ಕಾಸರಗೋಡು-ತಿರುವನಂತಪುರ ಕ್ಷಿಪ್ರ ರೈಲು ಓಡಾಟ


Team Udayavani, Feb 1, 2019, 1:00 AM IST

train.jpg

ಉತ್ತರ-ದಕ್ಷಿಣ ಜಲಸಾರಿಗೆ ಯೋಜನೆ 2020 ರಲ್ಲಿ ಪೂರ್ಣ ಹಸಿವು ರಹಿತ ಕೇರಳ ನಿರ್ಮಾಣ ಕಲ್ಯಾಣ ಪಿಂಚಣಿ 1100 ರೂ.ನಿಂದ 1200 ರೂ.ಗೆ ಏರಿಕೆ ಕಾಸರಗೋಡು ಪ್ಯಾಕೇಜ್‌ಗೆ 91 ಕೋಟಿ ರೂ. ಎಂಡೋ ಸಂತ್ರಸ್ತರಿಗೆ 20 ಕೊಟಿ ರೂ. ಕುಟುಂಬಶ್ರೀ 1,000 ಕೋಟಿ ರೂ. ರಬ್ಬರ್‌ ಸಬ್ಸಿಡಿಗೆ 500 ಕೋಟಿ ರೂ. ಬೇಕಲ-ಕೋವಳಂ ಜಲಸಾರಿಗೆ ಯೋಜನೆ ಸಾಕಾರ ಕಾಸರಗೋಡು-ಕೋವಳಂ ಸಮಾನಾಂತರ ರೈಲು ಹಳಿ ಕೆಎಸ್‌ಆರ್‌ಟಿಸಿಗೆ 1,000 ಕೋಟಿ ರೂ. ಜಲಪ್ರಳಯದಿಂದ ನಷ್ಟ ಸಂಭವಿಸಿದ ವ್ಯಾಪಾರಿಗಳ ಪುನರ್ವಸತಿಗೆ 20 ಕೋಟಿ ರೂ.

ಕಾಸರಗೋಡು: ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಕೇರಳವನ್ನು ಮತ್ತೆ ಮೇಲಕ್ಕೆತ್ತಲು ಹಲವು ಯೋಜನೆಗಳ ಸಹಿತ ನಾಲ್ಕು ಗಂಟೆಗಳೊಳಗೆ ಕಾಸರಗೋಡಿನಿಂದ ತಿರುವನಂತಪುರಕ್ಕೆ ತಲುಪುವ ಕ್ಷಿಪ್ರ ರೈಲು ಯೋಜನೆಯನ್ನು ಘೋಷಿಸಲಾಗಿದೆ. ಕಾಸರಗೋಡು ಪ್ಯಾಕೇಜ್‌ನಲ್ಲಿ 91 ಕೋಟಿ ರೂ. ಮತ್ತು ಎಂಡೋ ಸಂತ್ರಸ್ತರ ಪುನರ್ವಸತಿ ಕಲ್ಪಿಸಲು 20 ಕೋಟಿ ರೂ. ಕಾದಿರಿಸಿ ಕೇರಳದ 2019-20ನೇ ಹಣಕಾಸು ವರ್ಷದ ಮುಂಗಡಪತ್ರವನ್ನು ಗುರುವಾರ ಬೆಳಗ್ಗೆ ರಾಜ್ಯ ಹಣಕಾಸು ಸಚಿವ ಡಾ| ಥೋಮಸ್‌ ಐಸಾಕ್‌ ವಿಧಾನಸಭೆಯಲ್ಲಿ ಮಂಡಿಸಿದರು.

ಒಟ್ಟು 39,807 ಕೋ.ರೂ. ಯೋಜನೆ

ಬಜೆಟ್‌ನಲ್ಲಿ ಒಟ್ಟು 39,807 ಕೋಟಿ ರೂ. ಯೋಜನೆಗಳನ್ನು ಒಳಪಡಿಸಲಾಗಿದೆ. ಕೈಗಾರಿಕಾ ಪಾರ್ಕ್‌ಗಳಿಗೆ 141 ಕೋಟಿ ರೂ. ನೀಡಲಾಗುವುದು. ಅಯ್ಯಂಗಾಳಿ ಉದ್ಯೋಗ ಖಾತರಿ ಯೋಜನೆಗೆ 75 ಕೋಟಿ ರೂ. ಮೀಸಲಿರಿಸಲಾಗಿದೆ. ಸ್ಟಾರ್ಟ್‌ ಅಪ್‌ ಉದ್ದಿಮೆಗಾಗಿ 700 ಕೋಟಿ ರೂ. ಮೀಸಲಿಡಲಾಗಿದೆ. ಮಹಾಪ್ರವಾಹದಿಂದ ಪೂರ್ಣವಾಗಿ ತತ್ತರಿಸಿರುವ ಕೇರಳ ಪುನರ್‌ ನಿರ್ಮಾಣದ ಹಂತದಲ್ಲಿದೆ. ಕೇರಳಕ್ಕೆ ಕೇಂದ್ರ ಸರಕಾರ ಅಗತ್ಯದ ಸಹಾಯ ಒದಗಿಸಿಲ್ಲ. ಕೇರಳದೊಂದಿಗೆ ಕೇಂದ್ರ ಯಾಕಾಗಿ ಇಂತಹ ನೀತಿ ಅನುಸರಿಸುತ್ತಿದೆ ಎಂದು ಸಚಿವರು ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ.

ನವ ಕೇರಳಕ್ಕಾಗಿ 15 ಹೊಸ ಯೋಜನೆಗಳಿಗೆ ರೂಪು ನೀಡಲಾಗುವುದು. ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವವರಿಗಾಗಿ 1131 ಕೋಟಿ ರೂ. ನೆರವನ್ನು ಈಗಾಗಲೇ ವಿತರಿಸಲಾಗಿದೆ. ಪ್ರವಾಹ ಪೀಡಿತ ಪ್ರತಿ ಪಂಚಾಯತ್‌ಗಳಿಗೆ ತಲಾ 25 ಕೋಟಿ ರೂ. ನಂತೆ ವಿಶೇಷ ಆರ್ಥಿಕ ಸಹಾಯವನ್ನು ಒದಗಿಸಲಾಗುವುದು. ಕೇರ ಗ್ರಾಮ ಯೋಜನೆಗೆ 43 ಕೋಟಿ ರೂ. ಮತ್ತು ಲೈಫ್‌ ಸಯನ್ಸ್‌ ಪಾರ್ಕ್‌ಗೆ 20 ಕೋಟಿ ರೂ. ಮೀಸಲಿರಿಸಲಾಗಿದೆ.

ವಯನಾಡು, ಅಲಪ್ಪುಳ ಜಿಲ್ಲೆಗಳಿಗೆ ಹೆಚ್ಚು ಕೊಡುಗೆ

ಬಜೆಟ್‌ನಲ್ಲಿ ವಯನಾಡು ಮತ್ತು ಆಲಪ್ಪುಳ ಜಿಲ್ಲೆಗೆ ಹೆಚ್ಚು ಯೋಜನೆಗಳನ್ನು ಕೊಡುಗೆಯಾಗಿ ನೀಡಿದೆ. ಈ ಎರಡು ಜಿಲ್ಲೆಗಳಲ್ಲಿ ಪ್ರವಾಹದಿಂದ ಭಾರೀ ನಷ್ಟ ಸಂಭವಿಸಿತ್ತು.

ಎಲ್ಲ ತಾಲೂಕು ಸರಕಾರಿ ಆಸ್ಪತ್ರೆಗಳನ್ನು ನವೀಕರಿಸಲಾಗುವುದು. ಮೀನು ಕಾರ್ಮಿಕರಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಅದಕ್ಕಾಗಿ ಮತ್ಸ ್ಯ ಫೆಡ್‌ಗೆ 10 ಕೋಟಿ ರೂ. ನೀಡಲಾಗುವುದು. ಕರಾವಳಿ ಪ್ರದೇಶಗಳ ಅಭಿವೃದ್ಧಿಗಾಗಿ 1,000 ಕೋಟಿ ರೂ. ಸಹಾಯ ನೀಡಲಾಗುವುದು. ಕರಾವಳಿ ಪ್ರದೇಶಗಳ ಸರಕಾರಿ ತಾಲೂಕು ಆಸ್ಪತ್ರೆಗಳ ಅಭಿವೃದ್ಧಿಗಾಗಿ 400 ಕೋಟಿ ರೂ. ಮೀಸಲಿರಿಸಲಾಗಿದೆ.

ವಿದ್ಯುತ್‌ ಚಾಲಿತ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಆರಂಭಿಸಲಾಗುವುದು. ಕಾಸರಗೋಡಿನಿಂದ ತಿರುವನಂತಪುರ ತನಕದ ಕರಾವಳಿ ಹೆದ್ದಾರಿ ನಿರ್ಮಾಣಕ್ಕಾಗಿ ಕಿಫ್‌ಬಿ ಮೂಲಕ 6,000 ಕೋಟಿ ರೂ. ಮೀಸಲಿರಿಸಲಾಗಿದೆ. ಕಾಸರಗೋಡು-ತಿರುವನಂತಪುರ ತನಕ 515 ಕಿ.ಮೀ. ಕ್ಷಿಪ್ರ ರೈಲು ಯೋಜನೆ ಜಾರಿಗೊಳಿಸಲಾಗುವುದು. ಈ ಯೋಜನೆ ಜಾರಿಗೊಂಡಲ್ಲಿ ಕಾಸರಗೋಡಿನಿಂದ ತಿರುವನಂತಪುರಕ್ಕೆ ನಾಲ್ಕು ತಾಸುಗಳಲ್ಲಿ ತಲುಪಬಹುದು. ಇದು ಗಂಟೆಗೆ 120 ಕಿ.ಮೀ. ವೇಗದಲ್ಲಿ ಸಂಚರಿಸುವ ರೈಲುಗಳು ಈ ಹಳಿಯಲ್ಲಿ ಸೇವೆ ನಡೆಸಲಿವೆ.

ಹಿರಿಯ ನಾಗರಿಕರಿಗೆ ನೀಡುವ ಕಲ್ಯಾಣ ಪಿಂಚಣಿ ಮೊತ್ತವನ್ನು 1,100 ರೂ.ನಿಂದ 1,200 ಗೇರಿಸಲಾಗುವುದು. ಐದು ವರ್ಷದೊಳಗೆ ಈ ಪಿಂಚಣಿ ಮೊತ್ತವನ್ನು 1,500 ರೂ.ಗೇರಿಸಲಾಗುವುದು. ಕೇರಳ ಬ್ಯಾಂಕ್‌ ಶೀಘ್ರ ಅಸ್ತಿತ್ವಕ್ಕೆ ಬರಲಿದೆ. ಗಲ್ಫ್ನಲ್ಲಿ ದುಡಿಯುತ್ತಿರುವ ಕೇರಳಿಯರು ಅಲ್ಲಿ ಸಾವಿಗೀಡಾದರೆ ಅವರ ಮೃತ ದೇಹವನ್ನು ನೋರ್ಕಾದ ಸಹಾಯದೊಂದಿಗೆ ಉಚಿತವಾಗಿ ಊರಿಗೆ ತಲುಪಿಸುವ ಯೋಜನೆಯನ್ನು ಬಜೆಟ್‌ನಲ್ಲಿ ಒಳಪಡಿಸಲಾಗಿದೆ. ಮಹಿಳಾ ಸಬಲೀಕರಣಕ್ಕೆ 1,420 ಕೋಟಿ ರೂ. ಮೀಸಲಿರಿಸಲಾಗಿದೆ. ರಬ್ಬರ್‌ ಕೃಷಿ ಬೆಂಬಲ ನೀಡಲು 500 ಕೋಟಿ ರೂ. ಮೀಸಲಿರಿಸಲಾಗಿದೆ. ಕಿಫ್‌ಬಿ ಸಹಾಯದೊಂದಿಗೆ ರಾಜ್ಯದಲ್ಲಿ ಹೊಸದಾಗಿ 30 ಜಲವಿದ್ಯುತ್‌ ಯೋಜನೆ ಸ್ಥಾಪಿಸಲಾಗುವುದು. ಇಡುಕ್ಕಿಯಲ್ಲಿ ಹೊಸ ವಿದ್ಯುತ್‌ ಸ್ಥಾವರ ಆರಂಭಿಸಲಾಗುವುದು. ಎಲ್ಲ ಸರಕಾರಿ ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ಸೋಲಾರ್‌ ಪ್ಯಾನಲ್‌ಗ‌ಳನ್ನು ಸ್ಥಾಪಿಸಿ ಸೌರ ವಿದ್ಯುತ್‌ ಉತ್ಪಾದಿಸಲಾಗುವುದು. ಮನೆಗಳಲ್ಲಿ ಸಾಧಾರಣ ಬಲ್ಬುಗಳನ್ನು ಹೊರತುಪಡಿಸಿ ಅತೀ ಕಡಿಮೆ ವಿದ್ಯುತ್‌ ಬಳಸುವ ಎಲ್‌ಇ.ಡಿ. ಬಲ್ಬುಗಳನ್ನು ವಿತರಿಸುವ ಯೋಜನೆ ಆರಂಭಿಸಲಾಗುವುದು. ಇದರಿಂದ 50 ಮೆಗಾವಾಟ್ ವಿದ್ಯುತ್‌ ಉಳಿತಾಯವಾಗಲಿದೆ. ವಿದ್ಯುತ್‌ ಯೋಜನೆಗಾಗಿ ಕಿಫ್‌ಬಿ 6375 ಕೋಟಿ ರೂ. ನೀಡಲು ಮುಂದಾಗಿದೆ. ಮಹಾಪ್ರವಾಹದಿಂದ ಕೇರಳಕ್ಕೆ 15000 ಕೋಟಿ ರೂ. ಆದಾಯ ನಷ್ಟವಾಗಿದೆ. ಮುಖ್ಯಮಂತ್ರಿಯ ಪರಿಹಾರ ನಿಧಿಗೆ ಈ ತನಕ 3229 ಕೋಟಿ ರೂ. ಲಭಿಸಿದೆ.

ರಾಜ್ಯದಲ್ಲಿ ಎಲ್ಲ ಆಟೋ ರಿಕ್ಷಾಗಳನ್ನು ಹಂತಹಂತವಾಗಿ ವಿದ್ಯುತ್‌ ಆಟೋ ರಿಕ್ಷಾಗಳನ್ನಾಗಿ ಪರಿವರ್ತಿಸಲಾಗುವುದು. ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ವಿದ್ಯುತ್‌ ಚಾಲಿತ ಬಸ್ಸುಗಳನ್ನಾಗಿ ಪರಿವರ್ತಿಸಲಾಗುವುದು.

ಕಾಸರಗೋಡು-ತಿರುವನಂತಪುರ ತನಕದ ಜಲ ಸಾರಿಗೆ ಯೋಜನೆಯನ್ನು 2020ರೊಳಗಾಗಿ ಪೂರ್ತಿಗೊಳಿಸಲಾಗುವುದು. ಶಾಲೆಗಳ ಸಾರ್ವಜನಿಕ ಶಿಕ್ಷಣ ವಲಯಕ್ಕೆ ಕಿಫ್‌ಬಿ ಸಹಾಯ ಮೂಲಕ 1320 ಕೋಟಿ ರೂ. ಮೀಸಲಿರಿಸಲಾಗಿದೆ.

ಎಲ್ಲ ಕುಟುಂಬಗಳಿಗೆ ವಿಮೆ

ಎಲ್ಲಾ ಕುಟುಂಬಗಳಿಗೆ ವಿಮಾ ಸಂರಕ್ಷಣೆ ಏರ್ಪಡಿಸಲಾಗುವುದು. ಪ್ರತಿ ಕುಟುಂಬದ ನಾಲ್ವರಿಗೆ ಇದರ ಪ್ರಯೋಜನ ಲಭಿಸಲಿದೆ. ಕಂತುಗಳನ್ನು ಪಾವತಿಸಿ ಈ ಯೋಜನೆಯ ಸದಸ್ಯರಾಗಬಹುದು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.