಮೂಲ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಡಳಿತ ಪರಿಷ್ಕಾರ ಆಯೋಗದ ಸಾರ್ವಜನಿಕ ಅಭಿಮತ ಸಂಗ್ರಹ ಸಭೆ ಕೈಗನ್ನಡಿಯಾಯಿತು.

ನಾಗರಿಕ ಸೇವೆ ಖಚಿತ ಪಡಿಸುವಲ್ಲಿ ಎಲ್ಲ ಕಚೇರಿಗಳಲ್ಲಿ ಸಹಾಯ ಕೇಂದ್ರಗಳು ಬೇಕು. ಇ-ಗವರ್ನೆನ್ಸ್‌ ಸೌಲಭ್ಯ ಫಲದಾಯಕ ವಾಗಬೇಕು.

ಅರ್ಜಿದಾರ ಒಂದು ವಿಷಯಕ್ಕೆ ಆಗಾಗ ಕಚೇರಿಗೆ ಬರಬೇಕಾಗಿ ಬರುವ ಪರಿಸ್ಥಿತಿಗೆ ಕೊನೆಯಾಗಬೇಕು. ಭಾಷಾ ಅಲ್ಪಸಸಂಖ್ಯಾಕರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಲಭಿಸಬೇಕು. 

ಅನೇಕ ಕಾಲಗಳಿಂದ ನೆಲೆನಿಂತಿರುವ ಭೂಹಕ್ಕು ಪತ್ರ ಸಮಸ್ಯೆಗೆ ಪರಿಹಾರ ಒದಗಬೇಕು, ಎಂಡೋಸಲ್ಫಾ ನ್‌ ಸಂತ್ರಸ್ತರ ಸಮಸ್ಯೆಗೆ ಕೊನೆಯಾಗಬೇಕು. 

ಇತ್ಯಾದಿಗಳು ಇಲ್ಲಿ ಮಂಡಿಸಲಾದ ಪ್ರಧಾನ ಸಮಸ್ಯೆಗಳಾಗಿದ್ದುವು.

ರಾಜ್ಯ ಸರಕಾರದ ಮಾಜಿ ಪ್ರಧಾನ ಕಾರ್ಯದರ್ಶಿ, ಆಯೋಗ ಸದಸ್ಯರಾದ ಸಿ.ಪಿ.ನಾಯರ್‌, ನೀಲಾ ಗಂಗಾಧರನ್‌, ಮಾಜಿ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿದ್ದ, ಆಯೋಗ ಸದಸ್ಯೆ ಕಾರ್ಯದರ್ಶಿ ಶೀಲಾ ಥಾಮಸ್‌ ಅವರ ನೇತೃತ್ವದಲ್ಲಿ ಅಭಿಮತ ಸಂಗ್ರಹ ಸಭೆ ಜರಗಿತು.

ವಿವಿಧ ಮಂಡನೆಗಳು : 
ವಿವಿಧ ಕಾರ್ಮಿಕ ಕಲ್ಯಾಣನಿಧಿ ಮಂಡಳಿಗಳನ್ನು ದಕ್ಷಗೊಳಿಸುವಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಆಯೋಗಕ್ಕೆ ಮನವಿ ಸಲ್ಲಿಸಿದರು. ಪರಿಶಿಷ್ಟ ಜನಾಂಗದಲ್ಲಿ ಜನಸಂಖ್ಯೆ 4 ಪಟ್ಟು ಅಧಿಕವಾಗಿ ಹೆಚ್ಚಿದ್ದರೂ, ಇವರ ಅಭಿವೃದ್ಧಿಗೆ ಸಂಬಂಧಿಸಿದ ಕಚೇರಿಗಳ ಮತ್ತು ಸಿಬಂದಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಇದು ಅನೇಕ ಅಭಿವೃದ್ಧಿ ಯೋಜನೆಗಳ ಜಾರಿಗೆ ತಡೆಯಾಗುತ್ತಿದೆ ಎಂಬ ಅಭಿಮತ ಕೇಳಿಬಂದಿದೆ.

ಜನತೆಯ ಸೇವೆಯ ವಿಚಾರದಲ್ಲಿ ಸಿಬಂದಿಯ ಮನೋಧರ್ಮದಲ್ಲಿ ಬದಲಾವಣೆ ತರಬೇಕಾದುದು ಅನಿವಾರ್ಯ. ಈ ವಿಷಯದಲ್ಲಿ ಆಯೋಗ ನೇರ ಮಧ್ಯಸ್ಥಿಕೆ ವಹಿಸಬೇಕು ಎಂದು ಶಾಸಕ ಎನ್‌.ಎ.ನೆಲ್ಲಿಕುನ್ನು ಈ ಸಂದರ್ಭ ಅಭಿಪ್ರಾಯಪಟ್ಟರು.

ಕೆಲವು ಸಿಬಂದಿಗಳು ತಿಳಿಸುವ ತಾಂತ್ರಿಕ ಕಾರಣಗಳಿಂದಾಗಿ ಅನೇಕ ಅರ್ಹರಿಗೆ ಯೋಜ ನೆಗಳ ಪ್ರಯೋಜನ ಸಿಗದೇ ಹೋಗುತ್ತಿದೆ. ಇದು ಪರಿಹಾರವಾಗಬೇಕು ಎಂದು ಶಾಸಕ ಕೆ.ಕುಂಞಿರಾಮನ್‌ ತಿಳಿಸಿದರು.

ಸಿಬಂದಿಗಳ ಕಡೆಯಿಂದ ಮನವಿಗಳು : 
ಸಿಬಂದಿಗಳ ಮೂಲಕ ಅನೇಕ ಮನವಿಗಳು ಈ ವೇಳೆ ಮಂಡನೆಗೊಂಡವು. ಕೆಲವು ಸಿಬಂದಿಗಳಿಗೆ ಸೂಕ್ತ ತರಬೇತಿ ಲಭಿಸದೇ ಇರುವ ಕಾರಣ ಕಚೇರಿ ವ್ಯವಹಾರಗಳಿಗೆ ತೊಡಕಾಗುತ್ತಿದೆ ಎಂಬ ಸಮಸ್ಯೆ ಇಲ್ಲಿ ವ್ಯಕ್ತವಾಗಿದೆ. ಇತರ ಜಿಲ್ಲೆಗಳಿಂದ ಇಲ್ಲಿಗೆ ಆಗಮಿಸುವ ವಿವಿಧ ಇಲಾಖೆಗಳ ಸಿಬಂದಿಗೆ ಜಿಲ್ಲೆಯಲ್ಲಿ ಸೂಕ್ತ ವಸತಿ ಸೌಲಭ್ಯ ಲಭಿಸಬೇಕು ಎಂಬ ಆಗ್ರಹ ಆಯೋಗದ ಮುಂದೆ ಮಂಡನೆಯಾಗಿತ್ತು.

ಜನ ಅಧಿಕ ಪ್ರಮಾಣದಲ್ಲಿ ಸಂಪರ್ಕಿಸುವ ಜಿಲ್ಲಾಧಿಕಾರಿ ಕಚೇರಿ ಆವರಣದ ಕಚೇರಿಗಳನ್ನು ಕೆಳ ಅಂತಸ್ತಿಗೆ ಸ್ಥಳಾಂತರಗೊಳಿಸಬೇಕು ಎಂದು ಆಯೋಗ ತಿಳಿಸಿದೆ. ಕಚೇರಿಗಳಿಗೆ ಆಗಮಿಸುವಮಂದಿಗೆ ಹೆಲ್ಪ್ ಡೆಸ್ಕ್ನ ಸಹಾಯ ಸಿಗುವಂತಾಗಬೇಕು. ಕಡತಗಳು ರಾಶಿ ಬೀಳುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮೋನಿಟರಿಂಗ್‌ ಕ್ರಮಬದ್ಧವಾಗಿ ನಡೆಯಬೇಕು ಎಂದು ಆಯೋಗ ತಿಳಿಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗೆ ಆದೇಶ ನೀಡಿದೆ.

ಚೆಂಞರ ಪುನಶ್ಚೇತನ ಜಾಗದಲ್ಲಿ ವಾಸಿಸುತ್ತಿರುವವರ ಭೂಹಕ್ಕುಪತ್ರ ಸಂಬಂಧ ತೆರಿಗೆ ಸ್ವೀಕಾರ ನಡೆಸದೇ ಇರುವ ಸಂಬಂಧ ದೂರು ಇಲ್ಲಿ ಸಲ್ಲಿಕೆಯಾಗಿದೆ.

ಒಂದು ತಿಂಗಳಲ್ಲಿ ಈ ಕುರಿತು ಪರಿಹಾರ ಒದಗಿಸುವಂತೆ ಆಯೋಗ ಆದೇಶ ನೀಡಿದೆ. ಜಿಲ್ಲೆಯಲ್ಲಿ ಮಂಡನೆಗೊಂಡ ಅನೇಕ ಸಮಸ್ಯೆಗಳನ್ನು ಆಯೋಗ ಗಂಭೀರವಾಗಿ ಪರಿಶೀಲನೆ ನಡೆಸಿತ್ತು. ಈ ಕುರಿತು ಸಮಗ್ರ ಅಧ್ಯಯನ ನಡೆಸಿ ಸೂಕ್ತ ಶಿಫಾರಸುಗಳನ್ನು ಸರಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದೆ.

4ನೇ ಸಭೆ : 
ಈ ಆಯೋಗ ಅನುಷ್ಠಾನಕ್ಕೆ ಬಂದ ಮೇಲೆ ರಾಜ್ಯದಲ್ಲಿ ನಡೆಯುತ್ತಿರುವ 4ನೇ ಸಭೆ ಈ ಮೂಲಕ ಕಾಸರಗೋಡಿನಲ್ಲಿ ನಡೆದಿದೆ. ತಿರುವನಂತಪುರ, ಆಲಪ್ಪುಳ, ಮಲಪ್ಪುರಂ ಜಿಲ್ಲೆಗಳಲ್ಲಿ ಈ ಹಿಂದೆ ಸಭೆ ಜರುಗಿತ್ತು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ.ಬಶೀರ್‌, ಜಿಲ್ಲಾಧಿಕಾರಿ ಡಾ.ಡಿ.ಸಜಿತ್‌ ಬಾಬು, ಹೆಚ್ಚುವರಿ ಕಾರ್ಯದರ್ಶಿ ಸಿ.ಜಿ.ಸುರೇಶ್‌ ಕುಮಾರ್‌, ಹೆಚ್ಚುವರಿ ದಂಡನಾಧಿಕಾರಿ ಎನ್‌.ದೇವಿದಾಸ್‌, ಕಾಸರಗೋಡು ನಗರಸಭೆ ಅಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ, ಚೆಂಗಳ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಾಹಿನಾ ಸಲೀಂ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ಸಾರ್ವಜನಿಕರು, ಜಿಲ್ಲಾ ಮಟ್ಟದ ಸಿಬಂದಿ ಉಪಸ್ಥಿತರಿದ್ದರು.

ಆಯೋಗದ ಆದೇಶಗಳು
ಜನತೆಯ ಅಭಿಮತ ಸ್ವೀಕರಿಸಿದ ಆಯೋಗ ತನ್ನ ಆದೇಶಗಳನ್ನು ಸಭೆಯಲ್ಲಿ ಮಂಡಿಸಿದೆ. ಕಂದಾಯ, ಸ್ಥಳೀಯಾಡಳಿತ, ಕೃಷಿ ಸಹಿತ ಜನ ದಿನನಿತ್ಯ ಆಸರೆ ಪಡೆಯುವ ಇಲಾಖೆಗಳ ಸಿಬಂದಿ ಕೊರತೆ ಪರಿಹಾರವಾಗಬೇಕು. ಸ್ಟಾಫ್‌ ಪ್ಯಾಟರ್ನ್ ಕಾಲಕ್ಕೆ ತಕ್ಕಂತೆ ಪರಿಷ್ಕಾರಗೊಳ್ಳಬೇಕು ಎಂದು ಆಯೋಗ ತಿಳಿಸಿದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.