ಆರೋಗ್ಯ-ಶಿಕ್ಷಣ, ಸಾರಿಗೆ, ಕಲ್ಯಾಣ ವಲಯಗಳಿಗೆ ವಿಶೇಷ ಆದ್ಯತೆ​​​​​​​


Team Udayavani, Feb 15, 2019, 12:30 AM IST

14ksde8.jpg

ಕಾಸರಗೋಡು: ಸೇವಾ ವಲಯ, ಆರೋಗ್ಯ-ಶಿಕ್ಷಣ, ಸಾರಿಗೆ, ಕಲ್ಯಾಣ ವಲಯಗಳಿಗೆ ವಿಶೇಷ ಆದ್ಯತೆ ನೀಡಿ ಜಿಲ್ಲಾ ಪಂಚಾಯತ್‌ ಮುಂಗಡಪತ್ರವನ್ನು ಉಪಾಧ್ಯಕ್ಷೆ ಶಾಂತಮ್ಮ ಫಿಲಿಪ್‌ ಗುರುವಾರ ಮಂಡಿಸಿದರು.

ಶಿಕ್ಷಣ ವಲಯದಲ್ಲಿ ಪ್ಲಸ್‌ ಟು ಸಮತ್ವ ತರಬೇತಿಯಲ್ಲಿ ಕನ್ನಡ ಕಲಿಕಾರ್ಥಿಗಳನ್ನು ಸೇರ್ಪಡೆ ಮಾಡಿದ್ದು, ಕನ್ನಡ ಶಿಕ್ಷಣ ಸಾಮಗ್ರಿಗಳ ಲಭ್ಯತೆಗೆ ಮೊಬಲಗು ಮೀಸಲಿರಿಸಿರುವುದು ಜಿಲ್ಲೆಯ ಕನ್ನಡಿಗರ ವಲಯಕ್ಕೆ ನೀಡಿದ ಅಂಗೀಕಾರವಾಗಿದೆ. ಕನ್ನಡದ ಹಿರಿಯ ಚೇತನ, ನಾಡೋಜ ಡಾ.ಕಯ್ನಾರ ಕಿಞ್ಞಣ್ಣ ರೈ ಅವರ ಸ್ಮಾರಕ ಸಾಕಾರಗೊಳಿಸುವ ನಿಟ್ಟಿನಲ್ಲಿ ಮೊಬಲಗನ್ನು ಮೀಸಲಿರಿಸಿರುವುದು ಗಮನಾರ್ಹವಾಗಿದೆ.ಗುರುವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಎ.ಜಿ.ಸಿ. ಬಶೀರ್‌ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷೆ ಶಾಂತಮ್ಮ ಫಿಲಿಪ್‌ ಅವರು 108,02,54,629 ರೂ. ಆದಾಯ, 99,19,00,000 ರೂ. ವೆಚ್ಚ, 8,83,54,629 ರೂ. ಮಿಗತೆ ನಿರೀಕ್ಷಿಸುವ ಬಜೆಟ್‌ ಮಂಡಿಸಿದ್ದಾರೆ. ಹೈನು ಕೃಷಿಕರಿಗೆ ಆರ್ಥಿಕ ಸಹಾಯ ನೀಡುವ ಯೋಜನೆಗೆ 1.75 ಕೋಟಿ ರೂ.ಮೀಸಲಿರಿಸಲಾಗಿದೆ. 

ಭತ್ತದ ಕೃಷಿ, ಬೀಜೋತ್ಪಾದನೆ ವಲಯಕ್ಕೆ ಮೊಬಲಗು ಮೀಸಲಿರಿಸಲಾಗಿದೆ. ಅನಿವಾಸಿ ಭಾರತೀಯರ ಕಲ್ಯಾಣಕ್ಕೆ ಅನಿವಾಸಿ ಸ್ವ-ಸಹಾಯ ಸಂಘಗಳ ಉದ್ದಿಮೆಗೆ ಆರ್ಥಿಕ ಸಹಾಯ, ಖಾದಿ ಕೈಗಾರಿಕೆ, ಮಹಿಳಾ ಸಬಲೀಕರಣಕ್ಕೆ ಗುರಿ ಇರಿಸಲಾಗಿದೆ. ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಜೈವಿಕ ವೈವಿಧ್ಯ ಸಂರಕ್ಷಣೆ, ನದಿ ಸಂರಕ್ಷಣೆಗೆ ಮೊಬಲಗು ಮೀಸಲಿರಿಸಲಾಗಿದೆ. ಜಲಸಂರಕ್ಷಣೆಗೆ ಜಲಜೀವನ ಯೋಜನೆಗಾಗಿ ಒಂದು ಕೋಟಿ ರೂ. ಮೀಸಲಿರಿಸಲಾಗಿದೆ.ಕೋಳಿ ಮರಿ ಉತ್ಪಾದನೆಗೆ ಯೋಜನೆ, ಮೀನುಗಾರರ ಗ್ರೂಪ್‌ಗ್ಳಿಗೆ ಫೈಬರ್‌ ದೋಣಿ ಖರೀದಿಗೆ ಆರ್ಥಿಕ ಸಹಾಯ ನೀಡುವ ಯೋಜನೆ, ನೀರಾವರಿ ಮೂಲ ಮತ್ತು ತತ್ಸಂಬಂಧಿ ಚೆಕ್‌ ಡ್ಯಾಂ ಸಹಿತ ಕಾಮಗಾರಿಗಳಿಗೆ  2 ಕೋಟಿ ರೂ.ಮೀಸಲಿರಿಸಲಾಗಿದೆ.

ಜಿಲ್ಲಾ ಆಸ್ಪತ್ರೆಗೆ ಕಾಯಕಲ್ಪ ಪ್ರಶಸ್ತಿ ಒಲಿದು ಬಂದಿರುವುದು ಅಭಿಮಾನಕರ ವಿಚಾರ ಎಂದವರು ಹೇಳಿದರು. ಬಡರೋಗಿಗಳಿಗೆ ಡಯಾಲಿಸಿಸ್‌ ಚಿಕಿತ್ಸೆ ಸಹಾಯ ಯೋಜನೆಗೆ 25 ಲಕ್ಷ ರೂ. ಮೀಸಲಿರಿಸಲಾಗಿದೆ. ಕ್ಯಾನ್ಸರ್‌ ಬಾಧಿತರ ಸಹಾಯಕ್ಕೆ ಯೋಜನೆ ಸಿದ್ಧವಾಗುತ್ತಿದೆ. ಸಾಂತ್ವನ ಚಿಕಿತ್ಸಾ ರಂಗದಲ್ಲಿ ಪಾಲಿಯೇಟಿವ್‌  ಆರೈಕೆ ಸೇರಿದಂತೆ 95 ಲಕ್ಷ ರೂ. ಮೀಸಲಿರಿಸಲಾಗಿದೆ. ಎಚ್‌.ಐ.ವಿ. ಬಾಧಿತರಿಗೆ ಪೌಷ್ಟಿಕಾಹಾರ ನೀಡಲು, ಟಿ.ಬಿ.ರೋಗಿಗಳ ಸರಂರಕ್ಷಣೆ ಇತ್ಯಾದಿಗಳಿಗಿರುವ ಕೈತಾಂಗ್‌(ಕೈಯಾಸರೆ) ಯೋಜನೆಯನ್ನು ಮುಂದುವರಿಸುವುದಾಗಿ ಅವರು ತಿಳಿಸಿದರು. ವಯೋವೃದ್ಧರ  ಸಂರಕ್ಷಣೆಗೆ ಹಗಲು ವಿಶ್ರಾಂತಿ  ಕೇಂದ್ರಗಳು, ವಯೋಮಿತ್ರ, ಸರಕಾರಿ ಅಂಗೀಕೃತ ವಯೋಜನ ಸಂಸ್ಥೆಗಳಿಗೆ ಸಹಾಯ ಯೋಜನೆಗಳಿಗಾಗಿ ಒಂದು ಕೋಟಿ ರೂ.ಮೀಸಲಿರಿಸಲಾಗಿದೆ.ಸ್ಥಳೀಯಾಡಳಿತ ಸಂಸ್ಥೆಗಳ ಜತೆ ಸೇರಿ ಸಂಪೂರ್ಣ ತ್ಯಾಜ

ಸಂಸ್ಕರಣೆ ಘಟಕ ಸ್ಥಾಪನೆಗೆ ಒಂದು ಕೋಟಿ ರೂ.ಗೂ ಅಧಿಕ ಮೊಬಲಗು ಮೀಸಲಿರಿಸಲಾಗಿದೆ. ಕಿಫ್‌ ಬಿ ಸಂಸ್ಥೆಯ ಜತೆ ಸೇರಿ ಚಟ್ಟಂಚಾಲ್‌ನಲ್ಲಿ ಅಂತಾರಾಷ್ಟ್ರೀàಯ  ಗುಣಮಟ್ಟದ ಕಸಾಯಿಖಾನೆಯೊಂದನ್ನು ಸ್ಥಾಪಿಸಲು 10 ಕೋಟಿ ರೂ. ವೆಚ್ಚ ಅಂದಾಜಿಸಿದ್ದು, ಅದಕ್ಕಿರುವ ಯತ್ನ ನಡೆಸಲಾಗುತ್ತಿದೆ. ಬೀದಿ ನಾಯಿಗಳ ಕಾಟ ನಿಯಂತ್ರಣದಲ್ಲಿ ಅನಿಮಲ್‌ ಬರ್ತ್‌ ಕಂಟ್ರೋಲ್‌(ಎ.ಬಿ.ಸಿ.) ಯೋಜನೆ ಯಶಸ್ವಿಯಾಗಿದ್ದು, ಅದನ್ನು ಮುಂದುವರಿಸಲು, ಯೋಜನೆ ವಿಸ್ತಾರ ಅಂಗವಾಗಿ ತ್ರಿಕ್ಕ‌ರಿಪುರದಲ್ಲಿ ಎ.ಬಿ.ಸಿ.ಸೆಂಟರ್‌ ಆರಂಭಿಸಲು ನಿರ್ಧರಿಸಲಾಗಿದೆ. ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಾರ್ವಜನಿಕ ಶ್ಮಶಾನಗಳ ನಿರ್ಮಾಣ ಉದ್ದೇಶವಿದ್ದು, ಮೊಬಲಗು ಮೀಸಲಿರಿಸಲಾಗಿದೆ.

ವಿದ್ಯಾರ್ಥಿಗಳಿಗೆ ನೆರವು
ಜಿಲ್ಲಾ ಮಟ್ಟದಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸುವ ನಿಟ್ಟಿನಲ್ಲಿ 75 ಲಕ್ಷ ರೂ. ಮೀಸಲಿರಿಸಲಾಗಿದೆ. ಬಡ್ಸ್‌ ಶಾಲೆಗಳ ಮೂಲ ಸೌಲಭ್ಯ ಅಭಿವೃದ್ಧಿಗೆ 53 ಲಕ್ಷ ರೂ.ಮೀಸಲಿರಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಅಭಿಯಾನ ಸಹಿತ ವಿವಿಧ ಶೈಕ್ಷಣಿಕ ಯೋಜನೆಗಳಿಗೆ ಮೊಬಲಗು ಮೀಸಲಿರಿಸಲಾಗಿದೆ. ಎಸ್‌.ಎಸ್‌.ಎ. ಯೋಜನೆಗೆ 3 ಕೋಟಿ ರೂ.ಮೀಸಲಿರಿಸಲಾಗಿದೆ. ಶಾಲೆಗಳಲ್ಲಿ ಸೌರಶಕ್ತಿ ಕೇಂದ್ರ ಸ್ಥಾಪನೆಗೆ 2 ಕೋಟಿ ರೂ., ಕ್ರೀಡಾ ವಲಯದ ಅಭಿವೃದ್ಧಿಗೆ “ಕುದಿಪ್‌’ ಯೋಜನೆಗೆ ಮೊಬಲಗು ಮೀಸಲಿರಿಲಾಗಿದೆ. ಪರಿಶಿಷ್ಟ ಜಾತಿ-ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನಿಡುವ ನಿಟ್ಟಿನಲ್ಲಿ 75 ಲಕ್ಷ ರೂ. ಮೀಸಲಿರಿಸಲಾಗಿದೆ. 

ಕೊರಗ ಜನಾಂಗಕ್ಕೆ ಸೌಲಭ್ಯ
ಕೊರಗ ಜನಾಂಗಕ್ಕೆ ಪೌಷ್ಠಿಕಾಹಾರ ಪೂರೈಕೆ, ಕಾಲನಿಗಳ ಅಭಿವೃದ್ಧಿ ಇತ್ಯಾದಿಗಳಿಗೆ ಮೊಬಲಗು ಮೀಸಲಿರಿಸಲಾಗಿದೆ. ಈ ಜನಾಂಗದ ಮಕ್ಕಳು ಶಾಲೆಗೆ ತೆರಳಲು ಸಹಾಯ ಮಾಡುವ ಗೋತ್ರವಾಹಿನಿ ಯೋಜನೆ ಮುಂದುವರಿಕೆಗೆ ಮೊಬಲಗು ಮೀಸಲಿರಿಸಲಾಗಿದೆ.

ವಸತಿ ನಿರ್ಮಾಣ
ಜಿಲ್ಲೆಯನ್ನು ವಸತಿ ರಹಿತರಿಲ್ಲದ ನಾಡಾಗಿಸುವ ನಿಟ್ಟಿನಲ್ಲಿ ಲೈಫ್‌, ಪಿ.ಎಂ.ಎ.ವೈ. ವಸತಿ ನಿರ್ಮಾಣ ಯೋಜನೆಗಾಗಿ 8 ಕೋಟಿ ರೂ. ಮೀಸಲಿರಿಸಲಾಗಿದೆ. ಜಿಲ್ಲಾ ಪಂಚಾಯತ್‌ ರಸ್ತೆಗಳನ್ನು ಮೆಕ್‌ಡಾಂ ಡಾಮರೀಕರಣ ನಡೆಸುವ ಮಾದರಿ ಯೋಜನೆಗಾಗಿ 9.85 ಕೋಟಿ ರೂ., ಗ್ರಾಮೀಣ ರಸ್ತೆಗಳ ಪುನಶ್ಚೇತನಕ್ಕೆ 14 ಕೋಟಿ ರೂ., ಜಿಲ್ಲಾ ಪಂಚಾಯತ್‌ ರಸ್ತೆ ಅಭಿವೃದ್ಧಿಗೆ 12 ಕೋಟಿ ರೂ. ಮೀಸಲಿರಿಸಲಾಗಿದೆ.

ಉತ್ಪಾದನೆ ವಲಯಕ್ಕೆ 50 ಕೋಟಿ.ರೂ.
ಉತ್ಪಾದನೆ ವಲಯದಲ್ಲಿ ಅನೇಕ ಯೋಜನೆಗಳಿದ್ದು, 50 ಕೋಟಿ ರೂ. ವೆಚ್ಚದಲ್ಲಿ ಚಟ್ಟಂಚಾಲ್‌ ಗ್ಯಾಸ್‌ ಆಧಾರಿತ ಪವರ್‌ ಪ್ಲಾಂಟ್‌ ಸ್ಥಾಪನೆ, ಗೈಲ್‌ಲೈನ್‌ ಸ್ಥಾಪನೆ ಕುರಿತು ಉಲ್ಲೇಖೀಸಲಾಗಿದೆ. ಹಿಂದಿನ ಮುಂಗಡಪತ್ರದಲ್ಲಿ ತಿಳಿಸಲಾದ ಪೆರಿಯ ಕಿರು ವಿಮಾನ ನಿಲ್ದಾಣದ ಕುರಿತು ಚರ್ಚಿಸಲಾಗಿದೆ.

ಮಹಿಳಾ ಸ್ನೇಹಿ ಯೋಜನೆ 
ಮಹಿಳೆಯರ ಸಬಲೀಕರಣ ಸಂಬಂಧ ನಗರ ಪ್ರದೇಶಗಳಲ್ಲಿ ಶೌಚಾಲಯ ಸಹಿತ ಫೀಲಾಂಜ್‌ ವಿಶ್ರಾಂತಿ ಕೊಠಡಿಗಳ ನಿರ್ಮಾಣ ಮಾಡಲಾಗುವುದು. ಮಹಿಳಾ ಸಹಕಾರಿ ಸಂಘಗಳಿಗೆ ಸಹಾಯ ಒದಗಿಸುವ ನಿಟ್ಟಿನಲ್ಲಿ 85 ಲಕ್ಷ ರೂ. ಮೀಸಲಿರಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಮಹಿಳಾ  ಸ್ನೇಹಿ ಕೇಂದ್ರಗಳ ಸ್ಥಾಪನೆ ಮುಂದುವರಿಸಲಾಗುವುದು. ಅಲ್ಪಸಂಖ್ಯಾಕ‌ ವಿಭಾಗ ಟ್ರಾನ್ಸ್‌ ಜೆಂಡರ್ಸ್‌ ಅವರ ಅಭಿವೃದ್ಧಿಗಾಗಿ ಯೋಜನೆಗಳಿಗೆ ಮೊಬಲಗು ಮೀಸಲಿರಿಸಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.