ಸೋಮಯಾಗದಿಂದ ಧರ್ಮ ಸಂಸ್ಕೃತಿಯ ಅನಾವರಣ: ಒಡಿಯೂರು ಶ್ರೀ


Team Udayavani, Feb 21, 2019, 1:00 AM IST

odiyoor.jpg

ವಿದ್ಯಾನಗರ: ಧರ್ಮವೆಂಬ ನೆಟ್‌ವರ್ಕ್‌ನ ಮೂಲಕ ಆಧ್ಯಾತ್ಮಿಕತೆಯ ಸಂರಕ್ಷಣೆ ಯನ್ನು ಕೊಂಡೆವೂರಿನ ಶ್ರೀಗಳು ಅತ್ಯಂತ ಶಿಸ್ತಿನಿಂದ ಮಾಡುತ್ತಿದ್ದು, ಸೋಮಯಾಗದಿಂದ ವಿಶ್ವಪರಿಚರ್ತನೆಯ ಸಂದೇಶವನ್ನು ಸಮಾಜಕ್ಕೆ ನೀಡುತ್ತಿರುವುದು ಶ್ರೇಷ್ಠ ಕಾರ್ಯ. ಕಲ್ಲನ್ನು ಶಿಲ್ಪವಾಗಿಸುವ ಸಂಕಲ್ಪದೊಂದಿಗೆ ನಡೆಯುತ್ತಿರುವ ವಿಶ್ವಜಿತ್‌ ಅತಿರಾತ್ರ ಸೋಮಯಾಗದಿಂದ ಧರ್ಮ ಸಂಸ್ಕೃತಿಯ ಅನಾವರಣವಾಗಲಿದೆ. ಸದ್ವಿಚಾರ ಸಂಪನ್ನತೆ ಬದುಕಾಗಬೇಕು ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕೆ ಈ ಕಾಲಘಟ್ಟದಲ್ಲಿ ಯಾಗ ಯಜ್ಞಾದಿಗಳು ನಡೆಯಬೇಕಾದ ಅಗತ್ಯವಿದೆ. ಆ ಪುಣ್ಯದ ಕೆಲಸ ಕೊಂಡೆವೂರಿನ ಪವಿತ್ರ ನೆಲದಲ್ಲಿ ಸಂಪನ್ನಗೊಳ್ಳುತ್ತಿದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ನುಡಿದರು.

ಕೊಂಡೆವೂರು  ಶ್ರೀ ನಿತ್ಯಾನಂದ ಯೋಗಾಶ್ರಮ ದಲ್ಲಿ ನಡೆಯುತ್ತಿರುವ ವಿಶ್ವಜಿತ್‌ ಅತಿರಾತ್ರ ಸೋಮ ಯಾಗದ ಪ್ರಯುಕ್ತ ಬುಧವಾರ ನಡೆದ ಧರ್ಮ ಸಂದೇಶ ಸಭೆಯಲ್ಲಿ ಅವರು ಆಶೀರ್ವಚನ ನೀಡಿ ಮಾತನಾಡಿದರು. ಲೌಕಿಕ ಸುಖವನ್ನು ಪ್ರೇಯಸ್ಸು ನೀಡಿದರೆ ಜೀವನಕ್ಕೆ ಅನಿವಾರ್ಯವಾಗಿರುವ ಶ್ರೇಯಸ್ಸಿನಿಂದ ಶಾಂತಿ ನೆಲೆಗೊಳ್ಳಲಿದೆ ಎಂದು ಅವರು ತಿಳಿಸಿದರು. 

ನಿತ್ಯಾನಂದ ಮಹಾರಾಜ್‌ ಅವರ ಅನುಗ್ರಹ ದಿಂದ ಕೊಂಡೆವೂರು ಆಶ್ರಮದಲ್ಲಿ ಗುರುಪರಂಪರೆಯ ದೃಷ್ಟಿಯಿಂದ ಎಲ್ಲವೂ ಸಾಕಾರ ವಾಗುತ್ತಿದ್ದು, ರಾಷ್ಟ್ರಕಟ್ಟುವ ಮಹಾನ್‌ ಕೆಲಸಕ್ಕೆ ಈ ಯಾಗವು ಮುನ್ನುಡಿಯಾಗಲಿದೆ ಎಂದು ಅವರು ಹಾರೈಸಿದರು. 

ಕೇವಲ ಇಂದ್ರಿಯಗಮ್ಯ ಮನಸ್ಸು ಬಣ್ಣ ಬಣ್ಣದ ಕಾಗದದ ಹೂಗಳಿಗೆ ಮರುಳಾಗುತ್ತದೆ. ಆದರೆ ದುಂಬಿ ನಿಜಹೂಗಳಿಂದ ಮಕರಂದ ಹೀರುತ್ತವಂತೆ ಶ್ರೇಯಸ್ಸಿನ ಹಾದಿಯಲ್ಲಿ ಉತ್ತಮ ಚಿಂತನೆಗಳೊಂದಿಗೆ, ಉನ್ನತವಾದ ಆಯ್ಕೆಗಳೊಂದಿಗೆ ಮುನ್ನಡೆಯಬೇಕು ಎಂದು ಹೇಳಿದರು.

ಮೂಡುಬಿದಿರೆ  ಶ್ರೀ ಕ್ಷೇತ್ರ ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಉಪಸ್ಥಿತರಿದ್ದು ಆಶೀರ್ವಚನ ನೀಡಿ, ಭಾರತ ಮತ್ತೆ ಜಗತ್ತಿನ ಗುರುವಾಗಿಸುವಲ್ಲಿ ಇಂತಹ ಪುಣ್ಯಕಾರ್ಯಗಳು ಕಾರಣವಾಗುತ್ತವೆ ಎಂದು ತಿಳಿಸಿದರು.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಗಳು ದಿವ್ಯ ಉಪಸ್ಥಿತರಿದ್ದರು. ಡಾ| ಜಯಪ್ರಕಾಶ್‌ ತೊಟ್ಟೆತ್ತೋಡು ಸ್ವಾಗತಿಸಿದರು. ದಿನಕರ ಹೊಸಂಗಡಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಯತಿವರ್ಯರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.

ಯಾಗಶಾಲೆಯಲ್ಲಿ: ಸೂರ್ಯೋದಯಕ್ಕೆ ಸೋಮಪೂಜೆ, ಪ್ರಾಯಣೀಯೆ„ಷ್ಟಿ, ಸೋಮಕ್ರಯ, ಸೋಮರಾಜಾತಿಥ್ಯ, ಅತಿಥ್ಯೆàಷ್ಟಿ, ಪ್ರವಗ್ಯì, ಉಪಸತ್‌, ಸುಬ್ರಹ್ಮಣ್ಯಾಹ್ವಾನ ಹಾಗೂ ಅಪರಾಹ್ನ ಪ್ರವಗ್ಯì, ಉಪಸತ್‌, ಸುಬ್ರಹ್ಮಣ್ಯಾಹ್ವಾನ ಹಾಗೂ ಪಯೋವ್ರತ ಜರಗಿತು.

ಇಂದಿನ ಕಾರ್ಯಕ್ರಮ 
ಬೆಳಗ್ಗೆ 5ರಿಂದ 11ರ ತನಕ ಪುಣ್ಯಾಹ, ಗಣಯಾಗ. 7.50ಕ್ಕೆ ಕುಂಭ ಲಗ್ನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ, ತತ್ವ ಹೋಮ. ಬೆಳಗ್ಗೆ ಪರಮಪೂಜ್ಯ ಶ್ರೀವಿಖ್ಯಾತಾನಂದ ಸ್ವಾಮೀಜಿ ಬಲೊÂàಟ್ಟು ಕಾರ್ಕಳ ಹಾಗೂ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಬಾಳೆಕೋಡು ಇವರಿಂದ ಅನುಗ್ರಹ ಸಂದೇಶ ನಡೆಯಲಿರುವುದು. 

ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅನ್ನ ಸಂತರ್ಪಣೆ, ಸಾಯಂಕಾಲ 5ರಿಂದ 7.30ವರೆಗೆ 108 ಕಲಶಾ ಧಿವಾಸ, ಅ ಧಿವಾಸ ಹೋಮ, ದುರ್ಗಾ ನಮಸ್ಕಾರ ಪೂಜೆ.  ಯಾಗ ಶಾಲೆಯಲ್ಲಿ 9ಕ್ಕೆ ಪ್ರವಗ್ಯì, ಉಪಸತ್‌, ಸುಬ್ರಹ್ಮಣ್ಯಾಹ್ವಾನ. ವೇದಿ ನಿರ್ಮಾಣ, ಯೂಪಕರ್ಮ, ಚಯನಕರ್ಮ, ಅಪರಾಹ್ನ ಪಯೋವ್ರತ, ಪ್ರವಗ್ಯì, ಉಪಸತ್‌, ಸುಬ್ರಹ್ಮಣ್ಯಾಹ್ವಾನ, ಮಂತ್ರಶೇನ ನಡೆಯಲಿದ್ದು ತದನಂತರ ರಾತ್ರಿ 7.30ಕ್ಕೆ ಗಾಯತ್ರಿ ಮಂಟಪದಲ್ಲಿ ಧಾರ್ಮಿಕ ಸಭೆ ನಡೆಯಲಿರುವುದು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.