ಮಾ.10ರಂದು ಪಲ್ಸ್ ಪೋಲಿಯೋ : ಅಗತ್ಯ ಸಹಕಾರಕ್ಕೆ ಎಡಿಸಿ ಮನವಿ
Team Udayavani, Mar 7, 2019, 1:00 AM IST
ಮಡಿಕೇರಿ: ಇದೇ ಮಾ.10 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್ ಅವರು ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊವನ್ನು ಕಡ್ಡಾಯವಾಗಿ ಹಾಕಬೇಕು. ಕೊಡಗು ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳು, ಜೊತೆಗೆ ಕಳೆದ ಬಾರಿ ಪಲ್ಸ್ ಪೋಲಿಯೊದಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ ಪಲ್ಸ್ ಪೋಲಿಯೋ ಹನಿ ಹಾಕಬೇಕು. ಹಾಗೆಯೇ ಜಿಲ್ಲೆಯ ಜನ ದಟ್ಟಣೆ ಇರುವ ಪ್ರದೇಶಗಳಲ್ಲಿ ತಂಡ ರಚಿಸಿ ಪಲ್ಸ್ ಪೋಲಿಯೊ ಹನಿ ಹಾಕುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಪೋಲಿಯೊ ಲಸಿಕೆ ಹಾಳಾಗದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಪಲ್ಸ್ ಪೋಲಿಯೊ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪಾತ್ರ ಮಹತ್ತರವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜಿಲ್ಲೆಯ ವಿವಿಧ ಹಾಡಿಗಳು, ವಲ್ನರಬಲ್ ಪ್ರದೇಶ, ಲೈನ್ಮನೆಗಳು ಹಾಗೂ ಜನದಟ್ಟಣೆ ಪ್ರದೇಶಗಳಿಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 5,66,397 ಜನಸಂಖ್ಯೆ ಇದ್ದು, ಇವರಲ್ಲಿ 57,424 ನಗರ/ಪಟ್ಟಣ ಪ್ರದೇಶದಲ್ಲಿ ಮತ್ತು 5,09,013 ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಇದ್ದಾರೆ. ಇವರಲ್ಲಿ 5 ವರ್ಷದೊಳಗಿನ 39,015 ಮಕ್ಕಳು ಜಿಲ್ಲೆಯಲ್ಲಿದ್ದು, ಇವರಲ್ಲಿ 4,602 ನಗರ ಮತ್ತು 34,413 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ 1,59,443 ವಲಸಿಗ ಜನಸಂಖ್ಯೆ ಇದ್ದು, ಇವರಲ್ಲಿ 12,859 ಐದು ವರ್ಷದೊಳಗಿನ ಮಕ್ಕಳು ಇದ್ದಾರೆ, ಒಟ್ಟಾರೆ ಜಿಲ್ಲೆಯಲ್ಲಿ 1,33,356 ಕುಟುಂಬಗಳಿವೆ ಎಂದು ಅವರು ಮಾಹಿತಿ ನೀಡಿದರು.
ಪಲ್ಸ್ ಪೊಲಿಯೊ ಕಾರ್ಯಕ್ರಮಕ್ಕೆ ಪಲ್ಸ್ ಪೋಲಿಯೋವನ್ನು ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಹಾಕಿಸಬೇಕಿದೆ. ಪೊಲಿಯೋ ರೋಗವು ರಾಷ್ಟ್ರದಲ್ಲಿ ನಿರ್ಮೂಲನೆಯಾಗಿದ್ದರೂ ಸಹ ಪಕ್ಕದ ದೇಶಗಳಲ್ಲಿ ಇನ್ನೂ ಇರುವುದರಿಂದ, ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ ಸುಧೀರ್ ನಾಯಕ್ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಎ.ಸಿ.ಶಿವಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳಾದ ಯತಿರಾಜು, ಶ್ರೀನಿವಾಸ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಒಟ್ಟು 465 ಬೂತ್ಜಿಲ್ಲೆಯಾದ್ಯಂತ ಒಟ್ಟು 465 ಬೂತ್ಗಳನ್ನು ತೆರೆಯಲಾಗಿದೆ. ಅಲ್ಲದೆ 20 ಟ್ರಾನ್ಸಿಸ್ಟ್ ತಂಡಗಳು, 6 ಸಂಚಾರಿ ಲಸಿಕಾ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ. 1,950 ಮಂದಿ ಲಸಿಕೆ ಹಾಕುವವರು, 87 ಮಂದಿ ಮೇಲ್ವಿಚಾರಕರು, 966 ಮನೆ ಮನೆಗೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ ಎಂದು ಡಾ.ಆನಂದ್ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ