ಆಧ್ಯಾತ್ಮಿಕ ಚಿಂತನೆಗೆ ಧಕ್ಕೆ ತರಲು ಎಡರಂಗ ಸರಕಾರ ಯತ್ನ


Team Udayavani, Feb 16, 2019, 1:25 AM IST

14ksde7.jpg

ಕಾಸರಗೋಡು : ಎಡರಂಗ ಸರಕಾರವು ಶಬರಿಮಲೆಗೆ ಯುವತಿಯರನ್ನು ಪ್ರವೇಶಿಸುವಂತೆ ಮಾಡಿ ಕೇರಳದ ಆಧ್ಯಾತ್ಮಿಕ ಚಿಂತನೆಗೆ ಧಕ್ಕೆ ತರಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸುರೇಂದ್ರನ್‌ ಆರೋಪಿಸಿದ್ದಾರೆ.

ಶಬರಿಮಲೆ ಸನ್ನಿಧಾನದ ಆಚಾರ ಅನುಷ್ಠಾನಗಳನ್ನು ಬುಡಮೇಲುಗೊಳಿಸಲು ಯತ್ನಿಸುತ್ತಿರುವ ಕೇರಳದ ಪಿಣರಾಯಿ ವಿಜಯನ್‌ ಸರಕಾರದ ಧೋರಣೆಯನ್ನು ಪ್ರತಿಭಟಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಹೊಸ ಬಸ್‌ ನಿಲ್ದಾಣದ ಪರಿಸರದಲ್ಲಿ ಆಯೋಜಿಸಿದ ಧರಣಿ ಸತ್ಯಾಗ್ರಹದಲ್ಲಿ  ಅವರು ಮಾತನಾಡಿದರು.

ಕೇರಳದಲ್ಲಿ ಕಳೆದ 11 ವರ್ಷಗಳಿಂದ ಭಕ್ತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇದು ಸಿಪಿಎಂ ಪಕ್ಷವನ್ನು ಸಂಪೂರ್ಣ ವಾಗಿ ನಿದ್ದೆಗೆಡಿಸಿದೆ. ಇದರಿಂದ ಕಂಗೆಟ್ಟ ಕೇರಳದ ಎಡರಂಗ ಸರಕಾರವು ಆಧ್ಯಾತ್ಮಿಕ ಚಿಂತನೆಗೆ ಧಕ್ಕೆ ತರಲು ಯತ್ನಿಸುತ್ತಿದೆ. ಕಳೆದ 15 ವರ್ಷಗಳಲ್ಲಿ ರಾಜ್ಯದಲ್ಲಿ 15000 ದಷ್ಟು ದೇವ ಸ್ಥಾನಗಳು ಪುನರುದ್ಧಾರಗೊಂಡಿವೆ. 

ಇದು ಕೇರಳದ ಜನರಲ್ಲಿ ಆಸ್ತಿಕ ಮನೋಭಾವ ಹೆಚ್ಚುತ್ತಿರು ವುದಕ್ಕೆ ಸಾಕ್ಷಿಯಾಗಿದೆ. ಈಗ ರಾಜ್ಯದ ಎಲ್ಲೆಡೆ ಶ್ರೀ ಕೃಷ್ಣ ಜಯಂತಿ ಆಚರಣೆ, ಗಣೇಶೋತ್ಸವ ಆಚರಣೆ ಇತ್ಯಾದಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ. ಇದು ರಾಜ್ಯದಲ್ಲಿ ಆಧ್ಯಾತ್ಮಿಕ ಹಾಗು ಧಾರ್ಮಿಕ ಮುನ್ನಡೆಯನ್ನು ಎತ್ತಿ ತೋರಿಸುತ್ತಿದೆ. 

ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದೆ ನಾಸ್ತಿಕವಾದಕ್ಕೆ  ಪೆಟ್ಟು  ಬಿದ್ದು ಸಿಪಿಎಂ ಪಕ್ಷವು  ನಿರ್ನಾಮಗೊಳ್ಳಲಿದೆ ಎಂಬುದನ್ನು ಮನಗಂಡು ಶಬರಿಮಲೆಗೆ ಯುವತಿಯರು ಪ್ರವೇಶಿಸುವಂತೆ ಮಾಡಿ ಹಿಂದುಗಳ ನಂಬಿಕೆಗಳಿಗೆ ಘಾಸಿ ಯುಂಟು ಮಾಡಿದಾಗ ತಮ್ಮ ಬೇಳೆಯನ್ನು ಬೇಯಿಸಲು ಸಾಧ್ಯವಿದೆ ಎಂಬುದು ಸಿಪಿಎಂನ ಷಡ್ಯಂತ್ರವಾಗಿದೆ.

ಈ ನಿಟ್ಟಿನಲ್ಲಿ ಎಡರಂಗ ಸರಕಾರ ಹಾಗೂ ಆಡಳಿತ ಯಂತ್ರ ಕೂಡ ಕಾರ್ಯವೆಸಗುತ್ತಿದೆ ಎಂದು ಕೆ.ಸುರೇಂದ್ರನ್‌ ಹೇಳಿದರು. ಹಿಂದು ಕ್ಷೇತ್ರಗಳ ಆಸ್ತಿಪಾಸ್ತಿಗಳ ಬಗ್ಗೆ ಹಸ್ತಕ್ಷೇಪ ನಡೆಸುತ್ತಿರುವ ಪಿಣರಾಯಿ ವಿಜಯನ್‌ ಸರಕಾರಕ್ಕೆ ಮುಸ್ಲಿಂ ವಕ್ಫ್ ಮಂಡಳಿಯ ಆಸ್ತಿಗಳ ಬಗ್ಗೆಯಾಗಲಿ ಹಾಗು ಕ್ರಿಶ್ಚಿಯನ್‌ ಸಭಾಗಳು ನಡೆಸುವ ಸಾವಿರ ಕೋಟಿ ರೂ.ಗಳ  ಆಸ್ತಿಗಳ ಬಗ್ಗೆಯಾಗಲಿ ಹಸ್ತಕ್ಷೇಪ ನಡೆಸುವ ಧೈರ್ಯ ಇಲ್ಲ. ಕಾರಣ ಇವೆಲ್ಲಕ್ಕೂ ವೋಟ್‌ ಬ್ಯಾಂಕ್‌ ಪ್ರಮುಖ ಕಾರಣವಾಗಿದೆ. ಆದುದರಿಂದ ಹಿಂದು ಆಚಾರ ಅನುಷ್ಠಾನಗಳಿಗೆ ಧಕ್ಕೆ ತರುವ ಕೇರಳ ಸರಕಾರದ ಧೋರಣೆಯನ್ನು ಪ್ರತಿಭಟಿಸಲು ಪ್ರತಿಯೋರ್ವ ಆಸ್ತಿಕರೂ ಮುಂದೆ ಬರಬೇಕೆಂದು ಅವರು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್‌ ಅಧ್ಯಕ್ಷತೆ ವಹಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಸುರೇಶ್‌ ಕುಮಾರ್‌ ಶೆಟ್ಟಿ ಪೂಕಟ್ಟೆ, ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ವೇಲಾಯುಧನ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike ಕದ್ದು ಹೆಲ್ಮೆಟ್‌ ಧರಿಸದೆ ಸವಾರಿ: ಮಾಲಕನಿಗೆ ನೋಟಿಸ್‌!

Bike ಕದ್ದು ಹೆಲ್ಮೆಟ್‌ ಧರಿಸದೆ ಸವಾರಿ: ಮಾಲಕನಿಗೆ ನೋಟಿಸ್‌!

Theft: ವ್ಯಾಪಾರಿ ಭವನದಿಂದ ಕಳವು

Theft: ವ್ಯಾಪಾರಿ ಭವನದಿಂದ ಕಳವು

5

Crime: ಯುವಕನ ಕೊಲೆ: ತಲೆಮರೆಸಿಕೊಂಡ ಆರೋಪಿಗಾಗಿ ರೆಡ್‌ ಕಾರ್ನರ್‌ ನೋಟಿಸ್‌

1-asdsadsa

ಕುಂಟಿಕಾನಮಠ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.