ಆರ್‌ಎಸ್‌ಎಸ್‌ನಿಂದ ದೇಶಭಕ್ತಿಗೆ ಪ್ರೇರಣೆ : ವೆಂಕಟಗಿರಿ


Team Udayavani, Feb 15, 2019, 12:30 AM IST

z-rss-news-2.jpg

ಮಡಿಕೇರಿ: ದೇಶದಲ್ಲಿ 57 ಸಾವಿರಕ್ಕೂ ಹೆಚ್ಚು ರಾಷ್ಟ್ರೀಯ ಸ್ವಯಂ ಸೇವಕ ಸಂಘಗಳಿದ್ದು, ಪ್ರತಿ ಶಾಖೆಯು ದೇಶಭಕ್ತಿಯನ್ನು ಸಂಘದ ಕಾರ್ಯಕರ್ತರಲ್ಲಿ ತುಂಬಲು ಪ್ರೇರೇಪಣೆ ನೀಡುತ್ತಿದೆ ಎಂದು ನಿವೃತ್ತ ಮೇಜರ್‌ ವೆಂಕಟಗಿರಿ ಪ್ರತಿಪಾದಿಸಿದ್ದಾರೆ. 

ನಗರದ ಗಾಂಧೀ ಮೈದಾನದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾರೀರಿಕ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ದೇಶದ ಆಡಳಿತವನ್ನು ಮುನ್ನಡೆಸುತ್ತಿರುವ ನಾಯಕರೆಲ್ಲಾ ಸಂಘದ ಕಾರ್ಯಕರ್ತರಾಗಿದ್ದು, ಅವರ ಸೇವೆಯನ್ನು ನೋಡಿ ಇಡೀ ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದೆ. ಇದರಿಂದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕ ಡಾ| ಕೇಶವ ಬಲರಾಮ್‌ ಹೆಡಗೆವಾರ್‌ ಅವರ ಕನಸು ನನಸಾದಂತಾಗಿದೆ ಎಂದು  ಮೇಜರ್‌ ವೆಂಕಟಗಿರಿ ಅಭಿಪ್ರಾಯಪಟ್ಟರು. 

ಗುಜರಾತ್‌ ಭೂಕಂಪ, 1984ರ ಭೂಪಾಲ್‌ ಅನಿಲ ದುರಂತ ಮತ್ತು ಕೊಡಗು ಪ್ರಕೃತಿ ವಿಕೋಪದಲ್ಲಿ ಸಂಘದ ಕಾರ್ಯಕರ್ತರು ಮಾಡಿದ ಜನಸೇವೆ ಅಮೋಘವಾಗಿತ್ತು ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಮತ್ತೋರ್ವ ಅತಿಥಿ ಸಂಘ ಪ್ರಮುಖರಾದ ಸುಭಾಷ್‌ ಮಾತನಾಡಿ, ಸಂಘದ ಶಾಖೆಗಳಲ್ಲಿ ವ್ಯಕ್ತಿತ್ವ ಮತ್ತು ಆತ್ಮಸ್ಥೆ$Âರ್ಯವನ್ನು ತುಂಬುವ ಕೆಲಸ ಮಾಡಲಾಗುತ್ತಿದ್ದು, ಆ ಮೂಲಕ ಸುಭದ್ರ ದೇಶವನ್ನು ಕಟ್ಟುವ ಕಾರ್ಯಕ್ಕೆ ಶಾಖೆಗಳು ಕಾರ್ಯೋನ್ಮುಖವಾಗಿವೆ ಎಂದು ಹೇಳಿದರು. ದೇಶಭಕ್ತಿಯನ್ನು ಮೈಗೂಡಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗುವ ಮೂಲಕ ದೇಶವನ್ನು ಕಟ್ಟಬೇಕಿರುವ ಹಿನ್ನೆಲೆಯಲ್ಲಿ ಶಾಖೆಗಳಲ್ಲಿ 1 ಗಂಟೆಗಳ ಕಾಲ ಶಾರೀರಿಕ ವ್ಯಾಯಾಮಗಳಿಗೆ ಆಧ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು. 

ಶರೀರ, ಮನಸು ಮತ್ತು ಬುದ್ದಿ ಒಂದಾದರೆ ಮಾತ್ರ ಅದನ್ನು ಸಂಸ್ಕಾರ ಎಂದು ಕರೆಯುತ್ತಾರೆ, ಅದನ್ನೇ ಶಾಖೆಗಳಲ್ಲಿ ಕಲಿಸಲಾಗುತ್ತಿದೆ. ಭಾರತ ದೇಶ ಮೊದಲು ದಾಳಿ ಮಾಡಿದ ಇತಿಹಾಸವೇ ಇಲ್ಲ. ಆದರೆ ಶತ್ರು ರಾಷ್ಟ್ರದ ಒಳನುಗ್ಗಿ ಅವರನ್ನು ಸದೆಬಡಿಯುವ ತಾಕತ್ತು ದೇಶಕ್ಕಿದೆ. ನಮ್ಮ ಶಕ್ತಿ ನಮ್ಮ ರಕ್ಷಣೆಗೆ ಮೀಸಲಾಗಿದೆ ಎಂಬುದನ್ನು ಸರ್ಜಿಕಲ್‌ ಸ್ಟೆìçಕ್‌ ಮೂಲಕ ದೇಶದ ಸೈನಿಕರು ಮಾಡಿ ತೋರಿಸಿದ್ದಾರೆ ಎಂದು ಸುಭಾಷ್‌ ಶ್ಲಾ ಸಿದರು. 

ಕಾರ್ಯಕ್ರಮಕ್ಕೂ ಮೊದಲು ಭಗವಧ್ವಜದ ಆರೋಹಣ ಮಾಡಲಾಯಿತು. ಬಳಿಕ ಸಂಘದ ಶಾಖೆಗಳಲ್ಲಿ ನಡೆಸಲಾಗುವ ವಿವಿಧ ರೀತಿಯ ವ್ಯಾಯಾಮ, ದಂಡ ಕಲೆ, ಯೋಗ, ಪಥಸಂಚಲನ ಸೇರಿದಂತೆ ವಿವಿಧ ಕ್ರೀಡಾ ಕೂಟಗಳ ಪ್ರದರ್ಶನವನ್ನು ನಡೆಸಲಾಯಿತು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಸಂಘ ಚಾಲಕ ಚಕ್ಕೇರ ಮನು ಕಾವೇರಪ್ಪ ಉಪಸ್ಥಿತರಿದ್ದರು

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.